Homeಕರ್ನಾಟಕಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

- Advertisement -
- Advertisement -

“ಬಾಬಾಸಾಹೇಬರ ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ. ಅದರ ವಿರುದ್ಧ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಗುಜರಾತ್ ರಾಜ್ಯದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಂವಿಧಾನ ಸಂರಕ್ಷಣಾ ಸಮಾವೇಶ ಆಯೋಜಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಈ ಭಾರತ ಭೂಮಿ ಮೋದಿ, ಆರೆಸ್ಸೆಸ್, ಮೋಹನ್ ಭಾಗವತ್ ಅವರುಗಳ ದೇಶವ. ಇದು ಬಸವಣ್ಣ ಅವರ ದೇಶ, ಬಾಬಾಸಾಹೇಬರ ದೇಶ, ರವಿದಾಸ್ ಅವರ ದೇಶ, ಪೆರಿಯಾರ್ ಅವರ ದೇಶ, ಇಲ್ಲಿ ಭಗತ್ ಸಿಂಗ್, ಸುಖದೇವ್, ರಾಜಗುರು, ನಾರಾಯಣಗುರು, ಅಶ್ವಾಕುಲ್ಲ ಅವರುಗಳ ನೆಲ ಇದು. ಈ ದೇಶವನ್ನು ಉಳಿಸಲು ಯಾರೆಲ್ಲ ತ್ಯಾಗ ಮಾಡಿ ತಪಸ್ಸು ಮಾಡಿದರೋ, ಯಾವ ದೇಶದಲ್ಲಿ 23 ವರ್ಷದಲ್ಲಿ ಭಗತ್ ಸಿಂಗ್ ಪ್ರಾಣ ನೀಡಿದರೋ ಅಂತಹ ದೇಶವನ್ನು ಈಗ ಕೆಲವು ದಿನಗಳಿಂದ ಆಳುತ್ತಿರುವ ಇವರುಗಳ ವಶಕ್ಕೆ ಒಪ್ಪಿಸಲು ಸಾಧ್ಯವಿಲ್ಲ” ಎಂದರು.

“ಇಲ್ಲಿ ವೇದಿಕೆಯ ಮೇಲಿರುವವರು 50 ವರ್ಷಗಳಿಂದ ರೈತರು ಮತ್ತು ಕಾರ್ಮಿಕರಿಗಾಗಿ ಹೋರಾಟ ನಡೆಸುತ್ತಿರುವ ಜನರಿದ್ದಾರೆ, ಈಗ ಅದನ್ನು ಮುಂದಕ್ಕೆ ಒಯ್ಯುವ ಹೊಣೆ ನಮ್ಮ ಯುವತಲೆಮಾರಿನ ಹೆಗಲ ಮೇಲಿದೆ” ಎಂದರು ಹೇಳಿದರು.

“ಗುಜರಾತ್ ಗಲಭೆ ನಡೆಸುವ ಮೂಲಕ ಅಲ್ಪಸಂಖ್ಯಾತರ ಮಾರಣಹೋಮ ಸರ್ಕಾರದ ಮೂಗಿನ ಕೆಳಗೆ ನಡೆದು, ಇಡೀ ಪ್ರಪಂಚದ ಪ್ರಜ್ಞಾವಂತರು ಮೋದಿಯನ್ನು ಟೀಕಿಸಿದಾಗ, ಮೋದಿಯವರ ಸಲಹೆಗಾರರು ಹೇಳಿದರು, ‘ವೈಬ್ರಂಟ್ ಗುಜರಾತ್ ಸಮ್ಮಿಟ್’ ಸಂಘಟಿಸಿ ಎಲ್ಲ ಬಂಡವಾಳಿಗರನ್ನು ಕರೆದು ಅಭಿವೃದ್ಧಿಯ ಹರಿಕಾರನ ಥರ ಪೋಸ್ ಕೊಡಿ ಎಂದು. ಅವರುಗಳನ್ನು ಕರೆದು, ನಿಮಗೆ ಭೂಮಿ, ಕರೆಂಟ್, ಬಂಡವಾಳ ಎಲ್ಲವನ್ನೂ ಒದಗಿಸುತ್ತೇವೆ ಎಂದು ಹೇಳಿದರು. ಇದನ್ನೇ ಅವರ ತಂತ್ರವಾಗಿಸಿಕೊಂಡು ಇಂದು ತಮ್ಮ ಎಲ್ಲ ಸಂಪನ್ಮೂಲಗಳನ್ನು ಈ ಬಂಡವಾಳಿಗರಿಂದ ಪಡೆದುಕೊಂಡು, ಅವರ ಜೇಬು ತುಂಬಿಸುವ ಎಲ್ಲ ಕೆಲಸಗಳನ್ನೂ ಅವರುಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಇಡೀ ದೇಶದ ಬಂಡವಾಳಿಗರಿಂದು ಅದಾನಿ-ಅಂಬಾನಿಗಳಂತೆ ಮೋದಿ ಪಡೆಯ ಜೊತೆಗೆ ನಿಂತಿದ್ದಾರೆ. ಶ್ರಮಜೀವಿಗಳು, ಬಡವರು, ದಲಿತರು ಇವರ ದಾಳಿಗಳ ಗುರಿಯಾಗುತ್ತಿದ್ದಾರೆ. ಮುಂದಿರುವ ದಾರಿ ಒಂದೇ, ನಾವೆಲ್ಲ ಸಂವಿಧಾನ ಪ್ರೇಮಿಗಳು. ನಮ್ಮ ನಮ್ಮ ಊರುಗಳಲ್ಲಿ, ಕೇರಿಗಳಲ್ಲಿ, ಜಿಲ್ಲೆಗಳಲ್ಲಿ ಆರೆಸ್ಸೆಸ್ ಶಾಖೆಗಳ ವಿರುದ್ಧ ಸಂವಿಧಾನದ ಪಡೆಗಳನ್ನು ಕಟ್ಟೋಣ, ಸಂವಿಧಾನದ ಆಶಯಗಳನ್ನು ನಿಜವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ” ಎಂದು ಕರೆ ನೀಡಿದರು.

“ಪಕ್ಷಗಳ ಮೇಲೆ, ರಾಜಕಾರಣಿಗಳ ಮೇಲೆ ನಂಬಿಕೆಯಿಡಬೇಡಿ ಎಂದು ಪರಕಾಲ ಪ್ರಭಾಕರ್ ಹೇಳಿದರು. ನನಗೂ ನಾಯಕರಿಗಿಂತ, ಯಾರು ಬೀದಿಗಳಿದು ರೈತರಿಗಾಗಿ, ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ, ದಲಿತರಿಗಾಗಿ ಯುವಜನರಿಗಾಗಿ ಕ್ರಾಂತಿಗಾಗಿ ಚಳವಳಿ ಮಾಡುತ್ತಾರೋ ಅವರ ಮೇಲೆಯೇ ಹೆಚ್ಚು ನಂಬಿಕೆ” ಎಂದರು.

“ನಾವು ಚುನಾವಣೆಯಲ್ಲಿ ಆರೆಸ್ಸೆಸ್-ಬಿಜೆಪಿಯನ್ನು ಸೋಲಿಸಬೇಕು. ಆದರೆ, ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಬಾಬಾಸಾಹೇಬರು, ಶಿಕ್ಷಿತರಾಗಿ, ಸಂಘಟಿತರಾಗಿ, ಸಂಘರ್ಷ ನಡೆಸಿ ಎಂದು ಹೇಳೀದ್ದರು. ನಿಜವಾದ ಸ್ವಾತಂತ್ರ್ಯಕ್ಕಾಗಿ ಸಂಘರ್ಷ ನಡೆಸಿ ಎಂದು ಭಗತ್ ಸಿಂಗ್ ಕೂಡಾ ಹೇಳಿದ್ದರು; ಇಂದು ನಮ್ಮೆಲ್ಲರ ಗುರಿ ಅದೇ, ಈ ಬೀದಿ ಸಂಘರ್ಷದಲ್ಲಿ ನಾನು ನಿಮ್ಮೊಂದಿಗಿದ್ದೀನಿ. ಮತ್ತೆ ಮತ್ತೆ ಕರ್ನಾಟಕಕ್ಕೆ ಕರೆಯಿರಿ, ನಾನು ಮತ್ತೆ ಮತ್ತೆ ಗುಜರಾತ್ ನಿಂದ ಬಂದು ಕರ್ನಾಟಕದಲ್ಲಿ ನಿಮ್ಮೊಂದಿಗೆ ಸೇರುತ್ತೇನೆ” ಎಂದು ಮೇವಾನಿ ಭರವಸೆ ನೀಡಿದರು.

ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...