HomeಮುಖಪುಟNEET ನಿಂದಲೇ ಕನ್ನಡಿಗನ ಸಾವು - NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

NEET ನಿಂದಲೇ ಕನ್ನಡಿಗನ ಸಾವು – NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ..

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಘೋಷಿಸಿದಾಗಿನಿಂದ ಉಕ್ರೇನ್‌ನಲ್ಲಿನ 20,000 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಆತಂಕಿತರಾಗಿದ್ದಾರೆ. ಕರ್ನಾಟಕದ ವಿದ್ಯಾರ್ಥಿಯೊಬ್ಬ ರಷ್ಯನ ಶೆಲ್ ದಾಳಿಗೆ ಸಿಕ್ಕಿ ಮೃತಪಟ್ಟಿದ್ದಾನೆ. ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳು ಯುದ್ದದ ಕರಿನೆರಳಿನಲ್ಲಿ ಊಟ್ರ, ನಿದ್ರೆಯಿಲ್ಲದೆ ದಿನದೂಡುತ್ತಿದ್ದಾರೆ. ಈ ಎಲ್ಲದಕ್ಕೂ ಭಾರತದ ಶಿಕ್ಷಣ ವ್ಯವಸ್ಥೆ ಕಾರಣವಾಗಿದೆ ಎಂದು ದೂರಿರುವ ಕನ್ನಡಿಗರು NEET ಪರೀಕ್ಷೆ ರದ್ದುಗೊಳಿಸಲು ಒತ್ತಾಯಿಸಿ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.

ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ, ನನ್ನ ಮಗ ರಾಜ್ಯದಲ್ಲಿ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗಲಿಲ್ಲ. ವೈದ್ಯಕೀಯ ಸೀಟು ಪಡೆಯಲು ಕೋಟ್ಯಂತರ ರೂಪಾಯಿ ನೀಡಬೇಕು ಮತ್ತು ವಿದ್ಯಾರ್ಥಿಗಳು ಕಡಿಮೆ ಹಣ ಖರ್ಚು ಮಾಡಿ ವಿದೇಶದಲ್ಲಿ ಅದೇ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಉಕ್ರೇನ್‌ನಲ್ಲಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಕರನಾಟಕದ ವಿದ್ಯಾರ್ಥಿ ನವೀನ್ ತಂದೆ ಶೇಖರಪ್ಪ ಹೇಳಿದ್ದಾರೆ.

ಭಾರತದಲ್ಲಿ ವೈದ್ಯರ ಕೊರತೆಯಿದೆ. ಹಾಗೆಯೇ ಪ್ರತಿವರ್ಷ 16 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಶಿಕ್ಷಣ ಪಡೆಯುವ ಆಕಾಂಕ್ಷಿಗಳಿರುತ್ತಾರೆ. ಆದರೆ ಕೆಲವೇ ಸಾವಿರ ಸರ್ಕಾರಿ ಸೀಟುಗಳಿದ್ದು ಅದಕ್ಕಾಗಿ NEET ಪರೀಕ್ಷೆಯಲ್ಲಿ ತೀವ್ರ ಪೈಪೋಟಿ ನಡೆಯುತ್ತದೆ. ದುಬಾರಿ ಶುಲ್ಕ ಕಟ್ಟಿ ಖಾಸಗಿ ಕಾಲೇಜುಗಳಲ್ಲಿ ಓದಿಸಲು ಸಾಮರ್ಥ್ಯವಿಲ್ಲದ ಮಧ್ಯಮ ವರ್ಗ ಉಕ್ರೇನ್ – ರಷ್ಯಾದಂತಹ ದೇಶಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಕಳಿಸಬೇಕಾದ ಪರಿಸ್ಥಿತಿಯಿದೆ ಎಂದು ಹಲವರು ಆರೋಪಿಸಿದ್ದಾರೆ.

ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ನಂತ ಬುದ್ಧಿವಂತ ಹುಡುಗ 2ನೆ ಪಿಯುಸಿಯಲ್ಲಿ 97% ತೆಗೆದರು ನಮ್ಮ ಕರ್ನಾಟಕದಲ್ಲಿ ಅವನಿಗೆ ಮೆಡಿಕಲ್ ಸೀಟ್ ಸಿಗಲಿಲ್ಲ ಅದಕ್ಕೆ ಕಾರಣ #NEET ಪರೀಕ್ಷೆ. ಈ #Neet ಪರೀಕ್ಷೆಯಿಂದ ನಮ್ಮ ಕರ್ನಾಟಕದ ಮಕ್ಕಳಿಗೆ ಅನ್ಯಾಯವಾಗಿದೆ. ಈ #NEET ಪರೀಕ್ಷೆಯನ್ನು ಮೊದಲು ರದ್ದುಮಾಡಿ ನಮ್ಮ ಕರ್ನಾಟಕದ #CET ಯನ್ನು ಮರುಸ್ಥಾಪಿಸಬೇಕಾಗಿದೆ. #banNEET #SaveKarnatakaStudents ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ.. ಇಷ್ಟೇ ಕಾಲೇಜು, ಇಷ್ಟೇ ಸೀಟುಗಳಿದ್ದು ನೀವು ಸ್ಪರ್ಧಿಸಿ ಎನ್ನುವುದು ಮ್ಯೂಸಿಕಲ್ ಚೇರ್ ಆಟವಿದ್ದಂತೆ. ಅಲ್ಲಿ ಗೆಲ್ಲುವವರು ಕೆಲವರು ಮಾತ್ರ. ನಾವು ಮಧ್ಯಮ ವರ್ಗವಾಗಿದ್ದು ಹೆಚ್ಚಿನ ಹಣ ಕೊಟ್ಟು ಖಾಸಗಿ ಮೆಡಿಕಲ್ ಸೀಟು ಪಡೆಯಲು ಸಾಧ್ಯವಿಲ್ಲ. ಹಾಗಾಗಿ ನನ್ನ ಮಗಳನ್ನು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ ಕಳುಹಿಸಲು ತೀರ್ಮಾನ ಮಾಡಿದೆ”. – ಇದು ಉಕ್ರೇನ್‌ನ ಚರ್ನಿವಿಟ್ಸಿಯ ಬುಕೋವಿಯನ್ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ತಮ್ಮ ಮಗಳನ್ನು ಓದಿಸುತ್ತಿರುವ ಕನಕಪುರದ ನಿವಾಸಿ ಶಿವರಾಜುರವರ ಅಭಿಮತವಾಗಿದೆ.

ವಿಲನ್ನು #NEET ಮಾತ್ರ ಅಲ್ಲ. ಖಾಸಗಿ ಮೆಡಿಕಲ್ ಕಾಲೇಜು ಲಾಬಿ ಮತ್ತು ಅದರ ಮಾಲಕ ರಾಜಕಾರಣಿಗಳು ಸಮಸ್ಯೆಯ ಮೂಲ. ನಾಳೆ ವಿವರವಾಗಿ ಬರೆಯುವೆ. #BanNEET ಎಂದು ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಇದು ಸರಿಯಾದ ಸಮಯ. ಎಲ್ಲ ಖಾಸಗಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳ ರಾಷ್ಟ್ರೀಕರಣವಾಗಬೇಕು. ಸರ್ಕಾರವೇ ಉನ್ನತ ಹಂತದ ಶಿಕ್ಷಣವನ್ನು ಕಡಿಮೆ ದರದಲ್ಲಿ ಕೊಡಬೇಕು. ಕ್ಯಾಪಿಟೇಷನ್ ಲಾಬಿ ಕೊನೆಗೊಳ್ಳಬೇಕು. ಕೋಟಿಗಟ್ಟಲೆ ಹಣ ಕೊಟ್ಟು ಮೆಡಿಕಲ್ ಓದುವ ವೈದ್ಯನಿಂದ ನೀವು ಏನನ್ನು ನಿರೀಕ್ಷಿಸಬಹುದು. ಈ ದಂಧೆ ನಿಲ್ಲಲಿ. ಪ್ರತಿಭಾವಂತ ವಿದ್ಯಾರ್ಥಿಗಳು ಭಾರತದಲ್ಲೇ ಓದಲಿ, ಸಿರಿವಂತರು, ರಾಜಕಾರಣಿಗಳ ಉದ್ಯಮಿಗಳ ಮಕ್ಕಳು ಬೇಕಿದ್ದರೆ ವಿದೇಶಗಳಲ್ಲಿ ಓದಿಕೊಳ್ಳಲಿ. ಎಲ್ಲದಕ್ಕಿಂತ ಮೊದಲು ಕನ್ನಡದ ಮಕ್ಕಳ ಕತ್ತು ಹಿಸುಕುತ್ತಿರುವ ನೀಟ್ ತೊಲಗಲಿ ಎಂದು ಕರವೇ ಸಾಮಾಜಿಕ ಜಾಲತಾಣ ಮುಖ್ಯಸ್ಥರದ ದಿನೇಶ್ ಕುಮಾರ್ ಆಗ್ರಹಿಸಿದ್ದಾರೆ.

ನೀಟ್! ಪರಿಕ್ಷೆಯು ಕನ್ನಡಿಗರ ಪಾಲಿಗೆ ಸಮಸ್ಯೆ ಆಗಿರುವುದರಿಂದ, ಈ NEET ಪರಿಕ್ಷಾ ವ್ಯವಸ್ಥೆಯಿಂದ ಕರ್ನಾಟಕವು ಹೊರಬರಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಟ್ವಿಟರ್ ಅಭಿಯಾನ.
ಇಂದು ಸಂಜೆ 5 ಗಂಟೆಯಿಂದ ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕರೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ “ಶೇ.90 ರಷ್ಟು ಭಾರತೀಯ ವಿದ್ಯಾರ್ಥಿಗಳು ಇಲ್ಲಿನ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲಿ ಫೇಲ್ ಆದ ಕಾರಣಕ್ಕೆ ವಿದೇಶಕ್ಕೆ ಹೋಗುತ್ತಾರೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...