Homeಮುಖಪುಟಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ಮರ್ಕಜ್ ಮಸೀದಿಯಲ್ಲಿ 50 ಜನರ ನಮಾಜ್‌ಗೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಒಳಗೆ ರಂಜಾನ್ ಸಮಯದಲ್ಲಿ ಐವತ್ತು ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗಿದೆ, ಇದನ್ನು ಒಂದು ವರ್ಷದಿಂದ ಮುಚ್ಚಲಾಗಿತ್ತು.

- Advertisement -
- Advertisement -

ಇಂದು ದೆಹಲಿ ಹೈಕೋರ್ಟ್, ನಿಜಾಮುದ್ದೀನ್ ಮರ್ಕಜ್‌ನ ಮೊದಲ ಮಹಡಿಯಲ್ಲಿ ದಿನಕ್ಕೆ ಐದು ಬಾರಿ ಪ್ರಾರ್ಥನೆ ಸಲ್ಲಿಸಲು ಮತ್ತು ಪ್ರತಿ ಬಾರಿ 50 ಜನರು ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತು. ಆದರೆ ವಿಪತ್ತು ನಿರ್ವಹಣಾ ನಿಯಮಗಳಿಗೆ ಒಳಪಟ್ಟು ನಮಾಜ್ ಮಾಡಲು ಸೂಚಿಸಿದೆ.

ನಿಯಮಗಳ ಪ್ರಕಾರ, ಧಾರ್ಮಿಕ ಕೂಟಗಳನ್ನು ನಿಷೇಧಿಸಲಾಗಿದೆ. ಆದರೆ ಪೂಜಾ ಸ್ಥಳಗಳನ್ನು ಮುಚ್ಚಲು “ನಿರ್ದೇಶನ” ಇಲ್ಲ ಎಂದು ನ್ಯಾಯಾಲಯವು ಗಮನಿಸಿತು. “ಪರಿಸ್ಥಿತಿ ದಿನದಿಂದ ದಿನಕ್ಕೆ ಕಠೋರವಾಗುತ್ತಿದೆ. ಆದರೆ ಎಲ್ಲಾ ಧಾರ್ಮಿಕ ಸ್ಥಳಗಳು ತೆರೆದಿರುವುದರಿಂದ ಮತ್ತು ನಿಜಾಮುದ್ದೀನ್ ಮರ್ಕಜ್ ಕೂಡಾ ಪೂಜಾ ಸ್ಥಳವಾಗಿರುವುದರಿಂದ ಇದನ್ನು ಸಹ ತೆರೆಯಬೇಕಾಗಿತ್ತು. ಈಗ ಅವಕಾಶವನ್ನು ನೀಡಿದ್ದೇವೆ ಎಂದು ಹೈಕೋರ್ಟ್ ಹೇಳಿದೆ.

ದಕ್ಷಿಣ ದೆಹಲಿಯ ನಿಜಾಮುದ್ದೀನ್‌ನಲ್ಲಿರುವ ಮಸೀದಿ ಬಂಗ್ಲೆ ವಾಲಿಯನ್ನು ಕಳೆದ ಮಾರ್ಚ್‌ನಲ್ಲಿ ಮುಚ್ಚಲಾಯಿತು. ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಶುರುವಾದ ಸಂದರ್ಭದಲ್ಲಿ ನಡೆದ ತಬ್ಲಿಘಿ ಜಮಾಅತ್ ಪಂಥದ ಸಮಾವೇಶದ ಬಗ್ಗೆ ಭಾರಿ ವಿವಾದ ಉಂಟಾಗಿತ್ತು. ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ತಬ್ಲಿಘಿ ಸದಸ್ಯರನ್ನು ದೂಷಿಸಿ ಅನೇಕ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ರಂಜಾನ್ ಸಮಯದಲ್ಲಿ ಮರ್ಕಜ್ ಒಳಗೆ ಜನರು ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ದೆಹಲಿ ವಕ್ಫ್ ಮಂಡಳಿ ದೆಹಲಿ ಹೈಕೋರ್ಟ್ ಮೊರೆ ಹೋಗಿತ್ತು.
ಏಪ್ರಿಲ್ 12ರಿಂದ ಈ ಕುರಿತಂತೆ ವಿಚಾರಣೆ ನಡೆದಿದೆ. ಕೇಂದ್ರವು ಮೊದಲು ಮರ್ಕಜ್‌ನಲ್ಲಿ ನಮಾಜ್‌ಗೆ ಅನುಮತಿಸಬಹುದು ಎಂದು ಒಪ್ಪಿಕೊಂಡಿತು. ಆದರೆ ಒಂದು ದಿನದ ನಂತರ, ರಾಜಧಾನಿಯಲ್ಲಿ ಹೊಸ ವಿಪತ್ತು ನಿಯಮಗಳ ಅಡಿಯಲ್ಲಿ ಎಲ್ಲಾ ಧಾರ್ಮಿಕ ಸಭೆಗಳನ್ನು ನಿಷೇಧಿಸಲಾಗಿರುವುದರಿಂದ ಮಸೀದಿಯಲ್ಲಿ ಯಾರನ್ನೂ ಅನುಮತಿಸಬಾರದು ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತ್ತು.

ಪೊಲೀಸರು ಪರಿಶೀಲಿಸಿದ 200 ಜನರ ಪಟ್ಟಿಯಿಂದ ಒಂದೇ ಸಮಯದಲ್ಲಿ ಕೇವಲ 20 ಜನರಿಗೆ ಪ್ರಾರ್ಥನೆಗಾಗಿ ಸಂಕೀರ್ಣವನ್ನು ಪ್ರವೇಶಿಸಲು ಅವಕಾಶ ನೀಡಬಹುದು ಎಂಬ ಕೇಂದ್ರದ ಹೇಳಿಕೆಗೆ ನ್ಯಾಯಾಲಯ ತೀವ್ರವಾಗಿ ಆಕ್ಷೇಪಿಸಿತ್ತು.

“ನಿಮ್ಮ ಅಧಿಸೂಚನೆಗಳಲ್ಲಿ, ಧಾರ್ಮಿಕ ಸ್ಥಳಗಳಿಗಾಗಿ ಒಂದು ಬಾರಿಗೆ 20 ಜನಕ್ಕೆ ಮೊಟಕುಗೊಳಿಸಿದ್ದೀರಾ?’ ಎಂದು ಪ್ರಶ್ನಿಸಿದ್ದ ಕೋರ್ಟ್, ಕೋವಿಡ್ ನಿಯಮಗಳನ್ನು ಧಿಕ್ಕರಿಸಿ ಉತ್ತರಾಖಂಡದ ಹರಿದ್ವಾರದ ಮಹಾಕುಂಭ ಮೇಳದಲ್ಲಿ ಭಾರಿ ಜನಸಂದಣಿ ಸೇರಲು ಅನುಮತಿ ನೀಡಿದ ಕ್ರಮವನ್ನು ಉಲ್ಲೇಖಿಸಿದ್ದ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ವಕ್ಫ್ ಮಂಡಳಿಯು ಕುಂಭ ಮೇಳ ನಡೆಯುತ್ತಿರುವುದನ್ನು ತನ್ನ ಒಂದು ವಾದದಲ್ಲಿ ಉಲ್ಲೇಖಿಸಿ, ಈ ಎರಡು ಮಾನದಂಡಗಳನ್ನು ಪ್ರಶ್ನೆ ಮಾಡಿತ್ತು.

ಆದರೆ ಮೊನ್ನೆ ಬಾಂಬೇ ಹೈಕೋರ್ಟ್ ಅಲ್ಲಿನ ಜುಮ್ಮಾ ಮಸೀದಿಯಲ್ಲಿ 50 ಜನರಿಗೂ ನಮಾಜ್‌ಗೆ ಅನುಮತಿ ನೀಡಿಲ್ಲ ಎಂಬುದು ಚರ್ಚೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...