Homeಕರ್ನಾಟಕಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ಇತ್ತೀಚೆಗಷ್ಟೇ ಸಿದ್ದರಾಮಯ್ಯ, ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‌ನ ಜಾತ್ಯತೀತ ನಿಲುವು ಬಹಿರಂಗವಾಗಲಿದೆ ಎಂದು ಹೇಳಿದ್ದರು.

- Advertisement -
- Advertisement -

ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷೆ ಮಾಡಿದ್ದರಿಂದ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು ಎಂದು ಹೆಚ್‌.ಡಿ ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ದಾಳಿ ಮಾಡಿದ್ದಾರೆ.

ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಯ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ. ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್‌ನ ಜಾತ್ಯತೀತತೆ ಪರೀಕ್ಷೆ ಮಾಡಲಾಯಿತು. ಆದರೆ, ಈ ಪರೀಕ್ಷೆಯಲ್ಲಿ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು. ಫಲಿತಾಂಶದಿಂದಲಾದರೂ ಅವರ ಆತ್ಮಾವಲೋಕನ ಆಗಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ಇತ್ತೀಚೆಗಷ್ಟೇ ಸಿದ್ದರಾಮಯ್ಯ, ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‌ನ ಜಾತ್ಯತೀತ ನಿಲುವು ಬಹಿರಂಗವಾಗಲಿದೆ ಎಂದು ಹೇಳಿದ್ದರು. ಅಲ್ಲದೆ, ಡಿಸೆಂಬರ್‌ 15 ರಂದು ವಿಧಾನ ಪರಿಷತ್‌ನಲ್ಲಿ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ-ಕಾಂಗ್ರೆಸ್‌ ನಡುವೆ ಗಲಾಟೆ ನಡೆದು, ಉಪ ಸಭಾಪತಿ ಧರ್ಮೇಗೌಡರನ್ನು ಎಳೆದಾಡಲಾಗಿತ್ತು. ಇದರಿಂದ ಧರ್ಮೇಗೌಡರು ತೀವ್ರವಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ.

ಬೆಳಿಗ್ಗೆ ವಿಧಾನ ಪರಿಷತ್‌ನ‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲ್ಲದೆ ಅವರ ಡೆತ್‌‌ನೋಟ್ ಕೂಡಾ‌ ಸಿಕ್ಕಿದ್ದು, ಅದರಲ್ಲಿ ಸಭಾಪತಿ ಸ್ಥಾನಕ್ಕಾಗಿ ನಡೆದ ಗಲಾಟೆಯ ಉಲ್ಲೇಖವಿದೆ ಎನ್ನಲಾಗಿದೆ.

ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....