Homeಮುಖಪುಟಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಒಳಗೆ ರಂಜಾನ್ ಸಮಯದಲ್ಲಿ ಐವತ್ತು ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ, ಇದನ್ನು ಒಂದು ವರ್ಷದಿಂದ ಮುಚ್ಚಲಾಗಿತ್ತು.

- Advertisement -
- Advertisement -

ಇಂದು ದೆಹಲಿ ಹೈಕೋರ್ಟ್, ನಿಜಾಮುದ್ದೀನ್ ಮರ್ಕಜ್‌ನ ಮೊದಲ ಮಹಡಿಯಲ್ಲಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಸಲ್ಲಿಸಲು ಮತ್ತು ಪ್ರತಿ ಬಾರಿ 50 ಜನರು ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತು. ಆದರೆ ವಿಪತ್ತು ನಿರ್ವಹಣಾ ನಿಯಮಗಳಿಗೆ ಒಳಪಟ್ಟು ನಮಾಜ್ ಮಾಡಲು ಸೂಚಿಸಿದೆ.

ನಿಯಮಗಳ ಪ್ರಕಾರ, ಧಾರ್ಮಿಕ ಕೂಟಗಳನ್ನು ನಿಷೇಧಿಸಲಾಗಿದೆ. ಆದರೆ ಪೂಜಾ ಸ್ಥಳಗಳನ್ನು ಮುಚ್ಚಲು “ನಿರ್ದೇಶನ” ಇಲ್ಲ ಎಂದು ನ್ಯಾಯಾಲಯವು ಗಮನಿಸಿತು. “ಪರಿಸ್ಥಿತಿ ದಿನದಿಂದ ದಿನಕ್ಕೆ ಕಠೋರವಾಗುತ್ತಿದೆ. ಆದರೆ ಎಲ್ಲಾ ಧಾರ್ಮಿಕ ಸ್ಥಳಗಳು ತೆರೆದಿರುವುದರಿಂದ ಮತ್ತು ನಿಜಾಮುದ್ದೀನ್ ಮರ್ಕಜ್ ಕೂಡಾ ಪೂಜಾ ಸ್ಥಳವಾಗಿರುವುದರಿಂದ ಇದನ್ನು ಸಹ ತೆರೆಯಬೇಕಾಗಿತ್ತು. ಈಗ ಅವಕಾಶವನ್ನು ನೀಡಿದ್ದೇವೆ ಎಂದು ಹೈಕೋರ್ಟ್ ಹೇಳಿದೆ.

ದಕ್ಷಿಣ ದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಮಸೀದಿ ಬಂಗ್ಲೆ ವಾಲಿಯನ್ನು ಕಳೆದ ಮಾರ್ಚ್‌ನಲ್ಲಿ ಮುಚ್ಚಲಾಯಿತು. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಶುರುವಾದ ಸಂದರ್ಭದಲ್ಲಿ ನಡೆದ ತಬ್ಲಿಘಿ ಜಮಾಅತ್ ಪಂಥದ ಸಮಾವೇಶದ ಬಗ್ಗೆ ಭಾರಿ ವಿವಾದ ಉಂಟಾಗಿತ್ತು. ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ತಬ್ಲಿಘಿ ಸದಸ್ಯರನ್ನು ದೂಷಿಸಿ ಅನೇಕ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ರಂಜಾನ್ ಸಮಯದಲ್ಲಿ ಮರ್ಕಜ್ ಒಳಗೆ ಜನರು ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ದೆಹಲಿ ವಕ್ಫ್ ಮಂಡಳಿ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು.
ಏಪ್ರಿಲ್ 12ರಿಂದ ಈ ಕುರಿತಂತೆ ವಿಚಾರಣೆ ನಡೆದಿದೆ. ಕೇಂದ್ರವು ಮೊದಲು ಮರ್ಕಜ್‌ನಲ್ಲಿ ನಮಾಜ್‌ಗೆ ಅನುಮತಿಸಬಹುದು ಎಂದು ಒಪ್ಪಿಕೊಂಡಿತು. ಆದರೆ ಒಂದು ದಿನದ ನಂತರ, ರಾಜಧಾನಿಯಲ್ಲಿ ಹೊಸ ವಿಪತ್ತು ನಿಯಮಗಳ ಅಡಿಯಲ್ಲಿ ಎಲ್ಲಾ ಧಾರ್ಮಿಕ ಸಭೆಗಳನ್ನು ನಿಷೇಧಿಸಲಾಗಿರುವುದರಿಂದ ಮಸೀದಿಯಲ್ಲಿ ಯಾರನ್ನೂ ಅನುಮತಿಸಬಾರದು ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.

ಪೊಲೀಸರು ಪರಿಶೀಲಿಸಿದ 200 ಜನರ ಪಟ್ಟಿಯಿಂದ ಒಂದೇ ಸಮಯದಲ್ಲಿ ಕೇವಲ 20 ಜನರಿಗೆ ಪ್ರಾರ್ಥನೆಗಾಗಿ ಸಂಕೀರ್ಣವನ್ನು ಪ್ರವೇಶಿಸಲು ಅವಕಾಶ ನೀಡಬಹುದು ಎಂಬ ಕೇಂದ್ರದ ಹೇಳಿಕೆಗೆ ನ್ಯಾಯಾಲಯ ತೀವ್ರವಾಗಿ ಆಕ್ಷೇಪಿಸಿತ್ತು.

“ನಿಮ್ಮ ಅಧಿಸೂಚನೆಗಳಲ್ಲಿ, ಧಾರ್ಮಿಕ ಸ್ಥಳಗಳಿಗಾಗಿ ಒಂದು ಬಾರಿಗೆ 20 ಜನಕ್ಕೆ ಮೊಟಕುಗೊಳಿಸಿದ್ದೀರಾ?’ ಎಂದು ಪ್ರಶ್ನಿಸಿದ್ದ ಕೋರ್ಟ್, ಕೋವಿಡ್ ನಿಯಮಗಳನ್ನು ಧಿಕ್ಕರಿಸಿ ಉತ್ತರಾಖಂಡದ ಹರಿದ್ವಾರದ ಮಹಾಕುಂಭ ಮೇಳದಲ್ಲಿ ಭಾರಿ ಜನಸಂದಣಿ ಸೇರಲು ಅನುಮತಿ ನೀಡಿದ ಕ್ರಮವನ್ನು ಉಲ್ಲೇಖಿಸಿದ್ದ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ವಕ್ಫ್ ಮಂಡಳಿಯು ಕುಂಭ ಮೇಳ ನಡೆಯುತ್ತಿರುವುದನ್ನು ತನ್ನ ಒಂದು ವಾದದಲ್ಲಿ ಉಲ್ಲೇಖಿಸಿ, ಈ ಎರಡು ಮಾನದಂಡಗಳನ್ನು ಪ್ರಶ್ನೆ ಮಾಡಿತ್ತು.

ಆದರೆ ಮೊನ್ನೆ ಬಾಂಬೇ ಹೈಕೋರ್ಟ್ ಅಲ್ಲಿನ ಜುಮ್ಮಾ ಮಸೀದಿಯಲ್ಲಿ 50 ಜನರಿಗೂ ನಮಾಜ್‌ಗೆ ಅನುಮತಿ ನೀಡಿಲ್ಲ ಎಂಬುದು ಚರ್ಚೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...