Homeಮುಖಪುಟಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

ಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

- Advertisement -
- Advertisement -

ಬಿಜೆಪಿಯ ಹಾದಿಯಲ್ಲೇ ಆಮ್‌ ಆದ್ಮಿ ಪಾರ್ಟಿ ಹೆಜ್ಜೆ ಇಡುತ್ತಿದ್ದು, ಮೃದು ಹಿಂದುತ್ವವನ್ನು ಎಎಪಿ ಪ್ರತಿಪಾದಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಇದಕ್ಕೆ ಇಂಬು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಠ್ಯಕ್ರಮ’ಕ್ಕೆ ಮಂಗಳವಾರ ಚಾಲನೆ ನೀಡಿದ್ದಾರೆ.

‘ದೇಶಭಕ್ತಿ’ ಪಠ್ಯಕ್ರಮದ ಮೂಲಕ ತನ್ನ ಮಹತ್ವಕಾಂಕ್ಷೆಯನ್ನು ಎಎಪಿ ಹೊರ ಹಾಕಿದೆ ಎಂದಿರುವ ‘ದಿ ವೈರ್‌’ ಸುದ್ದಿ ಜಾಲತಾಣ, ಛಾತ್ರಾಸಲ್ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್‌ ಅವರ ಜನ್ಮದಿನದಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಒಂದೇ ಮಾತರಂ’, ‘ಭಾರತ್‌ ಮಾತಾಕೀ ಜೈ’, ‘ಇನ್‌ಕ್ವಿಲಾಬ್‌ ಜಿಂದಾಬಾದ್‌’ ಘೋಷಣೆ ಮೊಳಗಿವೆ ಎಂದು ವರದಿ ಮಾಡಿದೆ.

2019ರ ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರೀವಾಲ್ ಈ ಯೋಜನೆಯನ್ನು ಘೋಷಣೆ ಮಾಡಿದ್ದರು.  2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ನೀಡಿದ 28 ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು.

ಹೊಸ ಯೋಜನೆಯ ಉದ್ಘಾಟನೆಯಲ್ಲಿ ಭಗತ್‌ಸಿಂಗ್‌ ಅವರ ತ್ಯಾಗ, ಬಲಿದಾನವನ್ನು ನೆನೆದು ಮಾತನಾಡಿರುವ ಕೇಜ್ರೀವಾಲ್‌, “ಭಗತ್‌ಸಿಂಗ್‌ ಅವರ ಜೀವನ ಚರಿತ್ರೆಯನ್ನು ಆಳವಾಗಿ ಓದಿದ್ದೇನೆ. ಅವರ ಜೀವನ ಚರಿತ್ರೆಯನ್ನು ಓದುತ್ತಾ ಹೋದರೆ ನೀವು ರೋಮಾಂಚಿತರಾಗುತ್ತೀರಿ. ವಿಭಿನ್ನ ಉತ್ಸಾಹ ಹಾಗೂ ಪ್ರೇರಣೆ ನಿಮ್ಮದಾಗುತ್ತದೆ. ಇದನ್ನೇ ದೇಶಭಕ್ತಿ ಎನ್ನುವುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದೆಹಲಿ ಕೋರ್ಟ್ ಆವರಣದಲ್ಲಿಯೇ ಗುಂಡಿನ ಕಾಳಗ: ಗ್ಯಾಂಗ್‌ಸ್ಟರ್ ಸೇರಿ ಮೂವರ ಕೊಲೆ

“ನಮ್ಮ ಮಕ್ಕಳು ಇಡುವ ಪ್ರತಿಯೊಂದು ಹೆಜ್ಜೆಯಲ್ಲೂ ದೇಶಭಕ್ತಿಯ ಅನುಭವವಾಗುವ ವಾತಾವರಣವನ್ನು ನಾವು ಸೃಷ್ಟಿಸಬೇಕು” ಎಂದಿರುವ ಅವರು, “ದೇಶಭಕ್ತಿ ಈ ದೇಶದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಇರುತ್ತದೆ. ಇದು ಹುಟ್ಟಿನೊಂದಿಗೆ ಬರುವ ವಿಷಯ. ಆದರೆ ಇದು ಎಚ್ಚರಗೊಳ್ಳಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯವಿದೆ” ಎಂದು ತಿಳಿಸಿದ್ದಾರೆ.

“74 ವರ್ಷಗಳಲ್ಲಿ ನಾವು ಬೌತವಿಜ್ಞಾನ, ರಾಸಾಯನ ವಿಜ್ಞಾನ, ಗಣಿತವನ್ನು ಎಲ್ಲ ಶಾಲೆಗಳಲ್ಲಿ ಕಲಿತೆವು. ನಮ್ಮ ಮಕ್ಕಳಿಗೆ ದೇಶಭಕ್ತಿಯನ್ನು ಶಾಲೆಯಲ್ಲಿ ಹೇಳಿಕೊಡಲಿಲ್ಲ. ಎಲ್ಲರೊಳಗೂ ದೇಶಭಕ್ತಿ ಇರುತ್ತದೆ, ಅದನ್ನು ಜಾಗೃತಗೊಳಿಸಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯ” ಎಂದು ಕೇಜ್ರೀವಾಲ್ ಹೇಳಿದ್ದಾರೆ.

“ನಾವು ಎಲ್ಲಾ ರೀತಿಯ ವೃತ್ತಿಪರರನ್ನು ತಯಾರಿಸಿದ್ದೇವೆ, ಆದರೆ ನಾವು ದೇಶಭಕ್ತ ವೃತ್ತಿಪರರನ್ನು ಬೆಳೆಸಿಲ್ಲ. ನಾವು ಇತರ ವೃತ್ತಿಗಳನ್ನು ಉತ್ತೇಜಿಸುವುದಿಲ್ಲ ಎಂದು ಹೇಳುತ್ತಿಲ್ಲ. ನಾವು ಎಲ್ಲಾ ರೀತಿಯ ಶಿಕ್ಷಣವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಆದರೆ, ನಾವು ಅವರಿಗೆ ದೇಶಭಕ್ತ ಮೌಲ್ಯಗಳ ಸ್ಪರ್ಶವನ್ನು ನೀಡುತ್ತೇವೆ. ನಾವು ದೇಶಭಕ್ತ ವೈದ್ಯರು, ವಕೀಲರು, ಎಂಜಿನಿಯರ್‌ಗಳು, ನಟರು, ಗಾಯಕರು, ಕಲಾವಿದರು, ಪತ್ರಕರ್ತರು ಹೀಗೆ ಎಲ್ಲರನ್ನೂ ಬೆಳೆಸುತ್ತೇವೆ” ಎಂದಿದ್ದಾರೆ.

“ಈ ಪಠ್ಯಕ್ರಮ ನರ್ಸರಿಯಿಂದ 12ನೇ ತರಗತಿಯವರೆಗೆ ಇರಲಿದೆ. ಪಠ್ಯಪುಸ್ತಕ ರೀತಿಯಲ್ಲಿ ಪಠ್ಯಕ್ರಮ ಇರುವುದಿಲ್ಲ, ಕೈಪಿಡಿ ಮಾದರಿಯಲ್ಲಿ ನೀಡುತ್ತಿದ್ದೇವೆ. ಮೂರು ಕೆಟಗರಿಯಲ್ಲಿ (ನರ್ಸರಿಯಿಂದ 5ನೇ ತರಗತಿಯವರೆಗೆ, 6ರಿಂದ 8ನೇ ತರಗತಿಯವರೆಗೆ ಹಾಗೂ 9ರಿಂದ 12ನೇ ತರಗತಿಯವರೆಗೆ) ಸ್ವಾತಂತ್ರ್ಯ ಹೋರಾಟಗಾರರ ಕಥನಗಳನ್ನು ಕಲಿಯಲಿದ್ದಾರೆ” ಎಂದು ತಿಳಿಸಿದರು.

ತರಗತಿಗೂ ಮುನ್ನ ‘ಧ್ಯಾನ’

ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮಾತನಾಡಿ, “ನರ್ಸರಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಕನಿಷ್ಠ 700-800 ಕಥೆಗಳನ್ನು ತಿಳಿಯುವರು, ಕನಿಷ್ಠ 500-600 ದೇಶಭಕ್ತಿ ಗೀತೆಗಳನ್ನು ಕಲಿಯುವರು. ಪ್ರತಿಯೊಂದು ತರಗತಿಯೂ ‘ದೇಶಭಕ್ತಿ ಧ್ಯಾನ’ (ಏಕಗ್ರತಾ ವ್ಯಾಯಾಮ) ಮಾಡುವ ಮೂಲಕ ಆರಂಭವಾಗಲಿವೆ. ಇದು ಐದು ನಿಮಿಷ ಇರಲಿದೆ. ಐವರು ದೇಶಪ್ರೇಮಿಗಳನ್ನು ನೆನೆಯುವುದು ಈ ಧ್ಯಾನದ ಉದ್ದೇಶ” ಎಂದಿದ್ದಾರೆ.

ಹಲವು ಯೋಜನೆಗಳ ಮೂಲಕ ಬಹುಸಂಖ್ಯಾತರನ್ನು ಓಲೈಕೆ ಮಾಡಲು ಎಎಪಿ ಮುಂದಾಗಿದೆ. ಕಳೆದೆರಡು ಚುನಾವಣೆಗಳಲ್ಲಿ ಆಮ್‌ ಆದ್ಮಿ ಪಕ್ಷವು ದಲಿತರು ಮತ್ತು ಮುಸ್ಲಿಮರ ಮತಗಳಿಂದ ಗೆದ್ದಿದೆ. ಜೊತೆಗೆ ಇತರ ವರ್ಗಗಳನ್ನು ಸೆಳೆಯಲು ಮೃದು ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ. ಚುನಾವಣಾ ವೇಳೆ ಕೇಜ್ರಿವಾಲ್‌ ಹನುಮಾನ್ ಚಾಲೀಸ್‌ ಪಠಿಸಿದ್ದರು. ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆದಿದ್ದರು.

ಅಯೋಧ್ಯೆ ಹಾಗೂ ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ‘ತಿರಂಗಯಾತ್ರೆ’ಯನ್ನು ಎಎಪಿ ಹಮ್ಮಿಕೊಂಡಿದ್ದನ್ನು ಗಮನಿಸಬಹುದು. ಉತ್ತರಖಾಂಡ್‌ ರಾಜ್ಯದಲ್ಲಿ ಕೇಜ್ರಿವಾಲ್ ಮಾತನಾಡುತ್ತಾ, ” ನಮ್ಮ ಪಕ್ಷಕ್ಕೆ ಮತ ಚಲಾಯಿಸಿದರೆ, ಉತ್ತರಖಾಂಡ್ ರಾಜ್ಯವನ್ನು ಹಿಂದೂಗಳ ಜಾಗತಿಕ ರಾಜಧಾನಿಯನ್ನಾಗಿ ಮಾಡುತ್ತೇವೆ” ಎಂದಿದ್ದರು. ಎರಡು ವರ್ಷಗಳ ಕಾಲ ದೇವಾಲಯಗಳ ಪುರೋಹಿತರು ನಡೆಸಿದ, ಚಾರ್‌ ಧಮ್‌ ಟ್ರಸ್ಟ್‌ ವಿಸರ್ಜನಾ ಹೋರಾಟಕ್ಕೂ ಎಎಪಿ ಬೆಂಬಲಿಸಿರುವುದನ್ನು ಕಾಣಬಹುದು.

ಕೃಪೆ: ದಿ ವೈರ್‌


ಇದನ್ನೂ ಓದಿರಿ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...