Homeಅಂಕಣಗಳುನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

ನೂರರ ನೋಟ: ಕರ ನಿರಾಕರಣೆಯನ್ನು ನೆನಪಿಸಿದ ದೆಹಲಿ ರೈತ ಹೋರಾಟ

- Advertisement -
- Advertisement -

ಇಂದು ಸರ್ಕಾರಕ್ಕೆ ಸವಾಲಾಗಿರುವ, ಪ್ರಮುಖವಾಗಿ ಪಂಜಾಬ್, ಹರಿಯಾಣಗಳ ಮತ್ತು ದೇಶದೆಲ್ಲೆಡೆಯಿಂದ ಸೇರಿಕೊಳ್ಳುತ್ತಿರುವ ರೈತರ ಚಳವಳಿ ಭಾರತದಲ್ಲಿ ನಡೆಯುತ್ತಿರುವ ಎಲ್ಲ ಚಳವಳಿಗಿಂತ ಭಿನ್ನವಾದುದು ಮತ್ತು ಗಾಂಧಿಯವರ ಸತ್ಯಾಗ್ರಹದಷ್ಟೇ ಪರಿಣಾಮಕಾರಿಯಾದುದು. ಅಹಿಂಸೆಯ ಪ್ರಯೋಗ ಶಾಲೆಯಂತಿದೆ ರೈತ ಹೋರಾಟ.

ಉತ್ತರಕನ್ನಡ ಜಿಲ್ಲೆಯಲ್ಲಿ ನಾಡವ ಜನರು ನಡೆಸಿದ ಕರನಿರಾಕಣೆ ಸತ್ಯಾಗ್ರಹವನ್ನು ದೆಹಲಿಯಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹ ನೆನಪಿಗೆ ತರುತ್ತದೆ.

ಬ್ರಿಟಿಷರ ಕಾಲದಲ್ಲಿ ರೈತರನ್ನು, ಕಾರ್ಮಿಕರನ್ನು ಕಾಲ ಕೆಳಗಿನ ಕಸವಾಗಿ ಆಡಳಿತ ನಡೆಸುವವರು ಕಾಣುತ್ತಿದ್ದರು. ಕಮ್ಯುನಿಸ್ಟರು ಕಾರ್ಮಿಕ ಸಂಘಟನೆಗೆ ಗಮನ ಕೊಟ್ಟರು ಕಾರ್ಮಿಕರ ಹಕ್ಕು ಬಾಧ್ಯತೆಗಾಗಿ ಹೋರಾಟಗಳನ್ನು ನಡೆಸಿದರು, ಅವರು ಹಿಂಸೆ-ಅಹಿಂಸೆ ಇವೆಲ್ಲದರ ಕುರಿತು ತಲೆ ಕೆಡಿಸಿಕೊಳ್ಳಲಿಲ್ಲ. ಆಕ್ರಮಣಕಾರಿ ಕಾರ್ಮಿಕ ಸಂಘಟನೆಗಳನ್ನು ಕಟ್ಟಿದರು. ಹೋರಾಟ ನಡೆಸಿದ ಸಂದರ್ಭದಲ್ಲಿ ಹಿಂಸೆ, ಪ್ರತಿಹಿಂಸೆ, ಗೋಲಿಬಾರ್ ಎಲ್ಲವೂ ಸಾಂಗವಾಗಿ ನಡೆದವು. ಮಿಲ್ಲು ಕಾರ್ಖಾನೆಗಳ ಮಾಲೀಕರ ಅವರ ಹತ್ತಿರದ ಅಧಿಕಾರಿಗಳ ಕೊಲೆಗಳು ನಡೆದು ಹೋದವು. ಬಂಡವಾಳಶಾಹಿಗಳು ದಬ್ಬಾಳಿಕೆಯನ್ನು ಮುಂದುವರೆಸಲು ಇನ್ನು ಸಾಧ್ಯವಿಲ್ಲವೆಂದು ಅರಿತರು. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಅನಿವಾರ್ಯತೆ ನಿಧಾನವಾಗಿ ಉಂಟಾಯಿತು. ಬ್ರಿಟಿಷ್ ಸರ್ಕಾರಕ್ಕೂ ಕೂಡ ಮುಂದೆ ಕಾರ್ಮಿಕರ ಹಿತರಕ್ಷಣೆಯ ಕಾಯ್ದೆಗಳನ್ನು ರಚಿಸುವುದು ಅನಿವಾರ್ಯವಾಯಿತು.

ಕಾರ್ಮಿಕರು ದೊಡ್ಡ ಸಂಖ್ಯೆಯಲ್ಲಿ ಒಂದೇ ಕಡೆ ಇದ್ದದ್ದರಿಂದ ಅವರನ್ನು ಸಂಘಟಿಸುವುದು ಸುಲಭವಾಯಿತು. ಭಾರತದ ನಾನಾ ಹಳ್ಳಿಗಳಲ್ಲಿ ರೈತರು ಚದುರಿಹೋಗಿದ್ದರಿಂದ ಅವರ ಸಂಘಟನೆ ಯಶಸ್ವಿಯಾಗಲಿಲ್ಲ. ರೈತರ ಶೋಷಣೆ ಮುಂದುವರೆಯಿತು. ಕಮ್ಯುನಿಸ್ಟರು ರೈತರ ಸಂಘಟನೆಗೂ ಕೈ ಹಾಕಿದರಾದರೂ ಅದು ಫಲ ಕೊಡಲಿಲ್ಲ. ಸ್ವಾತಂತ್ರ್ಯ ಪ್ರಾಪ್ತವಾಗುವವರೆಗೂ ರೈತರ ಈ ಬವಣೆ ಮುಂದುವರೆಯಿತು. ಸ್ವಾತಂತ್ರ್ಯ ಪ್ರಾಪ್ತವಾದ ಎಷ್ಟೋ ವರ್ಷಗಳ ನಂತರ ರೈತಸಂಘಗಳು ತಲೆ ಎತ್ತಿದವು. ಅವು ತಮ್ಮ ಇತಿಮಿತಿಯಲ್ಲಿ ರೈತರ ಶೋಷಣೆಯನ್ನು ತಡೆಗಟ್ಟಿದವು. ಈಗ ಪಂಜಾಬ್ ಮತ್ತು ಹರ್ಯಾಣ ರೈತರ ಸಂಘಟನೆಗಳ ಮುಂದಾಳತ್ವದಲ್ಲಿ ರೈತರು ಸರ್ಕಾರದ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಡ ತರುವಷ್ಟು ಶಕ್ತಿಯುತವಾದ ಸಂಘಟನೆಯನ್ನು ರೂಪಿಸಿಕೊಂಡಿದ್ದಾರೆ. ಇದು ಒಂದು ವಿಸ್ಮಯಕರವಾದ ಬೆಳವಣಿಗೆ.

ಈಗ ಸರ್ಕಾರ ಈ ಸವಾಲನ್ನು ಎದುರಿಸಬೇಕಾದ ದುಸ್ಥಿತಿಗೆ ತಲುಪಿದೆ. ಸರ್ಕಾರ ಇದನ್ನು ತನ್ನ ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸಿದೆ. ಅದ್ದರಿಂದ ಹೋರಾಟಕ್ಕಾಗಿ ಸುಮಾರು 60 ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಈ 30 ಸಾವಿರ ರೈತರನ್ನು tire out ಮಾಡುವುದು ಹೇಗೆ ಎಂದು ಸರ್ಕಾರ ತಂತ್ರ ಹೊಸೆಯುತ್ತಿದೆ. ರೈತ ಸಂಘಟನೆಗೆ ಸರ್ಕಾರದ ಆಲೋಚನೆಯ ಅರಿವಿದೆ. ಈ ಕಾನೂನುಗಳಿಂದ ಇದುವರೆಗೆ ತಾನು ಬೆಳೆದ ಬೆಳೆಗೆ ನಿಖರವಾದ ಆದಾಯ ದೊರೆಯುತ್ತದೆ, ಬೆಂಬಲ ಬೆಲೆ ದೊರೆಯುತ್ತದೆ ಎಂಬ ಭರವಸೆಯನ್ನು ಸರ್ಕಾರ ನೀಡುತ್ತಿದೆ. ಆದರೆ ಸರ್ಕಾರ ಎಲ್ಲಿ ತಮ್ಮನ್ನು ಅದಾನಿ, ಅಂಬಾನಿಗಳ ಅಧೀನರನ್ನಾಗಿ ಮಾಡಿಬಿಡುವುದೋ ಎಂಬ ಭಯ ರೈತರದ್ದು.

ಸರ್ವೋಚ್ಚ ನ್ಯಾಯಾಲಯ ಈ ಮೂರು ರೈತ ವಿರೋಧಿ ಕಾಯ್ದೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿದಿದೆಯಾದರೂ, ಅಂತಿಮವಾಗಿ ಈ ಮೂರು ಕಾಯ್ದೆಗಳನ್ನು ಅಲ್ಲಲ್ಲಿ ತಿದ್ದುಪಡಿ ಮಾಡಿ ರೈತರು ಇದಕ್ಕೆ ಒಪ್ಪಿಕೊಳ್ಳಬೇಕೆಂದು ತೀರ್ಪುಕೊಡಬಹುದು ಎಂಬ ಭಯ ರೈತ ಸಂಘಟನೆಗಳಿಗೆ ಇದೆ. ಅಷ್ಟೇ ಅಲ್ಲ ಸರ್ಕಾರ ಕೂಡ ರೈತ ಹೋರಾಟದ ತೀವ್ರತೆಯನ್ನು ಅಡಗಿಸಲು ಬೇರೆ ಬೇರೆ ತಂತ್ರಗಳನ್ನು ಹರಿಯಬಿಡಬಹುದು. ಆದರೆ ದೆಹಲಿಯಲ್ಲಿ ಝಾಂಡಾ ಹೂಡಿರುವ ಈ ರೈತ ಸಂಘಟನೆಯವರು ಸರ್ಕಾರದ ನಿಲುವು ಬದಲಾದಂತೆ ಕೂಡಲೇ ಆ ನಿಲುವನ್ನು ಬೆತ್ತಲೆ ಮಾಡುವುದಕ್ಕೆ ಅಷ್ಟೇ ಚಾಕಚಕ್ಯತೆಯನ್ನು ತೋರುತ್ತಾರೆ. ’ರೈತರ ಸಮಸ್ಯೆ ಪರಿಹಾರಕ್ಕೆ ದಾರಿಯನ್ನು ಹುಡುಕಲು ತೊಡಗಿದರೆ, ಈಗಾಗಲೇ ತರಲಾಗಿರುವ CAA ಮುಂತಾದ ಕಾನೂನುಗಳ ವಿಚಾರಕ್ಕೆ ಅದೇ ಮಾನದಂಡವನ್ನು ಉಪಯೋಗಿಸಿ ಎಂದು ಸರ್ಕಾರದ ಮೇಲೆ ಒತ್ತಡ ಬಂದೇಬರುತ್ತದೆ. ಆ ಭಯವೂ ಸರ್ಕಾರವನ್ನು ಕಾಡುತ್ತಿರಬಹುದು’ ಎಂದು ಹಿಂದೆ ಕೇರಳ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿದ್ದ ಕೆ. ಜಯಕುಮಾರ್ ಅಭಿಪ್ರಾಯ ಪಡುತ್ತಾರೆ.

PC : The Week

ರೈತರ ಈ ಚಳವಳಿ ಸೋಲನ್ನು ಒಪ್ಪಿಕೊಳ್ಳುವ ಸಂಭವವೇ ಇಲ್ಲ. ಏಕೆಂದರೆ ಈಗಾಗಲೇ ಈ ರೈತ ಸಂಘಟನೆಗಳ ಮುಖಂಡರು ಭಾರತದ ಎಲ್ಲ ರಾಜ್ಯಗಳಲ್ಲಿರುವ ರೈತ ಸಂಘಟನೆಗಳನ್ನು ಸಂಧಿಸಿ, ಅವನ್ನೂ ಬಲಗೊಳಿಸುವ ಹೋರಾಟಕ್ಕೆ ಅನುಗೊಳಿಸುವ ಎಲ್ಲ ಕ್ರಮಗಳನ್ನು ಕೈಗೊಳ್ಳುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಆದ್ದರಿಂದ ಸರ್ಕಾರ ತಮ್ಮ ಪ್ರತಿಷ್ಠೆಯ ನಿಲುವನ್ನು ಸಡಿಲಿಸಿ ರೈತರ ಕೋರಿಕೆಯಾದ ಈ ರೈತ ವಿರೋಧಿ ಶಾಸನಗಳನ್ನು ರದ್ದುಗೊಳಿಸುವುದು ವಿವೇಕಯುತವಾದ ನಿಲುವು.

ಇನ್ನು ಅದಾನಿ, ಅಂಬಾನಿಗಳ ಪಾತ್ರದ ಬಗೆಗೆ ಎರಡು ಮಾತು. ಮೋದಿಯವರು ಅಧಿಕಾರ ಹಿಡಿಯುವ ಮೊದಲು ಇದ್ದ ಸರ್ಕಾರಗಳೂ ಬಂಡವಾಳಶಾಹಿ ಕಾರ್ಪೊರೆಟ್‌ಗಳನ್ನು ಬೆಂಬಲಿಸುತ್ತಲೇ ಇದ್ದರು. ಅಂದಿನ ದಿನಗಳಲ್ಲಿ ಟಾಟಾ, ಬಿರ್ಲಾಗಳ ಹಾವಳಿಯ ಬಗೆಗೆ ಬಹಳ ಕೇಳಿಬರುತ್ತಿತ್ತು, ಆದರೆ ಇಂದಿನ ಅದಾನಿ, ಅಂಬಾನಿಗಳಂತೆ ಸರ್ಕಾರದೊಡನೆ ಹೆಣೆದುಕೊಳ್ಳಲು ಆಗಿನ ಸರ್ಕಾರಗಳು ಅವಕಾಶ ಕಲ್ಪಿಸುತ್ತಿರಲಿಲ್ಲ. ದೊಡ್ಡ ದೊಡ್ಡ ಕಂಟ್ರಾಕ್ಟುಗಳನ್ನು ಅವರ ಪಾಲಾಗಲು ಸರ್ಕಾರ ನಡೆಸುವವರು ನೆರವಾಗುತ್ತಿದ್ದರು. ಆದರೆ ಅವರ ತೆಕ್ಕೆಗೆ ಸರ್ಕಾರ ಎಂದೂ ಬಿದ್ದದ್ದಿಲ್ಲ.

ರೈತರ ಈ ಹೋರಾಟ 2024ರ ಪಾರ್ಲಿಮೆಂಟ್ ಚುನಾವಣೆವರೆಗೂ ನಡೆಯುತ್ತದೆ ಎಂದು ದೆಹಲಿಯಲ್ಲಿ ಸತ್ಯಾಗ್ರಹ ನಡೆಸುತ್ತಿರುವ ರೈತ ಸಂಘಟನೆಗಳ ಒಕ್ಕೂಟ ನಿರ್ಧರಿಸಿ ಹೇಳಿದೆ. ಮೋದಿಯವರು ಮರ್ಯಾದೆಯ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಮೊಂಡುತನಕ್ಕೆ ಬಿದ್ದರೆ, ಸರ್ಕಾರ ಮುಂದೆರಡು ವರ್ಷಗಳ ಕಾಲ ನೆಮ್ಮದಿಯಾಗಿ ಆಡಳಿತ ನಡೆಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮೋದಿಯವರು ’ನಾನು ತಂದ ಈ ಕಾಯ್ದೆಗಳ ಬಗ್ಗೆ ನಿಮಗೆ ಆತಂಕ ಇದೆ. ಆದ್ದರಿಂದ ಈ ಮೂರು ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇನೆ’ ಎಂದು ಹೇಳಿ ರೈತರ ಹೋರಾಟವನ್ನು ಮುಕ್ತಾಯಗೊಳಿಸಿ ಎಂದು ರೈತ ಮುಖಂಡರಿಗೆ ತಿಳಿಸಬೇಕು.

ರೈತ ಸಂಘಟನೆ ಬೆಳೆದು ಸದೃಢವಾಗಿಸಲು ಬಹಳ ಕಾಲಬೇಕಾಯಿತು. ರೈತರು ಬೆಳೆದದ್ದನ್ನು ಸರ್ಕಾರವೇ ಕೊಳ್ಳಬೇಕು. ಈಗ ನಾವು ಮಧ್ಯವರ್ತಿಗಳ ಕೈಗೆ ಸಿಕ್ಕಿಹಾಕಿಕೊಂಡಿದ್ದೇವೆ. ಈ ಮಿಡಲ್‌ಮ್ಯಾನ್ ಮತ್ತು ಸಗಟು ವರ್ತಕರು ನಮ್ಮನ್ನು ಅಡಕತ್ತರಿಯಲ್ಲಿ ಸಿಕ್ಕಿಸಿಕೊಂಡು ಅಪಾರವಾಗಿ ಲಾಭ ಸಂಪಾದಿಸುತ್ತಿದ್ದಾರೆ. ಬೆಳೆದ ಬೆಳೆಗೆ ಬೆಂಬಲ ನೀಡಿ ರೈತರಿಗಾಗುತ್ತಿರುವ ಶೋಷಣೆಯನ್ನು ತಪ್ಪಿಸಲು ಸರ್ಕಾರ ನೆರವಿಗೆ ಬರಬೇಕು ಆದರೆ ಈಗ ರೈತ ವಿರೋಧಿ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿದೆ.

ಬಂಡವಾಳಶಾಹಿ ಗ್ಯಾಂಗ್‌ನವರು ಈಗಾಗಲೇ ಆಹಾರ ಧಾನ್ಯಗಳನ್ನು ದೋಚಲು 53 ವ್ಯವಸಾಯಾಧಾರಿತ ತಳಹದಿಯ ಕಂಪನಿಗಳನ್ನು ರಿಜಿಸ್ಟರ್ ಮಾಡಿದ್ದಾರೆ. ರೈತರ ಸುಲಿಗೆ ಯಾನಕ್ಕೆ ಸಕಲ ಸಿದ್ಧತೆಯೂ ಆಗಿದೆ. ಕಾನೂನನ್ನು ನುಗ್ಗಿಸುವುದು ಮಾತ್ರ ಉಳಿದಿತ್ತು. ಎಚ್ಚೆತ್ತ ಪಂಜಾಬ್ ಮತ್ತು ಹರ್ಯಾಣ ರೈತರ ಮುಂದಾಳತ್ವದಲ್ಲಿ ದೇಶದ ರೈತರೆಲ್ಲ ಒಗ್ಗೂಡಿ ಸಕಾಲದಲ್ಲಿ ಆಂದೋಲನ ಆರಂಭಿಸಿ ಈ ಅನಾಹುತವನ್ನು ತಡೆ ಹಿಡಿದಿದ್ದಾರೆ.


ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...