Homeಮುಖಪುಟರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ ಪೊಲೀಸರ ಸಮ್ಮುಖದಲ್ಲೇ ರಾಷ್ಟ್ರಗೀತೆ ಹಾಡುವಂತೆ ರಾಡುಗಳಿಂದ ಹೊಡೆಯಲ್ಪಟ್ಟವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ.

ದೆಹಲಿಯ ವೈರಲ್ ವಿಡಿಯೋವೊಂದರಲ್ಲಿ 23 ವರ್ಷದ ಯುವಕನೊಬ್ಬ ಕಾಣಿಸಿಕೊಂಡಿದ್ದು, ಇದರಲ್ಲಿ ಪೊಲೀಸರು ಮತ್ತು ಇತರ ನಾಲ್ಕು ಯುವಕರು ಸೇರಿ ರಾಷ್ಟ್ರಗೀತೆ ಹಾಡುವಂತೆ ಹಿಂಸೆಗೊಳಪಡಿಸಿದ್ದರು. ಇದನ್ನು ಆಲ್ಟ್ ನ್ಯೂಸ್ ಪರಿಶೀಲಿಸಿತ್ತು.

ಹಿಂಸಾಚಾರಕ್ಕೆ ಒಳಗಾಗಿ ಮೃತಪಟ್ಟ ವ್ಯಕ್ತಿಯನ್ನು ಈಶಾನ್ಯ ದೆಹಲಿಯ ಕಾರ್ಡಂಪುರಿಯ ನಿವಾಸಿ “ಫೈಜಾನ್” ಎಂದು ಗುರುತಿಸಲಾಗಿದೆ. ಫೈಜಾನ್ ಗುರುವಾರ ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯಲ್ಲಿ ಫೈಜಾನ್ ಮೃತಪಟ್ಟಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಗಾಯಗೊಂಡು ಬಿದ್ದಿರುವವರೊಂದಿಗೆ ದುಷ್ಕರ್ಮಿಯೊಬ್ಬ “ಚೆನ್ನಾಗಿ ಹಾಡಿ” ಎನ್ನುವ ಧ್ವನಿಯನ್ನು ಆ ವಿಡಿಯೊದಲ್ಲಿ ಕೇಳಬಹುದು.

ಪೊಲೀಸರು ಫೈಜಾನ್ ರನ್ನು ಕಸ್ಟಡಿಗೆ ತೆಗೆದುಕೊಂಡ ನಂತರವೂ ಥಳಿಸಲಾಯಿತು ಎಂದು ಅವರ ಕುಟುಂಬ ಆರೋಪಿಸಿದೆ.

“ಅವನನ್ನು ಮತ್ತು ಇತರರೊಂದಿಗೆ ತೀವ್ರವಾಗಿ ಥಳಿಸಲಾಗಿದೆ. ಅವನಿಗೆ ಕಬ್ಬಿಣದ ರಾಡ್ ಗಳಿಂದ ಹೊಡೆದಿದ್ದಾರೆ. ಇದರಿಂದಾಗಿ ಅವನ ಕಾಲುಗಳು ಮುರಿದುಹೋಗಿದ್ದವು. ಹೊಡೆತದಿಂದಾಗಿ ಅವನ ಇಡೀ ದೇಹವು ಕಪ್ಪಾಗಿತ್ತು. ಮೊದಲು ಅವನನ್ನು ರಸ್ತೆಯಲ್ಲಿ ಥಳಿಸಲಾಯಿತು. ನಂತರ ಪೊಲೀಸ್ ಅವನನ್ನು ಕರೆದೊಯ್ದಿರಬೇಕು, ಆದರೆ ಅದರ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಫೈಜಾನ್ ತಾಯಿ ಹೇಳಿದ್ದಾರೆ.

ಫೈಜಾನ್ ತಾಯಿ “ನನಗೆ ಮಾಹಿತಿ ತಿಳಿದ ನಂತರ ನಾನು ಆಸ್ಪತ್ರೆಗೆ ಹೋದೆ. ಅಲ್ಲಿ ಅವನನ್ನು ಕಾಣದಿದ್ದಾಗ ಜ್ಯೋತಿ ಕಾಲೋನಿಯಲ್ಲಿರುವ ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಪೊಲೀಸರಿಗೆ ಫೈಝನ್ ಫೋಟೋವನ್ನು ತೋರಿಸಿದ ನಂತರ ಅವನು ಅಲ್ಲಿದ್ದಾನೆ ಎಂದು ಪೊಲೀಸರು ದೃಡಪಡಿಸಿದರು. ನಾನು ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆ ಪೊಲೀಸರು ನನ್ನನ್ನು ಭೇಟಿಯಾಗಲು ಬಿಡಲಿಲ್ಲ” ಎಂದರಲ್ಲದೆ “ಮರುದಿನ ಬೆಳಿಗ್ಗೆ ಇತರ ಇಬ್ಬರೊಂದಿಗೆ ಪೊಲೀಸ್ ಠಾಣೆಗೆ ಮರಳಿದಾಗ ಬಂಧನದ ಬೆದರಿಕೆ ಹಾಕಲಾಯಿತು. ನಂತರ ರಾತ್ರಿ 11 ಗಂಟೆಗೆ ಅವನು ಸಾಯುತ್ತಿರುವಾಗ ನನ್ನನ್ನು ಕರೆದರು” ಎಂದು ಹೇಳಿದ್ದಾರೆ.

ಫೈಜಾನ್ ಅವರನ್ನು ಪೊಲೀಸರು ಬಿಡುಗಡೆ ಮಾಡಿದ ನಂತರ, ಕುಟುಂಬವು ಅವರನ್ನು ಸ್ಥಳೀಯ ವೈದ್ಯರ ಬಳಿಗೆ ಕರೆದೊಯ್ಯಿದಿದ್ದಾರೆ. ಅಲ್ಲಿಗೆ ತಲುಪಿದಾಗ ಫೈಜಾನ್ ರ ರಕ್ತದೊತ್ತಡ ಮತ್ತು ನಾಡಿಮಿಡಿತ ಕಡಿಮೆಯಾಗಿತ್ತು. ತಲೆಗೆ ಮತ್ತು ಆಂತರಿಕ ಗಾಯಗಳಾಗಿದ್ದವು. ಗಾಯಗಳಿಂದ ಬೆನ್ನು ನೀಲಿ ಬಣ್ಣವಾಗಿತ್ತು ಎಂದು ಅಲ್ಲಿನ ವೈದ್ಯರಾದ ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

“ಅವನನ್ನು ನನ್ನ ಬಳಿಗೆ ಕರೆ ತಂದಾಗ, ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಎರಡು ದಿನಗಳ ನಂತರ ಬಿಟ್ಟು ಹೋಗಿದ್ದಾರೆ ಎಂದು ಅವರ ತಾಯಿ ಹೇಳುತ್ತಿದ್ದರು” ಎಂದು ಡಾ. ಖಲೀಕ್ ಅಹ್ಮದ್ ಹೇಳಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 500 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಗಳು ನಡೆಯುತ್ತಿದ್ದ ಅನೇಕ ಸ್ಥಳಗಳಲ್ಲಿ, ಕನಿಷ್ಠ ಪೊಲೀಸ್ ಉಪಸ್ಥಿತಿಯಿರಲಿಲ್ಲ ಎಂಬ ಆರೋಪಗಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...