Homeಮುಖಪುಟಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು.

- Advertisement -
- Advertisement -

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಕೊಲೆ ಬೆದರಿಕೆ ಹಾಕಿದ್ದು ಕೇವಲ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಅದು ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹದೇವ ಕಳವಳ ವ್ಯಕ್ತಪಡಿಸಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಇತ್ತೀಚೆಗೆ ನನ್ನ ಗೆಳೆಯ ಶ್ರೀನಿವಾಸ್ ಪ್ರಸಾದ್‌ರ ಒಂದು ಹೇಳಿಕೆ ನನಗೆ ಅತೀವ ನೋವು ಉಂಟು ಮಾಡಿತು. ಶ್ರೀನಿವಾಸ್ ಪ್ರಸಾದ್ ‘ಮಲ್ಲಿಕಾರ್ಜುನ ಖರ್ಗೆಯವರು ಅವಕಾಶವಾದಿ’ ಎಂದು ಹೇಳಿದ ಮಾತಿಗೆ ನಾನು ನೊಂದುಕೊಂಡೆ” ಎಂದರು.

ನಾನು ಬಲ್ಲಂತೆ, ಮಲ್ಲಿಕಾರ್ಜುನ ಖರ್ಗೆಯವರದು ಹಿತಮಿತ ವ್ಯಕ್ತಿತ್ವ. ಖರ್ಗೆಯವರು ತಾವು ನಂಬಿದ ಸಿದ್ಧಾಂತ, ಪಕ್ಷಕ್ಕೆ ಪರಮ ನಿಷ್ಠರು. ಅಧಿಕಾರ ದಾಹ ಇಲ್ಲದವರು. ಅವರು ಈ ಹಿಂದೆ ಸಚಿವರಾಗಿದ್ದಾಗ ಒಳ್ಳೊಳ್ಳೆಯ ಜನಹಿತ ಕಾಯ್ದೆಗಳನ್ನು ತಂದಿದ್ದಾರೆ. ಅವರು ಮುತ್ಸದ್ದಿ ಕೂಡ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸರ್ವಸಮ್ಮತ ಪ್ರಧಾನಮಂತ್ರಿ ಅಭ್ಯರ್ಥಿ ಆಗುವ ಸಾಧ್ಯತೆಗಳೂ ಇವೆ. ಹೀಗಿರುವಾಗ, ಇಂತಹ ಘನ ವ್ಯಕ್ತಿತ್ವ ಖರ್ಗೆಯವರಿಗೆ ಇರುವಾಗ ಶ್ರೀನಿವಾಸ್ ಪ್ರಸಾದ್‌ರಿಗೆ ಖರ್ಗೆಯವರನ್ನು ಅವಕಾಶವಾದಿ ಅನ್ನಲು ಹೇಗೆ ಬಾಯಿ ಬಂತು? ನನಗೆ ಪ್ರಶ್ನೆಯಾಗಿದೆ. ಪ್ರಸಾದ್‌ರಿಗೆ ನನ್ನ ಸಂಕಟದ ಭಾವನೆಗಳು ಮುಟ್ಟಬಹುದು ಅಂದುಕೊಂಡಿದ್ದೇನೆ ಎಂದರು.

ಹಾಗೆಯೇ ಇನ್ನೊಂದು ಸಂಗತಿ ಎಂದರೆ ಪ್ರಿಯಾಂಕ ಖರ್ಗೆ ಸಂಘ ಪರಿವಾರದ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಅವರ ವ್ಯಕ್ತಿತ್ವವೂ ಒಂದು ಮರಿಸಿಂಹದಂತೆಯೇ ಇದೆ. ಜೊತೆಗೆ ಇವರು ಪ್ರಖರ ಬುದ್ಧಿವಂತ. ವಾಗ್ಮಿ ಕೂಡ. ಇವರ ಬಗ್ಗೆ ಬೆದರಿದ ಸಂಘ ಪರಿವಾರದ ಬಿಜೆಪಿಯವರು ಪ್ರಿಯಾಂಕ ಖರ್ಗೆ ವಿರುದ್ಧ ಮಣಿಕಂಠ ರಾಥೋಡ್ ಎಂಬ ರೌಡಿಶೀಟರ್‌ನ್ನು ನಿಲ್ಲಿಸಿದೆ. ‘ಯಥಾ ಪಕ್ಷ, ತಥಾ ಅಭ್ಯರ್ಥಿ!’ ಎಂದು ಲೇವಡಿ ಮಾಡಿದರು.

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು. ಈಗ ಈತ ಖರ್ಗೆಯವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದು ಸುದ್ದಿಯಾಗಿದೆ. ಈತನ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಇಡೀ ನಾಡಿಗೇ ಹಾಕಿದ ಬೆದರಿಕೆ. ನಾಗರೀಕ ಸಮಾಜ, ಪ್ರಗತಿಪರ ಸಂಘಟನೆಗಳು ತಕ್ಷಣವೇ ರಾಜ್ಯಾದ್ಯಂತ ಕೇವಲ ಒಂದು ಗಂಟೆ ಧರಣಿ ಮಾಡಿ, ‘ಮಣಿಕಂಠ ರಾಥೋಡ್ ನಡಾವಳಿ ಸಹಿಸುವುದಿಲ್ಲ’ ಎಂದು ಹೇಳಬೇಕಾಗಿದೆ. ನಿಮ್ಮೊಡನೆ ನಾನೂ ಇದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...