Homeಕರ್ನಾಟಕಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

- Advertisement -
- Advertisement -

“ಬಾಬಾಸಾಹೇಬರ ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ. ಅದರ ವಿರುದ್ಧ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಗುಜರಾತ್ ರಾಜ್ಯದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಂವಿಧಾನ ಸಂರಕ್ಷಣಾ ಸಮಾವೇಶ ಆಯೋಜಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಈ ಭಾರತ ಭೂಮಿ ಮೋದಿ, ಆರೆಸ್ಸೆಸ್, ಮೋಹನ್ ಭಾಗವತ್ ಅವರುಗಳ ದೇಶವ. ಇದು ಬಸವಣ್ಣ ಅವರ ದೇಶ, ಬಾಬಾಸಾಹೇಬರ ದೇಶ, ರವಿದಾಸ್ ಅವರ ದೇಶ, ಪೆರಿಯಾರ್ ಅವರ ದೇಶ, ಇಲ್ಲಿ ಭಗತ್ ಸಿಂಗ್, ಸುಖದೇವ್, ರಾಜಗುರು, ನಾರಾಯಣಗುರು, ಅಶ್ವಾಕುಲ್ಲ ಅವರುಗಳ ನೆಲ ಇದು. ಈ ದೇಶವನ್ನು ಉಳಿಸಲು ಯಾರೆಲ್ಲ ತ್ಯಾಗ ಮಾಡಿ ತಪಸ್ಸು ಮಾಡಿದರೋ, ಯಾವ ದೇಶದಲ್ಲಿ 23 ವರ್ಷದಲ್ಲಿ ಭಗತ್ ಸಿಂಗ್ ಪ್ರಾಣ ನೀಡಿದರೋ ಅಂತಹ ದೇಶವನ್ನು ಈಗ ಕೆಲವು ದಿನಗಳಿಂದ ಆಳುತ್ತಿರುವ ಇವರುಗಳ ವಶಕ್ಕೆ ಒಪ್ಪಿಸಲು ಸಾಧ್ಯವಿಲ್ಲ” ಎಂದರು.

“ಇಲ್ಲಿ ವೇದಿಕೆಯ ಮೇಲಿರುವವರು 50 ವರ್ಷಗಳಿಂದ ರೈತರು ಮತ್ತು ಕಾರ್ಮಿಕರಿಗಾಗಿ ಹೋರಾಟ ನಡೆಸುತ್ತಿರುವ ಜನರಿದ್ದಾರೆ, ಈಗ ಅದನ್ನು ಮುಂದಕ್ಕೆ ಒಯ್ಯುವ ಹೊಣೆ ನಮ್ಮ ಯುವತಲೆಮಾರಿನ ಹೆಗಲ ಮೇಲಿದೆ” ಎಂದರು ಹೇಳಿದರು.

“ಗುಜರಾತ್ ಗಲಭೆ ನಡೆಸುವ ಮೂಲಕ ಅಲ್ಪಸಂಖ್ಯಾತರ ಮಾರಣಹೋಮ ಸರ್ಕಾರದ ಮೂಗಿನ ಕೆಳಗೆ ನಡೆದು, ಇಡೀ ಪ್ರಪಂಚದ ಪ್ರಜ್ಞಾವಂತರು ಮೋದಿಯನ್ನು ಟೀಕಿಸಿದಾಗ, ಮೋದಿಯವರ ಸಲಹೆಗಾರರು ಹೇಳಿದರು, ‘ವೈಬ್ರಂಟ್ ಗುಜರಾತ್ ಸಮ್ಮಿಟ್’ ಸಂಘಟಿಸಿ ಎಲ್ಲ ಬಂಡವಾಳಿಗರನ್ನು ಕರೆದು ಅಭಿವೃದ್ಧಿಯ ಹರಿಕಾರನ ಥರ ಪೋಸ್ ಕೊಡಿ ಎಂದು. ಅವರುಗಳನ್ನು ಕರೆದು, ನಿಮಗೆ ಭೂಮಿ, ಕರೆಂಟ್, ಬಂಡವಾಳ ಎಲ್ಲವನ್ನೂ ಒದಗಿಸುತ್ತೇವೆ ಎಂದು ಹೇಳಿದರು. ಇದನ್ನೇ ಅವರ ತಂತ್ರವಾಗಿಸಿಕೊಂಡು ಇಂದು ತಮ್ಮ ಎಲ್ಲ ಸಂಪನ್ಮೂಲಗಳನ್ನು ಈ ಬಂಡವಾಳಿಗರಿಂದ ಪಡೆದುಕೊಂಡು, ಅವರ ಜೇಬು ತುಂಬಿಸುವ ಎಲ್ಲ ಕೆಲಸಗಳನ್ನೂ ಅವರುಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಇಡೀ ದೇಶದ ಬಂಡವಾಳಿಗರಿಂದು ಅದಾನಿ-ಅಂಬಾನಿಗಳಂತೆ ಮೋದಿ ಪಡೆಯ ಜೊತೆಗೆ ನಿಂತಿದ್ದಾರೆ. ಶ್ರಮಜೀವಿಗಳು, ಬಡವರು, ದಲಿತರು ಇವರ ದಾಳಿಗಳ ಗುರಿಯಾಗುತ್ತಿದ್ದಾರೆ. ಮುಂದಿರುವ ದಾರಿ ಒಂದೇ, ನಾವೆಲ್ಲ ಸಂವಿಧಾನ ಪ್ರೇಮಿಗಳು. ನಮ್ಮ ನಮ್ಮ ಊರುಗಳಲ್ಲಿ, ಕೇರಿಗಳಲ್ಲಿ, ಜಿಲ್ಲೆಗಳಲ್ಲಿ ಆರೆಸ್ಸೆಸ್ ಶಾಖೆಗಳ ವಿರುದ್ಧ ಸಂವಿಧಾನದ ಪಡೆಗಳನ್ನು ಕಟ್ಟೋಣ, ಸಂವಿಧಾನದ ಆಶಯಗಳನ್ನು ನಿಜವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ” ಎಂದು ಕರೆ ನೀಡಿದರು.

“ಪಕ್ಷಗಳ ಮೇಲೆ, ರಾಜಕಾರಣಿಗಳ ಮೇಲೆ ನಂಬಿಕೆಯಿಡಬೇಡಿ ಎಂದು ಪರಕಾಲ ಪ್ರಭಾಕರ್ ಹೇಳಿದರು. ನನಗೂ ನಾಯಕರಿಗಿಂತ, ಯಾರು ಬೀದಿಗಳಿದು ರೈತರಿಗಾಗಿ, ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ, ದಲಿತರಿಗಾಗಿ ಯುವಜನರಿಗಾಗಿ ಕ್ರಾಂತಿಗಾಗಿ ಚಳವಳಿ ಮಾಡುತ್ತಾರೋ ಅವರ ಮೇಲೆಯೇ ಹೆಚ್ಚು ನಂಬಿಕೆ” ಎಂದರು.

“ನಾವು ಚುನಾವಣೆಯಲ್ಲಿ ಆರೆಸ್ಸೆಸ್-ಬಿಜೆಪಿಯನ್ನು ಸೋಲಿಸಬೇಕು. ಆದರೆ, ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಬಾಬಾಸಾಹೇಬರು, ಶಿಕ್ಷಿತರಾಗಿ, ಸಂಘಟಿತರಾಗಿ, ಸಂಘರ್ಷ ನಡೆಸಿ ಎಂದು ಹೇಳೀದ್ದರು. ನಿಜವಾದ ಸ್ವಾತಂತ್ರ್ಯಕ್ಕಾಗಿ ಸಂಘರ್ಷ ನಡೆಸಿ ಎಂದು ಭಗತ್ ಸಿಂಗ್ ಕೂಡಾ ಹೇಳಿದ್ದರು; ಇಂದು ನಮ್ಮೆಲ್ಲರ ಗುರಿ ಅದೇ, ಈ ಬೀದಿ ಸಂಘರ್ಷದಲ್ಲಿ ನಾನು ನಿಮ್ಮೊಂದಿಗಿದ್ದೀನಿ. ಮತ್ತೆ ಮತ್ತೆ ಕರ್ನಾಟಕಕ್ಕೆ ಕರೆಯಿರಿ, ನಾನು ಮತ್ತೆ ಮತ್ತೆ ಗುಜರಾತ್ ನಿಂದ ಬಂದು ಕರ್ನಾಟಕದಲ್ಲಿ ನಿಮ್ಮೊಂದಿಗೆ ಸೇರುತ್ತೇನೆ” ಎಂದು ಮೇವಾನಿ ಭರವಸೆ ನೀಡಿದರು.

ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...