Homeಮುಖಪುಟಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಒಳಗೆ ರಂಜಾನ್ ಸಮಯದಲ್ಲಿ ಐವತ್ತು ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ, ಇದನ್ನು ಒಂದು ವರ್ಷದಿಂದ ಮುಚ್ಚಲಾಗಿತ್ತು.

- Advertisement -
- Advertisement -

ಇಂದು ದೆಹಲಿ ಹೈಕೋರ್ಟ್, ನಿಜಾಮುದ್ದೀನ್ ಮರ್ಕಜ್‌ನ ಮೊದಲ ಮಹಡಿಯಲ್ಲಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಸಲ್ಲಿಸಲು ಮತ್ತು ಪ್ರತಿ ಬಾರಿ 50 ಜನರು ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತು. ಆದರೆ ವಿಪತ್ತು ನಿರ್ವಹಣಾ ನಿಯಮಗಳಿಗೆ ಒಳಪಟ್ಟು ನಮಾಜ್ ಮಾಡಲು ಸೂಚಿಸಿದೆ.

ನಿಯಮಗಳ ಪ್ರಕಾರ, ಧಾರ್ಮಿಕ ಕೂಟಗಳನ್ನು ನಿಷೇಧಿಸಲಾಗಿದೆ. ಆದರೆ ಪೂಜಾ ಸ್ಥಳಗಳನ್ನು ಮುಚ್ಚಲು “ನಿರ್ದೇಶನ” ಇಲ್ಲ ಎಂದು ನ್ಯಾಯಾಲಯವು ಗಮನಿಸಿತು. “ಪರಿಸ್ಥಿತಿ ದಿನದಿಂದ ದಿನಕ್ಕೆ ಕಠೋರವಾಗುತ್ತಿದೆ. ಆದರೆ ಎಲ್ಲಾ ಧಾರ್ಮಿಕ ಸ್ಥಳಗಳು ತೆರೆದಿರುವುದರಿಂದ ಮತ್ತು ನಿಜಾಮುದ್ದೀನ್ ಮರ್ಕಜ್ ಕೂಡಾ ಪೂಜಾ ಸ್ಥಳವಾಗಿರುವುದರಿಂದ ಇದನ್ನು ಸಹ ತೆರೆಯಬೇಕಾಗಿತ್ತು. ಈಗ ಅವಕಾಶವನ್ನು ನೀಡಿದ್ದೇವೆ ಎಂದು ಹೈಕೋರ್ಟ್ ಹೇಳಿದೆ.

ದಕ್ಷಿಣ ದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಮಸೀದಿ ಬಂಗ್ಲೆ ವಾಲಿಯನ್ನು ಕಳೆದ ಮಾರ್ಚ್‌ನಲ್ಲಿ ಮುಚ್ಚಲಾಯಿತು. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಶುರುವಾದ ಸಂದರ್ಭದಲ್ಲಿ ನಡೆದ ತಬ್ಲಿಘಿ ಜಮಾಅತ್ ಪಂಥದ ಸಮಾವೇಶದ ಬಗ್ಗೆ ಭಾರಿ ವಿವಾದ ಉಂಟಾಗಿತ್ತು. ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ತಬ್ಲಿಘಿ ಸದಸ್ಯರನ್ನು ದೂಷಿಸಿ ಅನೇಕ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ರಂಜಾನ್ ಸಮಯದಲ್ಲಿ ಮರ್ಕಜ್ ಒಳಗೆ ಜನರು ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ದೆಹಲಿ ವಕ್ಫ್ ಮಂಡಳಿ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು.
ಏಪ್ರಿಲ್ 12ರಿಂದ ಈ ಕುರಿತಂತೆ ವಿಚಾರಣೆ ನಡೆದಿದೆ. ಕೇಂದ್ರವು ಮೊದಲು ಮರ್ಕಜ್‌ನಲ್ಲಿ ನಮಾಜ್‌ಗೆ ಅನುಮತಿಸಬಹುದು ಎಂದು ಒಪ್ಪಿಕೊಂಡಿತು. ಆದರೆ ಒಂದು ದಿನದ ನಂತರ, ರಾಜಧಾನಿಯಲ್ಲಿ ಹೊಸ ವಿಪತ್ತು ನಿಯಮಗಳ ಅಡಿಯಲ್ಲಿ ಎಲ್ಲಾ ಧಾರ್ಮಿಕ ಸಭೆಗಳನ್ನು ನಿಷೇಧಿಸಲಾಗಿರುವುದರಿಂದ ಮಸೀದಿಯಲ್ಲಿ ಯಾರನ್ನೂ ಅನುಮತಿಸಬಾರದು ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.

ಪೊಲೀಸರು ಪರಿಶೀಲಿಸಿದ 200 ಜನರ ಪಟ್ಟಿಯಿಂದ ಒಂದೇ ಸಮಯದಲ್ಲಿ ಕೇವಲ 20 ಜನರಿಗೆ ಪ್ರಾರ್ಥನೆಗಾಗಿ ಸಂಕೀರ್ಣವನ್ನು ಪ್ರವೇಶಿಸಲು ಅವಕಾಶ ನೀಡಬಹುದು ಎಂಬ ಕೇಂದ್ರದ ಹೇಳಿಕೆಗೆ ನ್ಯಾಯಾಲಯ ತೀವ್ರವಾಗಿ ಆಕ್ಷೇಪಿಸಿತ್ತು.

“ನಿಮ್ಮ ಅಧಿಸೂಚನೆಗಳಲ್ಲಿ, ಧಾರ್ಮಿಕ ಸ್ಥಳಗಳಿಗಾಗಿ ಒಂದು ಬಾರಿಗೆ 20 ಜನಕ್ಕೆ ಮೊಟಕುಗೊಳಿಸಿದ್ದೀರಾ?’ ಎಂದು ಪ್ರಶ್ನಿಸಿದ್ದ ಕೋರ್ಟ್, ಕೋವಿಡ್ ನಿಯಮಗಳನ್ನು ಧಿಕ್ಕರಿಸಿ ಉತ್ತರಾಖಂಡದ ಹರಿದ್ವಾರದ ಮಹಾಕುಂಭ ಮೇಳದಲ್ಲಿ ಭಾರಿ ಜನಸಂದಣಿ ಸೇರಲು ಅನುಮತಿ ನೀಡಿದ ಕ್ರಮವನ್ನು ಉಲ್ಲೇಖಿಸಿದ್ದ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ವಕ್ಫ್ ಮಂಡಳಿಯು ಕುಂಭ ಮೇಳ ನಡೆಯುತ್ತಿರುವುದನ್ನು ತನ್ನ ಒಂದು ವಾದದಲ್ಲಿ ಉಲ್ಲೇಖಿಸಿ, ಈ ಎರಡು ಮಾನದಂಡಗಳನ್ನು ಪ್ರಶ್ನೆ ಮಾಡಿತ್ತು.

ಆದರೆ ಮೊನ್ನೆ ಬಾಂಬೇ ಹೈಕೋರ್ಟ್ ಅಲ್ಲಿನ ಜುಮ್ಮಾ ಮಸೀದಿಯಲ್ಲಿ 50 ಜನರಿಗೂ ನಮಾಜ್‌ಗೆ ಅನುಮತಿ ನೀಡಿಲ್ಲ ಎಂಬುದು ಚರ್ಚೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...