Homeಮುಖಪುಟಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು.

- Advertisement -
- Advertisement -

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಕೊಲೆ ಬೆದರಿಕೆ ಹಾಕಿದ್ದು ಕೇವಲ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಅದು ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹದೇವ ಕಳವಳ ವ್ಯಕ್ತಪಡಿಸಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಇತ್ತೀಚೆಗೆ ನನ್ನ ಗೆಳೆಯ ಶ್ರೀನಿವಾಸ್ ಪ್ರಸಾದ್‌ರ ಒಂದು ಹೇಳಿಕೆ ನನಗೆ ಅತೀವ ನೋವು ಉಂಟು ಮಾಡಿತು. ಶ್ರೀನಿವಾಸ್ ಪ್ರಸಾದ್ ‘ಮಲ್ಲಿಕಾರ್ಜುನ ಖರ್ಗೆಯವರು ಅವಕಾಶವಾದಿ’ ಎಂದು ಹೇಳಿದ ಮಾತಿಗೆ ನಾನು ನೊಂದುಕೊಂಡೆ” ಎಂದರು.

ನಾನು ಬಲ್ಲಂತೆ, ಮಲ್ಲಿಕಾರ್ಜುನ ಖರ್ಗೆಯವರದು ಹಿತಮಿತ ವ್ಯಕ್ತಿತ್ವ. ಖರ್ಗೆಯವರು ತಾವು ನಂಬಿದ ಸಿದ್ಧಾಂತ, ಪಕ್ಷಕ್ಕೆ ಪರಮ ನಿಷ್ಠರು. ಅಧಿಕಾರ ದಾಹ ಇಲ್ಲದವರು. ಅವರು ಈ ಹಿಂದೆ ಸಚಿವರಾಗಿದ್ದಾಗ ಒಳ್ಳೊಳ್ಳೆಯ ಜನಹಿತ ಕಾಯ್ದೆಗಳನ್ನು ತಂದಿದ್ದಾರೆ. ಅವರು ಮುತ್ಸದ್ದಿ ಕೂಡ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸರ್ವಸಮ್ಮತ ಪ್ರಧಾನಮಂತ್ರಿ ಅಭ್ಯರ್ಥಿ ಆಗುವ ಸಾಧ್ಯತೆಗಳೂ ಇವೆ. ಹೀಗಿರುವಾಗ, ಇಂತಹ ಘನ ವ್ಯಕ್ತಿತ್ವ ಖರ್ಗೆಯವರಿಗೆ ಇರುವಾಗ ಶ್ರೀನಿವಾಸ್ ಪ್ರಸಾದ್‌ರಿಗೆ ಖರ್ಗೆಯವರನ್ನು ಅವಕಾಶವಾದಿ ಅನ್ನಲು ಹೇಗೆ ಬಾಯಿ ಬಂತು? ನನಗೆ ಪ್ರಶ್ನೆಯಾಗಿದೆ. ಪ್ರಸಾದ್‌ರಿಗೆ ನನ್ನ ಸಂಕಟದ ಭಾವನೆಗಳು ಮುಟ್ಟಬಹುದು ಅಂದುಕೊಂಡಿದ್ದೇನೆ ಎಂದರು.

ಹಾಗೆಯೇ ಇನ್ನೊಂದು ಸಂಗತಿ ಎಂದರೆ ಪ್ರಿಯಾಂಕ ಖರ್ಗೆ ಸಂಘ ಪರಿವಾರದ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಅವರ ವ್ಯಕ್ತಿತ್ವವೂ ಒಂದು ಮರಿಸಿಂಹದಂತೆಯೇ ಇದೆ. ಜೊತೆಗೆ ಇವರು ಪ್ರಖರ ಬುದ್ಧಿವಂತ. ವಾಗ್ಮಿ ಕೂಡ. ಇವರ ಬಗ್ಗೆ ಬೆದರಿದ ಸಂಘ ಪರಿವಾರದ ಬಿಜೆಪಿಯವರು ಪ್ರಿಯಾಂಕ ಖರ್ಗೆ ವಿರುದ್ಧ ಮಣಿಕಂಠ ರಾಥೋಡ್ ಎಂಬ ರೌಡಿಶೀಟರ್‌ನ್ನು ನಿಲ್ಲಿಸಿದೆ. ‘ಯಥಾ ಪಕ್ಷ, ತಥಾ ಅಭ್ಯರ್ಥಿ!’ ಎಂದು ಲೇವಡಿ ಮಾಡಿದರು.

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು. ಈಗ ಈತ ಖರ್ಗೆಯವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದು ಸುದ್ದಿಯಾಗಿದೆ. ಈತನ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಇಡೀ ನಾಡಿಗೇ ಹಾಕಿದ ಬೆದರಿಕೆ. ನಾಗರೀಕ ಸಮಾಜ, ಪ್ರಗತಿಪರ ಸಂಘಟನೆಗಳು ತಕ್ಷಣವೇ ರಾಜ್ಯಾದ್ಯಂತ ಕೇವಲ ಒಂದು ಗಂಟೆ ಧರಣಿ ಮಾಡಿ, ‘ಮಣಿಕಂಠ ರಾಥೋಡ್ ನಡಾವಳಿ ಸಹಿಸುವುದಿಲ್ಲ’ ಎಂದು ಹೇಳಬೇಕಾಗಿದೆ. ನಿಮ್ಮೊಡನೆ ನಾನೂ ಇದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...