Homeಮುಖಪುಟರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ರಾಷ್ಟ್ರಗೀತೆ ಹಾಡುವಂತೆ ರಾಡುಗಳಿಂದ ಹೊಡೆಯಲ್ಪಟ್ಟವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ದೆಹಲಿಯ ವೈರಲ್ ವಿಡಿಯೋವೊಂದರಲ್ಲಿ 23 ವರ್ಷದ ಯುವಕನೊಬ್ಬ ಕಾಣಿಸಿಕೊಂಡಿದ್ದು, ಇದರಲ್ಲಿ ಪೊಲೀಸರು ಮತ್ತು ಇತರ ನಾಲ್ಕು ಯುವಕರು ಸೇರಿ ರಾಷ್ಟ್ರಗೀತೆ ಹಾಡುವಂತೆ ಹಿಂಸೆಗೊಳಪಡಿಸಿದ್ದರು. ಇದನ್ನು ಆಲ್ಟ್ ನ್ಯೂಸ್ ಪರಿಶೀಲಿಸಿತ್ತು.

ಹಿಂಸಾಚಾರಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು ಈಶಾನ್ಯ ದೆಹಲಿಯ ಕಾರ್ಡಂಪುರಿಯ ನಿವಾಸಿ “ಫೈಜಾನ್” ಎಂದು ಗುರುತಿಸಲಾಗಿದೆ. ಫೈಜಾನ್ ಗುರುವಾರ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಫೈಜಾನ್ ಮೃತಪಟ್ಟಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಗಾಯಗೊಂಡು ಬಿದ್ದಿರುವವರೊಂದಿಗೆ ದುಷ್ಕರ್ಮಿಯೊಬ್ಬ “ಚೆನ್ನಾಗಿ ಹಾಡಿ” ಎನ್ನುವ ಧ್ವನಿಯನ್ನು ಆ ವಿಡಿಯೊದಲ್ಲಿ ಕೇಳಬಹುದು.

ಪೊಲೀಸರು ಫೈಜಾನ್ ರನ್ನು ಕಸ್ಟಡಿಗೆ ತೆಗೆದುಕೊಂಡ ನಂತರವೂ ಥಳಿಸಲಾಯಿತು ಎಂದು ಅವರ ಕುಟುಂಬ ಆರೋಪಿಸಿದೆ.

“ಅವನನ್ನು ಮತ್ತು ಇತರರೊಂದಿಗೆ ತೀವ್ರವಾಗಿ ಥಳಿಸಲಾಗಿದೆ. ಅವನಿಗೆ ಕಬ್ಬಿಣದ ರಾಡ್ ಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಅವನ ಕಾಲುಗಳು ಮುರಿದುಹೋಗಿದ್ದವು. ಹೊಡೆತದಿಂದಾಗಿ ಅವನ ಇಡೀ ದೇಹವು ಕಪ್ಪಾಗಿತ್ತು. ಮೊದಲು ಅವನನ್ನು ರಸ್ತೆಯಲ್ಲಿ ಥಳಿಸಲಾಯಿತು. ನಂತರ ಪೊಲೀಸ್ ಅವನನ್ನು ಕರೆದೊಯ್ದಿರಬೇಕು, ಆದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಫೈಜಾನ್ ತಾಯಿ ಹೇಳಿದ್ದಾರೆ.

ಫೈಜಾನ್ ತಾಯಿ “ನನಗೆ ಮಾಹಿತಿ ತಿಳಿದ ನಂತರ ನಾನು ಆಸ್ಪತ್ರೆಗೆ ಹೋದೆ. ಅಲ್ಲಿ ಅವನನ್ನು ಕಾಣದಿದ್ದಾಗ ಜ್ಯೋತಿ ಕಾಲೋನಿಯಲ್ಲಿರುವ ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಪೊಲೀಸರಿಗೆ ಫೈಝನ್ ಫೋಟೋವನ್ನು ತೋರಿಸಿದ ನಂತರ ಅವನು ಅಲ್ಲಿದ್ದಾನೆ ಎಂದು ಪೊಲೀಸರು ದೃಡಪಡಿಸಿದರು. ನಾನು ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆ ಪೊಲೀಸರು ನನ್ನನ್ನು ಭೇಟಿಯಾಗಲು ಬಿಡಲಿಲ್ಲ” ಎಂದರಲ್ಲದೆ “ಮರುದಿನ ಬೆಳಿಗ್ಗೆ ಇತರ ಇಬ್ಬರೊಂದಿಗೆ ಪೊಲೀಸ್ ಠಾಣೆಗೆ ಮರಳಿದಾಗ ಬಂಧನದ ಬೆದರಿಕೆ ಹಾಕಲಾಯಿತು. ನಂತರ ರಾತ್ರಿ 11 ಗಂಟೆಗೆ ಅವನು ಸಾಯುತ್ತಿರುವಾಗ ನನ್ನನ್ನು ಕರೆದರು” ಎಂದು ಹೇಳಿದ್ದಾರೆ.

ಫೈಜಾನ್ ಅವರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ, ಕುಟುಂಬವು ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದೊಯ್ಯಿದಿದ್ದಾರೆ. ಅಲ್ಲಿಗೆ ತಲುಪಿದಾಗ ಫೈಜಾನ್ ರ ರಕ್ತದೊತ್ತಡ ಮತ್ತು ನಾಡಿಮಿಡಿತ ಕಡಿಮೆಯಾಗಿತ್ತು. ತಲೆಗೆ ಮತ್ತು ಆಂತರಿಕ ಗಾಯಗಳಾಗಿದ್ದವು. ಗಾಯಗಳಿಂದ ಬೆನ್ನು ನೀಲಿ ಬಣ್ಣವಾಗಿತ್ತು ಎಂದು ಅಲ್ಲಿನ ವೈದ್ಯರಾದ ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

“ಅವನನ್ನು ನನ್ನ ಬಳಿಗೆ ಕರೆ ತಂದಾಗ, ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಎರಡು ದಿನಗಳ ನಂತರ ಬಿಟ್ಟು ಹೋಗಿದ್ದಾರೆ ಎಂದು ಅವರ ತಾಯಿ ಹೇಳುತ್ತಿದ್ದರು” ಎಂದು ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಗಳು ನಡೆಯುತ್ತಿದ್ದ ಅನೇಕ ಸ್ಥಳಗಳಲ್ಲಿ, ಕನಿಷ್ಠ ಪೊಲೀಸ್ ಉಪಸ್ಥಿತಿಯಿರಲಿಲ್ಲ ಎಂಬ ಆರೋಪಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...