Homeಮುಖಪುಟಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

ಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

- Advertisement -
- Advertisement -

ಬಿಜೆಪಿಯ ಹಾದಿಯಲ್ಲೇ ಆಮ್‌ ಆದ್ಮಿ ಪಾರ್ಟಿ ಹೆಜ್ಜೆ ಇಡುತ್ತಿದ್ದು, ಮೃದು ಹಿಂದುತ್ವವನ್ನು ಎಎಪಿ ಪ್ರತಿಪಾದಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಇದಕ್ಕೆ ಇಂಬು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಠ್ಯಕ್ರಮ’ಕ್ಕೆ ಮಂಗಳವಾರ ಚಾಲನೆ ನೀಡಿದ್ದಾರೆ.

‘ದೇಶಭಕ್ತಿ’ ಪಠ್ಯಕ್ರಮದ ಮೂಲಕ ತನ್ನ ಮಹತ್ವಕಾಂಕ್ಷೆಯನ್ನು ಎಎಪಿ ಹೊರ ಹಾಕಿದೆ ಎಂದಿರುವ ‘ದಿ ವೈರ್‌’ ಸುದ್ದಿ ಜಾಲತಾಣ, ಛಾತ್ರಾಸಲ್ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್‌ ಅವರ ಜನ್ಮದಿನದಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಒಂದೇ ಮಾತರಂ’, ‘ಭಾರತ್‌ ಮಾತಾಕೀ ಜೈ’, ‘ಇನ್‌ಕ್ವಿಲಾಬ್‌ ಜಿಂದಾಬಾದ್‌’ ಘೋಷಣೆ ಮೊಳಗಿವೆ ಎಂದು ವರದಿ ಮಾಡಿದೆ.

2019ರ ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರೀವಾಲ್ ಈ ಯೋಜನೆಯನ್ನು ಘೋಷಣೆ ಮಾಡಿದ್ದರು.  2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ನೀಡಿದ 28 ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು.

ಹೊಸ ಯೋಜನೆಯ ಉದ್ಘಾಟನೆಯಲ್ಲಿ ಭಗತ್‌ಸಿಂಗ್‌ ಅವರ ತ್ಯಾಗ, ಬಲಿದಾನವನ್ನು ನೆನೆದು ಮಾತನಾಡಿರುವ ಕೇಜ್ರೀವಾಲ್‌, “ಭಗತ್‌ಸಿಂಗ್‌ ಅವರ ಜೀವನ ಚರಿತ್ರೆಯನ್ನು ಆಳವಾಗಿ ಓದಿದ್ದೇನೆ. ಅವರ ಜೀವನ ಚರಿತ್ರೆಯನ್ನು ಓದುತ್ತಾ ಹೋದರೆ ನೀವು ರೋಮಾಂಚಿತರಾಗುತ್ತೀರಿ. ವಿಭಿನ್ನ ಉತ್ಸಾಹ ಹಾಗೂ ಪ್ರೇರಣೆ ನಿಮ್ಮದಾಗುತ್ತದೆ. ಇದನ್ನೇ ದೇಶಭಕ್ತಿ ಎನ್ನುವುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದೆಹಲಿ ಕೋರ್ಟ್ ಆವರಣದಲ್ಲಿಯೇ ಗುಂಡಿನ ಕಾಳಗ: ಗ್ಯಾಂಗ್‌ಸ್ಟರ್ ಸೇರಿ ಮೂವರ ಕೊಲೆ

“ನಮ್ಮ ಮಕ್ಕಳು ಇಡುವ ಪ್ರತಿಯೊಂದು ಹೆಜ್ಜೆಯಲ್ಲೂ ದೇಶಭಕ್ತಿಯ ಅನುಭವವಾಗುವ ವಾತಾವರಣವನ್ನು ನಾವು ಸೃಷ್ಟಿಸಬೇಕು” ಎಂದಿರುವ ಅವರು, “ದೇಶಭಕ್ತಿ ಈ ದೇಶದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಇರುತ್ತದೆ. ಇದು ಹುಟ್ಟಿನೊಂದಿಗೆ ಬರುವ ವಿಷಯ. ಆದರೆ ಇದು ಎಚ್ಚರಗೊಳ್ಳಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯವಿದೆ” ಎಂದು ತಿಳಿಸಿದ್ದಾರೆ.

“74 ವರ್ಷಗಳಲ್ಲಿ ನಾವು ಬೌತವಿಜ್ಞಾನ, ರಾಸಾಯನ ವಿಜ್ಞಾನ, ಗಣಿತವನ್ನು ಎಲ್ಲ ಶಾಲೆಗಳಲ್ಲಿ ಕಲಿತೆವು. ನಮ್ಮ ಮಕ್ಕಳಿಗೆ ದೇಶಭಕ್ತಿಯನ್ನು ಶಾಲೆಯಲ್ಲಿ ಹೇಳಿಕೊಡಲಿಲ್ಲ. ಎಲ್ಲರೊಳಗೂ ದೇಶಭಕ್ತಿ ಇರುತ್ತದೆ, ಅದನ್ನು ಜಾಗೃತಗೊಳಿಸಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯ” ಎಂದು ಕೇಜ್ರೀವಾಲ್ ಹೇಳಿದ್ದಾರೆ.

“ನಾವು ಎಲ್ಲಾ ರೀತಿಯ ವೃತ್ತಿಪರರನ್ನು ತಯಾರಿಸಿದ್ದೇವೆ, ಆದರೆ ನಾವು ದೇಶಭಕ್ತ ವೃತ್ತಿಪರರನ್ನು ಬೆಳೆಸಿಲ್ಲ. ನಾವು ಇತರ ವೃತ್ತಿಗಳನ್ನು ಉತ್ತೇಜಿಸುವುದಿಲ್ಲ ಎಂದು ಹೇಳುತ್ತಿಲ್ಲ. ನಾವು ಎಲ್ಲಾ ರೀತಿಯ ಶಿಕ್ಷಣವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಆದರೆ, ನಾವು ಅವರಿಗೆ ದೇಶಭಕ್ತ ಮೌಲ್ಯಗಳ ಸ್ಪರ್ಶವನ್ನು ನೀಡುತ್ತೇವೆ. ನಾವು ದೇಶಭಕ್ತ ವೈದ್ಯರು, ವಕೀಲರು, ಎಂಜಿನಿಯರ್‌ಗಳು, ನಟರು, ಗಾಯಕರು, ಕಲಾವಿದರು, ಪತ್ರಕರ್ತರು ಹೀಗೆ ಎಲ್ಲರನ್ನೂ ಬೆಳೆಸುತ್ತೇವೆ” ಎಂದಿದ್ದಾರೆ.

“ಈ ಪಠ್ಯಕ್ರಮ ನರ್ಸರಿಯಿಂದ 12ನೇ ತರಗತಿಯವರೆಗೆ ಇರಲಿದೆ. ಪಠ್ಯಪುಸ್ತಕ ರೀತಿಯಲ್ಲಿ ಪಠ್ಯಕ್ರಮ ಇರುವುದಿಲ್ಲ, ಕೈಪಿಡಿ ಮಾದರಿಯಲ್ಲಿ ನೀಡುತ್ತಿದ್ದೇವೆ. ಮೂರು ಕೆಟಗರಿಯಲ್ಲಿ (ನರ್ಸರಿಯಿಂದ 5ನೇ ತರಗತಿಯವರೆಗೆ, 6ರಿಂದ 8ನೇ ತರಗತಿಯವರೆಗೆ ಹಾಗೂ 9ರಿಂದ 12ನೇ ತರಗತಿಯವರೆಗೆ) ಸ್ವಾತಂತ್ರ್ಯ ಹೋರಾಟಗಾರರ ಕಥನಗಳನ್ನು ಕಲಿಯಲಿದ್ದಾರೆ” ಎಂದು ತಿಳಿಸಿದರು.

ತರಗತಿಗೂ ಮುನ್ನ ‘ಧ್ಯಾನ’

ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮಾತನಾಡಿ, “ನರ್ಸರಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಕನಿಷ್ಠ 700-800 ಕಥೆಗಳನ್ನು ತಿಳಿಯುವರು, ಕನಿಷ್ಠ 500-600 ದೇಶಭಕ್ತಿ ಗೀತೆಗಳನ್ನು ಕಲಿಯುವರು. ಪ್ರತಿಯೊಂದು ತರಗತಿಯೂ ‘ದೇಶಭಕ್ತಿ ಧ್ಯಾನ’ (ಏಕಗ್ರತಾ ವ್ಯಾಯಾಮ) ಮಾಡುವ ಮೂಲಕ ಆರಂಭವಾಗಲಿವೆ. ಇದು ಐದು ನಿಮಿಷ ಇರಲಿದೆ. ಐವರು ದೇಶಪ್ರೇಮಿಗಳನ್ನು ನೆನೆಯುವುದು ಈ ಧ್ಯಾನದ ಉದ್ದೇಶ” ಎಂದಿದ್ದಾರೆ.

ಹಲವು ಯೋಜನೆಗಳ ಮೂಲಕ ಬಹುಸಂಖ್ಯಾತರನ್ನು ಓಲೈಕೆ ಮಾಡಲು ಎಎಪಿ ಮುಂದಾಗಿದೆ. ಕಳೆದೆರಡು ಚುನಾವಣೆಗಳಲ್ಲಿ ಆಮ್‌ ಆದ್ಮಿ ಪಕ್ಷವು ದಲಿತರು ಮತ್ತು ಮುಸ್ಲಿಮರ ಮತಗಳಿಂದ ಗೆದ್ದಿದೆ. ಜೊತೆಗೆ ಇತರ ವರ್ಗಗಳನ್ನು ಸೆಳೆಯಲು ಮೃದು ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ. ಚುನಾವಣಾ ವೇಳೆ ಕೇಜ್ರಿವಾಲ್‌ ಹನುಮಾನ್ ಚಾಲೀಸ್‌ ಪಠಿಸಿದ್ದರು. ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆದಿದ್ದರು.

ಅಯೋಧ್ಯೆ ಹಾಗೂ ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ‘ತಿರಂಗಯಾತ್ರೆ’ಯನ್ನು ಎಎಪಿ ಹಮ್ಮಿಕೊಂಡಿದ್ದನ್ನು ಗಮನಿಸಬಹುದು. ಉತ್ತರಖಾಂಡ್‌ ರಾಜ್ಯದಲ್ಲಿ ಕೇಜ್ರಿವಾಲ್ ಮಾತನಾಡುತ್ತಾ, ” ನಮ್ಮ ಪಕ್ಷಕ್ಕೆ ಮತ ಚಲಾಯಿಸಿದರೆ, ಉತ್ತರಖಾಂಡ್ ರಾಜ್ಯವನ್ನು ಹಿಂದೂಗಳ ಜಾಗತಿಕ ರಾಜಧಾನಿಯನ್ನಾಗಿ ಮಾಡುತ್ತೇವೆ” ಎಂದಿದ್ದರು. ಎರಡು ವರ್ಷಗಳ ಕಾಲ ದೇವಾಲಯಗಳ ಪುರೋಹಿತರು ನಡೆಸಿದ, ಚಾರ್‌ ಧಮ್‌ ಟ್ರಸ್ಟ್‌ ವಿಸರ್ಜನಾ ಹೋರಾಟಕ್ಕೂ ಎಎಪಿ ಬೆಂಬಲಿಸಿರುವುದನ್ನು ಕಾಣಬಹುದು.

ಕೃಪೆ: ದಿ ವೈರ್‌


ಇದನ್ನೂ ಓದಿರಿ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...