Homeಕರ್ನಾಟಕಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

- Advertisement -
- Advertisement -

“ಬಾಬಾಸಾಹೇಬರ ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ. ಅದರ ವಿರುದ್ಧ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಗುಜರಾತ್ ರಾಜ್ಯದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಂವಿಧಾನ ಸಂರಕ್ಷಣಾ ಸಮಾವೇಶ ಆಯೋಜಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಈ ಭಾರತ ಭೂಮಿ ಮೋದಿ, ಆರೆಸ್ಸೆಸ್, ಮೋಹನ್ ಭಾಗವತ್ ಅವರುಗಳ ದೇಶವ. ಇದು ಬಸವಣ್ಣ ಅವರ ದೇಶ, ಬಾಬಾಸಾಹೇಬರ ದೇಶ, ರವಿದಾಸ್ ಅವರ ದೇಶ, ಪೆರಿಯಾರ್ ಅವರ ದೇಶ, ಇಲ್ಲಿ ಭಗತ್ ಸಿಂಗ್, ಸುಖದೇವ್, ರಾಜಗುರು, ನಾರಾಯಣಗುರು, ಅಶ್ವಾಕುಲ್ಲ ಅವರುಗಳ ನೆಲ ಇದು. ಈ ದೇಶವನ್ನು ಉಳಿಸಲು ಯಾರೆಲ್ಲ ತ್ಯಾಗ ಮಾಡಿ ತಪಸ್ಸು ಮಾಡಿದರೋ, ಯಾವ ದೇಶದಲ್ಲಿ 23 ವರ್ಷದಲ್ಲಿ ಭಗತ್ ಸಿಂಗ್ ಪ್ರಾಣ ನೀಡಿದರೋ ಅಂತಹ ದೇಶವನ್ನು ಈಗ ಕೆಲವು ದಿನಗಳಿಂದ ಆಳುತ್ತಿರುವ ಇವರುಗಳ ವಶಕ್ಕೆ ಒಪ್ಪಿಸಲು ಸಾಧ್ಯವಿಲ್ಲ” ಎಂದರು.

“ಇಲ್ಲಿ ವೇದಿಕೆಯ ಮೇಲಿರುವವರು 50 ವರ್ಷಗಳಿಂದ ರೈತರು ಮತ್ತು ಕಾರ್ಮಿಕರಿಗಾಗಿ ಹೋರಾಟ ನಡೆಸುತ್ತಿರುವ ಜನರಿದ್ದಾರೆ, ಈಗ ಅದನ್ನು ಮುಂದಕ್ಕೆ ಒಯ್ಯುವ ಹೊಣೆ ನಮ್ಮ ಯುವತಲೆಮಾರಿನ ಹೆಗಲ ಮೇಲಿದೆ” ಎಂದರು ಹೇಳಿದರು.

“ಗುಜರಾತ್ ಗಲಭೆ ನಡೆಸುವ ಮೂಲಕ ಅಲ್ಪಸಂಖ್ಯಾತರ ಮಾರಣಹೋಮ ಸರ್ಕಾರದ ಮೂಗಿನ ಕೆಳಗೆ ನಡೆದು, ಇಡೀ ಪ್ರಪಂಚದ ಪ್ರಜ್ಞಾವಂತರು ಮೋದಿಯನ್ನು ಟೀಕಿಸಿದಾಗ, ಮೋದಿಯವರ ಸಲಹೆಗಾರರು ಹೇಳಿದರು, ‘ವೈಬ್ರಂಟ್ ಗುಜರಾತ್ ಸಮ್ಮಿಟ್’ ಸಂಘಟಿಸಿ ಎಲ್ಲ ಬಂಡವಾಳಿಗರನ್ನು ಕರೆದು ಅಭಿವೃದ್ಧಿಯ ಹರಿಕಾರನ ಥರ ಪೋಸ್ ಕೊಡಿ ಎಂದು. ಅವರುಗಳನ್ನು ಕರೆದು, ನಿಮಗೆ ಭೂಮಿ, ಕರೆಂಟ್, ಬಂಡವಾಳ ಎಲ್ಲವನ್ನೂ ಒದಗಿಸುತ್ತೇವೆ ಎಂದು ಹೇಳಿದರು. ಇದನ್ನೇ ಅವರ ತಂತ್ರವಾಗಿಸಿಕೊಂಡು ಇಂದು ತಮ್ಮ ಎಲ್ಲ ಸಂಪನ್ಮೂಲಗಳನ್ನು ಈ ಬಂಡವಾಳಿಗರಿಂದ ಪಡೆದುಕೊಂಡು, ಅವರ ಜೇಬು ತುಂಬಿಸುವ ಎಲ್ಲ ಕೆಲಸಗಳನ್ನೂ ಅವರುಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಇಡೀ ದೇಶದ ಬಂಡವಾಳಿಗರಿಂದು ಅದಾನಿ-ಅಂಬಾನಿಗಳಂತೆ ಮೋದಿ ಪಡೆಯ ಜೊತೆಗೆ ನಿಂತಿದ್ದಾರೆ. ಶ್ರಮಜೀವಿಗಳು, ಬಡವರು, ದಲಿತರು ಇವರ ದಾಳಿಗಳ ಗುರಿಯಾಗುತ್ತಿದ್ದಾರೆ. ಮುಂದಿರುವ ದಾರಿ ಒಂದೇ, ನಾವೆಲ್ಲ ಸಂವಿಧಾನ ಪ್ರೇಮಿಗಳು. ನಮ್ಮ ನಮ್ಮ ಊರುಗಳಲ್ಲಿ, ಕೇರಿಗಳಲ್ಲಿ, ಜಿಲ್ಲೆಗಳಲ್ಲಿ ಆರೆಸ್ಸೆಸ್ ಶಾಖೆಗಳ ವಿರುದ್ಧ ಸಂವಿಧಾನದ ಪಡೆಗಳನ್ನು ಕಟ್ಟೋಣ, ಸಂವಿಧಾನದ ಆಶಯಗಳನ್ನು ನಿಜವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ” ಎಂದು ಕರೆ ನೀಡಿದರು.

“ಪಕ್ಷಗಳ ಮೇಲೆ, ರಾಜಕಾರಣಿಗಳ ಮೇಲೆ ನಂಬಿಕೆಯಿಡಬೇಡಿ ಎಂದು ಪರಕಾಲ ಪ್ರಭಾಕರ್ ಹೇಳಿದರು. ನನಗೂ ನಾಯಕರಿಗಿಂತ, ಯಾರು ಬೀದಿಗಳಿದು ರೈತರಿಗಾಗಿ, ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ, ದಲಿತರಿಗಾಗಿ ಯುವಜನರಿಗಾಗಿ ಕ್ರಾಂತಿಗಾಗಿ ಚಳವಳಿ ಮಾಡುತ್ತಾರೋ ಅವರ ಮೇಲೆಯೇ ಹೆಚ್ಚು ನಂಬಿಕೆ” ಎಂದರು.

“ನಾವು ಚುನಾವಣೆಯಲ್ಲಿ ಆರೆಸ್ಸೆಸ್-ಬಿಜೆಪಿಯನ್ನು ಸೋಲಿಸಬೇಕು. ಆದರೆ, ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಬಾಬಾಸಾಹೇಬರು, ಶಿಕ್ಷಿತರಾಗಿ, ಸಂಘಟಿತರಾಗಿ, ಸಂಘರ್ಷ ನಡೆಸಿ ಎಂದು ಹೇಳೀದ್ದರು. ನಿಜವಾದ ಸ್ವಾತಂತ್ರ್ಯಕ್ಕಾಗಿ ಸಂಘರ್ಷ ನಡೆಸಿ ಎಂದು ಭಗತ್ ಸಿಂಗ್ ಕೂಡಾ ಹೇಳಿದ್ದರು; ಇಂದು ನಮ್ಮೆಲ್ಲರ ಗುರಿ ಅದೇ, ಈ ಬೀದಿ ಸಂಘರ್ಷದಲ್ಲಿ ನಾನು ನಿಮ್ಮೊಂದಿಗಿದ್ದೀನಿ. ಮತ್ತೆ ಮತ್ತೆ ಕರ್ನಾಟಕಕ್ಕೆ ಕರೆಯಿರಿ, ನಾನು ಮತ್ತೆ ಮತ್ತೆ ಗುಜರಾತ್ ನಿಂದ ಬಂದು ಕರ್ನಾಟಕದಲ್ಲಿ ನಿಮ್ಮೊಂದಿಗೆ ಸೇರುತ್ತೇನೆ” ಎಂದು ಮೇವಾನಿ ಭರವಸೆ ನೀಡಿದರು.

ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...