Homeಮುಖಪುಟಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

ಕುಂಭಮೇಳ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 37 ಅಲ್ಲ, 82; ಸುಳ್ಳು ಹೇಳಿದ ಯುಪಿ ಆದಿತ್ಯನಾಥ್ ಸರ್ಕಾರ!

- Advertisement -
- Advertisement -

ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಕುಂಭ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ರಾಜ್ಯ ಸರ್ಕಾರ ಒದಗಿಸಿದ ಅಧಿಕೃತ ಅಂಕಿ ಅಂಶಕ್ಕಿಂತ ವಾಸ್ತವದಲ್ಲಿ ತೀವ್ರವಾಗಿ ಹೆಚ್ಚಾಗಿದೆ ಎಂದು ಬಿಬಿಸಿ ನ್ಯೂಸ್ ಹಿಂದಿ ನಡೆಸಿದ ತನಿಖಾ ವರದಿಯಿಂದ ತಿಳಿದುಬಂದಿದೆ. ರಾಜ್ಯ ಸರ್ಕಾರ 37 ಸಾವುಗಳನ್ನು ವರದಿ ಮಾಡಿದ್ದರೂ, ಬಿಬಿಸಿಯ ತನಿಖೆಯ ವೇಳೆ ಕನಿಷ್ಠ 82 ಸಾವುಗಳನ್ನು ದೃಢಪಡಿಸಿದೆ. ಕುಂಭಮೇಳ ಕಾಲ್ತುಳಿತದಲ್ಲಿ

ಬಿಬಿಸಿಯ ತನಿಖೆಯ ವೇಳೆ 11 ರಾಜ್ಯಗಳ 50 ಜಿಲ್ಲೆಗಳಲ್ಲಿ 100 ಕ್ಕೂ ಹೆಚ್ಚು ಕುಟುಂಬಗಳೊಂದಿಗೆ ಸಂದರ್ಶನಗಳನ್ನು ನಡೆಸಿದ್ದು, ಸಾವುನೋವುಗಳ ಸಂಖ್ಯೆ ಅಧಿಕೃತವಾಗಿ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನದಾಗಿದೆ ಎಂದು ಬಹಿರಂಗಪಡಿಸಿದೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಪ್ರೀತಿಪಾತ್ರರನ್ನು ಕಳೆದುಕೊಂಡ ಕೆಲವು ಕುಟುಂಬಗಳಿಗೆ ಸುಮಾರು 5 ಲಕ್ಷಗಳ ನಗದು ಪರಿಹಾರವನ್ನು ನೀಡಲಾಯಿತಾದರೂ, ಅಧಿಕೃತ ಸಾವಿನ ಸಂಖ್ಯೆಯಿಂದ ಅವರನ್ನು ಹೊರಗಿಡಲಾಗಿದೆ ಎಂದು ತನಿಖಾ ವರದಿ ಹೇಳಿದೆ. ರಾಜ್ಯ ಸರ್ಕಾರ ಎಣಿಕೆಯಿಂದ ಕೈಬಿಟ್ಟ ಅಂತಹ 26 ಕುಟುಂಬಗಳನ್ನು ಬಿಬಿಸಿ ಗುರುತಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಬಿಬಿಸಿ ವರದಿಗಳ ಹಿನ್ನಲೆ ಕಾಂಗ್ರೆಸ್ ಪಕ್ಷ ಸೇರಿದಂತೆ ವಿರೋಧ ಪಕ್ಷವು ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ನೀಡಿದ್ದು, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದುರಂತದ ನಿಜವಾದ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಟ್ವಿಟರ್‌ನಲ್ಲಿ ಆರೋಪಿಸಿದೆ.

“ಕುಂಭ ಮೇಳದಲ್ಲಿ 37 ಜನರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಹೇಳಿತ್ತು. ಆದರೆ, ಬಿಬಿಸಿ ತನಿಖೆಯು 82 ಜನರ ಸಾವನ್ನು ದೃಢಪಡಿಸಿದೆ” ಎಂದು ಕಾಂಗ್ರೆಸ್ ಪಕ್ಷ ಹೇಳಿದೆ. ಸರ್ಕಾರವು ಸಾವುನೋವುಗಳನ್ನು ಪರಿಹರಿಸುವುದಕ್ಕಿಂತ ತನ್ನ ಇಮೇಜ್ ಬಗ್ಗೆ ಹೆಚ್ಚು ಯಾಕೆ ಕಾಳಜಿ ವಹಿಸುತ್ತಿದೆ ಎಂದು ಪಕ್ಷವು ಪ್ರಶ್ನಿಸಿದೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ಕೂಡ ವರದಿಯಾದ ಸಾವಿನ ಸಂಖ್ಯೆಯಲ್ಲಿನ ವ್ಯತ್ಯಾಸಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಕುಂಭ ಮೇಳದಲ್ಲಿ ಕನಿಷ್ಠ 82 ಜನರು ಸಾವನ್ನಪ್ಪಿದ್ದಾರೆ. ಈ ಸಂಖ್ಯೆ ಯುಪಿ ಸರ್ಕಾರ ವರದಿ ಮಾಡಿದ 37 ಸಾವುಗಳಿಗಿಂತ ಹೆಚ್ಚಾಗಿದೆ” ಎಂದು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಪ್ರತಿಕ್ರಿಯಿಸಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಬಿಜೆಪಿಯನ್ನು ಟೀಕಿಸಿದ್ದು, ರಾಜ್ಯ ಸರ್ಕಾರದ ಸಾವಿನ ಸಂಖ್ಯೆ ವರದಿಯನ್ನು “ದಾರಿತಪ್ಪಿಸುವ” ವರದಿ ಎಂದು ಕರೆದಿದ್ದಾರೆ. ಬಿಜೆಪಿ ನಾಯಕತ್ವದ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ ಅವರ, “ಫ್ಯಾಕ್ಟ್‌ vs ಟ್ರುತ್;  37 vs 82. ಎಲ್ಲರೂ ಸತ್ಯವನ್ನು ವೀಕ್ಷಿಸಬೇಕು, ಕೇಳಬೇಕು ಮತ್ತು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

“ಸಾವುಗಳನ್ನು ಮರೆಮಾಡಲು ಸುಳ್ಳು ಹೇಳುವವರನ್ನು ನಂಬಲು ಸಾಧ್ಯವಿಲ್ಲ, ಅವರ ಬೆಂಬಲಿಗರನ್ನೂ ನಂಬಬಾರದು” ಎಂದು ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು ಟೀಕಿಸಿದ್ದಾರೆ. ಕುಂಭಮೇಳ ಕಾಲ್ತುಳಿತದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಒಕ್ಕಲಿಗ – ಲಿಂಗಾಯತರಿಗೆ ಮಣಿದ ಕಾಂಗ್ರೆಸ್ ಸರ್ಕಾರ | ಮತ್ತೆ ಜಾತಿ ಸಮೀಕ್ಷೆ ನಡೆಸಲು ನಿರ್ಧಾರ

ಒಕ್ಕಲಿಗ – ಲಿಂಗಾಯತರಿಗೆ ಮಣಿದ ಕಾಂಗ್ರೆಸ್ ಸರ್ಕಾರ | ಮತ್ತೆ ಜಾತಿ ಸಮೀಕ್ಷೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....