Homeಕರ್ನಾಟಕಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

ಸಂವಿಧಾನ ಉಳಿಸುವ ತೀರ್ಮಾನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ: ಜಿಗ್ನೇಶ್ ಮೇವಾನಿ

- Advertisement -
- Advertisement -

“ಬಾಬಾಸಾಹೇಬರ ಸಮಾನತೆಯ, ಸಾಮಾಜಿಕ ನ್ಯಾಯದ ಆಶಯದ ಸಂವಿಧಾನದ ಮೇಲೆ ದಾಳಿ ಮಾಡಿ ಮುಗಿಸಲು ಕೆಲವರು ತೀರ್ಮಾನ ಮಾಡಿದ್ದಾರೆ. ಅದರ ವಿರುದ್ಧ ಸಂವಿಧಾನವನ್ನು ಉಳಿಸುವ ತೀರ್ಮಾನ ಮಾಡಿರುವ ನಿಮ್ಮ ಪ್ರಯತ್ನ ಇತಿಹಾಸದ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುತ್ತದೆ” ಎಂದು ಗುಜರಾತ್ ರಾಜ್ಯದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಂವಿಧಾನ ಸಂರಕ್ಷಣಾ ಸಮಾವೇಶ ಆಯೋಜಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಈ ಭಾರತ ಭೂಮಿ ಮೋದಿ, ಆರೆಸ್ಸೆಸ್, ಮೋಹನ್ ಭಾಗವತ್ ಅವರುಗಳ ದೇಶವ. ಇದು ಬಸವಣ್ಣ ಅವರ ದೇಶ, ಬಾಬಾಸಾಹೇಬರ ದೇಶ, ರವಿದಾಸ್ ಅವರ ದೇಶ, ಪೆರಿಯಾರ್ ಅವರ ದೇಶ, ಇಲ್ಲಿ ಭಗತ್ ಸಿಂಗ್, ಸುಖದೇವ್, ರಾಜಗುರು, ನಾರಾಯಣಗುರು, ಅಶ್ವಾಕುಲ್ಲ ಅವರುಗಳ ನೆಲ ಇದು. ಈ ದೇಶವನ್ನು ಉಳಿಸಲು ಯಾರೆಲ್ಲ ತ್ಯಾಗ ಮಾಡಿ ತಪಸ್ಸು ಮಾಡಿದರೋ, ಯಾವ ದೇಶದಲ್ಲಿ 23 ವರ್ಷದಲ್ಲಿ ಭಗತ್ ಸಿಂಗ್ ಪ್ರಾಣ ನೀಡಿದರೋ ಅಂತಹ ದೇಶವನ್ನು ಈಗ ಕೆಲವು ದಿನಗಳಿಂದ ಆಳುತ್ತಿರುವ ಇವರುಗಳ ವಶಕ್ಕೆ ಒಪ್ಪಿಸಲು ಸಾಧ್ಯವಿಲ್ಲ” ಎಂದರು.

“ಇಲ್ಲಿ ವೇದಿಕೆಯ ಮೇಲಿರುವವರು 50 ವರ್ಷಗಳಿಂದ ರೈತರು ಮತ್ತು ಕಾರ್ಮಿಕರಿಗಾಗಿ ಹೋರಾಟ ನಡೆಸುತ್ತಿರುವ ಜನರಿದ್ದಾರೆ, ಈಗ ಅದನ್ನು ಮುಂದಕ್ಕೆ ಒಯ್ಯುವ ಹೊಣೆ ನಮ್ಮ ಯುವತಲೆಮಾರಿನ ಹೆಗಲ ಮೇಲಿದೆ” ಎಂದರು ಹೇಳಿದರು.

“ಗುಜರಾತ್ ಗಲಭೆ ನಡೆಸುವ ಮೂಲಕ ಅಲ್ಪಸಂಖ್ಯಾತರ ಮಾರಣಹೋಮ ಸರ್ಕಾರದ ಮೂಗಿನ ಕೆಳಗೆ ನಡೆದು, ಇಡೀ ಪ್ರಪಂಚದ ಪ್ರಜ್ಞಾವಂತರು ಮೋದಿಯನ್ನು ಟೀಕಿಸಿದಾಗ, ಮೋದಿಯವರ ಸಲಹೆಗಾರರು ಹೇಳಿದರು, ‘ವೈಬ್ರಂಟ್ ಗುಜರಾತ್ ಸಮ್ಮಿಟ್’ ಸಂಘಟಿಸಿ ಎಲ್ಲ ಬಂಡವಾಳಿಗರನ್ನು ಕರೆದು ಅಭಿವೃದ್ಧಿಯ ಹರಿಕಾರನ ಥರ ಪೋಸ್ ಕೊಡಿ ಎಂದು. ಅವರುಗಳನ್ನು ಕರೆದು, ನಿಮಗೆ ಭೂಮಿ, ಕರೆಂಟ್, ಬಂಡವಾಳ ಎಲ್ಲವನ್ನೂ ಒದಗಿಸುತ್ತೇವೆ ಎಂದು ಹೇಳಿದರು. ಇದನ್ನೇ ಅವರ ತಂತ್ರವಾಗಿಸಿಕೊಂಡು ಇಂದು ತಮ್ಮ ಎಲ್ಲ ಸಂಪನ್ಮೂಲಗಳನ್ನು ಈ ಬಂಡವಾಳಿಗರಿಂದ ಪಡೆದುಕೊಂಡು, ಅವರ ಜೇಬು ತುಂಬಿಸುವ ಎಲ್ಲ ಕೆಲಸಗಳನ್ನೂ ಅವರುಗಳನ್ನು ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಇಡೀ ದೇಶದ ಬಂಡವಾಳಿಗರಿಂದು ಅದಾನಿ-ಅಂಬಾನಿಗಳಂತೆ ಮೋದಿ ಪಡೆಯ ಜೊತೆಗೆ ನಿಂತಿದ್ದಾರೆ. ಶ್ರಮಜೀವಿಗಳು, ಬಡವರು, ದಲಿತರು ಇವರ ದಾಳಿಗಳ ಗುರಿಯಾಗುತ್ತಿದ್ದಾರೆ. ಮುಂದಿರುವ ದಾರಿ ಒಂದೇ, ನಾವೆಲ್ಲ ಸಂವಿಧಾನ ಪ್ರೇಮಿಗಳು. ನಮ್ಮ ನಮ್ಮ ಊರುಗಳಲ್ಲಿ, ಕೇರಿಗಳಲ್ಲಿ, ಜಿಲ್ಲೆಗಳಲ್ಲಿ ಆರೆಸ್ಸೆಸ್ ಶಾಖೆಗಳ ವಿರುದ್ಧ ಸಂವಿಧಾನದ ಪಡೆಗಳನ್ನು ಕಟ್ಟೋಣ, ಸಂವಿಧಾನದ ಆಶಯಗಳನ್ನು ನಿಜವಾಗಿ ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ” ಎಂದು ಕರೆ ನೀಡಿದರು.

“ಪಕ್ಷಗಳ ಮೇಲೆ, ರಾಜಕಾರಣಿಗಳ ಮೇಲೆ ನಂಬಿಕೆಯಿಡಬೇಡಿ ಎಂದು ಪರಕಾಲ ಪ್ರಭಾಕರ್ ಹೇಳಿದರು. ನನಗೂ ನಾಯಕರಿಗಿಂತ, ಯಾರು ಬೀದಿಗಳಿದು ರೈತರಿಗಾಗಿ, ಕಾರ್ಮಿಕರಿಗಾಗಿ, ಮಹಿಳೆಯರಿಗಾಗಿ, ದಲಿತರಿಗಾಗಿ ಯುವಜನರಿಗಾಗಿ ಕ್ರಾಂತಿಗಾಗಿ ಚಳವಳಿ ಮಾಡುತ್ತಾರೋ ಅವರ ಮೇಲೆಯೇ ಹೆಚ್ಚು ನಂಬಿಕೆ” ಎಂದರು.

“ನಾವು ಚುನಾವಣೆಯಲ್ಲಿ ಆರೆಸ್ಸೆಸ್-ಬಿಜೆಪಿಯನ್ನು ಸೋಲಿಸಬೇಕು. ಆದರೆ, ನಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು. ಬಾಬಾಸಾಹೇಬರು, ಶಿಕ್ಷಿತರಾಗಿ, ಸಂಘಟಿತರಾಗಿ, ಸಂಘರ್ಷ ನಡೆಸಿ ಎಂದು ಹೇಳೀದ್ದರು. ನಿಜವಾದ ಸ್ವಾತಂತ್ರ್ಯಕ್ಕಾಗಿ ಸಂಘರ್ಷ ನಡೆಸಿ ಎಂದು ಭಗತ್ ಸಿಂಗ್ ಕೂಡಾ ಹೇಳಿದ್ದರು; ಇಂದು ನಮ್ಮೆಲ್ಲರ ಗುರಿ ಅದೇ, ಈ ಬೀದಿ ಸಂಘರ್ಷದಲ್ಲಿ ನಾನು ನಿಮ್ಮೊಂದಿಗಿದ್ದೀನಿ. ಮತ್ತೆ ಮತ್ತೆ ಕರ್ನಾಟಕಕ್ಕೆ ಕರೆಯಿರಿ, ನಾನು ಮತ್ತೆ ಮತ್ತೆ ಗುಜರಾತ್ ನಿಂದ ಬಂದು ಕರ್ನಾಟಕದಲ್ಲಿ ನಿಮ್ಮೊಂದಿಗೆ ಸೇರುತ್ತೇನೆ” ಎಂದು ಮೇವಾನಿ ಭರವಸೆ ನೀಡಿದರು.

ದೊಡ್ಡಮಟ್ಟದ ಸೈನ್ಯ ಸಂವಿಧಾನ ರಕ್ಷಣೆಗೆ ನಿಂತಿರುವುದನ್ನು ಇಂದು ಕಾಣುತ್ತಿದ್ದೇನೆ: ಪರಕಾಲ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...