Homeಕರ್ನಾಟಕಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ಇತ್ತೀಚೆಗಷ್ಟೇ ಸಿದ್ದರಾಮಯ್ಯ, ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‌ನ ಜಾತ್ಯತೀತ ನಿಲುವು ಬಹಿರಂಗವಾಗಲಿದೆ ಎಂದು ಹೇಳಿದ್ದರು.

- Advertisement -
- Advertisement -

ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷೆ ಮಾಡಿದ್ದರಿಂದ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು ಎಂದು ಹೆಚ್‌.ಡಿ ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ದಾಳಿ ಮಾಡಿದ್ದಾರೆ.

ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಯ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ. ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್‌ನ ಜಾತ್ಯತೀತತೆ ಪರೀಕ್ಷೆ ಮಾಡಲಾಯಿತು. ಆದರೆ, ಈ ಪರೀಕ್ಷೆಯಲ್ಲಿ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು. ಫಲಿತಾಂಶದಿಂದಲಾದರೂ ಅವರ ಆತ್ಮಾವಲೋಕನ ಆಗಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ಇತ್ತೀಚೆಗಷ್ಟೇ ಸಿದ್ದರಾಮಯ್ಯ, ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‌ನ ಜಾತ್ಯತೀತ ನಿಲುವು ಬಹಿರಂಗವಾಗಲಿದೆ ಎಂದು ಹೇಳಿದ್ದರು. ಅಲ್ಲದೆ, ಡಿಸೆಂಬರ್‌ 15 ರಂದು ವಿಧಾನ ಪರಿಷತ್‌ನಲ್ಲಿ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ-ಕಾಂಗ್ರೆಸ್‌ ನಡುವೆ ಗಲಾಟೆ ನಡೆದು, ಉಪ ಸಭಾಪತಿ ಧರ್ಮೇಗೌಡರನ್ನು ಎಳೆದಾಡಲಾಗಿತ್ತು. ಇದರಿಂದ ಧರ್ಮೇಗೌಡರು ತೀವ್ರವಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ.

ಬೆಳಿಗ್ಗೆ ವಿಧಾನ ಪರಿಷತ್‌ನ‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲ್ಲದೆ ಅವರ ಡೆತ್‌‌ನೋಟ್ ಕೂಡಾ‌ ಸಿಕ್ಕಿದ್ದು, ಅದರಲ್ಲಿ ಸಭಾಪತಿ ಸ್ಥಾನಕ್ಕಾಗಿ ನಡೆದ ಗಲಾಟೆಯ ಉಲ್ಲೇಖವಿದೆ ಎನ್ನಲಾಗಿದೆ.

ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...