Homeಮುಖಪುಟದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ...

ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಗಳು ನೀಡುವ ಶೌರ್ಯ ಪದಕಕ್ಕಾಗಿ ಅರ್ಜಿ ಹಾಕಿರುವ ದೆಹಲಿಯ ಹಲವು ಪೊಲೀಸ್‍ ಅಧಿಕಾರಿಗಳು, ದೆಹಲಿ ಗಲಭೆ ಸಂದರ್ಭಗಳಲ್ಲಿ ತಾವು ಉತ್ತಮ ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ. ಇದರಲ್ಲಿ ಬಿಜೆಪಿ ರಾಜಕಾರಣಿ ಕಪಿಲ್‍ ಮಿಶ್ರಾ ವಿವಾದಾತ್ಮಕ ಭಾಷಣ ಮಾಡುವಾಗ ಪಕ್ಕದಲ್ಲೇ ನಿಂತಿದ್ದ ಈಶಾನ್ಯ ದೆಹಲಿಯ ಮಾಜಿ ಡಿಸಿಪಿ, ವೇದ ಪ್ರಕಾಶ್ ಸೂರ್ಯ ಕೂಡ ಇದ್ದಾರೆ.

ಕಪಿಲ್‍ ಮಿಶ್ರಾ ಪ್ರಚೋದನಾಕಾರಿ ಭಾಷಣ ಮಾಡುವಾಗ ಈಶಾನ್ಯ ದೆಹಲಿಯ ಡಿಸಿಪಿಯಾಗಿದ್ದ ವೇದ ಪ್ರಕಾಶ್‍ ಸೂರ್ಯ ಅವರು ಮಿಶ್ರಾ ಪಕ್ಕದಲ್ಲೇ ಇರುವ ವಿಡಿಯೋ ಮತ್ತು ಫೋಟೊಗಳು ಆಗಲೇ ವೈರಲ್‍ ಆಗಿ ವಿವಾದ ಸೃಷ್ಟಿಯಾಗಿತ್ತು. ಕಪಿಲ್‍ ಮಿಶ್ರಾರ ಆ ಭಾಷಣದ ಮರುದಿನವೇ ಈಶಾನ್ಯ ದೆಹಲಿಯಲ್ಲಿ ಗಲಭೆ ಭುಗಿಲೆದ್ದಿತ್ತು.

ಕಳೆದ ವರ್ಷ ಫೆಬ್ರವರಿ 23 ರಂದು ಸಿಎಎ ಪರ ರ್‍ಯಾಲಿಯಲ್ಲಿ ಈ ಘಟನೆ ಸಂಭವಿಸಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ವಿದ್ಯಾರ್ಥಿ ಹೋರಾಟಗಾರರ ಬಿಡುಗಡೆಗೆ ಕೋರ್ಟ್‌ ಆದೇಶ

ವೇದ ಪ್ರಕಾಶ್‍ ಸೂರ್ಯ, ಗಲಭೆಯಲ್ಲಿ ನೂರಾರು ಜನರ ಪ್ರಾಣ ಮತ್ತು ಆಸ್ತಿಗಳನ್ನು ಉಳಿಸಿದ್ದಾಗಿ ಮತ್ತು ಗಲಭೆಯ ಸಮಯದಲ್ಲಿ “ಅಸಾಧಾರಣ” ಕೆಲಸವನ್ನು ಮಾಡಿದ್ದಾಗಿ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ವೇದಪ್ರಕಾಶ ಸೂರ್ಯ ಅವರ ಜೆಸಿಪಿ  ಆಗಿದ್ದ ಅಲೋಕ್ ಕುಮಾರ್ ಮತ್ತು ಅಧೀನ ಅಧಿಕಾರಿಗಳು ಸೇರಿದಂತೆ ಸುಮಾರು 25 ಪೊಲೀಸ್ ಅಧಿಕಾರಿಗಳು ಪ್ರಶಸ್ತಿಗಾಗಿ ತಮ್ಮ ಅರ್ಜಿಗಳನ್ನು ದೆಹಲಿ ಪೊಲೀಸ್‍ ಪ್ರಧಾನ ಕಚೇರಿಗೆ  ಸಲ್ಲಿಸಿದ್ದಾರೆ. ದೆಹಲಿ ಗಲಭೆಯ ಸಂದರ್ಭದಲ್ಲಿ ತಮ್ಮ ಪಾತ್ರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಜೀವ ಮತ್ತು ಆಸ್ತಿಯನ್ನು ಉಳಿಸುವ” ಅಥವಾ “ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು ಬಂಧಿಸುವಲ್ಲಿ” ಮಾಡಿದ ಕಾರ್ಯಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ನೀಡಲಾಗುತ್ತದೆ.

“ಈ ಪ್ರಸ್ತಾಪವನ್ನು ಜಿಲ್ಲೆಯಿಂದ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ಹಿರಿಯ ಅಧಿಕಾರಿಗಳ ಸಮಿತಿಯ ಮುಂದೆ ಇಡಲಾಗುತ್ತದೆ ಮತ್ತು ಅಂತಿಮವಾಗಿ ದೆಹಲಿ ಪೊಲೀಸ್ ಆಯುಕ್ತರಿಂದ ಅನುಮೋದನೆ ಪಡೆಯಲಾಗುತ್ತದೆ. ಫೈಲ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಧಿಕ್ಕಾರ ಕೂಗುವಂತೆ ಒತ್ತಾಯಿಸಿ ಹಲ್ಲೆ: ಬಂಧಿತ ದೆಹಲಿ ಗಲಭೆಯಲ್ಲೂ ಆರೋಪಿ!

ಕೆಲವು ದಿನಗಳ ಹಿಂದೆ ವೇದಪ್ರಕಾಶ್‍ ಸೂರ್ಯ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಅರ್ಜಿಯನ್ನು ಇತರ 24 ಪೊಲೀಸ್ ಅಧಿಕಾರಿಗಳ ಅರ್ಜಿಗಳ ಜೊತೆಗೆ ಪ್ರಧಾನ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, 23 ಪೊಲೀಸ್ ಸಿಬ್ಬಂದಿ “ಅಸಾಧಾರಣ ಕಾರ್ಯ ಪುರಸ್ಕಾರ” ಪ್ರಶಸ್ತಿಗಾಗಿ ಮತ್ತು 14 ಮಂದಿ ಔಟ್‍-ಆಫ್‍-ಟರ್ನ್‍-ಪ್ರಮೋಷನ್‍ ಆಧಾರದಲ್ಲಿ ಪದಕಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ ಎಂದು ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಮೂರು ನಾಲ್ಕು ದಿನಗಳಲ್ಲಿ ಗಲಭೆಯನ್ನು ನಿಯಂತ್ರಿಸಿದ್ದಾಗಿ ವೇದಪ್ರಕಾಶ್‍ ಸೂರ್ಯ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಹಾಯಕ್ಕಾಗಿ ಫೋನ್ ಕರೆಗಳಿಗೆ ಪ್ರತಿಕ್ರಿಯೆಯನ್ನು ಒಳಗೊಂಡಂತೆ, ನೂರಾರು ಜನರ ಪ್ರಾಣ ಉಳಿಸುವಲ್ಲಿ ಅವರ ‘ಧೈರ್ಯಶಾಲಿ ಪ್ರಯತ್ನಗಳ’ ಕುರಿತು ಮತ್ತು ಕಲ್ಲು ತೂರಾಟಗಳನ್ನು ಲೆಕ್ಕಿಸದೇ ತಾವು ಕರ್ತವ್ಯ ಮಾಡಿದ್ದಾಗಿ ಅರ್ಜಿಯಲ್ಲಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್‍ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಕಪಿಲ್‍ ಮಿಶ್ರಾ ಅವರು ಫೆಬ್ರವರಿ 23, 2020 ರಂದು ಮೌಜ್ಪುರ್ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರ ಸಭೆ ನಡೆಸಿದ ಭಾಷಣದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ದೆಹಲಿ ಈಶಾನ್ಯ ಡಿಸಿಪಿಯಾಗಿದ್ದ  ವೇದಪ್ರಕಾಶ್‍ ಸೂರ್ಯ ಅವರು ಕಪಿಲ್‍ ಮಿಶ್ರಾ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಭಾಷಣದಲ್ಲಿ, ಬಿಜೆಪಿ ನಾಯಕ, “ಡಿಸಿಪಿ ನಮ್ಮ ಪಕ್ಕವೇ ಇದ್ದಾರೆ. ನಿಮ್ಮ ಪರವಾಗಿ, ನಾನು ಅವರಿಗೆ ಹೇಳಲು ಬಯಸುತ್ತೇನೆ ಯುಎಸ್ ಅಧ್ಯಕ್ಷ (ಡೊನಾಲ್ಡ್ ಟ್ರಂಪ್) ಭಾರತದಲ್ಲಿ ಇರುವವರೆಗೂ ನಾವು ಈ ಪ್ರದೇಶವನ್ನು ಶಾಂತಿಯುತವಾಗಿ ನೋಡಿಕೊಳ್ಳುತ್ತೇವೆ. ಅದರ ನಂತರ, ರಸ್ತೆಗಳನ್ನು ಖಾಲಿ ಮಾಡದಿದ್ದರೆ (ಸಿಎಎ ಪ್ರತಿಭಟನಾಕಾರರಿಂದ) ನಾವು ನಿಮ್ಮ (ಪೋಲಿಸ್) ಮಾತುಗಳನ್ನು ಕೇಳುವುದಿಲ್ಲ. ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿ 24 ರಂದು ವೇದಪ್ರಕಾಶ್‍ ಸೂರ್ಯ ಅವರನ್ನು ದೆಹಲಿ ಈಶಾನ್ಯ ಜಿಲ್ಲೆಯಿಂದ ರಾಷ್ಟ್ರಪತಿ ಭವನಕ್ಕೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ  ಪ್ರಶಸ್ತಿ ಅರ್ಜಿ ಕುರಿತು  ದಿ ಇಂಡಿಯನ್ ಎಕ್ಸ್‌ಪ್ರೆಸ್‍ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಕೆಲವೇ ದಿನಗಳ ಹಿಂದೆ ನಿವೃತ್ತರಾದ ಆಗಿನ ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಅವರು ಹಿಂಸಾಚಾರದ ಸಮಯದಲ್ಲಿ ತಮ್ಮ ಕೆಲಸಕ್ಕಾಗಿ ವಿಶೇಷ ಸೆಲ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ಪೊಲೀಸ್ ಸಿಬ್ಬಂದಿಗೆ ಔಟ್‍-ಆಫ್-ಟರ್ನ್‍ ಬಡ್ತಿ ನೀಡಿದ್ದರು. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮಿಯಾ ಸಮನ್ವಯ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗಾರ್ ಮತ್ತು ಪಿಂಜ್ರಾ ಟೋಡ್‌ನ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್‍ ಸೇರಿದಂತೆ 21 ಮಂದಿಯನ್ನು ಬಂಧಿಸಿದ ತನಿಖಾ ತಂಡದ ಈ ನಾಲ್ವರು ಅಧಿಕಾರಿಗಳು ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ದೆಹಲಿ ಗಲಭೆಗೆ ಜೋಡಿಸಿದವರು.

ಇದನ್ನೂ ಓದಿ: ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ದೆಹಲಿ ಗಲಭೆಯ ಸಂದರ್ಭದಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಂದ ಆರೋಪದಲ್ಲಿ ಹಸೀನ್ ಖುರೇಷಿಯನ್ನು ಬಂಧಿಸಲು ಕಾರಣವಾದ ಹೆಡ್ ಕಾನ್ಸ್‍ಟೇಬಲ್‍ ಹಮೇಂದ್ರ ರತಿ ಅವರಿಗೆ ಔಟ್‍-ಆಫ್‍-ಟರ್ನ್‍  ಬಡ್ತಿಯನ್ನು ಕಳೆದ ತಿಂಗಳು ನೀಡಲಾಗಿದೆ’ ಎಂದು ತಿಳಿಸಿದರು.

ಈ ವರ್ಷದ ಫೆಬ್ರವರಿ 19 ರಂದು ನಡೆದ ದೆಹಲಿ ಪೊಲೀಸ್ ಮುಖ್ಯಸ್ಥರ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ, ಶ್ರೀವಾಸ್ತವ ಅವರು ಗಲಭೆ ನಿಯಂತ್ರಣದಲ್ಲಿ ತಮ್ಮ ಪೊಲೀಸ್‍ ಪಡೆಗಳ ಪಾತ್ರವನ್ನು ಶ್ಲಾಘಿಸಿದ್ದರು. “ಒಟ್ಟು 755 ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ ಮತ್ತು ನಮ್ಮ ದೂರನ್ನು ಅಂಗೀಕರಿಸಿಲ್ಲ ಎಂದು ಯಾರೂ ಕುಂದುಕೊರತೆ ಹೇಳಿಲ್ಲ’ ಎಂದಿದ್ದರು.

ವಾರ್ಷಿಕ ಪರಿಶೀಲನೆಯ ಸಮಯದಲ್ಲಿ ಗಲಭೆಯನ್ನು ಉಲ್ಲೇಖಿಸಿ, ಡಿಸಿಪಿ (ವಿಶೇಷ ಕೋಶ) ಪ್ರಮೋದ್ ಕುಶ್ವಾ ಮತ್ತು ಡಿಸಿಪಿ (ಅಪರಾಧ) ಜಾಯ್ ಟಿರ್ಕಿ ಅವರು, ಮೌಜ್‌ಪುರದಲ್ಲಿ ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯನ್ನು ಪ್ರಸ್ತಾಪಿಸಿದ್ದು, ಇದರ ನಂತರ “ಪರಿಸ್ಥಿತಿ ಹದಗೆಟ್ಟಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...