Homeಕರ್ನಾಟಕಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

- Advertisement -
- Advertisement -

“ಬಾಬಾಸಾಹೇಬರ ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ. ಅದರ ವಿರುದ್ಧ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಗುಜರಾತ್ ರಾಜ್ಯದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಂವಿಧಾನ ಸಂರಕ್ಷಣಾ ಸಮಾವೇಶ ಆಯೋಜಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಈ ಭಾರತ ಭೂಮಿ ಮೋದಿ, ಆರೆಸ್ಸೆಸ್, ಮೋಹನ್ ಭಾಗವತ್ ಅವರುಗಳ ದೇಶವ. ಇದು ಬಸವಣ್ಣ ಅವರ ದೇಶ, ಬಾಬಾಸಾಹೇಬರ ದೇಶ, ರವಿದಾಸ್ ಅವರ ದೇಶ, ಪೆರಿಯಾರ್ ಅವರ ದೇಶ, ಇಲ್ಲಿ ಭಗತ್ ಸಿಂಗ್, ಸುಖದೇವ್, ರಾಜಗುರು, ನಾರಾಯಣಗುರು, ಅಶ್ವಾಕುಲ್ಲ ಅವರುಗಳ ನೆಲ ಇದು. ಈ ದೇಶವನ್ನು ಉಳಿಸಲು ಯಾರೆಲ್ಲ ತ್ಯಾಗ ಮಾಡಿ ತಪಸ್ಸು ಮಾಡಿದರೋ, ಯಾವ ದೇಶದಲ್ಲಿ 23 ವರ್ಷದಲ್ಲಿ ಭಗತ್ ಸಿಂಗ್ ಪ್ರಾಣ ನೀಡಿದರೋ ಅಂತಹ ದೇಶವನ್ನು ಈಗ ಕೆಲವು ದಿನಗಳಿಂದ ಆಳುತ್ತಿರುವ ಇವರುಗಳ ವಶಕ್ಕೆ ಒಪ್ಪಿಸಲು ಸಾಧ್ಯವಿಲ್ಲ” ಎಂದರು.

“ಇಲ್ಲಿ ವೇದಿಕೆಯ ಮೇಲಿರುವವರು 50 ವರ್ಷಗಳಿಂದ ರೈತರು ಮತ್ತು ಕಾರ್ಮಿಕರಿಗಾಗಿ ಹೋರಾಟ ನಡೆಸುತ್ತಿರುವ ಜನರಿದ್ದಾರೆ, ಈಗ ಅದನ್ನು ಮುಂದಕ್ಕೆ ಒಯ್ಯುವ ಹೊಣೆ ನಮ್ಮ ಯುವತಲೆಮಾರಿನ ಹೆಗಲ ಮೇಲಿದೆ” ಎಂದರು ಹೇಳಿದರು.

“ಗುಜರಾತ್ ಗಲಭೆ ನಡೆಸುವ ಮೂಲಕ ಅಲ್ಪಸಂಖ್ಯಾತರ ಮಾರಣಹೋಮ ಸರ್ಕಾರದ ಮೂಗಿನ ಕೆಳಗೆ ನಡೆದು, ಇಡೀ ಪ್ರಪಂಚದ ಪ್ರಜ್ಞಾವಂತರು ಮೋದಿಯನ್ನು ಟೀಕಿಸಿದಾಗ, ಮೋದಿಯವರ ಸಲಹೆಗಾರರು ಹೇಳಿದರು, ‘ವೈಬ್ರಂಟ್ ಗುಜರಾತ್ ಸಮ್ಮಿಟ್’ ಸಂಘಟಿಸಿ ಎಲ್ಲ ಬಂಡವಾಳಿಗರನ್ನು ಕರೆದು ಅಭಿವೃದ್ಧಿಯ ಹರಿಕಾರನ ಥರ ಪೋಸ್ ಕೊಡಿ ಎಂದು. ಅವರುಗಳನ್ನು ಕರೆದು, ನಿಮಗೆ ಭೂಮಿ, ಕರೆಂಟ್, ಬಂಡವಾಳ ಎಲ್ಲವನ್ನೂ ಒದಗಿಸುತ್ತೇವೆ ಎಂದು ಹೇಳಿದರು. ಇದನ್ನೇ ಅವರ ತಂತ್ರವಾಗಿಸಿಕೊಂಡು ಇಂದು ತಮ್ಮ ಎಲ್ಲ ಸಂಪನ್ಮೂಲಗಳನ್ನು ಈ ಬಂಡವಾಳಿಗರಿಂದ ಪಡೆದುಕೊಂಡು, ಅವರ ಜೇಬು ತುಂಬಿಸುವ ಎಲ್ಲ ಕೆಲಸಗಳನ್ನೂ ಅವರುಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಇಡೀ ದೇಶದ ಬಂಡವಾಳಿಗರಿಂದು ಅದಾನಿ-ಅಂಬಾನಿಗಳಂತೆ ಮೋದಿ ಪಡೆಯ ಜೊತೆಗೆ ನಿಂತಿದ್ದಾರೆ. ಶ್ರಮಜೀವಿಗಳು, ಬಡವರು, ದಲಿತರು ಇವರ ದಾಳಿಗಳ ಗುರಿಯಾಗುತ್ತಿದ್ದಾರೆ. ಮುಂದಿರುವ ದಾರಿ ಒಂದೇ, ನಾವೆಲ್ಲ ಸಂವಿಧಾನ ಪ್ರೇಮಿಗಳು. ನಮ್ಮ ನಮ್ಮ ಊರುಗಳಲ್ಲಿ, ಕೇರಿಗಳಲ್ಲಿ, ಜಿಲ್ಲೆಗಳಲ್ಲಿ ಆರೆಸ್ಸೆಸ್ ಶಾಖೆಗಳ ವಿರುದ್ಧ ಸಂವಿಧಾನದ ಪಡೆಗಳನ್ನು ಕಟ್ಟೋಣ, ಸಂವಿಧಾನದ ಆಶಯಗಳನ್ನು ನಿಜವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ” ಎಂದು ಕರೆ ನೀಡಿದರು.

“ಪಕ್ಷಗಳ ಮೇಲೆ, ರಾಜಕಾರಣಿಗಳ ಮೇಲೆ ನಂಬಿಕೆಯಿಡಬೇಡಿ ಎಂದು ಪರಕಾಲ ಪ್ರಭಾಕರ್ ಹೇಳಿದರು. ನನಗೂ ನಾಯಕರಿಗಿಂತ, ಯಾರು ಬೀದಿಗಳಿದು ರೈತರಿಗಾಗಿ, ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ, ದಲಿತರಿಗಾಗಿ ಯುವಜನರಿಗಾಗಿ ಕ್ರಾಂತಿಗಾಗಿ ಚಳವಳಿ ಮಾಡುತ್ತಾರೋ ಅವರ ಮೇಲೆಯೇ ಹೆಚ್ಚು ನಂಬಿಕೆ” ಎಂದರು.

“ನಾವು ಚುನಾವಣೆಯಲ್ಲಿ ಆರೆಸ್ಸೆಸ್-ಬಿಜೆಪಿಯನ್ನು ಸೋಲಿಸಬೇಕು. ಆದರೆ, ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಬಾಬಾಸಾಹೇಬರು, ಶಿಕ್ಷಿತರಾಗಿ, ಸಂಘಟಿತರಾಗಿ, ಸಂಘರ್ಷ ನಡೆಸಿ ಎಂದು ಹೇಳೀದ್ದರು. ನಿಜವಾದ ಸ್ವಾತಂತ್ರ್ಯಕ್ಕಾಗಿ ಸಂಘರ್ಷ ನಡೆಸಿ ಎಂದು ಭಗತ್ ಸಿಂಗ್ ಕೂಡಾ ಹೇಳಿದ್ದರು; ಇಂದು ನಮ್ಮೆಲ್ಲರ ಗುರಿ ಅದೇ, ಈ ಬೀದಿ ಸಂಘರ್ಷದಲ್ಲಿ ನಾನು ನಿಮ್ಮೊಂದಿಗಿದ್ದೀನಿ. ಮತ್ತೆ ಮತ್ತೆ ಕರ್ನಾಟಕಕ್ಕೆ ಕರೆಯಿರಿ, ನಾನು ಮತ್ತೆ ಮತ್ತೆ ಗುಜರಾತ್ ನಿಂದ ಬಂದು ಕರ್ನಾಟಕದಲ್ಲಿ ನಿಮ್ಮೊಂದಿಗೆ ಸೇರುತ್ತೇನೆ” ಎಂದು ಮೇವಾನಿ ಭರವಸೆ ನೀಡಿದರು.

ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...