Homeಮುಖಪುಟದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ...

ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಗಳು ನೀಡುವ ಶೌರ್ಯ ಪದಕಕ್ಕಾಗಿ ಅರ್ಜಿ ಹಾಕಿರುವ ದೆಹಲಿಯ ಹಲವು ಪೊಲೀಸ್‍ ಅಧಿಕಾರಿಗಳು, ದೆಹಲಿ ಗಲಭೆ ಸಂದರ್ಭಗಳಲ್ಲಿ ತಾವು ಉತ್ತಮ ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ. ಇದರಲ್ಲಿ ಬಿಜೆಪಿ ರಾಜಕಾರಣಿ ಕಪಿಲ್‍ ಮಿಶ್ರಾ ವಿವಾದಾತ್ಮಕ ಭಾಷಣ ಮಾಡುವಾಗ ಪಕ್ಕದಲ್ಲೇ ನಿಂತಿದ್ದ ಈಶಾನ್ಯ ದೆಹಲಿಯ ಮಾಜಿ ಡಿಸಿಪಿ, ವೇದ ಪ್ರಕಾಶ್ ಸೂರ್ಯ ಕೂಡ ಇದ್ದಾರೆ.

ಕಪಿಲ್‍ ಮಿಶ್ರಾ ಪ್ರಚೋದನಾಕಾರಿ ಭಾಷಣ ಮಾಡುವಾಗ ಈಶಾನ್ಯ ದೆಹಲಿಯ ಡಿಸಿಪಿಯಾಗಿದ್ದ ವೇದ ಪ್ರಕಾಶ್‍ ಸೂರ್ಯ ಅವರು ಮಿಶ್ರಾ ಪಕ್ಕದಲ್ಲೇ ಇರುವ ವಿಡಿಯೋ ಮತ್ತು ಫೋಟೊಗಳು ಆಗಲೇ ವೈರಲ್‍ ಆಗಿ ವಿವಾದ ಸೃಷ್ಟಿಯಾಗಿತ್ತು. ಕಪಿಲ್‍ ಮಿಶ್ರಾರ ಆ ಭಾಷಣದ ಮರುದಿನವೇ ಈಶಾನ್ಯ ದೆಹಲಿಯಲ್ಲಿ ಗಲಭೆ ಭುಗಿಲೆದ್ದಿತ್ತು.

ಕಳೆದ ವರ್ಷ ಫೆಬ್ರವರಿ 23 ರಂದು ಸಿಎಎ ಪರ ರ್‍ಯಾಲಿಯಲ್ಲಿ ಈ ಘಟನೆ ಸಂಭವಿಸಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ವಿದ್ಯಾರ್ಥಿ ಹೋರಾಟಗಾರರ ಬಿಡುಗಡೆಗೆ ಕೋರ್ಟ್‌ ಆದೇಶ

ವೇದ ಪ್ರಕಾಶ್‍ ಸೂರ್ಯ, ಗಲಭೆಯಲ್ಲಿ ನೂರಾರು ಜನರ ಪ್ರಾಣ ಮತ್ತು ಆಸ್ತಿಗಳನ್ನು ಉಳಿಸಿದ್ದಾಗಿ ಮತ್ತು ಗಲಭೆಯ ಸಮಯದಲ್ಲಿ “ಅಸಾಧಾರಣ” ಕೆಲಸವನ್ನು ಮಾಡಿದ್ದಾಗಿ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ವೇದಪ್ರಕಾಶ ಸೂರ್ಯ ಅವರ ಜೆಸಿಪಿ  ಆಗಿದ್ದ ಅಲೋಕ್ ಕುಮಾರ್ ಮತ್ತು ಅಧೀನ ಅಧಿಕಾರಿಗಳು ಸೇರಿದಂತೆ ಸುಮಾರು 25 ಪೊಲೀಸ್ ಅಧಿಕಾರಿಗಳು ಪ್ರಶಸ್ತಿಗಾಗಿ ತಮ್ಮ ಅರ್ಜಿಗಳನ್ನು ದೆಹಲಿ ಪೊಲೀಸ್‍ ಪ್ರಧಾನ ಕಚೇರಿಗೆ  ಸಲ್ಲಿಸಿದ್ದಾರೆ. ದೆಹಲಿ ಗಲಭೆಯ ಸಂದರ್ಭದಲ್ಲಿ ತಮ್ಮ ಪಾತ್ರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಜೀವ ಮತ್ತು ಆಸ್ತಿಯನ್ನು ಉಳಿಸುವ” ಅಥವಾ “ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು ಬಂಧಿಸುವಲ್ಲಿ” ಮಾಡಿದ ಕಾರ್ಯಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ನೀಡಲಾಗುತ್ತದೆ.

“ಈ ಪ್ರಸ್ತಾಪವನ್ನು ಜಿಲ್ಲೆಯಿಂದ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ಹಿರಿಯ ಅಧಿಕಾರಿಗಳ ಸಮಿತಿಯ ಮುಂದೆ ಇಡಲಾಗುತ್ತದೆ ಮತ್ತು ಅಂತಿಮವಾಗಿ ದೆಹಲಿ ಪೊಲೀಸ್ ಆಯುಕ್ತರಿಂದ ಅನುಮೋದನೆ ಪಡೆಯಲಾಗುತ್ತದೆ. ಫೈಲ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಧಿಕ್ಕಾರ ಕೂಗುವಂತೆ ಒತ್ತಾಯಿಸಿ ಹಲ್ಲೆ: ಬಂಧಿತ ದೆಹಲಿ ಗಲಭೆಯಲ್ಲೂ ಆರೋಪಿ!

ಕೆಲವು ದಿನಗಳ ಹಿಂದೆ ವೇದಪ್ರಕಾಶ್‍ ಸೂರ್ಯ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಅರ್ಜಿಯನ್ನು ಇತರ 24 ಪೊಲೀಸ್ ಅಧಿಕಾರಿಗಳ ಅರ್ಜಿಗಳ ಜೊತೆಗೆ ಪ್ರಧಾನ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, 23 ಪೊಲೀಸ್ ಸಿಬ್ಬಂದಿ “ಅಸಾಧಾರಣ ಕಾರ್ಯ ಪುರಸ್ಕಾರ” ಪ್ರಶಸ್ತಿಗಾಗಿ ಮತ್ತು 14 ಮಂದಿ ಔಟ್‍-ಆಫ್‍-ಟರ್ನ್‍-ಪ್ರಮೋಷನ್‍ ಆಧಾರದಲ್ಲಿ ಪದಕಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ ಎಂದು ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಮೂರು ನಾಲ್ಕು ದಿನಗಳಲ್ಲಿ ಗಲಭೆಯನ್ನು ನಿಯಂತ್ರಿಸಿದ್ದಾಗಿ ವೇದಪ್ರಕಾಶ್‍ ಸೂರ್ಯ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಹಾಯಕ್ಕಾಗಿ ಫೋನ್ ಕರೆಗಳಿಗೆ ಪ್ರತಿಕ್ರಿಯೆಯನ್ನು ಒಳಗೊಂಡಂತೆ, ನೂರಾರು ಜನರ ಪ್ರಾಣ ಉಳಿಸುವಲ್ಲಿ ಅವರ ‘ಧೈರ್ಯಶಾಲಿ ಪ್ರಯತ್ನಗಳ’ ಕುರಿತು ಮತ್ತು ಕಲ್ಲು ತೂರಾಟಗಳನ್ನು ಲೆಕ್ಕಿಸದೇ ತಾವು ಕರ್ತವ್ಯ ಮಾಡಿದ್ದಾಗಿ ಅರ್ಜಿಯಲ್ಲಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್‍ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಕಪಿಲ್‍ ಮಿಶ್ರಾ ಅವರು ಫೆಬ್ರವರಿ 23, 2020 ರಂದು ಮೌಜ್ಪುರ್ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರ ಸಭೆ ನಡೆಸಿದ ಭಾಷಣದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ದೆಹಲಿ ಈಶಾನ್ಯ ಡಿಸಿಪಿಯಾಗಿದ್ದ  ವೇದಪ್ರಕಾಶ್‍ ಸೂರ್ಯ ಅವರು ಕಪಿಲ್‍ ಮಿಶ್ರಾ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಭಾಷಣದಲ್ಲಿ, ಬಿಜೆಪಿ ನಾಯಕ, “ಡಿಸಿಪಿ ನಮ್ಮ ಪಕ್ಕವೇ ಇದ್ದಾರೆ. ನಿಮ್ಮ ಪರವಾಗಿ, ನಾನು ಅವರಿಗೆ ಹೇಳಲು ಬಯಸುತ್ತೇನೆ ಯುಎಸ್ ಅಧ್ಯಕ್ಷ (ಡೊನಾಲ್ಡ್ ಟ್ರಂಪ್) ಭಾರತದಲ್ಲಿ ಇರುವವರೆಗೂ ನಾವು ಈ ಪ್ರದೇಶವನ್ನು ಶಾಂತಿಯುತವಾಗಿ ನೋಡಿಕೊಳ್ಳುತ್ತೇವೆ. ಅದರ ನಂತರ, ರಸ್ತೆಗಳನ್ನು ಖಾಲಿ ಮಾಡದಿದ್ದರೆ (ಸಿಎಎ ಪ್ರತಿಭಟನಾಕಾರರಿಂದ) ನಾವು ನಿಮ್ಮ (ಪೋಲಿಸ್) ಮಾತುಗಳನ್ನು ಕೇಳುವುದಿಲ್ಲ. ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿ 24 ರಂದು ವೇದಪ್ರಕಾಶ್‍ ಸೂರ್ಯ ಅವರನ್ನು ದೆಹಲಿ ಈಶಾನ್ಯ ಜಿಲ್ಲೆಯಿಂದ ರಾಷ್ಟ್ರಪತಿ ಭವನಕ್ಕೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ  ಪ್ರಶಸ್ತಿ ಅರ್ಜಿ ಕುರಿತು  ದಿ ಇಂಡಿಯನ್ ಎಕ್ಸ್‌ಪ್ರೆಸ್‍ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಕೆಲವೇ ದಿನಗಳ ಹಿಂದೆ ನಿವೃತ್ತರಾದ ಆಗಿನ ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಅವರು ಹಿಂಸಾಚಾರದ ಸಮಯದಲ್ಲಿ ತಮ್ಮ ಕೆಲಸಕ್ಕಾಗಿ ವಿಶೇಷ ಸೆಲ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ಪೊಲೀಸ್ ಸಿಬ್ಬಂದಿಗೆ ಔಟ್‍-ಆಫ್-ಟರ್ನ್‍ ಬಡ್ತಿ ನೀಡಿದ್ದರು. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮಿಯಾ ಸಮನ್ವಯ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗಾರ್ ಮತ್ತು ಪಿಂಜ್ರಾ ಟೋಡ್‌ನ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್‍ ಸೇರಿದಂತೆ 21 ಮಂದಿಯನ್ನು ಬಂಧಿಸಿದ ತನಿಖಾ ತಂಡದ ಈ ನಾಲ್ವರು ಅಧಿಕಾರಿಗಳು ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ದೆಹಲಿ ಗಲಭೆಗೆ ಜೋಡಿಸಿದವರು.

ಇದನ್ನೂ ಓದಿ: ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ದೆಹಲಿ ಗಲಭೆಯ ಸಂದರ್ಭದಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಂದ ಆರೋಪದಲ್ಲಿ ಹಸೀನ್ ಖುರೇಷಿಯನ್ನು ಬಂಧಿಸಲು ಕಾರಣವಾದ ಹೆಡ್ ಕಾನ್ಸ್‍ಟೇಬಲ್‍ ಹಮೇಂದ್ರ ರತಿ ಅವರಿಗೆ ಔಟ್‍-ಆಫ್‍-ಟರ್ನ್‍  ಬಡ್ತಿಯನ್ನು ಕಳೆದ ತಿಂಗಳು ನೀಡಲಾಗಿದೆ’ ಎಂದು ತಿಳಿಸಿದರು.

ಈ ವರ್ಷದ ಫೆಬ್ರವರಿ 19 ರಂದು ನಡೆದ ದೆಹಲಿ ಪೊಲೀಸ್ ಮುಖ್ಯಸ್ಥರ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ, ಶ್ರೀವಾಸ್ತವ ಅವರು ಗಲಭೆ ನಿಯಂತ್ರಣದಲ್ಲಿ ತಮ್ಮ ಪೊಲೀಸ್‍ ಪಡೆಗಳ ಪಾತ್ರವನ್ನು ಶ್ಲಾಘಿಸಿದ್ದರು. “ಒಟ್ಟು 755 ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ ಮತ್ತು ನಮ್ಮ ದೂರನ್ನು ಅಂಗೀಕರಿಸಿಲ್ಲ ಎಂದು ಯಾರೂ ಕುಂದುಕೊರತೆ ಹೇಳಿಲ್ಲ’ ಎಂದಿದ್ದರು.

ವಾರ್ಷಿಕ ಪರಿಶೀಲನೆಯ ಸಮಯದಲ್ಲಿ ಗಲಭೆಯನ್ನು ಉಲ್ಲೇಖಿಸಿ, ಡಿಸಿಪಿ (ವಿಶೇಷ ಕೋಶ) ಪ್ರಮೋದ್ ಕುಶ್ವಾ ಮತ್ತು ಡಿಸಿಪಿ (ಅಪರಾಧ) ಜಾಯ್ ಟಿರ್ಕಿ ಅವರು, ಮೌಜ್‌ಪುರದಲ್ಲಿ ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯನ್ನು ಪ್ರಸ್ತಾಪಿಸಿದ್ದು, ಇದರ ನಂತರ “ಪರಿಸ್ಥಿತಿ ಹದಗೆಟ್ಟಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...