Homeಮುಖಪುಟಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ಸುಶಾಂತ್‌ ಸಿಂಗ್ ಸಾವಿನ ಪ್ರಕರಣದಲ್ಲಿ ನಟಿ ರಿಯಾ ವಿರುದ್ದ ವಿಕೃತ ಮತ್ತು ದಾರಿ ತಪ್ಪಿಸುವ ವರದಿ ಮಾಡುತ್ತಿದ್ದಾರೆಂದು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆಯಾಗಿತ್ತು.

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮತ್ತು ಅವರ ಚಾನೆಲ್ “ವಿಕೃತ ಮತ್ತು ದಾರಿತಪ್ಪಿಸುವ ಸಂಗತಿಗಳನ್ನು” ವರದಿ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಹೈಕೋರ್ಟ್ ಒಪ್ಪಿದೆ.

ಅರ್ನಬ್ ವರದಿಯು ನಟಿ ರಿಯಾ ಚಕ್ರವರ್ತಿ ಅವರ ನ್ಯಾಯಯುತ ವಿಚಾರಣೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: Fact check: ಅರ್ನಬ್ ಗೋಸ್ವಾಮಿ ವಿಡಿಯೋ ದಾಳಿಗೂ ಮುನ್ನವೇ ಮಾಡಲಾಗಿತ್ತೇ?

ಅರ್ಜಿಯು, “ಅಪರಾಧ ತನಿಖೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳ ವರದಿ ಅಥವಾ ಪ್ರಸಾರವನ್ನು ನಿಯಂತ್ರಿಸುವ ನಿಯಮ ಮತ್ತು ಮಾರ್ಗಸೂಚಿಗಳನ್ನು ರೂಪಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ” ಕೋರಿದೆ.

ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗಿದ್ದು, ಅಪರಾಧ ತನಿಖೆಗಳ ವರದಿಗಳನ್ನು ನಿಯಂತ್ರಿಸಲು ಯಾವ ರೀತಿಯ ನಿಯಮಗಳನ್ನು ರೂಪಿಸಬಹುದ ಎಂಬ ಸಲಹೆಗಳೊಂದಿಗೆ ಅರ್ಜಿದಾರರನ್ನು ಮುಂದಿನ ದಿನಾಂಕ – ನವೆಂಬರ್ 27 ರಂದು ಬರಲು ಕೇಳಿಕೊಂಡರು.

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ “ಪೂರ್ವಾಗ್ರಹ ವರದಿ” ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದ್ದು, ಅರ್ನಾಬ್ ಮತ್ತು ಅವರ ಚಾನೆಲ್ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಮನವಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಕಟಿಸಿ ಮುಸ್ಲಿಮರ ಭಾವನೆಗೆ ಧಕ್ಕೆ: ಬೇಷರತ್‌ ಕ್ಷಮೆಯಾಚಿಸಿದ ಅರ್ನಬ್‌ ಗೋಸ್ವಾಮಿ

ರಿಯಾ ಚಕ್ರವರ್ತಿಗೆ ಕಿರುಕುಳ ನೀಡುತ್ತಿದ್ದು ಮಾತ್ರವಲ್ಲದೆ, ಅವರ ವಿರುದ್ಧ ಸಾರ್ವಜನಿಕವಾಗಿ ದುರಾಭಿಪ್ರಾಯ ಬರುವಂತೆ ಮಾಡಿ, ಅರ್ನಾಬ್ ಮತ್ತು ಅವರ ಟಿವಿ ಚಾನೆಲ್ “ನ್ಯಾಯಾಧೀಶರು, ತೀರ್ಪುಗಾರರು ಮತ್ತು ಮರಣದಂಡನೆಕಾರ” ಎಂಬ ರೀತಿ ವರ್ತಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

“ಕುತೂಹಲಕಾರಿ ಸಂಗತಿಯೆಂದರೆ, ಪ್ರಸ್ತುತ ಕ್ರಿಮಿನಲ್ ತನಿಖೆಯಲ್ಲಿ ಯಾವುದೇ ತನಿಖಾ ಸಂಸ್ಥೆಯೂ ಕೊಲೆ ಆರೋಪವನ್ನು ತನಿಖೆ ಮಾಡುತ್ತಿಲ್ಲ. ಮೃತನ ತಂದೆ ನೀಡಿದ ದೂರಿನ ಮೇರೆಗೆ ಪಾಟ್ನಾ ಪೊಲೀಸರು ದಾಖಲಿಸಿದ ಎಫ್‌ಐಆರ್‌ ಕೂಡ ಆತ್ಮಹತ್ಯೆ ಮತ್ತು ಇತರ ದಂಡ ಸಂಹಿತೆಯಲ್ಲಿ ದಾಖಲಾಗಿದೆ. ಅಷ್ಟೇ ಅಲ್ಲದೆ ಏಮ್ಸ್ ವರದಿಯ ಪ್ರಕಾರ, ಸಾವಿಗೆ ಕಾರಣ ಆತ್ಮಹತ್ಯೆಯೆ ಹೊರತು ಕೊಲೆ ಅಲ್ಲ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

“ತನಿಖಾ ಪತ್ರಿಕೋದ್ಯಮ ಮತ್ತು / ಅಥವಾ ಅನಾಮಧೇಯ ಮೂಲಗಳಿಂದ ಪಡೆದ ಮಾಹಿತಿಯ ಹೆಸರಿನಲ್ಲಿ ಯಾವುದೇ ಕ್ರಿಮಿನಲ್ ತನಿಖೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ಸುದ್ದಿಗಳನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದನ್ನು ತಡೆಯುವಂತೆ ನಿರ್ದೇಶನ ನೀಡಲು ಅರ್ಜಿ ಕೋರಿದೆ.


ಇದನ್ನೂ ಓದಿ: ಟಿವಿ ಡಿಬೆಟ್‌ನಲ್ಲಿ ಊಟ ಮಾಡಿದ ಪ್ಯಾನೆಲಿಸ್ಟ್; ಟ್ರೋಲ್ ಆದ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...