Homeಕರೋನಾ ತಲ್ಲಣಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

ಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

- Advertisement -
- Advertisement -

ಕಣ್ವ ಸಾಮ್ರಾಜ್ಯ ಕುಸಿಯತೊಡಗಿದೆ. ಕೆಲವೇ ವರ್ಷಗಳಲ್ಲಿ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬಂದ ಈ ಕಂಪನಿ ಅಷ್ಟೆ ವೇಗದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಅವನತಿಯ ಹಾದಿ ಹಿಡಿಯತೊಡಗಿದೆ.

ಹತ್ತು ಹಲವು ಕ್ಷೇತ್ರದಲ್ಲಿ ಹೂಡಿಕೆ ಮಾಡಿ ಪ್ರಸಿದ್ದಿಗೆ ಬಂದಿದ್ದ ಈ ಸಂಸ್ಥೆ ಈಗ ಅವ್ಯವಹಾರದ ಹಿನ್ನೆಲೆಯಲ್ಲಿ ಪತನದತ್ತ ಸಾಗಿದೆ. ಕಣ್ವ ಸಾಮ್ರಾಜ್ಯ ಸಂಸ್ಥೆಗಳ ಸಂಸ್ಥಾಪಕರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಬಂಧಿಸಿ ವಾರ ಕಳೆದಿದ್ದು, ಸಂಸ್ಥೆ ನೌಕರರು ಮತ್ತು ಕಾರ್ಮಿಕರು ವೇತನ ಸಿಗದೆ ತೊಂದರೆ ಅನುಭವಿಸಬೇಕಾಗಿ ಬಂದಿದೆ ಮತ್ತು ಉದ್ಯೋಗದ ಭದ್ರತೆ ಇಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ.

ಕೊರಟಗೆರೆ ತಾಲೂಕಿನ ಬಡ ರೈತ ಕುಟುಂಬದಿಂದ ಬಂದ ನಂಜುಂಡಪ್ಪ ಕಣ್ಣ ಸಂಸ್ಥೆ ಹುಟ್ಟುಹಾಕಿದರು. ಕಣ್ಣ ಸಂಸ್ಥೆಯ ಹೆಸರಿನಲ್ಲಿ ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ಕಣ್ವ ಮಾರ್ಟ್, ಬಟ್ಟೆ ಅಂಗಡಿಗಳು, ಹಣಕಾಸು ಸಂಸ್ಥೆಗಳು, ಗಾರ್ಮೆಂಟ್ಸ್ ಗಳು – ಹೀಗೆ ಎಲ್ಲಾ ಕ್ಷೇತ್ರದಲ್ಲೂ ಹಣ ಹೂಡಿದರು. ಮಳಿಗೆಗಳನ್ನು ತೆರೆದರು. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದರು. ತುಮಕೂರು, ನೆಲಮಂಗಲ ಮತ್ತು ಬೆಂಗಳೂರನ್ನು ಕೇಂದ್ರ ಸ್ಥಾನ ಮಾಡಿಕೊಂಡು ಸಂಸ್ಥೆಗಳನ್ನು ತೆರೆದು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದರು.

ಬೆಂಗಳೂರು, ನೆಲಮಂಗಲ, ತುಮಕೂರು ನಗರದಲ್ಲಿ ಕಣ್ವ ಪಬ್ಲಿಕ್ ಸ್ಕೂಲ್ ಗಳು, ರಾಜಾಜಿನಗರದ 4ನೇ ಹಂತದಲ್ಲಿ ಕಣ್ವ ಡೈಯಾಗ್ನೋಸ್ಟಿಕ್ ಸರ್ವೀಸ್ ಸೆಂಟರ್ ಪ್ರೈ.ಲಿ., ಕಣ್ವ ಶ್ರೀ ಸಾಯಿ ಆಸ್ಪತ್ರೆ ಔಷಧಿ ಮಳಿಗೆ, ಕಣ್ವ ಜವಳಿ ಮಳಿಗೆ, ಕಣ್ವ ಮಾರ್ಟ್ ಚಿಕ್ಕಬಾಣಾವರ, ಕಣ್ವ ಬಜಾರ್ ರೆಡಿಮೇಡ್ ಗಾರ್ಮೆಂಟ್ಸ್ ವ್ಯಾಪಾರಿ ಮಳಿಗೆ, ಕಣ್ವ ಫ್ಯಾಷನ್ ಲಿಮಿಟೆಡ್, ಕೊರಟಗೆರೆಯಲ್ಲಿ ಕಣ್ವ ಗಾರ್ಮೆಂಟ್ಸ್ ಪ್ರೈ.ಲಿ., ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ನೂರಾರು ಸಂಸ್ಥೆಗಳನ್ನು ಆರಂಭಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದ ಬಡವರಿಗೆ ಕೆಲಸ ನೀಡಿ ಅವರ ಕುಟುಂಬಗಳಿಗೆ ಆಸರೆಯಾದರು.

ಇದನ್ನೂ ಓದಿ: ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ನೆಲಮಂಗಲದಲ್ಲಿದ್ದ ಕಣ್ವ ಗಾರ್ಮೆಂಟ್ಸ್ ಪ್ರೈ.ಲಿ., ಅನ್ನು ಕೊರಟಗೆರೆ ತಾಲೂಕಿನ ಗ್ರಾಮೀಣ ಪ್ರದೇಶಕ್ಕೆ ಸ್ಥಳಾಂತರಿಸಿದರು.  ಈ ಗಾರ್ಮೆಂಟ್ಸ್ ಒಂದರಲ್ಲೇ 1200ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದರು. ಈಗ ಸಂಸ್ಥಾಪಕ ನಂಜುಂಡಪ್ಪ ಅವರನ್ನು ಬಂಧಿಸಿರುವುದು ಲಕ್ಷಾಂತರ ಕಾರ್ಮಿಕರಿಗೆ ಉದ್ಯೋಗ ಕಳೆದು ಕೊಳ್ಳುವ ಅಭದ್ರತೆ ಕಾಡತೊಡಗಿದೆ. ಗಾರ್ಮೆಂಟ್ಸ್ ಕಾರ್ಮಿಕರು ವೇತನಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದು, ನಂಜುಂಡಪ್ಪ ಅವರು ವೇತನ ನೀಡುವ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಣ್ವ ಮಾರ್ಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಸಾರ್ವಜನಿಕರು ಹಣ ತೊಡಗಿಸಿದ್ದಾರೆ. ಕೋಟ್ಯಂತರ ರೂಪಾಯಿ ಶೇರುಗಳನ್ನು ಹಾಕಿದ್ದಾರೆ. ಇದೀಗ ಸಂಸ್ಥೆಯಲ್ಲಿ ಅವ್ಯವಹಾರ, ವಂಚನೆ ಆರೋಪಗಳು ಕೇಳಿ ಬಂದಿರುವುದು ಹಣ ತೊಡಗಿಸಿದವರಲ್ಲೂ ಅತಂಕ ಶುರುವಾಗಿದೆ.

ಸಫಾರಿ ಮತ್ತು ಸ್ಕೂಲ್ ಯೂನಿಫಾರಂ ಖರೀದಿಸುವಂತೆ ಸಾವಿರಾರು ಏಜೆಂಟರು ಜನರಿಂದ ಹಣ ಸಂಗ್ರಹ ಮಾಡುತ್ತಿದ್ದರು. 25 ಸಾವಿರ ರೂಗಳಿಂದ 10 ಲಕ್ಷದವರೆಗೆ ಹಣ ತೊಡಗಿಸಿದವರೂ ಇದ್ದಾರೆ. ಈಗ ಕಣ್ವ ಗ್ರೂಪ್ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಾವಿರಾರು ಏಜೆಂಟರು ಕೂಡ ತಾವು ತೊಡಗಿಸಿರುವ ಮತ್ತು ಗ್ರಾಹಕರಿಂದ ಕೊಡಿಸಿರುವ ಹಣ ಕೈಗೆ ಬರುವುದೇ ಎಂಬ ಆತಂಕದಲ್ಲಿದ್ದಾರೆ.

ಕಳೆದ ಒಂದು ವಾರದ ಹಿಂದೆಯೇ ಜಾರಿ ನಿರ್ದೇಶನಾಲಯ ಕಣ್ವ ಗ್ರೂಪ್  ಸಂಸ್ಥಾಪಕ ನಂಜುಂಡಪ್ಪ ಅವರನ್ನು ಬಂಧಿಸಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ಈ ಸುದ್ದಿಗೆ ಮಹತ್ವ ನೀಡಿಲ್ಲ.

ಲಕ್ಷಾಂತರ ಮಂದಿ ಹಣ ತೊಡಗಿಸಿರುವುದು, ಸಾವಿರಾರು ಮಂದಿ ಕಾರ್ಮಿಕರು ಕೆಲಸವಿಲ್ಲದೆ ವೇತನವಿಲ್ಲದೆ ಕೊರೊನಾ ಕಾಲದಲ್ಲಿ ತೊಂದರೆ ಅನುಭವಿಸುತ್ತಿದ್ದರೂ ಕಾರ್ಮಿಕರ ಗೋಳನ್ನು ಕೇಳುವವರೇ ಇಲ್ಲವಾಗಿದೆ.

ಕಣ್ವ ಗ್ರೂಪ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲರ ಕೆಲಸಗಳಿಗೆ ಕುತ್ತು ಬಾರದಂತೆ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...