Homeಮುಖಪುಟಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

ಆಪ್‌ನ ‘ಮೃದು ಹಿಂದುತ್ವ’: ‘ದೇಶಭಕ್ತಿ ಪಠ್ಯಕ್ರಮ’ ಉದ್ಘಾಟಿಸಿದ ದೆಹಲಿ ಸರ್ಕಾರ

- Advertisement -
- Advertisement -

ಬಿಜೆಪಿಯ ಹಾದಿಯಲ್ಲೇ ಆಮ್‌ ಆದ್ಮಿ ಪಾರ್ಟಿ ಹೆಜ್ಜೆ ಇಡುತ್ತಿದ್ದು, ಮೃದು ಹಿಂದುತ್ವವನ್ನು ಎಎಪಿ ಪ್ರತಿಪಾದಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಇದಕ್ಕೆ ಇಂಬು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಠ್ಯಕ್ರಮ’ಕ್ಕೆ ಮಂಗಳವಾರ ಚಾಲನೆ ನೀಡಿದ್ದಾರೆ.

‘ದೇಶಭಕ್ತಿ’ ಪಠ್ಯಕ್ರಮದ ಮೂಲಕ ತನ್ನ ಮಹತ್ವಕಾಂಕ್ಷೆಯನ್ನು ಎಎಪಿ ಹೊರ ಹಾಕಿದೆ ಎಂದಿರುವ ‘ದಿ ವೈರ್‌’ ಸುದ್ದಿ ಜಾಲತಾಣ, ಛಾತ್ರಾಸಲ್ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್‌ಸಿಂಗ್‌ ಅವರ ಜನ್ಮದಿನದಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಒಂದೇ ಮಾತರಂ’, ‘ಭಾರತ್‌ ಮಾತಾಕೀ ಜೈ’, ‘ಇನ್‌ಕ್ವಿಲಾಬ್‌ ಜಿಂದಾಬಾದ್‌’ ಘೋಷಣೆ ಮೊಳಗಿವೆ ಎಂದು ವರದಿ ಮಾಡಿದೆ.

2019ರ ಸ್ವಾತಂತ್ರ್ಯ ದಿನಾಚರಣೆಯಂದು ಅರವಿಂದ್ ಕೇಜ್ರೀವಾಲ್ ಈ ಯೋಜನೆಯನ್ನು ಘೋಷಣೆ ಮಾಡಿದ್ದರು.  2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ನೀಡಿದ 28 ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು.

ಹೊಸ ಯೋಜನೆಯ ಉದ್ಘಾಟನೆಯಲ್ಲಿ ಭಗತ್‌ಸಿಂಗ್‌ ಅವರ ತ್ಯಾಗ, ಬಲಿದಾನವನ್ನು ನೆನೆದು ಮಾತನಾಡಿರುವ ಕೇಜ್ರೀವಾಲ್‌, “ಭಗತ್‌ಸಿಂಗ್‌ ಅವರ ಜೀವನ ಚರಿತ್ರೆಯನ್ನು ಆಳವಾಗಿ ಓದಿದ್ದೇನೆ. ಅವರ ಜೀವನ ಚರಿತ್ರೆಯನ್ನು ಓದುತ್ತಾ ಹೋದರೆ ನೀವು ರೋಮಾಂಚಿತರಾಗುತ್ತೀರಿ. ವಿಭಿನ್ನ ಉತ್ಸಾಹ ಹಾಗೂ ಪ್ರೇರಣೆ ನಿಮ್ಮದಾಗುತ್ತದೆ. ಇದನ್ನೇ ದೇಶಭಕ್ತಿ ಎನ್ನುವುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ದೆಹಲಿ ಕೋರ್ಟ್ ಆವರಣದಲ್ಲಿಯೇ ಗುಂಡಿನ ಕಾಳಗ: ಗ್ಯಾಂಗ್‌ಸ್ಟರ್ ಸೇರಿ ಮೂವರ ಕೊಲೆ

“ನಮ್ಮ ಮಕ್ಕಳು ಇಡುವ ಪ್ರತಿಯೊಂದು ಹೆಜ್ಜೆಯಲ್ಲೂ ದೇಶಭಕ್ತಿಯ ಅನುಭವವಾಗುವ ವಾತಾವರಣವನ್ನು ನಾವು ಸೃಷ್ಟಿಸಬೇಕು” ಎಂದಿರುವ ಅವರು, “ದೇಶಭಕ್ತಿ ಈ ದೇಶದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಇರುತ್ತದೆ. ಇದು ಹುಟ್ಟಿನೊಂದಿಗೆ ಬರುವ ವಿಷಯ. ಆದರೆ ಇದು ಎಚ್ಚರಗೊಳ್ಳಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯವಿದೆ” ಎಂದು ತಿಳಿಸಿದ್ದಾರೆ.

“74 ವರ್ಷಗಳಲ್ಲಿ ನಾವು ಬೌತವಿಜ್ಞಾನ, ರಾಸಾಯನ ವಿಜ್ಞಾನ, ಗಣಿತವನ್ನು ಎಲ್ಲ ಶಾಲೆಗಳಲ್ಲಿ ಕಲಿತೆವು. ನಮ್ಮ ಮಕ್ಕಳಿಗೆ ದೇಶಭಕ್ತಿಯನ್ನು ಶಾಲೆಯಲ್ಲಿ ಹೇಳಿಕೊಡಲಿಲ್ಲ. ಎಲ್ಲರೊಳಗೂ ದೇಶಭಕ್ತಿ ಇರುತ್ತದೆ, ಅದನ್ನು ಜಾಗೃತಗೊಳಿಸಲು ಮೇಲೆತ್ತುವ ಕಾರ್ಯಕ್ರಮ (push) ಅಗತ್ಯ” ಎಂದು ಕೇಜ್ರೀವಾಲ್ ಹೇಳಿದ್ದಾರೆ.

“ನಾವು ಎಲ್ಲಾ ರೀತಿಯ ವೃತ್ತಿಪರರನ್ನು ತಯಾರಿಸಿದ್ದೇವೆ, ಆದರೆ ನಾವು ದೇಶಭಕ್ತ ವೃತ್ತಿಪರರನ್ನು ಬೆಳೆಸಿಲ್ಲ. ನಾವು ಇತರ ವೃತ್ತಿಗಳನ್ನು ಉತ್ತೇಜಿಸುವುದಿಲ್ಲ ಎಂದು ಹೇಳುತ್ತಿಲ್ಲ. ನಾವು ಎಲ್ಲಾ ರೀತಿಯ ಶಿಕ್ಷಣವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಆದರೆ, ನಾವು ಅವರಿಗೆ ದೇಶಭಕ್ತ ಮೌಲ್ಯಗಳ ಸ್ಪರ್ಶವನ್ನು ನೀಡುತ್ತೇವೆ. ನಾವು ದೇಶಭಕ್ತ ವೈದ್ಯರು, ವಕೀಲರು, ಎಂಜಿನಿಯರ್‌ಗಳು, ನಟರು, ಗಾಯಕರು, ಕಲಾವಿದರು, ಪತ್ರಕರ್ತರು ಹೀಗೆ ಎಲ್ಲರನ್ನೂ ಬೆಳೆಸುತ್ತೇವೆ” ಎಂದಿದ್ದಾರೆ.

“ಈ ಪಠ್ಯಕ್ರಮ ನರ್ಸರಿಯಿಂದ 12ನೇ ತರಗತಿಯವರೆಗೆ ಇರಲಿದೆ. ಪಠ್ಯಪುಸ್ತಕ ರೀತಿಯಲ್ಲಿ ಪಠ್ಯಕ್ರಮ ಇರುವುದಿಲ್ಲ, ಕೈಪಿಡಿ ಮಾದರಿಯಲ್ಲಿ ನೀಡುತ್ತಿದ್ದೇವೆ. ಮೂರು ಕೆಟಗರಿಯಲ್ಲಿ (ನರ್ಸರಿಯಿಂದ 5ನೇ ತರಗತಿಯವರೆಗೆ, 6ರಿಂದ 8ನೇ ತರಗತಿಯವರೆಗೆ ಹಾಗೂ 9ರಿಂದ 12ನೇ ತರಗತಿಯವರೆಗೆ) ಸ್ವಾತಂತ್ರ್ಯ ಹೋರಾಟಗಾರರ ಕಥನಗಳನ್ನು ಕಲಿಯಲಿದ್ದಾರೆ” ಎಂದು ತಿಳಿಸಿದರು.

ತರಗತಿಗೂ ಮುನ್ನ ‘ಧ್ಯಾನ’

ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಮಾತನಾಡಿ, “ನರ್ಸರಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಕನಿಷ್ಠ 700-800 ಕಥೆಗಳನ್ನು ತಿಳಿಯುವರು, ಕನಿಷ್ಠ 500-600 ದೇಶಭಕ್ತಿ ಗೀತೆಗಳನ್ನು ಕಲಿಯುವರು. ಪ್ರತಿಯೊಂದು ತರಗತಿಯೂ ‘ದೇಶಭಕ್ತಿ ಧ್ಯಾನ’ (ಏಕಗ್ರತಾ ವ್ಯಾಯಾಮ) ಮಾಡುವ ಮೂಲಕ ಆರಂಭವಾಗಲಿವೆ. ಇದು ಐದು ನಿಮಿಷ ಇರಲಿದೆ. ಐವರು ದೇಶಪ್ರೇಮಿಗಳನ್ನು ನೆನೆಯುವುದು ಈ ಧ್ಯಾನದ ಉದ್ದೇಶ” ಎಂದಿದ್ದಾರೆ.

ಹಲವು ಯೋಜನೆಗಳ ಮೂಲಕ ಬಹುಸಂಖ್ಯಾತರನ್ನು ಓಲೈಕೆ ಮಾಡಲು ಎಎಪಿ ಮುಂದಾಗಿದೆ. ಕಳೆದೆರಡು ಚುನಾವಣೆಗಳಲ್ಲಿ ಆಮ್‌ ಆದ್ಮಿ ಪಕ್ಷವು ದಲಿತರು ಮತ್ತು ಮುಸ್ಲಿಮರ ಮತಗಳಿಂದ ಗೆದ್ದಿದೆ. ಜೊತೆಗೆ ಇತರ ವರ್ಗಗಳನ್ನು ಸೆಳೆಯಲು ಮೃದು ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ. ಚುನಾವಣಾ ವೇಳೆ ಕೇಜ್ರಿವಾಲ್‌ ಹನುಮಾನ್ ಚಾಲೀಸ್‌ ಪಠಿಸಿದ್ದರು. ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆದಿದ್ದರು.

ಅಯೋಧ್ಯೆ ಹಾಗೂ ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ‘ತಿರಂಗಯಾತ್ರೆ’ಯನ್ನು ಎಎಪಿ ಹಮ್ಮಿಕೊಂಡಿದ್ದನ್ನು ಗಮನಿಸಬಹುದು. ಉತ್ತರಖಾಂಡ್‌ ರಾಜ್ಯದಲ್ಲಿ ಕೇಜ್ರಿವಾಲ್ ಮಾತನಾಡುತ್ತಾ, ” ನಮ್ಮ ಪಕ್ಷಕ್ಕೆ ಮತ ಚಲಾಯಿಸಿದರೆ, ಉತ್ತರಖಾಂಡ್ ರಾಜ್ಯವನ್ನು ಹಿಂದೂಗಳ ಜಾಗತಿಕ ರಾಜಧಾನಿಯನ್ನಾಗಿ ಮಾಡುತ್ತೇವೆ” ಎಂದಿದ್ದರು. ಎರಡು ವರ್ಷಗಳ ಕಾಲ ದೇವಾಲಯಗಳ ಪುರೋಹಿತರು ನಡೆಸಿದ, ಚಾರ್‌ ಧಮ್‌ ಟ್ರಸ್ಟ್‌ ವಿಸರ್ಜನಾ ಹೋರಾಟಕ್ಕೂ ಎಎಪಿ ಬೆಂಬಲಿಸಿರುವುದನ್ನು ಕಾಣಬಹುದು.

ಕೃಪೆ: ದಿ ವೈರ್‌


ಇದನ್ನೂ ಓದಿರಿ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...