HomeಮುಖಪುಟNEET ನಿಂದಲೇ ಕನ್ನಡಿಗನ ಸಾವು - NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

NEET ನಿಂದಲೇ ಕನ್ನಡಿಗನ ಸಾವು – NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ..

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಘೋಷಿಸಿದಾಗಿನಿಂದ ಉಕ್ರೇನ್‌ನಲ್ಲಿನ 20,000 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಆತಂಕಿತರಾಗಿದ್ದಾರೆ. ಕರ್ನಾಟಕದ ವಿದ್ಯಾರ್ಥಿಯೊಬ್ಬ ರಷ್ಯನ ಶೆಲ್ ದಾಳಿಗೆ ಸಿಕ್ಕಿ ಮೃತಪಟ್ಟಿದ್ದಾನೆ. ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳು ಯುದ್ದದ ಕರಿನೆರಳಿನಲ್ಲಿ ಊಟ್ರ, ನಿದ್ರೆಯಿಲ್ಲದೆ ದಿನದೂಡುತ್ತಿದ್ದಾರೆ. ಈ ಎಲ್ಲದಕ್ಕೂ ಭಾರತದ ಶಿಕ್ಷಣ ವ್ಯವಸ್ಥೆ ಕಾರಣವಾಗಿದೆ ಎಂದು ದೂರಿರುವ ಕನ್ನಡಿಗರು NEET ಪರೀಕ್ಷೆ ರದ್ದುಗೊಳಿಸಲು ಒತ್ತಾಯಿಸಿ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.

ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ, ನನ್ನ ಮಗ ರಾಜ್ಯದಲ್ಲಿ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗಲಿಲ್ಲ. ವೈದ್ಯಕೀಯ ಸೀಟು ಪಡೆಯಲು ಕೋಟ್ಯಂತರ ರೂಪಾಯಿ ನೀಡಬೇಕು ಮತ್ತು ವಿದ್ಯಾರ್ಥಿಗಳು ಕಡಿಮೆ ಹಣ ಖರ್ಚು ಮಾಡಿ ವಿದೇಶದಲ್ಲಿ ಅದೇ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಉಕ್ರೇನ್‌ನಲ್ಲಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಕರನಾಟಕದ ವಿದ್ಯಾರ್ಥಿ ನವೀನ್ ತಂದೆ ಶೇಖರಪ್ಪ ಹೇಳಿದ್ದಾರೆ.

ಭಾರತದಲ್ಲಿ ವೈದ್ಯರ ಕೊರತೆಯಿದೆ. ಹಾಗೆಯೇ ಪ್ರತಿವರ್ಷ 16 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಶಿಕ್ಷಣ ಪಡೆಯುವ ಆಕಾಂಕ್ಷಿಗಳಿರುತ್ತಾರೆ. ಆದರೆ ಕೆಲವೇ ಸಾವಿರ ಸರ್ಕಾರಿ ಸೀಟುಗಳಿದ್ದು ಅದಕ್ಕಾಗಿ NEET ಪರೀಕ್ಷೆಯಲ್ಲಿ ತೀವ್ರ ಪೈಪೋಟಿ ನಡೆಯುತ್ತದೆ. ದುಬಾರಿ ಶುಲ್ಕ ಕಟ್ಟಿ ಖಾಸಗಿ ಕಾಲೇಜುಗಳಲ್ಲಿ ಓದಿಸಲು ಸಾಮರ್ಥ್ಯವಿಲ್ಲದ ಮಧ್ಯಮ ವರ್ಗ ಉಕ್ರೇನ್ – ರಷ್ಯಾದಂತಹ ದೇಶಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಕಳಿಸಬೇಕಾದ ಪರಿಸ್ಥಿತಿಯಿದೆ ಎಂದು ಹಲವರು ಆರೋಪಿಸಿದ್ದಾರೆ.

ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ನಂತ ಬುದ್ಧಿವಂತ ಹುಡುಗ 2ನೆ ಪಿಯುಸಿಯಲ್ಲಿ 97% ತೆಗೆದರು ನಮ್ಮ ಕರ್ನಾಟಕದಲ್ಲಿ ಅವನಿಗೆ ಮೆಡಿಕಲ್ ಸೀಟ್ ಸಿಗಲಿಲ್ಲ ಅದಕ್ಕೆ ಕಾರಣ #NEET ಪರೀಕ್ಷೆ. ಈ #Neet ಪರೀಕ್ಷೆಯಿಂದ ನಮ್ಮ ಕರ್ನಾಟಕದ ಮಕ್ಕಳಿಗೆ ಅನ್ಯಾಯವಾಗಿದೆ. ಈ #NEET ಪರೀಕ್ಷೆಯನ್ನು ಮೊದಲು ರದ್ದುಮಾಡಿ ನಮ್ಮ ಕರ್ನಾಟಕದ #CET ಯನ್ನು ಮರುಸ್ಥಾಪಿಸಬೇಕಾಗಿದೆ. #banNEET #SaveKarnatakaStudents ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ.. ಇಷ್ಟೇ ಕಾಲೇಜು, ಇಷ್ಟೇ ಸೀಟುಗಳಿದ್ದು ನೀವು ಸ್ಪರ್ಧಿಸಿ ಎನ್ನುವುದು ಮ್ಯೂಸಿಕಲ್ ಚೇರ್ ಆಟವಿದ್ದಂತೆ. ಅಲ್ಲಿ ಗೆಲ್ಲುವವರು ಕೆಲವರು ಮಾತ್ರ. ನಾವು ಮಧ್ಯಮ ವರ್ಗವಾಗಿದ್ದು ಹೆಚ್ಚಿನ ಹಣ ಕೊಟ್ಟು ಖಾಸಗಿ ಮೆಡಿಕಲ್ ಸೀಟು ಪಡೆಯಲು ಸಾಧ್ಯವಿಲ್ಲ. ಹಾಗಾಗಿ ನನ್ನ ಮಗಳನ್ನು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ ಕಳುಹಿಸಲು ತೀರ್ಮಾನ ಮಾಡಿದೆ”. – ಇದು ಉಕ್ರೇನ್‌ನ ಚರ್ನಿವಿಟ್ಸಿಯ ಬುಕೋವಿಯನ್ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ತಮ್ಮ ಮಗಳನ್ನು ಓದಿಸುತ್ತಿರುವ ಕನಕಪುರದ ನಿವಾಸಿ ಶಿವರಾಜುರವರ ಅಭಿಮತವಾಗಿದೆ.

ವಿಲನ್ನು #NEET ಮಾತ್ರ ಅಲ್ಲ. ಖಾಸಗಿ ಮೆಡಿಕಲ್ ಕಾಲೇಜು ಲಾಬಿ ಮತ್ತು ಅದರ ಮಾಲಕ ರಾಜಕಾರಣಿಗಳು ಸಮಸ್ಯೆಯ ಮೂಲ. ನಾಳೆ ವಿವರವಾಗಿ ಬರೆಯುವೆ. #BanNEET ಎಂದು ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಇದು ಸರಿಯಾದ ಸಮಯ. ಎಲ್ಲ ಖಾಸಗಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳ ರಾಷ್ಟ್ರೀಕರಣವಾಗಬೇಕು. ಸರ್ಕಾರವೇ ಉನ್ನತ ಹಂತದ ಶಿಕ್ಷಣವನ್ನು ಕಡಿಮೆ ದರದಲ್ಲಿ ಕೊಡಬೇಕು. ಕ್ಯಾಪಿಟೇಷನ್ ಲಾಬಿ ಕೊನೆಗೊಳ್ಳಬೇಕು. ಕೋಟಿಗಟ್ಟಲೆ ಹಣ ಕೊಟ್ಟು ಮೆಡಿಕಲ್ ಓದುವ ವೈದ್ಯನಿಂದ ನೀವು ಏನನ್ನು ನಿರೀಕ್ಷಿಸಬಹುದು. ಈ ದಂಧೆ ನಿಲ್ಲಲಿ. ಪ್ರತಿಭಾವಂತ ವಿದ್ಯಾರ್ಥಿಗಳು ಭಾರತದಲ್ಲೇ ಓದಲಿ, ಸಿರಿವಂತರು, ರಾಜಕಾರಣಿಗಳ ಉದ್ಯಮಿಗಳ ಮಕ್ಕಳು ಬೇಕಿದ್ದರೆ ವಿದೇಶಗಳಲ್ಲಿ ಓದಿಕೊಳ್ಳಲಿ. ಎಲ್ಲದಕ್ಕಿಂತ ಮೊದಲು ಕನ್ನಡದ ಮಕ್ಕಳ ಕತ್ತು ಹಿಸುಕುತ್ತಿರುವ ನೀಟ್ ತೊಲಗಲಿ ಎಂದು ಕರವೇ ಸಾಮಾಜಿಕ ಜಾಲತಾಣ ಮುಖ್ಯಸ್ಥರದ ದಿನೇಶ್ ಕುಮಾರ್ ಆಗ್ರಹಿಸಿದ್ದಾರೆ.

ನೀಟ್! ಪರಿಕ್ಷೆಯು ಕನ್ನಡಿಗರ ಪಾಲಿಗೆ ಸಮಸ್ಯೆ ಆಗಿರುವುದರಿಂದ, ಈ NEET ಪರಿಕ್ಷಾ ವ್ಯವಸ್ಥೆಯಿಂದ ಕರ್ನಾಟಕವು ಹೊರಬರಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಟ್ವಿಟರ್ ಅಭಿಯಾನ.
ಇಂದು ಸಂಜೆ 5 ಗಂಟೆಯಿಂದ ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕರೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ “ಶೇ.90 ರಷ್ಟು ಭಾರತೀಯ ವಿದ್ಯಾರ್ಥಿಗಳು ಇಲ್ಲಿನ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲಿ ಫೇಲ್ ಆದ ಕಾರಣಕ್ಕೆ ವಿದೇಶಕ್ಕೆ ಹೋಗುತ್ತಾರೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...