Homeಮುಖಪುಟಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು.

- Advertisement -
- Advertisement -

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಕೊಲೆ ಬೆದರಿಕೆ ಹಾಕಿದ್ದು ಕೇವಲ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಅದು ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹದೇವ ಕಳವಳ ವ್ಯಕ್ತಪಡಿಸಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಇತ್ತೀಚೆಗೆ ನನ್ನ ಗೆಳೆಯ ಶ್ರೀನಿವಾಸ್ ಪ್ರಸಾದ್‌ರ ಒಂದು ಹೇಳಿಕೆ ನನಗೆ ಅತೀವ ನೋವು ಉಂಟು ಮಾಡಿತು. ಶ್ರೀನಿವಾಸ್ ಪ್ರಸಾದ್ ‘ಮಲ್ಲಿಕಾರ್ಜುನ ಖರ್ಗೆಯವರು ಅವಕಾಶವಾದಿ’ ಎಂದು ಹೇಳಿದ ಮಾತಿಗೆ ನಾನು ನೊಂದುಕೊಂಡೆ” ಎಂದರು.

ನಾನು ಬಲ್ಲಂತೆ, ಮಲ್ಲಿಕಾರ್ಜುನ ಖರ್ಗೆಯವರದು ಹಿತಮಿತ ವ್ಯಕ್ತಿತ್ವ. ಖರ್ಗೆಯವರು ತಾವು ನಂಬಿದ ಸಿದ್ಧಾಂತ, ಪಕ್ಷಕ್ಕೆ ಪರಮ ನಿಷ್ಠರು. ಅಧಿಕಾರ ದಾಹ ಇಲ್ಲದವರು. ಅವರು ಈ ಹಿಂದೆ ಸಚಿವರಾಗಿದ್ದಾಗ ಒಳ್ಳೊಳ್ಳೆಯ ಜನಹಿತ ಕಾಯ್ದೆಗಳನ್ನು ತಂದಿದ್ದಾರೆ. ಅವರು ಮುತ್ಸದ್ದಿ ಕೂಡ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸರ್ವಸಮ್ಮತ ಪ್ರಧಾನಮಂತ್ರಿ ಅಭ್ಯರ್ಥಿ ಆಗುವ ಸಾಧ್ಯತೆಗಳೂ ಇವೆ. ಹೀಗಿರುವಾಗ, ಇಂತಹ ಘನ ವ್ಯಕ್ತಿತ್ವ ಖರ್ಗೆಯವರಿಗೆ ಇರುವಾಗ ಶ್ರೀನಿವಾಸ್ ಪ್ರಸಾದ್‌ರಿಗೆ ಖರ್ಗೆಯವರನ್ನು ಅವಕಾಶವಾದಿ ಅನ್ನಲು ಹೇಗೆ ಬಾಯಿ ಬಂತು? ನನಗೆ ಪ್ರಶ್ನೆಯಾಗಿದೆ. ಪ್ರಸಾದ್‌ರಿಗೆ ನನ್ನ ಸಂಕಟದ ಭಾವನೆಗಳು ಮುಟ್ಟಬಹುದು ಅಂದುಕೊಂಡಿದ್ದೇನೆ ಎಂದರು.

ಹಾಗೆಯೇ ಇನ್ನೊಂದು ಸಂಗತಿ ಎಂದರೆ ಪ್ರಿಯಾಂಕ ಖರ್ಗೆ ಸಂಘ ಪರಿವಾರದ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಅವರ ವ್ಯಕ್ತಿತ್ವವೂ ಒಂದು ಮರಿಸಿಂಹದಂತೆಯೇ ಇದೆ. ಜೊತೆಗೆ ಇವರು ಪ್ರಖರ ಬುದ್ಧಿವಂತ. ವಾಗ್ಮಿ ಕೂಡ. ಇವರ ಬಗ್ಗೆ ಬೆದರಿದ ಸಂಘ ಪರಿವಾರದ ಬಿಜೆಪಿಯವರು ಪ್ರಿಯಾಂಕ ಖರ್ಗೆ ವಿರುದ್ಧ ಮಣಿಕಂಠ ರಾಥೋಡ್ ಎಂಬ ರೌಡಿಶೀಟರ್‌ನ್ನು ನಿಲ್ಲಿಸಿದೆ. ‘ಯಥಾ ಪಕ್ಷ, ತಥಾ ಅಭ್ಯರ್ಥಿ!’ ಎಂದು ಲೇವಡಿ ಮಾಡಿದರು.

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು. ಈಗ ಈತ ಖರ್ಗೆಯವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದು ಸುದ್ದಿಯಾಗಿದೆ. ಈತನ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಇಡೀ ನಾಡಿಗೇ ಹಾಕಿದ ಬೆದರಿಕೆ. ನಾಗರೀಕ ಸಮಾಜ, ಪ್ರಗತಿಪರ ಸಂಘಟನೆಗಳು ತಕ್ಷಣವೇ ರಾಜ್ಯಾದ್ಯಂತ ಕೇವಲ ಒಂದು ಗಂಟೆ ಧರಣಿ ಮಾಡಿ, ‘ಮಣಿಕಂಠ ರಾಥೋಡ್ ನಡಾವಳಿ ಸಹಿಸುವುದಿಲ್ಲ’ ಎಂದು ಹೇಳಬೇಕಾಗಿದೆ. ನಿಮ್ಮೊಡನೆ ನಾನೂ ಇದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...