Homeಮುಖಪುಟಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು.

- Advertisement -
- Advertisement -

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಕೊಲೆ ಬೆದರಿಕೆ ಹಾಕಿದ್ದು ಕೇವಲ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಅದು ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹದೇವ ಕಳವಳ ವ್ಯಕ್ತಪಡಿಸಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಇತ್ತೀಚೆಗೆ ನನ್ನ ಗೆಳೆಯ ಶ್ರೀನಿವಾಸ್ ಪ್ರಸಾದ್‌ರ ಒಂದು ಹೇಳಿಕೆ ನನಗೆ ಅತೀವ ನೋವು ಉಂಟು ಮಾಡಿತು. ಶ್ರೀನಿವಾಸ್ ಪ್ರಸಾದ್ ‘ಮಲ್ಲಿಕಾರ್ಜುನ ಖರ್ಗೆಯವರು ಅವಕಾಶವಾದಿ’ ಎಂದು ಹೇಳಿದ ಮಾತಿಗೆ ನಾನು ನೊಂದುಕೊಂಡೆ” ಎಂದರು.

ನಾನು ಬಲ್ಲಂತೆ, ಮಲ್ಲಿಕಾರ್ಜುನ ಖರ್ಗೆಯವರದು ಹಿತಮಿತ ವ್ಯಕ್ತಿತ್ವ. ಖರ್ಗೆಯವರು ತಾವು ನಂಬಿದ ಸಿದ್ಧಾಂತ, ಪಕ್ಷಕ್ಕೆ ಪರಮ ನಿಷ್ಠರು. ಅಧಿಕಾರ ದಾಹ ಇಲ್ಲದವರು. ಅವರು ಈ ಹಿಂದೆ ಸಚಿವರಾಗಿದ್ದಾಗ ಒಳ್ಳೊಳ್ಳೆಯ ಜನಹಿತ ಕಾಯ್ದೆಗಳನ್ನು ತಂದಿದ್ದಾರೆ. ಅವರು ಮುತ್ಸದ್ದಿ ಕೂಡ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸರ್ವಸಮ್ಮತ ಪ್ರಧಾನಮಂತ್ರಿ ಅಭ್ಯರ್ಥಿ ಆಗುವ ಸಾಧ್ಯತೆಗಳೂ ಇವೆ. ಹೀಗಿರುವಾಗ, ಇಂತಹ ಘನ ವ್ಯಕ್ತಿತ್ವ ಖರ್ಗೆಯವರಿಗೆ ಇರುವಾಗ ಶ್ರೀನಿವಾಸ್ ಪ್ರಸಾದ್‌ರಿಗೆ ಖರ್ಗೆಯವರನ್ನು ಅವಕಾಶವಾದಿ ಅನ್ನಲು ಹೇಗೆ ಬಾಯಿ ಬಂತು? ನನಗೆ ಪ್ರಶ್ನೆಯಾಗಿದೆ. ಪ್ರಸಾದ್‌ರಿಗೆ ನನ್ನ ಸಂಕಟದ ಭಾವನೆಗಳು ಮುಟ್ಟಬಹುದು ಅಂದುಕೊಂಡಿದ್ದೇನೆ ಎಂದರು.

ಹಾಗೆಯೇ ಇನ್ನೊಂದು ಸಂಗತಿ ಎಂದರೆ ಪ್ರಿಯಾಂಕ ಖರ್ಗೆ ಸಂಘ ಪರಿವಾರದ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಅವರ ವ್ಯಕ್ತಿತ್ವವೂ ಒಂದು ಮರಿಸಿಂಹದಂತೆಯೇ ಇದೆ. ಜೊತೆಗೆ ಇವರು ಪ್ರಖರ ಬುದ್ಧಿವಂತ. ವಾಗ್ಮಿ ಕೂಡ. ಇವರ ಬಗ್ಗೆ ಬೆದರಿದ ಸಂಘ ಪರಿವಾರದ ಬಿಜೆಪಿಯವರು ಪ್ರಿಯಾಂಕ ಖರ್ಗೆ ವಿರುದ್ಧ ಮಣಿಕಂಠ ರಾಥೋಡ್ ಎಂಬ ರೌಡಿಶೀಟರ್‌ನ್ನು ನಿಲ್ಲಿಸಿದೆ. ‘ಯಥಾ ಪಕ್ಷ, ತಥಾ ಅಭ್ಯರ್ಥಿ!’ ಎಂದು ಲೇವಡಿ ಮಾಡಿದರು.

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು. ಈಗ ಈತ ಖರ್ಗೆಯವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದು ಸುದ್ದಿಯಾಗಿದೆ. ಈತನ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಇಡೀ ನಾಡಿಗೇ ಹಾಕಿದ ಬೆದರಿಕೆ. ನಾಗರೀಕ ಸಮಾಜ, ಪ್ರಗತಿಪರ ಸಂಘಟನೆಗಳು ತಕ್ಷಣವೇ ರಾಜ್ಯಾದ್ಯಂತ ಕೇವಲ ಒಂದು ಗಂಟೆ ಧರಣಿ ಮಾಡಿ, ‘ಮಣಿಕಂಠ ರಾಥೋಡ್ ನಡಾವಳಿ ಸಹಿಸುವುದಿಲ್ಲ’ ಎಂದು ಹೇಳಬೇಕಾಗಿದೆ. ನಿಮ್ಮೊಡನೆ ನಾನೂ ಇದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...