Homeಕರ್ನಾಟಕಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

- Advertisement -
- Advertisement -

“ಬಾಬಾಸಾಹೇಬರ ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ. ಅದರ ವಿರುದ್ಧ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಗುಜರಾತ್ ರಾಜ್ಯದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಂವಿಧಾನ ಸಂರಕ್ಷಣಾ ಸಮಾವೇಶ ಆಯೋಜಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಈ ಭಾರತ ಭೂಮಿ ಮೋದಿ, ಆರೆಸ್ಸೆಸ್, ಮೋಹನ್ ಭಾಗವತ್ ಅವರುಗಳ ದೇಶವ. ಇದು ಬಸವಣ್ಣ ಅವರ ದೇಶ, ಬಾಬಾಸಾಹೇಬರ ದೇಶ, ರವಿದಾಸ್ ಅವರ ದೇಶ, ಪೆರಿಯಾರ್ ಅವರ ದೇಶ, ಇಲ್ಲಿ ಭಗತ್ ಸಿಂಗ್, ಸುಖದೇವ್, ರಾಜಗುರು, ನಾರಾಯಣಗುರು, ಅಶ್ವಾಕುಲ್ಲ ಅವರುಗಳ ನೆಲ ಇದು. ಈ ದೇಶವನ್ನು ಉಳಿಸಲು ಯಾರೆಲ್ಲ ತ್ಯಾಗ ಮಾಡಿ ತಪಸ್ಸು ಮಾಡಿದರೋ, ಯಾವ ದೇಶದಲ್ಲಿ 23 ವರ್ಷದಲ್ಲಿ ಭಗತ್ ಸಿಂಗ್ ಪ್ರಾಣ ನೀಡಿದರೋ ಅಂತಹ ದೇಶವನ್ನು ಈಗ ಕೆಲವು ದಿನಗಳಿಂದ ಆಳುತ್ತಿರುವ ಇವರುಗಳ ವಶಕ್ಕೆ ಒಪ್ಪಿಸಲು ಸಾಧ್ಯವಿಲ್ಲ” ಎಂದರು.

“ಇಲ್ಲಿ ವೇದಿಕೆಯ ಮೇಲಿರುವವರು 50 ವರ್ಷಗಳಿಂದ ರೈತರು ಮತ್ತು ಕಾರ್ಮಿಕರಿಗಾಗಿ ಹೋರಾಟ ನಡೆಸುತ್ತಿರುವ ಜನರಿದ್ದಾರೆ, ಈಗ ಅದನ್ನು ಮುಂದಕ್ಕೆ ಒಯ್ಯುವ ಹೊಣೆ ನಮ್ಮ ಯುವತಲೆಮಾರಿನ ಹೆಗಲ ಮೇಲಿದೆ” ಎಂದರು ಹೇಳಿದರು.

“ಗುಜರಾತ್ ಗಲಭೆ ನಡೆಸುವ ಮೂಲಕ ಅಲ್ಪಸಂಖ್ಯಾತರ ಮಾರಣಹೋಮ ಸರ್ಕಾರದ ಮೂಗಿನ ಕೆಳಗೆ ನಡೆದು, ಇಡೀ ಪ್ರಪಂಚದ ಪ್ರಜ್ಞಾವಂತರು ಮೋದಿಯನ್ನು ಟೀಕಿಸಿದಾಗ, ಮೋದಿಯವರ ಸಲಹೆಗಾರರು ಹೇಳಿದರು, ‘ವೈಬ್ರಂಟ್ ಗುಜರಾತ್ ಸಮ್ಮಿಟ್’ ಸಂಘಟಿಸಿ ಎಲ್ಲ ಬಂಡವಾಳಿಗರನ್ನು ಕರೆದು ಅಭಿವೃದ್ಧಿಯ ಹರಿಕಾರನ ಥರ ಪೋಸ್ ಕೊಡಿ ಎಂದು. ಅವರುಗಳನ್ನು ಕರೆದು, ನಿಮಗೆ ಭೂಮಿ, ಕರೆಂಟ್, ಬಂಡವಾಳ ಎಲ್ಲವನ್ನೂ ಒದಗಿಸುತ್ತೇವೆ ಎಂದು ಹೇಳಿದರು. ಇದನ್ನೇ ಅವರ ತಂತ್ರವಾಗಿಸಿಕೊಂಡು ಇಂದು ತಮ್ಮ ಎಲ್ಲ ಸಂಪನ್ಮೂಲಗಳನ್ನು ಈ ಬಂಡವಾಳಿಗರಿಂದ ಪಡೆದುಕೊಂಡು, ಅವರ ಜೇಬು ತುಂಬಿಸುವ ಎಲ್ಲ ಕೆಲಸಗಳನ್ನೂ ಅವರುಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಇಡೀ ದೇಶದ ಬಂಡವಾಳಿಗರಿಂದು ಅದಾನಿ-ಅಂಬಾನಿಗಳಂತೆ ಮೋದಿ ಪಡೆಯ ಜೊತೆಗೆ ನಿಂತಿದ್ದಾರೆ. ಶ್ರಮಜೀವಿಗಳು, ಬಡವರು, ದಲಿತರು ಇವರ ದಾಳಿಗಳ ಗುರಿಯಾಗುತ್ತಿದ್ದಾರೆ. ಮುಂದಿರುವ ದಾರಿ ಒಂದೇ, ನಾವೆಲ್ಲ ಸಂವಿಧಾನ ಪ್ರೇಮಿಗಳು. ನಮ್ಮ ನಮ್ಮ ಊರುಗಳಲ್ಲಿ, ಕೇರಿಗಳಲ್ಲಿ, ಜಿಲ್ಲೆಗಳಲ್ಲಿ ಆರೆಸ್ಸೆಸ್ ಶಾಖೆಗಳ ವಿರುದ್ಧ ಸಂವಿಧಾನದ ಪಡೆಗಳನ್ನು ಕಟ್ಟೋಣ, ಸಂವಿಧಾನದ ಆಶಯಗಳನ್ನು ನಿಜವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ” ಎಂದು ಕರೆ ನೀಡಿದರು.

“ಪಕ್ಷಗಳ ಮೇಲೆ, ರಾಜಕಾರಣಿಗಳ ಮೇಲೆ ನಂಬಿಕೆಯಿಡಬೇಡಿ ಎಂದು ಪರಕಾಲ ಪ್ರಭಾಕರ್ ಹೇಳಿದರು. ನನಗೂ ನಾಯಕರಿಗಿಂತ, ಯಾರು ಬೀದಿಗಳಿದು ರೈತರಿಗಾಗಿ, ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ, ದಲಿತರಿಗಾಗಿ ಯುವಜನರಿಗಾಗಿ ಕ್ರಾಂತಿಗಾಗಿ ಚಳವಳಿ ಮಾಡುತ್ತಾರೋ ಅವರ ಮೇಲೆಯೇ ಹೆಚ್ಚು ನಂಬಿಕೆ” ಎಂದರು.

“ನಾವು ಚುನಾವಣೆಯಲ್ಲಿ ಆರೆಸ್ಸೆಸ್-ಬಿಜೆಪಿಯನ್ನು ಸೋಲಿಸಬೇಕು. ಆದರೆ, ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಬಾಬಾಸಾಹೇಬರು, ಶಿಕ್ಷಿತರಾಗಿ, ಸಂಘಟಿತರಾಗಿ, ಸಂಘರ್ಷ ನಡೆಸಿ ಎಂದು ಹೇಳೀದ್ದರು. ನಿಜವಾದ ಸ್ವಾತಂತ್ರ್ಯಕ್ಕಾಗಿ ಸಂಘರ್ಷ ನಡೆಸಿ ಎಂದು ಭಗತ್ ಸಿಂಗ್ ಕೂಡಾ ಹೇಳಿದ್ದರು; ಇಂದು ನಮ್ಮೆಲ್ಲರ ಗುರಿ ಅದೇ, ಈ ಬೀದಿ ಸಂಘರ್ಷದಲ್ಲಿ ನಾನು ನಿಮ್ಮೊಂದಿಗಿದ್ದೀನಿ. ಮತ್ತೆ ಮತ್ತೆ ಕರ್ನಾಟಕಕ್ಕೆ ಕರೆಯಿರಿ, ನಾನು ಮತ್ತೆ ಮತ್ತೆ ಗುಜರಾತ್ ನಿಂದ ಬಂದು ಕರ್ನಾಟಕದಲ್ಲಿ ನಿಮ್ಮೊಂದಿಗೆ ಸೇರುತ್ತೇನೆ” ಎಂದು ಮೇವಾನಿ ಭರವಸೆ ನೀಡಿದರು.

ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...