Homeಮುಖಪುಟಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಒಳಗೆ ರಂಜಾನ್ ಸಮಯದಲ್ಲಿ ಐವತ್ತು ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ, ಇದನ್ನು ಒಂದು ವರ್ಷದಿಂದ ಮುಚ್ಚಲಾಗಿತ್ತು.

- Advertisement -
- Advertisement -

ಇಂದು ದೆಹಲಿ ಹೈಕೋರ್ಟ್, ನಿಜಾಮುದ್ದೀನ್ ಮರ್ಕಜ್‌ನ ಮೊದಲ ಮಹಡಿಯಲ್ಲಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಸಲ್ಲಿಸಲು ಮತ್ತು ಪ್ರತಿ ಬಾರಿ 50 ಜನರು ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತು. ಆದರೆ ವಿಪತ್ತು ನಿರ್ವಹಣಾ ನಿಯಮಗಳಿಗೆ ಒಳಪಟ್ಟು ನಮಾಜ್ ಮಾಡಲು ಸೂಚಿಸಿದೆ.

ನಿಯಮಗಳ ಪ್ರಕಾರ, ಧಾರ್ಮಿಕ ಕೂಟಗಳನ್ನು ನಿಷೇಧಿಸಲಾಗಿದೆ. ಆದರೆ ಪೂಜಾ ಸ್ಥಳಗಳನ್ನು ಮುಚ್ಚಲು “ನಿರ್ದೇಶನ” ಇಲ್ಲ ಎಂದು ನ್ಯಾಯಾಲಯವು ಗಮನಿಸಿತು. “ಪರಿಸ್ಥಿತಿ ದಿನದಿಂದ ದಿನಕ್ಕೆ ಕಠೋರವಾಗುತ್ತಿದೆ. ಆದರೆ ಎಲ್ಲಾ ಧಾರ್ಮಿಕ ಸ್ಥಳಗಳು ತೆರೆದಿರುವುದರಿಂದ ಮತ್ತು ನಿಜಾಮುದ್ದೀನ್ ಮರ್ಕಜ್ ಕೂಡಾ ಪೂಜಾ ಸ್ಥಳವಾಗಿರುವುದರಿಂದ ಇದನ್ನು ಸಹ ತೆರೆಯಬೇಕಾಗಿತ್ತು. ಈಗ ಅವಕಾಶವನ್ನು ನೀಡಿದ್ದೇವೆ ಎಂದು ಹೈಕೋರ್ಟ್ ಹೇಳಿದೆ.

ದಕ್ಷಿಣ ದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಮಸೀದಿ ಬಂಗ್ಲೆ ವಾಲಿಯನ್ನು ಕಳೆದ ಮಾರ್ಚ್‌ನಲ್ಲಿ ಮುಚ್ಚಲಾಯಿತು. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಶುರುವಾದ ಸಂದರ್ಭದಲ್ಲಿ ನಡೆದ ತಬ್ಲಿಘಿ ಜಮಾಅತ್ ಪಂಥದ ಸಮಾವೇಶದ ಬಗ್ಗೆ ಭಾರಿ ವಿವಾದ ಉಂಟಾಗಿತ್ತು. ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ತಬ್ಲಿಘಿ ಸದಸ್ಯರನ್ನು ದೂಷಿಸಿ ಅನೇಕ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ರಂಜಾನ್ ಸಮಯದಲ್ಲಿ ಮರ್ಕಜ್ ಒಳಗೆ ಜನರು ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ದೆಹಲಿ ವಕ್ಫ್ ಮಂಡಳಿ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು.
ಏಪ್ರಿಲ್ 12ರಿಂದ ಈ ಕುರಿತಂತೆ ವಿಚಾರಣೆ ನಡೆದಿದೆ. ಕೇಂದ್ರವು ಮೊದಲು ಮರ್ಕಜ್‌ನಲ್ಲಿ ನಮಾಜ್‌ಗೆ ಅನುಮತಿಸಬಹುದು ಎಂದು ಒಪ್ಪಿಕೊಂಡಿತು. ಆದರೆ ಒಂದು ದಿನದ ನಂತರ, ರಾಜಧಾನಿಯಲ್ಲಿ ಹೊಸ ವಿಪತ್ತು ನಿಯಮಗಳ ಅಡಿಯಲ್ಲಿ ಎಲ್ಲಾ ಧಾರ್ಮಿಕ ಸಭೆಗಳನ್ನು ನಿಷೇಧಿಸಲಾಗಿರುವುದರಿಂದ ಮಸೀದಿಯಲ್ಲಿ ಯಾರನ್ನೂ ಅನುಮತಿಸಬಾರದು ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.

ಪೊಲೀಸರು ಪರಿಶೀಲಿಸಿದ 200 ಜನರ ಪಟ್ಟಿಯಿಂದ ಒಂದೇ ಸಮಯದಲ್ಲಿ ಕೇವಲ 20 ಜನರಿಗೆ ಪ್ರಾರ್ಥನೆಗಾಗಿ ಸಂಕೀರ್ಣವನ್ನು ಪ್ರವೇಶಿಸಲು ಅವಕಾಶ ನೀಡಬಹುದು ಎಂಬ ಕೇಂದ್ರದ ಹೇಳಿಕೆಗೆ ನ್ಯಾಯಾಲಯ ತೀವ್ರವಾಗಿ ಆಕ್ಷೇಪಿಸಿತ್ತು.

“ನಿಮ್ಮ ಅಧಿಸೂಚನೆಗಳಲ್ಲಿ, ಧಾರ್ಮಿಕ ಸ್ಥಳಗಳಿಗಾಗಿ ಒಂದು ಬಾರಿಗೆ 20 ಜನಕ್ಕೆ ಮೊಟಕುಗೊಳಿಸಿದ್ದೀರಾ?’ ಎಂದು ಪ್ರಶ್ನಿಸಿದ್ದ ಕೋರ್ಟ್, ಕೋವಿಡ್ ನಿಯಮಗಳನ್ನು ಧಿಕ್ಕರಿಸಿ ಉತ್ತರಾಖಂಡದ ಹರಿದ್ವಾರದ ಮಹಾಕುಂಭ ಮೇಳದಲ್ಲಿ ಭಾರಿ ಜನಸಂದಣಿ ಸೇರಲು ಅನುಮತಿ ನೀಡಿದ ಕ್ರಮವನ್ನು ಉಲ್ಲೇಖಿಸಿದ್ದ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ವಕ್ಫ್ ಮಂಡಳಿಯು ಕುಂಭ ಮೇಳ ನಡೆಯುತ್ತಿರುವುದನ್ನು ತನ್ನ ಒಂದು ವಾದದಲ್ಲಿ ಉಲ್ಲೇಖಿಸಿ, ಈ ಎರಡು ಮಾನದಂಡಗಳನ್ನು ಪ್ರಶ್ನೆ ಮಾಡಿತ್ತು.

ಆದರೆ ಮೊನ್ನೆ ಬಾಂಬೇ ಹೈಕೋರ್ಟ್ ಅಲ್ಲಿನ ಜುಮ್ಮಾ ಮಸೀದಿಯಲ್ಲಿ 50 ಜನರಿಗೂ ನಮಾಜ್‌ಗೆ ಅನುಮತಿ ನೀಡಿಲ್ಲ ಎಂಬುದು ಚರ್ಚೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...