Homeಮುಖಪುಟಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

ಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

- Advertisement -
- Advertisement -

ಬಿಜೆಪಿಯ ಹಾದಿಯಲ್ಲೇ ಆಮ್‌ ಆದ್ಮಿ ಪಾರ್ಟಿ ಹೆಜ್ಜೆ ಇಡುತ್ತಿದ್ದು, ಮೃದು ಹಿಂದುತ್ವವನ್ನು ಎಎಪಿ ಪ್ರತಿಪಾದಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಇದಕ್ಕೆ ಇಂಬು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಠ್ಯಕ್ರಮ’ಕ್ಕೆ ಮಂಗಳವಾರ ಚಾಲನೆ ನೀಡಿದ್ದಾರೆ.

‘ದೇಶಭಕ್ತಿ’ ಪಠ್ಯಕ್ರಮದ ಮೂಲಕ ತನ್ನ ಮಹತ್ವಕಾಂಕ್ಷೆಯನ್ನು ಎಎಪಿ ಹೊರ ಹಾಕಿದೆ ಎಂದಿರುವ ‘ದಿ ವೈರ್‌’ ಸುದ್ದಿ ಜಾಲತಾಣ, ಛಾತ್ರಾಸಲ್ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್‌ ಅವರ ಜನ್ಮದಿನದಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಒಂದೇ ಮಾತರಂ’, ‘ಭಾರತ್‌ ಮಾತಾಕೀ ಜೈ’, ‘ಇನ್‌ಕ್ವಿಲಾಬ್‌ ಜಿಂದಾಬಾದ್‌’ ಘೋಷಣೆ ಮೊಳಗಿವೆ ಎಂದು ವರದಿ ಮಾಡಿದೆ.

2019ರ ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರೀವಾಲ್ ಈ ಯೋಜನೆಯನ್ನು ಘೋಷಣೆ ಮಾಡಿದ್ದರು.  2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ನೀಡಿದ 28 ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು.

ಹೊಸ ಯೋಜನೆಯ ಉದ್ಘಾಟನೆಯಲ್ಲಿ ಭಗತ್‌ಸಿಂಗ್‌ ಅವರ ತ್ಯಾಗ, ಬಲಿದಾನವನ್ನು ನೆನೆದು ಮಾತನಾಡಿರುವ ಕೇಜ್ರೀವಾಲ್‌, “ಭಗತ್‌ಸಿಂಗ್‌ ಅವರ ಜೀವನ ಚರಿತ್ರೆಯನ್ನು ಆಳವಾಗಿ ಓದಿದ್ದೇನೆ. ಅವರ ಜೀವನ ಚರಿತ್ರೆಯನ್ನು ಓದುತ್ತಾ ಹೋದರೆ ನೀವು ರೋಮಾಂಚಿತರಾಗುತ್ತೀರಿ. ವಿಭಿನ್ನ ಉತ್ಸಾಹ ಹಾಗೂ ಪ್ರೇರಣೆ ನಿಮ್ಮದಾಗುತ್ತದೆ. ಇದನ್ನೇ ದೇಶಭಕ್ತಿ ಎನ್ನುವುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದೆಹಲಿ ಕೋರ್ಟ್ ಆವರಣದಲ್ಲಿಯೇ ಗುಂಡಿನ ಕಾಳಗ: ಗ್ಯಾಂಗ್‌ಸ್ಟರ್ ಸೇರಿ ಮೂವರ ಕೊಲೆ

“ನಮ್ಮ ಮಕ್ಕಳು ಇಡುವ ಪ್ರತಿಯೊಂದು ಹೆಜ್ಜೆಯಲ್ಲೂ ದೇಶಭಕ್ತಿಯ ಅನುಭವವಾಗುವ ವಾತಾವರಣವನ್ನು ನಾವು ಸೃಷ್ಟಿಸಬೇಕು” ಎಂದಿರುವ ಅವರು, “ದೇಶಭಕ್ತಿ ಈ ದೇಶದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಇರುತ್ತದೆ. ಇದು ಹುಟ್ಟಿನೊಂದಿಗೆ ಬರುವ ವಿಷಯ. ಆದರೆ ಇದು ಎಚ್ಚರಗೊಳ್ಳಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯವಿದೆ” ಎಂದು ತಿಳಿಸಿದ್ದಾರೆ.

“74 ವರ್ಷಗಳಲ್ಲಿ ನಾವು ಬೌತವಿಜ್ಞಾನ, ರಾಸಾಯನ ವಿಜ್ಞಾನ, ಗಣಿತವನ್ನು ಎಲ್ಲ ಶಾಲೆಗಳಲ್ಲಿ ಕಲಿತೆವು. ನಮ್ಮ ಮಕ್ಕಳಿಗೆ ದೇಶಭಕ್ತಿಯನ್ನು ಶಾಲೆಯಲ್ಲಿ ಹೇಳಿಕೊಡಲಿಲ್ಲ. ಎಲ್ಲರೊಳಗೂ ದೇಶಭಕ್ತಿ ಇರುತ್ತದೆ, ಅದನ್ನು ಜಾಗೃತಗೊಳಿಸಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯ” ಎಂದು ಕೇಜ್ರೀವಾಲ್ ಹೇಳಿದ್ದಾರೆ.

“ನಾವು ಎಲ್ಲಾ ರೀತಿಯ ವೃತ್ತಿಪರರನ್ನು ತಯಾರಿಸಿದ್ದೇವೆ, ಆದರೆ ನಾವು ದೇಶಭಕ್ತ ವೃತ್ತಿಪರರನ್ನು ಬೆಳೆಸಿಲ್ಲ. ನಾವು ಇತರ ವೃತ್ತಿಗಳನ್ನು ಉತ್ತೇಜಿಸುವುದಿಲ್ಲ ಎಂದು ಹೇಳುತ್ತಿಲ್ಲ. ನಾವು ಎಲ್ಲಾ ರೀತಿಯ ಶಿಕ್ಷಣವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಆದರೆ, ನಾವು ಅವರಿಗೆ ದೇಶಭಕ್ತ ಮೌಲ್ಯಗಳ ಸ್ಪರ್ಶವನ್ನು ನೀಡುತ್ತೇವೆ. ನಾವು ದೇಶಭಕ್ತ ವೈದ್ಯರು, ವಕೀಲರು, ಎಂಜಿನಿಯರ್‌ಗಳು, ನಟರು, ಗಾಯಕರು, ಕಲಾವಿದರು, ಪತ್ರಕರ್ತರು ಹೀಗೆ ಎಲ್ಲರನ್ನೂ ಬೆಳೆಸುತ್ತೇವೆ” ಎಂದಿದ್ದಾರೆ.

“ಈ ಪಠ್ಯಕ್ರಮ ನರ್ಸರಿಯಿಂದ 12ನೇ ತರಗತಿಯವರೆಗೆ ಇರಲಿದೆ. ಪಠ್ಯಪುಸ್ತಕ ರೀತಿಯಲ್ಲಿ ಪಠ್ಯಕ್ರಮ ಇರುವುದಿಲ್ಲ, ಕೈಪಿಡಿ ಮಾದರಿಯಲ್ಲಿ ನೀಡುತ್ತಿದ್ದೇವೆ. ಮೂರು ಕೆಟಗರಿಯಲ್ಲಿ (ನರ್ಸರಿಯಿಂದ 5ನೇ ತರಗತಿಯವರೆಗೆ, 6ರಿಂದ 8ನೇ ತರಗತಿಯವರೆಗೆ ಹಾಗೂ 9ರಿಂದ 12ನೇ ತರಗತಿಯವರೆಗೆ) ಸ್ವಾತಂತ್ರ್ಯ ಹೋರಾಟಗಾರರ ಕಥನಗಳನ್ನು ಕಲಿಯಲಿದ್ದಾರೆ” ಎಂದು ತಿಳಿಸಿದರು.

ತರಗತಿಗೂ ಮುನ್ನ ‘ಧ್ಯಾನ’

ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮಾತನಾಡಿ, “ನರ್ಸರಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಕನಿಷ್ಠ 700-800 ಕಥೆಗಳನ್ನು ತಿಳಿಯುವರು, ಕನಿಷ್ಠ 500-600 ದೇಶಭಕ್ತಿ ಗೀತೆಗಳನ್ನು ಕಲಿಯುವರು. ಪ್ರತಿಯೊಂದು ತರಗತಿಯೂ ‘ದೇಶಭಕ್ತಿ ಧ್ಯಾನ’ (ಏಕಗ್ರತಾ ವ್ಯಾಯಾಮ) ಮಾಡುವ ಮೂಲಕ ಆರಂಭವಾಗಲಿವೆ. ಇದು ಐದು ನಿಮಿಷ ಇರಲಿದೆ. ಐವರು ದೇಶಪ್ರೇಮಿಗಳನ್ನು ನೆನೆಯುವುದು ಈ ಧ್ಯಾನದ ಉದ್ದೇಶ” ಎಂದಿದ್ದಾರೆ.

ಹಲವು ಯೋಜನೆಗಳ ಮೂಲಕ ಬಹುಸಂಖ್ಯಾತರನ್ನು ಓಲೈಕೆ ಮಾಡಲು ಎಎಪಿ ಮುಂದಾಗಿದೆ. ಕಳೆದೆರಡು ಚುನಾವಣೆಗಳಲ್ಲಿ ಆಮ್‌ ಆದ್ಮಿ ಪಕ್ಷವು ದಲಿತರು ಮತ್ತು ಮುಸ್ಲಿಮರ ಮತಗಳಿಂದ ಗೆದ್ದಿದೆ. ಜೊತೆಗೆ ಇತರ ವರ್ಗಗಳನ್ನು ಸೆಳೆಯಲು ಮೃದು ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ. ಚುನಾವಣಾ ವೇಳೆ ಕೇಜ್ರಿವಾಲ್‌ ಹನುಮಾನ್ ಚಾಲೀಸ್‌ ಪಠಿಸಿದ್ದರು. ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆದಿದ್ದರು.

ಅಯೋಧ್ಯೆ ಹಾಗೂ ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ‘ತಿರಂಗಯಾತ್ರೆ’ಯನ್ನು ಎಎಪಿ ಹಮ್ಮಿಕೊಂಡಿದ್ದನ್ನು ಗಮನಿಸಬಹುದು. ಉತ್ತರಖಾಂಡ್‌ ರಾಜ್ಯದಲ್ಲಿ ಕೇಜ್ರಿವಾಲ್ ಮಾತನಾಡುತ್ತಾ, ” ನಮ್ಮ ಪಕ್ಷಕ್ಕೆ ಮತ ಚಲಾಯಿಸಿದರೆ, ಉತ್ತರಖಾಂಡ್ ರಾಜ್ಯವನ್ನು ಹಿಂದೂಗಳ ಜಾಗತಿಕ ರಾಜಧಾನಿಯನ್ನಾಗಿ ಮಾಡುತ್ತೇವೆ” ಎಂದಿದ್ದರು. ಎರಡು ವರ್ಷಗಳ ಕಾಲ ದೇವಾಲಯಗಳ ಪುರೋಹಿತರು ನಡೆಸಿದ, ಚಾರ್‌ ಧಮ್‌ ಟ್ರಸ್ಟ್‌ ವಿಸರ್ಜನಾ ಹೋರಾಟಕ್ಕೂ ಎಎಪಿ ಬೆಂಬಲಿಸಿರುವುದನ್ನು ಕಾಣಬಹುದು.

ಕೃಪೆ: ದಿ ವೈರ್‌


ಇದನ್ನೂ ಓದಿರಿ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...