Homeಕರೋನಾ ತಲ್ಲಣಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

ಕುಸಿಯುತ್ತಿರುವ ಕಣ್ವ ಸಾಮ್ರಾಜ್ಯ: ಆತಂಕದಲ್ಲಿ ಲಕ್ಷಾಂತರ ಕಾರ್ಮಿಕರು

- Advertisement -
- Advertisement -

ಕಣ್ವ ಸಾಮ್ರಾಜ್ಯ ಕುಸಿಯತೊಡಗಿದೆ. ಕೆಲವೇ ವರ್ಷಗಳಲ್ಲಿ ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬಂದ ಈ ಕಂಪನಿ ಅಷ್ಟೆ ವೇಗದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಅವನತಿಯ ಹಾದಿ ಹಿಡಿಯತೊಡಗಿದೆ.

ಹತ್ತು ಹಲವು ಕ್ಷೇತ್ರದಲ್ಲಿ ಹೂಡಿಕೆ ಮಾಡಿ ಪ್ರಸಿದ್ದಿಗೆ ಬಂದಿದ್ದ ಈ ಸಂಸ್ಥೆ ಈಗ ಅವ್ಯವಹಾರದ ಹಿನ್ನೆಲೆಯಲ್ಲಿ ಪತನದತ್ತ ಸಾಗಿದೆ. ಕಣ್ವ ಸಾಮ್ರಾಜ್ಯ ಸಂಸ್ಥೆಗಳ ಸಂಸ್ಥಾಪಕರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಬಂಧಿಸಿ ವಾರ ಕಳೆದಿದ್ದು, ಸಂಸ್ಥೆ ನೌಕರರು ಮತ್ತು ಕಾರ್ಮಿಕರು ವೇತನ ಸಿಗದೆ ತೊಂದರೆ ಅನುಭವಿಸಬೇಕಾಗಿ ಬಂದಿದೆ ಮತ್ತು ಉದ್ಯೋಗದ ಭದ್ರತೆ ಇಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ.

ಕೊರಟಗೆರೆ ತಾಲೂಕಿನ ಬಡ ರೈತ ಕುಟುಂಬದಿಂದ ಬಂದ ನಂಜುಂಡಪ್ಪ ಕಣ್ಣ ಸಂಸ್ಥೆ ಹುಟ್ಟುಹಾಕಿದರು. ಕಣ್ಣ ಸಂಸ್ಥೆಯ ಹೆಸರಿನಲ್ಲಿ ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ಕಣ್ವ ಮಾರ್ಟ್, ಬಟ್ಟೆ ಅಂಗಡಿಗಳು, ಹಣಕಾಸು ಸಂಸ್ಥೆಗಳು, ಗಾರ್ಮೆಂಟ್ಸ್ ಗಳು – ಹೀಗೆ ಎಲ್ಲಾ ಕ್ಷೇತ್ರದಲ್ಲೂ ಹಣ ಹೂಡಿದರು. ಮಳಿಗೆಗಳನ್ನು ತೆರೆದರು. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದರು. ತುಮಕೂರು, ನೆಲಮಂಗಲ ಮತ್ತು ಬೆಂಗಳೂರನ್ನು ಕೇಂದ್ರ ಸ್ಥಾನ ಮಾಡಿಕೊಂಡು ಸಂಸ್ಥೆಗಳನ್ನು ತೆರೆದು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದರು.

ಬೆಂಗಳೂರು, ನೆಲಮಂಗಲ, ತುಮಕೂರು ನಗರದಲ್ಲಿ ಕಣ್ವ ಪಬ್ಲಿಕ್ ಸ್ಕೂಲ್ ಗಳು, ರಾಜಾಜಿನಗರದ 4ನೇ ಹಂತದಲ್ಲಿ ಕಣ್ವ ಡೈಯಾಗ್ನೋಸ್ಟಿಕ್ ಸರ್ವೀಸ್ ಸೆಂಟರ್ ಪ್ರೈ.ಲಿ., ಕಣ್ವ ಶ್ರೀ ಸಾಯಿ ಆಸ್ಪತ್ರೆ ಔಷಧಿ ಮಳಿಗೆ, ಕಣ್ವ ಜವಳಿ ಮಳಿಗೆ, ಕಣ್ವ ಮಾರ್ಟ್ ಚಿಕ್ಕಬಾಣಾವರ, ಕಣ್ವ ಬಜಾರ್ ರೆಡಿಮೇಡ್ ಗಾರ್ಮೆಂಟ್ಸ್ ವ್ಯಾಪಾರಿ ಮಳಿಗೆ, ಕಣ್ವ ಫ್ಯಾಷನ್ ಲಿಮಿಟೆಡ್, ಕೊರಟಗೆರೆಯಲ್ಲಿ ಕಣ್ವ ಗಾರ್ಮೆಂಟ್ಸ್ ಪ್ರೈ.ಲಿ., ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ನೂರಾರು ಸಂಸ್ಥೆಗಳನ್ನು ಆರಂಭಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದ ಬಡವರಿಗೆ ಕೆಲಸ ನೀಡಿ ಅವರ ಕುಟುಂಬಗಳಿಗೆ ಆಸರೆಯಾದರು.

ಇದನ್ನೂ ಓದಿ: ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ನೆಲಮಂಗಲದಲ್ಲಿದ್ದ ಕಣ್ವ ಗಾರ್ಮೆಂಟ್ಸ್ ಪ್ರೈ.ಲಿ., ಅನ್ನು ಕೊರಟಗೆರೆ ತಾಲೂಕಿನ ಗ್ರಾಮೀಣ ಪ್ರದೇಶಕ್ಕೆ ಸ್ಥಳಾಂತರಿಸಿದರು.  ಈ ಗಾರ್ಮೆಂಟ್ಸ್ ಒಂದರಲ್ಲೇ 1200ಕ್ಕೂ ಹೆಚ್ಚು ಮಹಿಳೆಯರು ಕೆಲಸ ಮಾಡುತ್ತಿದ್ದರು. ಈಗ ಸಂಸ್ಥಾಪಕ ನಂಜುಂಡಪ್ಪ ಅವರನ್ನು ಬಂಧಿಸಿರುವುದು ಲಕ್ಷಾಂತರ ಕಾರ್ಮಿಕರಿಗೆ ಉದ್ಯೋಗ ಕಳೆದು ಕೊಳ್ಳುವ ಅಭದ್ರತೆ ಕಾಡತೊಡಗಿದೆ. ಗಾರ್ಮೆಂಟ್ಸ್ ಕಾರ್ಮಿಕರು ವೇತನಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದು, ನಂಜುಂಡಪ್ಪ ಅವರು ವೇತನ ನೀಡುವ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಣ್ವ ಮಾರ್ಟ್ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಸಾರ್ವಜನಿಕರು ಹಣ ತೊಡಗಿಸಿದ್ದಾರೆ. ಕೋಟ್ಯಂತರ ರೂಪಾಯಿ ಶೇರುಗಳನ್ನು ಹಾಕಿದ್ದಾರೆ. ಇದೀಗ ಸಂಸ್ಥೆಯಲ್ಲಿ ಅವ್ಯವಹಾರ, ವಂಚನೆ ಆರೋಪಗಳು ಕೇಳಿ ಬಂದಿರುವುದು ಹಣ ತೊಡಗಿಸಿದವರಲ್ಲೂ ಅತಂಕ ಶುರುವಾಗಿದೆ.

ಸಫಾರಿ ಮತ್ತು ಸ್ಕೂಲ್ ಯೂನಿಫಾರಂ ಖರೀದಿಸುವಂತೆ ಸಾವಿರಾರು ಏಜೆಂಟರು ಜನರಿಂದ ಹಣ ಸಂಗ್ರಹ ಮಾಡುತ್ತಿದ್ದರು. 25 ಸಾವಿರ ರೂಗಳಿಂದ 10 ಲಕ್ಷದವರೆಗೆ ಹಣ ತೊಡಗಿಸಿದವರೂ ಇದ್ದಾರೆ. ಈಗ ಕಣ್ವ ಗ್ರೂಪ್ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಾವಿರಾರು ಏಜೆಂಟರು ಕೂಡ ತಾವು ತೊಡಗಿಸಿರುವ ಮತ್ತು ಗ್ರಾಹಕರಿಂದ ಕೊಡಿಸಿರುವ ಹಣ ಕೈಗೆ ಬರುವುದೇ ಎಂಬ ಆತಂಕದಲ್ಲಿದ್ದಾರೆ.

ಕಳೆದ ಒಂದು ವಾರದ ಹಿಂದೆಯೇ ಜಾರಿ ನಿರ್ದೇಶನಾಲಯ ಕಣ್ವ ಗ್ರೂಪ್  ಸಂಸ್ಥಾಪಕ ನಂಜುಂಡಪ್ಪ ಅವರನ್ನು ಬಂಧಿಸಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ಈ ಸುದ್ದಿಗೆ ಮಹತ್ವ ನೀಡಿಲ್ಲ.

ಲಕ್ಷಾಂತರ ಮಂದಿ ಹಣ ತೊಡಗಿಸಿರುವುದು, ಸಾವಿರಾರು ಮಂದಿ ಕಾರ್ಮಿಕರು ಕೆಲಸವಿಲ್ಲದೆ ವೇತನವಿಲ್ಲದೆ ಕೊರೊನಾ ಕಾಲದಲ್ಲಿ ತೊಂದರೆ ಅನುಭವಿಸುತ್ತಿದ್ದರೂ ಕಾರ್ಮಿಕರ ಗೋಳನ್ನು ಕೇಳುವವರೇ ಇಲ್ಲವಾಗಿದೆ.

ಕಣ್ವ ಗ್ರೂಪ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲರ ಕೆಲಸಗಳಿಗೆ ಕುತ್ತು ಬಾರದಂತೆ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....