HomeಮುಖಪುಟNEET ನಿಂದಲೇ ಕನ್ನಡಿಗನ ಸಾವು - NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

NEET ನಿಂದಲೇ ಕನ್ನಡಿಗನ ಸಾವು – NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ..

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಘೋಷಿಸಿದಾಗಿನಿಂದ ಉಕ್ರೇನ್‌ನಲ್ಲಿನ 20,000 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಆತಂಕಿತರಾಗಿದ್ದಾರೆ. ಕರ್ನಾಟಕದ ವಿದ್ಯಾರ್ಥಿಯೊಬ್ಬ ರಷ್ಯನ ಶೆಲ್ ದಾಳಿಗೆ ಸಿಕ್ಕಿ ಮೃತಪಟ್ಟಿದ್ದಾನೆ. ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳು ಯುದ್ದದ ಕರಿನೆರಳಿನಲ್ಲಿ ಊಟ್ರ, ನಿದ್ರೆಯಿಲ್ಲದೆ ದಿನದೂಡುತ್ತಿದ್ದಾರೆ. ಈ ಎಲ್ಲದಕ್ಕೂ ಭಾರತದ ಶಿಕ್ಷಣ ವ್ಯವಸ್ಥೆ ಕಾರಣವಾಗಿದೆ ಎಂದು ದೂರಿರುವ ಕನ್ನಡಿಗರು NEET ಪರೀಕ್ಷೆ ರದ್ದುಗೊಳಿಸಲು ಒತ್ತಾಯಿಸಿ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.

ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ, ನನ್ನ ಮಗ ರಾಜ್ಯದಲ್ಲಿ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗಲಿಲ್ಲ. ವೈದ್ಯಕೀಯ ಸೀಟು ಪಡೆಯಲು ಕೋಟ್ಯಂತರ ರೂಪಾಯಿ ನೀಡಬೇಕು ಮತ್ತು ವಿದ್ಯಾರ್ಥಿಗಳು ಕಡಿಮೆ ಹಣ ಖರ್ಚು ಮಾಡಿ ವಿದೇಶದಲ್ಲಿ ಅದೇ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಉಕ್ರೇನ್‌ನಲ್ಲಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಕರನಾಟಕದ ವಿದ್ಯಾರ್ಥಿ ನವೀನ್ ತಂದೆ ಶೇಖರಪ್ಪ ಹೇಳಿದ್ದಾರೆ.

ಭಾರತದಲ್ಲಿ ವೈದ್ಯರ ಕೊರತೆಯಿದೆ. ಹಾಗೆಯೇ ಪ್ರತಿವರ್ಷ 16 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಶಿಕ್ಷಣ ಪಡೆಯುವ ಆಕಾಂಕ್ಷಿಗಳಿರುತ್ತಾರೆ. ಆದರೆ ಕೆಲವೇ ಸಾವಿರ ಸರ್ಕಾರಿ ಸೀಟುಗಳಿದ್ದು ಅದಕ್ಕಾಗಿ NEET ಪರೀಕ್ಷೆಯಲ್ಲಿ ತೀವ್ರ ಪೈಪೋಟಿ ನಡೆಯುತ್ತದೆ. ದುಬಾರಿ ಶುಲ್ಕ ಕಟ್ಟಿ ಖಾಸಗಿ ಕಾಲೇಜುಗಳಲ್ಲಿ ಓದಿಸಲು ಸಾಮರ್ಥ್ಯವಿಲ್ಲದ ಮಧ್ಯಮ ವರ್ಗ ಉಕ್ರೇನ್ – ರಷ್ಯಾದಂತಹ ದೇಶಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಕಳಿಸಬೇಕಾದ ಪರಿಸ್ಥಿತಿಯಿದೆ ಎಂದು ಹಲವರು ಆರೋಪಿಸಿದ್ದಾರೆ.

ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ನಂತ ಬುದ್ಧಿವಂತ ಹುಡುಗ 2ನೆ ಪಿಯುಸಿಯಲ್ಲಿ 97% ತೆಗೆದರು ನಮ್ಮ ಕರ್ನಾಟಕದಲ್ಲಿ ಅವನಿಗೆ ಮೆಡಿಕಲ್ ಸೀಟ್ ಸಿಗಲಿಲ್ಲ ಅದಕ್ಕೆ ಕಾರಣ #NEET ಪರೀಕ್ಷೆ. ಈ #Neet ಪರೀಕ್ಷೆಯಿಂದ ನಮ್ಮ ಕರ್ನಾಟಕದ ಮಕ್ಕಳಿಗೆ ಅನ್ಯಾಯವಾಗಿದೆ. ಈ #NEET ಪರೀಕ್ಷೆಯನ್ನು ಮೊದಲು ರದ್ದುಮಾಡಿ ನಮ್ಮ ಕರ್ನಾಟಕದ #CET ಯನ್ನು ಮರುಸ್ಥಾಪಿಸಬೇಕಾಗಿದೆ. #banNEET #SaveKarnatakaStudents ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ.. ಇಷ್ಟೇ ಕಾಲೇಜು, ಇಷ್ಟೇ ಸೀಟುಗಳಿದ್ದು ನೀವು ಸ್ಪರ್ಧಿಸಿ ಎನ್ನುವುದು ಮ್ಯೂಸಿಕಲ್ ಚೇರ್ ಆಟವಿದ್ದಂತೆ. ಅಲ್ಲಿ ಗೆಲ್ಲುವವರು ಕೆಲವರು ಮಾತ್ರ. ನಾವು ಮಧ್ಯಮ ವರ್ಗವಾಗಿದ್ದು ಹೆಚ್ಚಿನ ಹಣ ಕೊಟ್ಟು ಖಾಸಗಿ ಮೆಡಿಕಲ್ ಸೀಟು ಪಡೆಯಲು ಸಾಧ್ಯವಿಲ್ಲ. ಹಾಗಾಗಿ ನನ್ನ ಮಗಳನ್ನು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ ಕಳುಹಿಸಲು ತೀರ್ಮಾನ ಮಾಡಿದೆ”. – ಇದು ಉಕ್ರೇನ್‌ನ ಚರ್ನಿವಿಟ್ಸಿಯ ಬುಕೋವಿಯನ್ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ತಮ್ಮ ಮಗಳನ್ನು ಓದಿಸುತ್ತಿರುವ ಕನಕಪುರದ ನಿವಾಸಿ ಶಿವರಾಜುರವರ ಅಭಿಮತವಾಗಿದೆ.

ವಿಲನ್ನು #NEET ಮಾತ್ರ ಅಲ್ಲ. ಖಾಸಗಿ ಮೆಡಿಕಲ್ ಕಾಲೇಜು ಲಾಬಿ ಮತ್ತು ಅದರ ಮಾಲಕ ರಾಜಕಾರಣಿಗಳು ಸಮಸ್ಯೆಯ ಮೂಲ. ನಾಳೆ ವಿವರವಾಗಿ ಬರೆಯುವೆ. #BanNEET ಎಂದು ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಇದು ಸರಿಯಾದ ಸಮಯ. ಎಲ್ಲ ಖಾಸಗಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳ ರಾಷ್ಟ್ರೀಕರಣವಾಗಬೇಕು. ಸರ್ಕಾರವೇ ಉನ್ನತ ಹಂತದ ಶಿಕ್ಷಣವನ್ನು ಕಡಿಮೆ ದರದಲ್ಲಿ ಕೊಡಬೇಕು. ಕ್ಯಾಪಿಟೇಷನ್ ಲಾಬಿ ಕೊನೆಗೊಳ್ಳಬೇಕು. ಕೋಟಿಗಟ್ಟಲೆ ಹಣ ಕೊಟ್ಟು ಮೆಡಿಕಲ್ ಓದುವ ವೈದ್ಯನಿಂದ ನೀವು ಏನನ್ನು ನಿರೀಕ್ಷಿಸಬಹುದು. ಈ ದಂಧೆ ನಿಲ್ಲಲಿ. ಪ್ರತಿಭಾವಂತ ವಿದ್ಯಾರ್ಥಿಗಳು ಭಾರತದಲ್ಲೇ ಓದಲಿ, ಸಿರಿವಂತರು, ರಾಜಕಾರಣಿಗಳ ಉದ್ಯಮಿಗಳ ಮಕ್ಕಳು ಬೇಕಿದ್ದರೆ ವಿದೇಶಗಳಲ್ಲಿ ಓದಿಕೊಳ್ಳಲಿ. ಎಲ್ಲದಕ್ಕಿಂತ ಮೊದಲು ಕನ್ನಡದ ಮಕ್ಕಳ ಕತ್ತು ಹಿಸುಕುತ್ತಿರುವ ನೀಟ್ ತೊಲಗಲಿ ಎಂದು ಕರವೇ ಸಾಮಾಜಿಕ ಜಾಲತಾಣ ಮುಖ್ಯಸ್ಥರದ ದಿನೇಶ್ ಕುಮಾರ್ ಆಗ್ರಹಿಸಿದ್ದಾರೆ.

ನೀಟ್! ಪರಿಕ್ಷೆಯು ಕನ್ನಡಿಗರ ಪಾಲಿಗೆ ಸಮಸ್ಯೆ ಆಗಿರುವುದರಿಂದ, ಈ NEET ಪರಿಕ್ಷಾ ವ್ಯವಸ್ಥೆಯಿಂದ ಕರ್ನಾಟಕವು ಹೊರಬರಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಟ್ವಿಟರ್ ಅಭಿಯಾನ.
ಇಂದು ಸಂಜೆ 5 ಗಂಟೆಯಿಂದ ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕರೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ “ಶೇ.90 ರಷ್ಟು ಭಾರತೀಯ ವಿದ್ಯಾರ್ಥಿಗಳು ಇಲ್ಲಿನ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲಿ ಫೇಲ್ ಆದ ಕಾರಣಕ್ಕೆ ವಿದೇಶಕ್ಕೆ ಹೋಗುತ್ತಾರೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...