Homeಮುಖಪುಟಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

ಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

- Advertisement -
- Advertisement -

ಬಿಜೆಪಿಯ ಹಾದಿಯಲ್ಲೇ ಆಮ್‌ ಆದ್ಮಿ ಪಾರ್ಟಿ ಹೆಜ್ಜೆ ಇಡುತ್ತಿದ್ದು, ಮೃದು ಹಿಂದುತ್ವವನ್ನು ಎಎಪಿ ಪ್ರತಿಪಾದಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಇದಕ್ಕೆ ಇಂಬು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಠ್ಯಕ್ರಮ’ಕ್ಕೆ ಮಂಗಳವಾರ ಚಾಲನೆ ನೀಡಿದ್ದಾರೆ.

‘ದೇಶಭಕ್ತಿ’ ಪಠ್ಯಕ್ರಮದ ಮೂಲಕ ತನ್ನ ಮಹತ್ವಕಾಂಕ್ಷೆಯನ್ನು ಎಎಪಿ ಹೊರ ಹಾಕಿದೆ ಎಂದಿರುವ ‘ದಿ ವೈರ್‌’ ಸುದ್ದಿ ಜಾಲತಾಣ, ಛಾತ್ರಾಸಲ್ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್‌ ಅವರ ಜನ್ಮದಿನದಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಒಂದೇ ಮಾತರಂ’, ‘ಭಾರತ್‌ ಮಾತಾಕೀ ಜೈ’, ‘ಇನ್‌ಕ್ವಿಲಾಬ್‌ ಜಿಂದಾಬಾದ್‌’ ಘೋಷಣೆ ಮೊಳಗಿವೆ ಎಂದು ವರದಿ ಮಾಡಿದೆ.

2019ರ ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರೀವಾಲ್ ಈ ಯೋಜನೆಯನ್ನು ಘೋಷಣೆ ಮಾಡಿದ್ದರು.  2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ನೀಡಿದ 28 ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು.

ಹೊಸ ಯೋಜನೆಯ ಉದ್ಘಾಟನೆಯಲ್ಲಿ ಭಗತ್‌ಸಿಂಗ್‌ ಅವರ ತ್ಯಾಗ, ಬಲಿದಾನವನ್ನು ನೆನೆದು ಮಾತನಾಡಿರುವ ಕೇಜ್ರೀವಾಲ್‌, “ಭಗತ್‌ಸಿಂಗ್‌ ಅವರ ಜೀವನ ಚರಿತ್ರೆಯನ್ನು ಆಳವಾಗಿ ಓದಿದ್ದೇನೆ. ಅವರ ಜೀವನ ಚರಿತ್ರೆಯನ್ನು ಓದುತ್ತಾ ಹೋದರೆ ನೀವು ರೋಮಾಂಚಿತರಾಗುತ್ತೀರಿ. ವಿಭಿನ್ನ ಉತ್ಸಾಹ ಹಾಗೂ ಪ್ರೇರಣೆ ನಿಮ್ಮದಾಗುತ್ತದೆ. ಇದನ್ನೇ ದೇಶಭಕ್ತಿ ಎನ್ನುವುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದೆಹಲಿ ಕೋರ್ಟ್ ಆವರಣದಲ್ಲಿಯೇ ಗುಂಡಿನ ಕಾಳಗ: ಗ್ಯಾಂಗ್‌ಸ್ಟರ್ ಸೇರಿ ಮೂವರ ಕೊಲೆ

“ನಮ್ಮ ಮಕ್ಕಳು ಇಡುವ ಪ್ರತಿಯೊಂದು ಹೆಜ್ಜೆಯಲ್ಲೂ ದೇಶಭಕ್ತಿಯ ಅನುಭವವಾಗುವ ವಾತಾವರಣವನ್ನು ನಾವು ಸೃಷ್ಟಿಸಬೇಕು” ಎಂದಿರುವ ಅವರು, “ದೇಶಭಕ್ತಿ ಈ ದೇಶದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಇರುತ್ತದೆ. ಇದು ಹುಟ್ಟಿನೊಂದಿಗೆ ಬರುವ ವಿಷಯ. ಆದರೆ ಇದು ಎಚ್ಚರಗೊಳ್ಳಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯವಿದೆ” ಎಂದು ತಿಳಿಸಿದ್ದಾರೆ.

“74 ವರ್ಷಗಳಲ್ಲಿ ನಾವು ಬೌತವಿಜ್ಞಾನ, ರಾಸಾಯನ ವಿಜ್ಞಾನ, ಗಣಿತವನ್ನು ಎಲ್ಲ ಶಾಲೆಗಳಲ್ಲಿ ಕಲಿತೆವು. ನಮ್ಮ ಮಕ್ಕಳಿಗೆ ದೇಶಭಕ್ತಿಯನ್ನು ಶಾಲೆಯಲ್ಲಿ ಹೇಳಿಕೊಡಲಿಲ್ಲ. ಎಲ್ಲರೊಳಗೂ ದೇಶಭಕ್ತಿ ಇರುತ್ತದೆ, ಅದನ್ನು ಜಾಗೃತಗೊಳಿಸಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯ” ಎಂದು ಕೇಜ್ರೀವಾಲ್ ಹೇಳಿದ್ದಾರೆ.

“ನಾವು ಎಲ್ಲಾ ರೀತಿಯ ವೃತ್ತಿಪರರನ್ನು ತಯಾರಿಸಿದ್ದೇವೆ, ಆದರೆ ನಾವು ದೇಶಭಕ್ತ ವೃತ್ತಿಪರರನ್ನು ಬೆಳೆಸಿಲ್ಲ. ನಾವು ಇತರ ವೃತ್ತಿಗಳನ್ನು ಉತ್ತೇಜಿಸುವುದಿಲ್ಲ ಎಂದು ಹೇಳುತ್ತಿಲ್ಲ. ನಾವು ಎಲ್ಲಾ ರೀತಿಯ ಶಿಕ್ಷಣವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಆದರೆ, ನಾವು ಅವರಿಗೆ ದೇಶಭಕ್ತ ಮೌಲ್ಯಗಳ ಸ್ಪರ್ಶವನ್ನು ನೀಡುತ್ತೇವೆ. ನಾವು ದೇಶಭಕ್ತ ವೈದ್ಯರು, ವಕೀಲರು, ಎಂಜಿನಿಯರ್‌ಗಳು, ನಟರು, ಗಾಯಕರು, ಕಲಾವಿದರು, ಪತ್ರಕರ್ತರು ಹೀಗೆ ಎಲ್ಲರನ್ನೂ ಬೆಳೆಸುತ್ತೇವೆ” ಎಂದಿದ್ದಾರೆ.

“ಈ ಪಠ್ಯಕ್ರಮ ನರ್ಸರಿಯಿಂದ 12ನೇ ತರಗತಿಯವರೆಗೆ ಇರಲಿದೆ. ಪಠ್ಯಪುಸ್ತಕ ರೀತಿಯಲ್ಲಿ ಪಠ್ಯಕ್ರಮ ಇರುವುದಿಲ್ಲ, ಕೈಪಿಡಿ ಮಾದರಿಯಲ್ಲಿ ನೀಡುತ್ತಿದ್ದೇವೆ. ಮೂರು ಕೆಟಗರಿಯಲ್ಲಿ (ನರ್ಸರಿಯಿಂದ 5ನೇ ತರಗತಿಯವರೆಗೆ, 6ರಿಂದ 8ನೇ ತರಗತಿಯವರೆಗೆ ಹಾಗೂ 9ರಿಂದ 12ನೇ ತರಗತಿಯವರೆಗೆ) ಸ್ವಾತಂತ್ರ್ಯ ಹೋರಾಟಗಾರರ ಕಥನಗಳನ್ನು ಕಲಿಯಲಿದ್ದಾರೆ” ಎಂದು ತಿಳಿಸಿದರು.

ತರಗತಿಗೂ ಮುನ್ನ ‘ಧ್ಯಾನ’

ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮಾತನಾಡಿ, “ನರ್ಸರಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಕನಿಷ್ಠ 700-800 ಕಥೆಗಳನ್ನು ತಿಳಿಯುವರು, ಕನಿಷ್ಠ 500-600 ದೇಶಭಕ್ತಿ ಗೀತೆಗಳನ್ನು ಕಲಿಯುವರು. ಪ್ರತಿಯೊಂದು ತರಗತಿಯೂ ‘ದೇಶಭಕ್ತಿ ಧ್ಯಾನ’ (ಏಕಗ್ರತಾ ವ್ಯಾಯಾಮ) ಮಾಡುವ ಮೂಲಕ ಆರಂಭವಾಗಲಿವೆ. ಇದು ಐದು ನಿಮಿಷ ಇರಲಿದೆ. ಐವರು ದೇಶಪ್ರೇಮಿಗಳನ್ನು ನೆನೆಯುವುದು ಈ ಧ್ಯಾನದ ಉದ್ದೇಶ” ಎಂದಿದ್ದಾರೆ.

ಹಲವು ಯೋಜನೆಗಳ ಮೂಲಕ ಬಹುಸಂಖ್ಯಾತರನ್ನು ಓಲೈಕೆ ಮಾಡಲು ಎಎಪಿ ಮುಂದಾಗಿದೆ. ಕಳೆದೆರಡು ಚುನಾವಣೆಗಳಲ್ಲಿ ಆಮ್‌ ಆದ್ಮಿ ಪಕ್ಷವು ದಲಿತರು ಮತ್ತು ಮುಸ್ಲಿಮರ ಮತಗಳಿಂದ ಗೆದ್ದಿದೆ. ಜೊತೆಗೆ ಇತರ ವರ್ಗಗಳನ್ನು ಸೆಳೆಯಲು ಮೃದು ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ. ಚುನಾವಣಾ ವೇಳೆ ಕೇಜ್ರಿವಾಲ್‌ ಹನುಮಾನ್ ಚಾಲೀಸ್‌ ಪಠಿಸಿದ್ದರು. ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆದಿದ್ದರು.

ಅಯೋಧ್ಯೆ ಹಾಗೂ ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ‘ತಿರಂಗಯಾತ್ರೆ’ಯನ್ನು ಎಎಪಿ ಹಮ್ಮಿಕೊಂಡಿದ್ದನ್ನು ಗಮನಿಸಬಹುದು. ಉತ್ತರಖಾಂಡ್‌ ರಾಜ್ಯದಲ್ಲಿ ಕೇಜ್ರಿವಾಲ್ ಮಾತನಾಡುತ್ತಾ, ” ನಮ್ಮ ಪಕ್ಷಕ್ಕೆ ಮತ ಚಲಾಯಿಸಿದರೆ, ಉತ್ತರಖಾಂಡ್ ರಾಜ್ಯವನ್ನು ಹಿಂದೂಗಳ ಜಾಗತಿಕ ರಾಜಧಾನಿಯನ್ನಾಗಿ ಮಾಡುತ್ತೇವೆ” ಎಂದಿದ್ದರು. ಎರಡು ವರ್ಷಗಳ ಕಾಲ ದೇವಾಲಯಗಳ ಪುರೋಹಿತರು ನಡೆಸಿದ, ಚಾರ್‌ ಧಮ್‌ ಟ್ರಸ್ಟ್‌ ವಿಸರ್ಜನಾ ಹೋರಾಟಕ್ಕೂ ಎಎಪಿ ಬೆಂಬಲಿಸಿರುವುದನ್ನು ಕಾಣಬಹುದು.

ಕೃಪೆ: ದಿ ವೈರ್‌


ಇದನ್ನೂ ಓದಿರಿ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...