Homeಮುಖಪುಟಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಕೊಲೆ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ, ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ: ದೇವನೂರು

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು.

- Advertisement -
- Advertisement -

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಕೊಲೆ ಬೆದರಿಕೆ ಹಾಕಿದ್ದು ಕೇವಲ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಅದು ಇಡೀ ನಾಡಿಗೇ ಹಾಕಿದ ಬೆದರಿಕೆಯಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹದೇವ ಕಳವಳ ವ್ಯಕ್ತಪಡಿಸಿದರು.

ಭಾನುವಾರ ತಲಕಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಇತ್ತೀಚೆಗೆ ನನ್ನ ಗೆಳೆಯ ಶ್ರೀನಿವಾಸ್ ಪ್ರಸಾದ್‌ರ ಒಂದು ಹೇಳಿಕೆ ನನಗೆ ಅತೀವ ನೋವು ಉಂಟು ಮಾಡಿತು. ಶ್ರೀನಿವಾಸ್ ಪ್ರಸಾದ್ ‘ಮಲ್ಲಿಕಾರ್ಜುನ ಖರ್ಗೆಯವರು ಅವಕಾಶವಾದಿ’ ಎಂದು ಹೇಳಿದ ಮಾತಿಗೆ ನಾನು ನೊಂದುಕೊಂಡೆ” ಎಂದರು.

ನಾನು ಬಲ್ಲಂತೆ, ಮಲ್ಲಿಕಾರ್ಜುನ ಖರ್ಗೆಯವರದು ಹಿತಮಿತ ವ್ಯಕ್ತಿತ್ವ. ಖರ್ಗೆಯವರು ತಾವು ನಂಬಿದ ಸಿದ್ಧಾಂತ, ಪಕ್ಷಕ್ಕೆ ಪರಮ ನಿಷ್ಠರು. ಅಧಿಕಾರ ದಾಹ ಇಲ್ಲದವರು. ಅವರು ಈ ಹಿಂದೆ ಸಚಿವರಾಗಿದ್ದಾಗ ಒಳ್ಳೊಳ್ಳೆಯ ಜನಹಿತ ಕಾಯ್ದೆಗಳನ್ನು ತಂದಿದ್ದಾರೆ. ಅವರು ಮುತ್ಸದ್ದಿ ಕೂಡ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಸರ್ವಸಮ್ಮತ ಪ್ರಧಾನಮಂತ್ರಿ ಅಭ್ಯರ್ಥಿ ಆಗುವ ಸಾಧ್ಯತೆಗಳೂ ಇವೆ. ಹೀಗಿರುವಾಗ, ಇಂತಹ ಘನ ವ್ಯಕ್ತಿತ್ವ ಖರ್ಗೆಯವರಿಗೆ ಇರುವಾಗ ಶ್ರೀನಿವಾಸ್ ಪ್ರಸಾದ್‌ರಿಗೆ ಖರ್ಗೆಯವರನ್ನು ಅವಕಾಶವಾದಿ ಅನ್ನಲು ಹೇಗೆ ಬಾಯಿ ಬಂತು? ನನಗೆ ಪ್ರಶ್ನೆಯಾಗಿದೆ. ಪ್ರಸಾದ್‌ರಿಗೆ ನನ್ನ ಸಂಕಟದ ಭಾವನೆಗಳು ಮುಟ್ಟಬಹುದು ಅಂದುಕೊಂಡಿದ್ದೇನೆ ಎಂದರು.

ಹಾಗೆಯೇ ಇನ್ನೊಂದು ಸಂಗತಿ ಎಂದರೆ ಪ್ರಿಯಾಂಕ ಖರ್ಗೆ ಸಂಘ ಪರಿವಾರದ ಬಿಜೆಪಿಗೆ ಸಿಂಹಸ್ವಪ್ನವಾಗಿದ್ದಾರೆ. ಅವರ ವ್ಯಕ್ತಿತ್ವವೂ ಒಂದು ಮರಿಸಿಂಹದಂತೆಯೇ ಇದೆ. ಜೊತೆಗೆ ಇವರು ಪ್ರಖರ ಬುದ್ಧಿವಂತ. ವಾಗ್ಮಿ ಕೂಡ. ಇವರ ಬಗ್ಗೆ ಬೆದರಿದ ಸಂಘ ಪರಿವಾರದ ಬಿಜೆಪಿಯವರು ಪ್ರಿಯಾಂಕ ಖರ್ಗೆ ವಿರುದ್ಧ ಮಣಿಕಂಠ ರಾಥೋಡ್ ಎಂಬ ರೌಡಿಶೀಟರ್‌ನ್ನು ನಿಲ್ಲಿಸಿದೆ. ‘ಯಥಾ ಪಕ್ಷ, ತಥಾ ಅಭ್ಯರ್ಥಿ!’ ಎಂದು ಲೇವಡಿ ಮಾಡಿದರು.

ಮಣಿಕಂಠ ರಾಥೋಡ್ ಮೇಲೆ ಅವರ ವಯಸ್ಸು ಎಷ್ಟಾಗಿದೆಯೋ ಹೆಚ್ಚುಕಮ್ಮಿ ಅದರ ಡಬಲ್ ಕೇಸುಗಳಿವೆ. ಗಡಿಪಾರೂ ಆಗಿದೆ. ಜೈಲೂ ಆಗಿದೆ. ಈತ ಪಿಸ್ತೂಲು ತಿರುಗಿಸುತ್ತಾ ಠೇಂಕಾರದ ಶೋ ಕೊಡುತ್ತಾನೆ. ನಾಳೆ ಪಿಸ್ತೂಲು ತಿರುಗಿಸುತ್ತಾ ರೋಡ್ ಶೋ ಮಾಡಲೂಬಹುದು. ಈಗ ಈತ ಖರ್ಗೆಯವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದು ಸುದ್ದಿಯಾಗಿದೆ. ಈತನ ಬೆದರಿಕೆ ಖರ್ಗೆಯವರ ಕುಟುಂಬಕ್ಕೆ ಮಾತ್ರವಲ್ಲ. ಇಡೀ ನಾಡಿಗೇ ಹಾಕಿದ ಬೆದರಿಕೆ. ನಾಗರೀಕ ಸಮಾಜ, ಪ್ರಗತಿಪರ ಸಂಘಟನೆಗಳು ತಕ್ಷಣವೇ ರಾಜ್ಯಾದ್ಯಂತ ಕೇವಲ ಒಂದು ಗಂಟೆ ಧರಣಿ ಮಾಡಿ, ‘ಮಣಿಕಂಠ ರಾಥೋಡ್ ನಡಾವಳಿ ಸಹಿಸುವುದಿಲ್ಲ’ ಎಂದು ಹೇಳಬೇಕಾಗಿದೆ. ನಿಮ್ಮೊಡನೆ ನಾನೂ ಇದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಸ್ಪರ್ಧೆ ನಡೆಯುತ್ತಿರುವುದು ಸಮಾನತೆಯ ಹಾಲಿ ಸಂವಿಧಾನ V/S ಅಸಮಾನತೆಯ ಮಾಜಿ ಮನುಧರ್ಮಶಾಸ್ತ್ರಗಳ ನಡುವೆ – ದೇವನೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...