Homeಮುಖಪುಟದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ...

ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಗಳು ನೀಡುವ ಶೌರ್ಯ ಪದಕಕ್ಕಾಗಿ ಅರ್ಜಿ ಹಾಕಿರುವ ದೆಹಲಿಯ ಹಲವು ಪೊಲೀಸ್‍ ಅಧಿಕಾರಿಗಳು, ದೆಹಲಿ ಗಲಭೆ ಸಂದರ್ಭಗಳಲ್ಲಿ ತಾವು ಉತ್ತಮ ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ. ಇದರಲ್ಲಿ ಬಿಜೆಪಿ ರಾಜಕಾರಣಿ ಕಪಿಲ್‍ ಮಿಶ್ರಾ ವಿವಾದಾತ್ಮಕ ಭಾಷಣ ಮಾಡುವಾಗ ಪಕ್ಕದಲ್ಲೇ ನಿಂತಿದ್ದ ಈಶಾನ್ಯ ದೆಹಲಿಯ ಮಾಜಿ ಡಿಸಿಪಿ, ವೇದ ಪ್ರಕಾಶ್ ಸೂರ್ಯ ಕೂಡ ಇದ್ದಾರೆ.

ಕಪಿಲ್‍ ಮಿಶ್ರಾ ಪ್ರಚೋದನಾಕಾರಿ ಭಾಷಣ ಮಾಡುವಾಗ ಈಶಾನ್ಯ ದೆಹಲಿಯ ಡಿಸಿಪಿಯಾಗಿದ್ದ ವೇದ ಪ್ರಕಾಶ್‍ ಸೂರ್ಯ ಅವರು ಮಿಶ್ರಾ ಪಕ್ಕದಲ್ಲೇ ಇರುವ ವಿಡಿಯೋ ಮತ್ತು ಫೋಟೊಗಳು ಆಗಲೇ ವೈರಲ್‍ ಆಗಿ ವಿವಾದ ಸೃಷ್ಟಿಯಾಗಿತ್ತು. ಕಪಿಲ್‍ ಮಿಶ್ರಾರ ಆ ಭಾಷಣದ ಮರುದಿನವೇ ಈಶಾನ್ಯ ದೆಹಲಿಯಲ್ಲಿ ಗಲಭೆ ಭುಗಿಲೆದ್ದಿತ್ತು.

ಕಳೆದ ವರ್ಷ ಫೆಬ್ರವರಿ 23 ರಂದು ಸಿಎಎ ಪರ ರ್‍ಯಾಲಿಯಲ್ಲಿ ಈ ಘಟನೆ ಸಂಭವಿಸಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ವಿದ್ಯಾರ್ಥಿ ಹೋರಾಟಗಾರರ ಬಿಡುಗಡೆಗೆ ಕೋರ್ಟ್‌ ಆದೇಶ

ವೇದ ಪ್ರಕಾಶ್‍ ಸೂರ್ಯ, ಗಲಭೆಯಲ್ಲಿ ನೂರಾರು ಜನರ ಪ್ರಾಣ ಮತ್ತು ಆಸ್ತಿಗಳನ್ನು ಉಳಿಸಿದ್ದಾಗಿ ಮತ್ತು ಗಲಭೆಯ ಸಮಯದಲ್ಲಿ “ಅಸಾಧಾರಣ” ಕೆಲಸವನ್ನು ಮಾಡಿದ್ದಾಗಿ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ವೇದಪ್ರಕಾಶ ಸೂರ್ಯ ಅವರ ಜೆಸಿಪಿ  ಆಗಿದ್ದ ಅಲೋಕ್ ಕುಮಾರ್ ಮತ್ತು ಅಧೀನ ಅಧಿಕಾರಿಗಳು ಸೇರಿದಂತೆ ಸುಮಾರು 25 ಪೊಲೀಸ್ ಅಧಿಕಾರಿಗಳು ಪ್ರಶಸ್ತಿಗಾಗಿ ತಮ್ಮ ಅರ್ಜಿಗಳನ್ನು ದೆಹಲಿ ಪೊಲೀಸ್‍ ಪ್ರಧಾನ ಕಚೇರಿಗೆ  ಸಲ್ಲಿಸಿದ್ದಾರೆ. ದೆಹಲಿ ಗಲಭೆಯ ಸಂದರ್ಭದಲ್ಲಿ ತಮ್ಮ ಪಾತ್ರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಜೀವ ಮತ್ತು ಆಸ್ತಿಯನ್ನು ಉಳಿಸುವ” ಅಥವಾ “ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು ಬಂಧಿಸುವಲ್ಲಿ” ಮಾಡಿದ ಕಾರ್ಯಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ನೀಡಲಾಗುತ್ತದೆ.

“ಈ ಪ್ರಸ್ತಾಪವನ್ನು ಜಿಲ್ಲೆಯಿಂದ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ಹಿರಿಯ ಅಧಿಕಾರಿಗಳ ಸಮಿತಿಯ ಮುಂದೆ ಇಡಲಾಗುತ್ತದೆ ಮತ್ತು ಅಂತಿಮವಾಗಿ ದೆಹಲಿ ಪೊಲೀಸ್ ಆಯುಕ್ತರಿಂದ ಅನುಮೋದನೆ ಪಡೆಯಲಾಗುತ್ತದೆ. ಫೈಲ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಧಿಕ್ಕಾರ ಕೂಗುವಂತೆ ಒತ್ತಾಯಿಸಿ ಹಲ್ಲೆ: ಬಂಧಿತ ದೆಹಲಿ ಗಲಭೆಯಲ್ಲೂ ಆರೋಪಿ!

ಕೆಲವು ದಿನಗಳ ಹಿಂದೆ ವೇದಪ್ರಕಾಶ್‍ ಸೂರ್ಯ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಅರ್ಜಿಯನ್ನು ಇತರ 24 ಪೊಲೀಸ್ ಅಧಿಕಾರಿಗಳ ಅರ್ಜಿಗಳ ಜೊತೆಗೆ ಪ್ರಧಾನ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, 23 ಪೊಲೀಸ್ ಸಿಬ್ಬಂದಿ “ಅಸಾಧಾರಣ ಕಾರ್ಯ ಪುರಸ್ಕಾರ” ಪ್ರಶಸ್ತಿಗಾಗಿ ಮತ್ತು 14 ಮಂದಿ ಔಟ್‍-ಆಫ್‍-ಟರ್ನ್‍-ಪ್ರಮೋಷನ್‍ ಆಧಾರದಲ್ಲಿ ಪದಕಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ ಎಂದು ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಮೂರು ನಾಲ್ಕು ದಿನಗಳಲ್ಲಿ ಗಲಭೆಯನ್ನು ನಿಯಂತ್ರಿಸಿದ್ದಾಗಿ ವೇದಪ್ರಕಾಶ್‍ ಸೂರ್ಯ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಹಾಯಕ್ಕಾಗಿ ಫೋನ್ ಕರೆಗಳಿಗೆ ಪ್ರತಿಕ್ರಿಯೆಯನ್ನು ಒಳಗೊಂಡಂತೆ, ನೂರಾರು ಜನರ ಪ್ರಾಣ ಉಳಿಸುವಲ್ಲಿ ಅವರ ‘ಧೈರ್ಯಶಾಲಿ ಪ್ರಯತ್ನಗಳ’ ಕುರಿತು ಮತ್ತು ಕಲ್ಲು ತೂರಾಟಗಳನ್ನು ಲೆಕ್ಕಿಸದೇ ತಾವು ಕರ್ತವ್ಯ ಮಾಡಿದ್ದಾಗಿ ಅರ್ಜಿಯಲ್ಲಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್‍ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಕಪಿಲ್‍ ಮಿಶ್ರಾ ಅವರು ಫೆಬ್ರವರಿ 23, 2020 ರಂದು ಮೌಜ್ಪುರ್ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರ ಸಭೆ ನಡೆಸಿದ ಭಾಷಣದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ದೆಹಲಿ ಈಶಾನ್ಯ ಡಿಸಿಪಿಯಾಗಿದ್ದ  ವೇದಪ್ರಕಾಶ್‍ ಸೂರ್ಯ ಅವರು ಕಪಿಲ್‍ ಮಿಶ್ರಾ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಭಾಷಣದಲ್ಲಿ, ಬಿಜೆಪಿ ನಾಯಕ, “ಡಿಸಿಪಿ ನಮ್ಮ ಪಕ್ಕವೇ ಇದ್ದಾರೆ. ನಿಮ್ಮ ಪರವಾಗಿ, ನಾನು ಅವರಿಗೆ ಹೇಳಲು ಬಯಸುತ್ತೇನೆ ಯುಎಸ್ ಅಧ್ಯಕ್ಷ (ಡೊನಾಲ್ಡ್ ಟ್ರಂಪ್) ಭಾರತದಲ್ಲಿ ಇರುವವರೆಗೂ ನಾವು ಈ ಪ್ರದೇಶವನ್ನು ಶಾಂತಿಯುತವಾಗಿ ನೋಡಿಕೊಳ್ಳುತ್ತೇವೆ. ಅದರ ನಂತರ, ರಸ್ತೆಗಳನ್ನು ಖಾಲಿ ಮಾಡದಿದ್ದರೆ (ಸಿಎಎ ಪ್ರತಿಭಟನಾಕಾರರಿಂದ) ನಾವು ನಿಮ್ಮ (ಪೋಲಿಸ್) ಮಾತುಗಳನ್ನು ಕೇಳುವುದಿಲ್ಲ. ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿ 24 ರಂದು ವೇದಪ್ರಕಾಶ್‍ ಸೂರ್ಯ ಅವರನ್ನು ದೆಹಲಿ ಈಶಾನ್ಯ ಜಿಲ್ಲೆಯಿಂದ ರಾಷ್ಟ್ರಪತಿ ಭವನಕ್ಕೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ  ಪ್ರಶಸ್ತಿ ಅರ್ಜಿ ಕುರಿತು  ದಿ ಇಂಡಿಯನ್ ಎಕ್ಸ್‌ಪ್ರೆಸ್‍ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಕೆಲವೇ ದಿನಗಳ ಹಿಂದೆ ನಿವೃತ್ತರಾದ ಆಗಿನ ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಅವರು ಹಿಂಸಾಚಾರದ ಸಮಯದಲ್ಲಿ ತಮ್ಮ ಕೆಲಸಕ್ಕಾಗಿ ವಿಶೇಷ ಸೆಲ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ಪೊಲೀಸ್ ಸಿಬ್ಬಂದಿಗೆ ಔಟ್‍-ಆಫ್-ಟರ್ನ್‍ ಬಡ್ತಿ ನೀಡಿದ್ದರು. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮಿಯಾ ಸಮನ್ವಯ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗಾರ್ ಮತ್ತು ಪಿಂಜ್ರಾ ಟೋಡ್‌ನ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್‍ ಸೇರಿದಂತೆ 21 ಮಂದಿಯನ್ನು ಬಂಧಿಸಿದ ತನಿಖಾ ತಂಡದ ಈ ನಾಲ್ವರು ಅಧಿಕಾರಿಗಳು ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ದೆಹಲಿ ಗಲಭೆಗೆ ಜೋಡಿಸಿದವರು.

ಇದನ್ನೂ ಓದಿ: ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ದೆಹಲಿ ಗಲಭೆಯ ಸಂದರ್ಭದಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಂದ ಆರೋಪದಲ್ಲಿ ಹಸೀನ್ ಖುರೇಷಿಯನ್ನು ಬಂಧಿಸಲು ಕಾರಣವಾದ ಹೆಡ್ ಕಾನ್ಸ್‍ಟೇಬಲ್‍ ಹಮೇಂದ್ರ ರತಿ ಅವರಿಗೆ ಔಟ್‍-ಆಫ್‍-ಟರ್ನ್‍  ಬಡ್ತಿಯನ್ನು ಕಳೆದ ತಿಂಗಳು ನೀಡಲಾಗಿದೆ’ ಎಂದು ತಿಳಿಸಿದರು.

ಈ ವರ್ಷದ ಫೆಬ್ರವರಿ 19 ರಂದು ನಡೆದ ದೆಹಲಿ ಪೊಲೀಸ್ ಮುಖ್ಯಸ್ಥರ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ, ಶ್ರೀವಾಸ್ತವ ಅವರು ಗಲಭೆ ನಿಯಂತ್ರಣದಲ್ಲಿ ತಮ್ಮ ಪೊಲೀಸ್‍ ಪಡೆಗಳ ಪಾತ್ರವನ್ನು ಶ್ಲಾಘಿಸಿದ್ದರು. “ಒಟ್ಟು 755 ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ ಮತ್ತು ನಮ್ಮ ದೂರನ್ನು ಅಂಗೀಕರಿಸಿಲ್ಲ ಎಂದು ಯಾರೂ ಕುಂದುಕೊರತೆ ಹೇಳಿಲ್ಲ’ ಎಂದಿದ್ದರು.

ವಾರ್ಷಿಕ ಪರಿಶೀಲನೆಯ ಸಮಯದಲ್ಲಿ ಗಲಭೆಯನ್ನು ಉಲ್ಲೇಖಿಸಿ, ಡಿಸಿಪಿ (ವಿಶೇಷ ಕೋಶ) ಪ್ರಮೋದ್ ಕುಶ್ವಾ ಮತ್ತು ಡಿಸಿಪಿ (ಅಪರಾಧ) ಜಾಯ್ ಟಿರ್ಕಿ ಅವರು, ಮೌಜ್‌ಪುರದಲ್ಲಿ ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯನ್ನು ಪ್ರಸ್ತಾಪಿಸಿದ್ದು, ಇದರ ನಂತರ “ಪರಿಸ್ಥಿತಿ ಹದಗೆಟ್ಟಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...