Homeಮುಖಪುಟರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ರಾಷ್ಟ್ರಗೀತೆ ಹಾಡುವಂತೆ ರಾಡುಗಳಿಂದ ಹೊಡೆಯಲ್ಪಟ್ಟವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ದೆಹಲಿಯ ವೈರಲ್ ವಿಡಿಯೋವೊಂದರಲ್ಲಿ 23 ವರ್ಷದ ಯುವಕನೊಬ್ಬ ಕಾಣಿಸಿಕೊಂಡಿದ್ದು, ಇದರಲ್ಲಿ ಪೊಲೀಸರು ಮತ್ತು ಇತರ ನಾಲ್ಕು ಯುವಕರು ಸೇರಿ ರಾಷ್ಟ್ರಗೀತೆ ಹಾಡುವಂತೆ ಹಿಂಸೆಗೊಳಪಡಿಸಿದ್ದರು. ಇದನ್ನು ಆಲ್ಟ್ ನ್ಯೂಸ್ ಪರಿಶೀಲಿಸಿತ್ತು.

ಹಿಂಸಾಚಾರಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು ಈಶಾನ್ಯ ದೆಹಲಿಯ ಕಾರ್ಡಂಪುರಿಯ ನಿವಾಸಿ “ಫೈಜಾನ್” ಎಂದು ಗುರುತಿಸಲಾಗಿದೆ. ಫೈಜಾನ್ ಗುರುವಾರ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಫೈಜಾನ್ ಮೃತಪಟ್ಟಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಗಾಯಗೊಂಡು ಬಿದ್ದಿರುವವರೊಂದಿಗೆ ದುಷ್ಕರ್ಮಿಯೊಬ್ಬ “ಚೆನ್ನಾಗಿ ಹಾಡಿ” ಎನ್ನುವ ಧ್ವನಿಯನ್ನು ಆ ವಿಡಿಯೊದಲ್ಲಿ ಕೇಳಬಹುದು.

ಪೊಲೀಸರು ಫೈಜಾನ್ ರನ್ನು ಕಸ್ಟಡಿಗೆ ತೆಗೆದುಕೊಂಡ ನಂತರವೂ ಥಳಿಸಲಾಯಿತು ಎಂದು ಅವರ ಕುಟುಂಬ ಆರೋಪಿಸಿದೆ.

“ಅವನನ್ನು ಮತ್ತು ಇತರರೊಂದಿಗೆ ತೀವ್ರವಾಗಿ ಥಳಿಸಲಾಗಿದೆ. ಅವನಿಗೆ ಕಬ್ಬಿಣದ ರಾಡ್ ಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಅವನ ಕಾಲುಗಳು ಮುರಿದುಹೋಗಿದ್ದವು. ಹೊಡೆತದಿಂದಾಗಿ ಅವನ ಇಡೀ ದೇಹವು ಕಪ್ಪಾಗಿತ್ತು. ಮೊದಲು ಅವನನ್ನು ರಸ್ತೆಯಲ್ಲಿ ಥಳಿಸಲಾಯಿತು. ನಂತರ ಪೊಲೀಸ್ ಅವನನ್ನು ಕರೆದೊಯ್ದಿರಬೇಕು, ಆದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಫೈಜಾನ್ ತಾಯಿ ಹೇಳಿದ್ದಾರೆ.

ಫೈಜಾನ್ ತಾಯಿ “ನನಗೆ ಮಾಹಿತಿ ತಿಳಿದ ನಂತರ ನಾನು ಆಸ್ಪತ್ರೆಗೆ ಹೋದೆ. ಅಲ್ಲಿ ಅವನನ್ನು ಕಾಣದಿದ್ದಾಗ ಜ್ಯೋತಿ ಕಾಲೋನಿಯಲ್ಲಿರುವ ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಪೊಲೀಸರಿಗೆ ಫೈಝನ್ ಫೋಟೋವನ್ನು ತೋರಿಸಿದ ನಂತರ ಅವನು ಅಲ್ಲಿದ್ದಾನೆ ಎಂದು ಪೊಲೀಸರು ದೃಡಪಡಿಸಿದರು. ನಾನು ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆ ಪೊಲೀಸರು ನನ್ನನ್ನು ಭೇಟಿಯಾಗಲು ಬಿಡಲಿಲ್ಲ” ಎಂದರಲ್ಲದೆ “ಮರುದಿನ ಬೆಳಿಗ್ಗೆ ಇತರ ಇಬ್ಬರೊಂದಿಗೆ ಪೊಲೀಸ್ ಠಾಣೆಗೆ ಮರಳಿದಾಗ ಬಂಧನದ ಬೆದರಿಕೆ ಹಾಕಲಾಯಿತು. ನಂತರ ರಾತ್ರಿ 11 ಗಂಟೆಗೆ ಅವನು ಸಾಯುತ್ತಿರುವಾಗ ನನ್ನನ್ನು ಕರೆದರು” ಎಂದು ಹೇಳಿದ್ದಾರೆ.

ಫೈಜಾನ್ ಅವರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ, ಕುಟುಂಬವು ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದೊಯ್ಯಿದಿದ್ದಾರೆ. ಅಲ್ಲಿಗೆ ತಲುಪಿದಾಗ ಫೈಜಾನ್ ರ ರಕ್ತದೊತ್ತಡ ಮತ್ತು ನಾಡಿಮಿಡಿತ ಕಡಿಮೆಯಾಗಿತ್ತು. ತಲೆಗೆ ಮತ್ತು ಆಂತರಿಕ ಗಾಯಗಳಾಗಿದ್ದವು. ಗಾಯಗಳಿಂದ ಬೆನ್ನು ನೀಲಿ ಬಣ್ಣವಾಗಿತ್ತು ಎಂದು ಅಲ್ಲಿನ ವೈದ್ಯರಾದ ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

“ಅವನನ್ನು ನನ್ನ ಬಳಿಗೆ ಕರೆ ತಂದಾಗ, ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಎರಡು ದಿನಗಳ ನಂತರ ಬಿಟ್ಟು ಹೋಗಿದ್ದಾರೆ ಎಂದು ಅವರ ತಾಯಿ ಹೇಳುತ್ತಿದ್ದರು” ಎಂದು ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಗಳು ನಡೆಯುತ್ತಿದ್ದ ಅನೇಕ ಸ್ಥಳಗಳಲ್ಲಿ, ಕನಿಷ್ಠ ಪೊಲೀಸ್ ಉಪಸ್ಥಿತಿಯಿರಲಿಲ್ಲ ಎಂಬ ಆರೋಪಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...