Homeಮುಖಪುಟದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ...

ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಗಳು ನೀಡುವ ಶೌರ್ಯ ಪದಕಕ್ಕಾಗಿ ಅರ್ಜಿ ಹಾಕಿರುವ ದೆಹಲಿಯ ಹಲವು ಪೊಲೀಸ್‍ ಅಧಿಕಾರಿಗಳು, ದೆಹಲಿ ಗಲಭೆ ಸಂದರ್ಭಗಳಲ್ಲಿ ತಾವು ಉತ್ತಮ ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ. ಇದರಲ್ಲಿ ಬಿಜೆಪಿ ರಾಜಕಾರಣಿ ಕಪಿಲ್‍ ಮಿಶ್ರಾ ವಿವಾದಾತ್ಮಕ ಭಾಷಣ ಮಾಡುವಾಗ ಪಕ್ಕದಲ್ಲೇ ನಿಂತಿದ್ದ ಈಶಾನ್ಯ ದೆಹಲಿಯ ಮಾಜಿ ಡಿಸಿಪಿ, ವೇದ ಪ್ರಕಾಶ್ ಸೂರ್ಯ ಕೂಡ ಇದ್ದಾರೆ.

ಕಪಿಲ್‍ ಮಿಶ್ರಾ ಪ್ರಚೋದನಾಕಾರಿ ಭಾಷಣ ಮಾಡುವಾಗ ಈಶಾನ್ಯ ದೆಹಲಿಯ ಡಿಸಿಪಿಯಾಗಿದ್ದ ವೇದ ಪ್ರಕಾಶ್‍ ಸೂರ್ಯ ಅವರು ಮಿಶ್ರಾ ಪಕ್ಕದಲ್ಲೇ ಇರುವ ವಿಡಿಯೋ ಮತ್ತು ಫೋಟೊಗಳು ಆಗಲೇ ವೈರಲ್‍ ಆಗಿ ವಿವಾದ ಸೃಷ್ಟಿಯಾಗಿತ್ತು. ಕಪಿಲ್‍ ಮಿಶ್ರಾರ ಆ ಭಾಷಣದ ಮರುದಿನವೇ ಈಶಾನ್ಯ ದೆಹಲಿಯಲ್ಲಿ ಗಲಭೆ ಭುಗಿಲೆದ್ದಿತ್ತು.

ಕಳೆದ ವರ್ಷ ಫೆಬ್ರವರಿ 23 ರಂದು ಸಿಎಎ ಪರ ರ್‍ಯಾಲಿಯಲ್ಲಿ ಈ ಘಟನೆ ಸಂಭವಿಸಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ವಿದ್ಯಾರ್ಥಿ ಹೋರಾಟಗಾರರ ಬಿಡುಗಡೆಗೆ ಕೋರ್ಟ್‌ ಆದೇಶ

ವೇದ ಪ್ರಕಾಶ್‍ ಸೂರ್ಯ, ಗಲಭೆಯಲ್ಲಿ ನೂರಾರು ಜನರ ಪ್ರಾಣ ಮತ್ತು ಆಸ್ತಿಗಳನ್ನು ಉಳಿಸಿದ್ದಾಗಿ ಮತ್ತು ಗಲಭೆಯ ಸಮಯದಲ್ಲಿ “ಅಸಾಧಾರಣ” ಕೆಲಸವನ್ನು ಮಾಡಿದ್ದಾಗಿ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ವೇದಪ್ರಕಾಶ ಸೂರ್ಯ ಅವರ ಜೆಸಿಪಿ  ಆಗಿದ್ದ ಅಲೋಕ್ ಕುಮಾರ್ ಮತ್ತು ಅಧೀನ ಅಧಿಕಾರಿಗಳು ಸೇರಿದಂತೆ ಸುಮಾರು 25 ಪೊಲೀಸ್ ಅಧಿಕಾರಿಗಳು ಪ್ರಶಸ್ತಿಗಾಗಿ ತಮ್ಮ ಅರ್ಜಿಗಳನ್ನು ದೆಹಲಿ ಪೊಲೀಸ್‍ ಪ್ರಧಾನ ಕಚೇರಿಗೆ  ಸಲ್ಲಿಸಿದ್ದಾರೆ. ದೆಹಲಿ ಗಲಭೆಯ ಸಂದರ್ಭದಲ್ಲಿ ತಮ್ಮ ಪಾತ್ರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಜೀವ ಮತ್ತು ಆಸ್ತಿಯನ್ನು ಉಳಿಸುವ” ಅಥವಾ “ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು ಬಂಧಿಸುವಲ್ಲಿ” ಮಾಡಿದ ಕಾರ್ಯಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ನೀಡಲಾಗುತ್ತದೆ.

“ಈ ಪ್ರಸ್ತಾಪವನ್ನು ಜಿಲ್ಲೆಯಿಂದ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ಹಿರಿಯ ಅಧಿಕಾರಿಗಳ ಸಮಿತಿಯ ಮುಂದೆ ಇಡಲಾಗುತ್ತದೆ ಮತ್ತು ಅಂತಿಮವಾಗಿ ದೆಹಲಿ ಪೊಲೀಸ್ ಆಯುಕ್ತರಿಂದ ಅನುಮೋದನೆ ಪಡೆಯಲಾಗುತ್ತದೆ. ಫೈಲ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಧಿಕ್ಕಾರ ಕೂಗುವಂತೆ ಒತ್ತಾಯಿಸಿ ಹಲ್ಲೆ: ಬಂಧಿತ ದೆಹಲಿ ಗಲಭೆಯಲ್ಲೂ ಆರೋಪಿ!

ಕೆಲವು ದಿನಗಳ ಹಿಂದೆ ವೇದಪ್ರಕಾಶ್‍ ಸೂರ್ಯ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಅರ್ಜಿಯನ್ನು ಇತರ 24 ಪೊಲೀಸ್ ಅಧಿಕಾರಿಗಳ ಅರ್ಜಿಗಳ ಜೊತೆಗೆ ಪ್ರಧಾನ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, 23 ಪೊಲೀಸ್ ಸಿಬ್ಬಂದಿ “ಅಸಾಧಾರಣ ಕಾರ್ಯ ಪುರಸ್ಕಾರ” ಪ್ರಶಸ್ತಿಗಾಗಿ ಮತ್ತು 14 ಮಂದಿ ಔಟ್‍-ಆಫ್‍-ಟರ್ನ್‍-ಪ್ರಮೋಷನ್‍ ಆಧಾರದಲ್ಲಿ ಪದಕಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ ಎಂದು ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಮೂರು ನಾಲ್ಕು ದಿನಗಳಲ್ಲಿ ಗಲಭೆಯನ್ನು ನಿಯಂತ್ರಿಸಿದ್ದಾಗಿ ವೇದಪ್ರಕಾಶ್‍ ಸೂರ್ಯ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಹಾಯಕ್ಕಾಗಿ ಫೋನ್ ಕರೆಗಳಿಗೆ ಪ್ರತಿಕ್ರಿಯೆಯನ್ನು ಒಳಗೊಂಡಂತೆ, ನೂರಾರು ಜನರ ಪ್ರಾಣ ಉಳಿಸುವಲ್ಲಿ ಅವರ ‘ಧೈರ್ಯಶಾಲಿ ಪ್ರಯತ್ನಗಳ’ ಕುರಿತು ಮತ್ತು ಕಲ್ಲು ತೂರಾಟಗಳನ್ನು ಲೆಕ್ಕಿಸದೇ ತಾವು ಕರ್ತವ್ಯ ಮಾಡಿದ್ದಾಗಿ ಅರ್ಜಿಯಲ್ಲಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್‍ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಕಪಿಲ್‍ ಮಿಶ್ರಾ ಅವರು ಫೆಬ್ರವರಿ 23, 2020 ರಂದು ಮೌಜ್ಪುರ್ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರ ಸಭೆ ನಡೆಸಿದ ಭಾಷಣದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ದೆಹಲಿ ಈಶಾನ್ಯ ಡಿಸಿಪಿಯಾಗಿದ್ದ  ವೇದಪ್ರಕಾಶ್‍ ಸೂರ್ಯ ಅವರು ಕಪಿಲ್‍ ಮಿಶ್ರಾ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಭಾಷಣದಲ್ಲಿ, ಬಿಜೆಪಿ ನಾಯಕ, “ಡಿಸಿಪಿ ನಮ್ಮ ಪಕ್ಕವೇ ಇದ್ದಾರೆ. ನಿಮ್ಮ ಪರವಾಗಿ, ನಾನು ಅವರಿಗೆ ಹೇಳಲು ಬಯಸುತ್ತೇನೆ ಯುಎಸ್ ಅಧ್ಯಕ್ಷ (ಡೊನಾಲ್ಡ್ ಟ್ರಂಪ್) ಭಾರತದಲ್ಲಿ ಇರುವವರೆಗೂ ನಾವು ಈ ಪ್ರದೇಶವನ್ನು ಶಾಂತಿಯುತವಾಗಿ ನೋಡಿಕೊಳ್ಳುತ್ತೇವೆ. ಅದರ ನಂತರ, ರಸ್ತೆಗಳನ್ನು ಖಾಲಿ ಮಾಡದಿದ್ದರೆ (ಸಿಎಎ ಪ್ರತಿಭಟನಾಕಾರರಿಂದ) ನಾವು ನಿಮ್ಮ (ಪೋಲಿಸ್) ಮಾತುಗಳನ್ನು ಕೇಳುವುದಿಲ್ಲ. ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿ 24 ರಂದು ವೇದಪ್ರಕಾಶ್‍ ಸೂರ್ಯ ಅವರನ್ನು ದೆಹಲಿ ಈಶಾನ್ಯ ಜಿಲ್ಲೆಯಿಂದ ರಾಷ್ಟ್ರಪತಿ ಭವನಕ್ಕೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ  ಪ್ರಶಸ್ತಿ ಅರ್ಜಿ ಕುರಿತು  ದಿ ಇಂಡಿಯನ್ ಎಕ್ಸ್‌ಪ್ರೆಸ್‍ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಕೆಲವೇ ದಿನಗಳ ಹಿಂದೆ ನಿವೃತ್ತರಾದ ಆಗಿನ ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಅವರು ಹಿಂಸಾಚಾರದ ಸಮಯದಲ್ಲಿ ತಮ್ಮ ಕೆಲಸಕ್ಕಾಗಿ ವಿಶೇಷ ಸೆಲ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ಪೊಲೀಸ್ ಸಿಬ್ಬಂದಿಗೆ ಔಟ್‍-ಆಫ್-ಟರ್ನ್‍ ಬಡ್ತಿ ನೀಡಿದ್ದರು. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮಿಯಾ ಸಮನ್ವಯ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗಾರ್ ಮತ್ತು ಪಿಂಜ್ರಾ ಟೋಡ್‌ನ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್‍ ಸೇರಿದಂತೆ 21 ಮಂದಿಯನ್ನು ಬಂಧಿಸಿದ ತನಿಖಾ ತಂಡದ ಈ ನಾಲ್ವರು ಅಧಿಕಾರಿಗಳು ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ದೆಹಲಿ ಗಲಭೆಗೆ ಜೋಡಿಸಿದವರು.

ಇದನ್ನೂ ಓದಿ: ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ದೆಹಲಿ ಗಲಭೆಯ ಸಂದರ್ಭದಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಂದ ಆರೋಪದಲ್ಲಿ ಹಸೀನ್ ಖುರೇಷಿಯನ್ನು ಬಂಧಿಸಲು ಕಾರಣವಾದ ಹೆಡ್ ಕಾನ್ಸ್‍ಟೇಬಲ್‍ ಹಮೇಂದ್ರ ರತಿ ಅವರಿಗೆ ಔಟ್‍-ಆಫ್‍-ಟರ್ನ್‍  ಬಡ್ತಿಯನ್ನು ಕಳೆದ ತಿಂಗಳು ನೀಡಲಾಗಿದೆ’ ಎಂದು ತಿಳಿಸಿದರು.

ಈ ವರ್ಷದ ಫೆಬ್ರವರಿ 19 ರಂದು ನಡೆದ ದೆಹಲಿ ಪೊಲೀಸ್ ಮುಖ್ಯಸ್ಥರ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ, ಶ್ರೀವಾಸ್ತವ ಅವರು ಗಲಭೆ ನಿಯಂತ್ರಣದಲ್ಲಿ ತಮ್ಮ ಪೊಲೀಸ್‍ ಪಡೆಗಳ ಪಾತ್ರವನ್ನು ಶ್ಲಾಘಿಸಿದ್ದರು. “ಒಟ್ಟು 755 ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ ಮತ್ತು ನಮ್ಮ ದೂರನ್ನು ಅಂಗೀಕರಿಸಿಲ್ಲ ಎಂದು ಯಾರೂ ಕುಂದುಕೊರತೆ ಹೇಳಿಲ್ಲ’ ಎಂದಿದ್ದರು.

ವಾರ್ಷಿಕ ಪರಿಶೀಲನೆಯ ಸಮಯದಲ್ಲಿ ಗಲಭೆಯನ್ನು ಉಲ್ಲೇಖಿಸಿ, ಡಿಸಿಪಿ (ವಿಶೇಷ ಕೋಶ) ಪ್ರಮೋದ್ ಕುಶ್ವಾ ಮತ್ತು ಡಿಸಿಪಿ (ಅಪರಾಧ) ಜಾಯ್ ಟಿರ್ಕಿ ಅವರು, ಮೌಜ್‌ಪುರದಲ್ಲಿ ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯನ್ನು ಪ್ರಸ್ತಾಪಿಸಿದ್ದು, ಇದರ ನಂತರ “ಪರಿಸ್ಥಿತಿ ಹದಗೆಟ್ಟಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...