Homeಮುಖಪುಟಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಒಳಗೆ ರಂಜಾನ್ ಸಮಯದಲ್ಲಿ ಐವತ್ತು ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ, ಇದನ್ನು ಒಂದು ವರ್ಷದಿಂದ ಮುಚ್ಚಲಾಗಿತ್ತು.

- Advertisement -
- Advertisement -

ಇಂದು ದೆಹಲಿ ಹೈಕೋರ್ಟ್, ನಿಜಾಮುದ್ದೀನ್ ಮರ್ಕಜ್‌ನ ಮೊದಲ ಮಹಡಿಯಲ್ಲಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಸಲ್ಲಿಸಲು ಮತ್ತು ಪ್ರತಿ ಬಾರಿ 50 ಜನರು ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತು. ಆದರೆ ವಿಪತ್ತು ನಿರ್ವಹಣಾ ನಿಯಮಗಳಿಗೆ ಒಳಪಟ್ಟು ನಮಾಜ್ ಮಾಡಲು ಸೂಚಿಸಿದೆ.

ನಿಯಮಗಳ ಪ್ರಕಾರ, ಧಾರ್ಮಿಕ ಕೂಟಗಳನ್ನು ನಿಷೇಧಿಸಲಾಗಿದೆ. ಆದರೆ ಪೂಜಾ ಸ್ಥಳಗಳನ್ನು ಮುಚ್ಚಲು “ನಿರ್ದೇಶನ” ಇಲ್ಲ ಎಂದು ನ್ಯಾಯಾಲಯವು ಗಮನಿಸಿತು. “ಪರಿಸ್ಥಿತಿ ದಿನದಿಂದ ದಿನಕ್ಕೆ ಕಠೋರವಾಗುತ್ತಿದೆ. ಆದರೆ ಎಲ್ಲಾ ಧಾರ್ಮಿಕ ಸ್ಥಳಗಳು ತೆರೆದಿರುವುದರಿಂದ ಮತ್ತು ನಿಜಾಮುದ್ದೀನ್ ಮರ್ಕಜ್ ಕೂಡಾ ಪೂಜಾ ಸ್ಥಳವಾಗಿರುವುದರಿಂದ ಇದನ್ನು ಸಹ ತೆರೆಯಬೇಕಾಗಿತ್ತು. ಈಗ ಅವಕಾಶವನ್ನು ನೀಡಿದ್ದೇವೆ ಎಂದು ಹೈಕೋರ್ಟ್ ಹೇಳಿದೆ.

ದಕ್ಷಿಣ ದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಮಸೀದಿ ಬಂಗ್ಲೆ ವಾಲಿಯನ್ನು ಕಳೆದ ಮಾರ್ಚ್‌ನಲ್ಲಿ ಮುಚ್ಚಲಾಯಿತು. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಶುರುವಾದ ಸಂದರ್ಭದಲ್ಲಿ ನಡೆದ ತಬ್ಲಿಘಿ ಜಮಾಅತ್ ಪಂಥದ ಸಮಾವೇಶದ ಬಗ್ಗೆ ಭಾರಿ ವಿವಾದ ಉಂಟಾಗಿತ್ತು. ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ತಬ್ಲಿಘಿ ಸದಸ್ಯರನ್ನು ದೂಷಿಸಿ ಅನೇಕ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ರಂಜಾನ್ ಸಮಯದಲ್ಲಿ ಮರ್ಕಜ್ ಒಳಗೆ ಜನರು ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ದೆಹಲಿ ವಕ್ಫ್ ಮಂಡಳಿ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು.
ಏಪ್ರಿಲ್ 12ರಿಂದ ಈ ಕುರಿತಂತೆ ವಿಚಾರಣೆ ನಡೆದಿದೆ. ಕೇಂದ್ರವು ಮೊದಲು ಮರ್ಕಜ್‌ನಲ್ಲಿ ನಮಾಜ್‌ಗೆ ಅನುಮತಿಸಬಹುದು ಎಂದು ಒಪ್ಪಿಕೊಂಡಿತು. ಆದರೆ ಒಂದು ದಿನದ ನಂತರ, ರಾಜಧಾನಿಯಲ್ಲಿ ಹೊಸ ವಿಪತ್ತು ನಿಯಮಗಳ ಅಡಿಯಲ್ಲಿ ಎಲ್ಲಾ ಧಾರ್ಮಿಕ ಸಭೆಗಳನ್ನು ನಿಷೇಧಿಸಲಾಗಿರುವುದರಿಂದ ಮಸೀದಿಯಲ್ಲಿ ಯಾರನ್ನೂ ಅನುಮತಿಸಬಾರದು ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.

ಪೊಲೀಸರು ಪರಿಶೀಲಿಸಿದ 200 ಜನರ ಪಟ್ಟಿಯಿಂದ ಒಂದೇ ಸಮಯದಲ್ಲಿ ಕೇವಲ 20 ಜನರಿಗೆ ಪ್ರಾರ್ಥನೆಗಾಗಿ ಸಂಕೀರ್ಣವನ್ನು ಪ್ರವೇಶಿಸಲು ಅವಕಾಶ ನೀಡಬಹುದು ಎಂಬ ಕೇಂದ್ರದ ಹೇಳಿಕೆಗೆ ನ್ಯಾಯಾಲಯ ತೀವ್ರವಾಗಿ ಆಕ್ಷೇಪಿಸಿತ್ತು.

“ನಿಮ್ಮ ಅಧಿಸೂಚನೆಗಳಲ್ಲಿ, ಧಾರ್ಮಿಕ ಸ್ಥಳಗಳಿಗಾಗಿ ಒಂದು ಬಾರಿಗೆ 20 ಜನಕ್ಕೆ ಮೊಟಕುಗೊಳಿಸಿದ್ದೀರಾ?’ ಎಂದು ಪ್ರಶ್ನಿಸಿದ್ದ ಕೋರ್ಟ್, ಕೋವಿಡ್ ನಿಯಮಗಳನ್ನು ಧಿಕ್ಕರಿಸಿ ಉತ್ತರಾಖಂಡದ ಹರಿದ್ವಾರದ ಮಹಾಕುಂಭ ಮೇಳದಲ್ಲಿ ಭಾರಿ ಜನಸಂದಣಿ ಸೇರಲು ಅನುಮತಿ ನೀಡಿದ ಕ್ರಮವನ್ನು ಉಲ್ಲೇಖಿಸಿದ್ದ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ವಕ್ಫ್ ಮಂಡಳಿಯು ಕುಂಭ ಮೇಳ ನಡೆಯುತ್ತಿರುವುದನ್ನು ತನ್ನ ಒಂದು ವಾದದಲ್ಲಿ ಉಲ್ಲೇಖಿಸಿ, ಈ ಎರಡು ಮಾನದಂಡಗಳನ್ನು ಪ್ರಶ್ನೆ ಮಾಡಿತ್ತು.

ಆದರೆ ಮೊನ್ನೆ ಬಾಂಬೇ ಹೈಕೋರ್ಟ್ ಅಲ್ಲಿನ ಜುಮ್ಮಾ ಮಸೀದಿಯಲ್ಲಿ 50 ಜನರಿಗೂ ನಮಾಜ್‌ಗೆ ಅನುಮತಿ ನೀಡಿಲ್ಲ ಎಂಬುದು ಚರ್ಚೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...