Homeಮುಖಪುಟದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ...

ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಗಳು ನೀಡುವ ಶೌರ್ಯ ಪದಕಕ್ಕಾಗಿ ಅರ್ಜಿ ಹಾಕಿರುವ ದೆಹಲಿಯ ಹಲವು ಪೊಲೀಸ್‍ ಅಧಿಕಾರಿಗಳು, ದೆಹಲಿ ಗಲಭೆ ಸಂದರ್ಭಗಳಲ್ಲಿ ತಾವು ಉತ್ತಮ ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ. ಇದರಲ್ಲಿ ಬಿಜೆಪಿ ರಾಜಕಾರಣಿ ಕಪಿಲ್‍ ಮಿಶ್ರಾ ವಿವಾದಾತ್ಮಕ ಭಾಷಣ ಮಾಡುವಾಗ ಪಕ್ಕದಲ್ಲೇ ನಿಂತಿದ್ದ ಈಶಾನ್ಯ ದೆಹಲಿಯ ಮಾಜಿ ಡಿಸಿಪಿ, ವೇದ ಪ್ರಕಾಶ್ ಸೂರ್ಯ ಕೂಡ ಇದ್ದಾರೆ.

ಕಪಿಲ್‍ ಮಿಶ್ರಾ ಪ್ರಚೋದನಾಕಾರಿ ಭಾಷಣ ಮಾಡುವಾಗ ಈಶಾನ್ಯ ದೆಹಲಿಯ ಡಿಸಿಪಿಯಾಗಿದ್ದ ವೇದ ಪ್ರಕಾಶ್‍ ಸೂರ್ಯ ಅವರು ಮಿಶ್ರಾ ಪಕ್ಕದಲ್ಲೇ ಇರುವ ವಿಡಿಯೋ ಮತ್ತು ಫೋಟೊಗಳು ಆಗಲೇ ವೈರಲ್‍ ಆಗಿ ವಿವಾದ ಸೃಷ್ಟಿಯಾಗಿತ್ತು. ಕಪಿಲ್‍ ಮಿಶ್ರಾರ ಆ ಭಾಷಣದ ಮರುದಿನವೇ ಈಶಾನ್ಯ ದೆಹಲಿಯಲ್ಲಿ ಗಲಭೆ ಭುಗಿಲೆದ್ದಿತ್ತು.

ಕಳೆದ ವರ್ಷ ಫೆಬ್ರವರಿ 23 ರಂದು ಸಿಎಎ ಪರ ರ್‍ಯಾಲಿಯಲ್ಲಿ ಈ ಘಟನೆ ಸಂಭವಿಸಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ವಿದ್ಯಾರ್ಥಿ ಹೋರಾಟಗಾರರ ಬಿಡುಗಡೆಗೆ ಕೋರ್ಟ್‌ ಆದೇಶ

ವೇದ ಪ್ರಕಾಶ್‍ ಸೂರ್ಯ, ಗಲಭೆಯಲ್ಲಿ ನೂರಾರು ಜನರ ಪ್ರಾಣ ಮತ್ತು ಆಸ್ತಿಗಳನ್ನು ಉಳಿಸಿದ್ದಾಗಿ ಮತ್ತು ಗಲಭೆಯ ಸಮಯದಲ್ಲಿ “ಅಸಾಧಾರಣ” ಕೆಲಸವನ್ನು ಮಾಡಿದ್ದಾಗಿ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ವೇದಪ್ರಕಾಶ ಸೂರ್ಯ ಅವರ ಜೆಸಿಪಿ  ಆಗಿದ್ದ ಅಲೋಕ್ ಕುಮಾರ್ ಮತ್ತು ಅಧೀನ ಅಧಿಕಾರಿಗಳು ಸೇರಿದಂತೆ ಸುಮಾರು 25 ಪೊಲೀಸ್ ಅಧಿಕಾರಿಗಳು ಪ್ರಶಸ್ತಿಗಾಗಿ ತಮ್ಮ ಅರ್ಜಿಗಳನ್ನು ದೆಹಲಿ ಪೊಲೀಸ್‍ ಪ್ರಧಾನ ಕಚೇರಿಗೆ  ಸಲ್ಲಿಸಿದ್ದಾರೆ. ದೆಹಲಿ ಗಲಭೆಯ ಸಂದರ್ಭದಲ್ಲಿ ತಮ್ಮ ಪಾತ್ರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಜೀವ ಮತ್ತು ಆಸ್ತಿಯನ್ನು ಉಳಿಸುವ” ಅಥವಾ “ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು ಬಂಧಿಸುವಲ್ಲಿ” ಮಾಡಿದ ಕಾರ್ಯಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ನೀಡಲಾಗುತ್ತದೆ.

“ಈ ಪ್ರಸ್ತಾಪವನ್ನು ಜಿಲ್ಲೆಯಿಂದ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ಹಿರಿಯ ಅಧಿಕಾರಿಗಳ ಸಮಿತಿಯ ಮುಂದೆ ಇಡಲಾಗುತ್ತದೆ ಮತ್ತು ಅಂತಿಮವಾಗಿ ದೆಹಲಿ ಪೊಲೀಸ್ ಆಯುಕ್ತರಿಂದ ಅನುಮೋದನೆ ಪಡೆಯಲಾಗುತ್ತದೆ. ಫೈಲ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಧಿಕ್ಕಾರ ಕೂಗುವಂತೆ ಒತ್ತಾಯಿಸಿ ಹಲ್ಲೆ: ಬಂಧಿತ ದೆಹಲಿ ಗಲಭೆಯಲ್ಲೂ ಆರೋಪಿ!

ಕೆಲವು ದಿನಗಳ ಹಿಂದೆ ವೇದಪ್ರಕಾಶ್‍ ಸೂರ್ಯ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಅರ್ಜಿಯನ್ನು ಇತರ 24 ಪೊಲೀಸ್ ಅಧಿಕಾರಿಗಳ ಅರ್ಜಿಗಳ ಜೊತೆಗೆ ಪ್ರಧಾನ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, 23 ಪೊಲೀಸ್ ಸಿಬ್ಬಂದಿ “ಅಸಾಧಾರಣ ಕಾರ್ಯ ಪುರಸ್ಕಾರ” ಪ್ರಶಸ್ತಿಗಾಗಿ ಮತ್ತು 14 ಮಂದಿ ಔಟ್‍-ಆಫ್‍-ಟರ್ನ್‍-ಪ್ರಮೋಷನ್‍ ಆಧಾರದಲ್ಲಿ ಪದಕಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ ಎಂದು ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಮೂರು ನಾಲ್ಕು ದಿನಗಳಲ್ಲಿ ಗಲಭೆಯನ್ನು ನಿಯಂತ್ರಿಸಿದ್ದಾಗಿ ವೇದಪ್ರಕಾಶ್‍ ಸೂರ್ಯ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಹಾಯಕ್ಕಾಗಿ ಫೋನ್ ಕರೆಗಳಿಗೆ ಪ್ರತಿಕ್ರಿಯೆಯನ್ನು ಒಳಗೊಂಡಂತೆ, ನೂರಾರು ಜನರ ಪ್ರಾಣ ಉಳಿಸುವಲ್ಲಿ ಅವರ ‘ಧೈರ್ಯಶಾಲಿ ಪ್ರಯತ್ನಗಳ’ ಕುರಿತು ಮತ್ತು ಕಲ್ಲು ತೂರಾಟಗಳನ್ನು ಲೆಕ್ಕಿಸದೇ ತಾವು ಕರ್ತವ್ಯ ಮಾಡಿದ್ದಾಗಿ ಅರ್ಜಿಯಲ್ಲಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್‍ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಕಪಿಲ್‍ ಮಿಶ್ರಾ ಅವರು ಫೆಬ್ರವರಿ 23, 2020 ರಂದು ಮೌಜ್ಪುರ್ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರ ಸಭೆ ನಡೆಸಿದ ಭಾಷಣದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ದೆಹಲಿ ಈಶಾನ್ಯ ಡಿಸಿಪಿಯಾಗಿದ್ದ  ವೇದಪ್ರಕಾಶ್‍ ಸೂರ್ಯ ಅವರು ಕಪಿಲ್‍ ಮಿಶ್ರಾ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಭಾಷಣದಲ್ಲಿ, ಬಿಜೆಪಿ ನಾಯಕ, “ಡಿಸಿಪಿ ನಮ್ಮ ಪಕ್ಕವೇ ಇದ್ದಾರೆ. ನಿಮ್ಮ ಪರವಾಗಿ, ನಾನು ಅವರಿಗೆ ಹೇಳಲು ಬಯಸುತ್ತೇನೆ ಯುಎಸ್ ಅಧ್ಯಕ್ಷ (ಡೊನಾಲ್ಡ್ ಟ್ರಂಪ್) ಭಾರತದಲ್ಲಿ ಇರುವವರೆಗೂ ನಾವು ಈ ಪ್ರದೇಶವನ್ನು ಶಾಂತಿಯುತವಾಗಿ ನೋಡಿಕೊಳ್ಳುತ್ತೇವೆ. ಅದರ ನಂತರ, ರಸ್ತೆಗಳನ್ನು ಖಾಲಿ ಮಾಡದಿದ್ದರೆ (ಸಿಎಎ ಪ್ರತಿಭಟನಾಕಾರರಿಂದ) ನಾವು ನಿಮ್ಮ (ಪೋಲಿಸ್) ಮಾತುಗಳನ್ನು ಕೇಳುವುದಿಲ್ಲ. ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿ 24 ರಂದು ವೇದಪ್ರಕಾಶ್‍ ಸೂರ್ಯ ಅವರನ್ನು ದೆಹಲಿ ಈಶಾನ್ಯ ಜಿಲ್ಲೆಯಿಂದ ರಾಷ್ಟ್ರಪತಿ ಭವನಕ್ಕೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ  ಪ್ರಶಸ್ತಿ ಅರ್ಜಿ ಕುರಿತು  ದಿ ಇಂಡಿಯನ್ ಎಕ್ಸ್‌ಪ್ರೆಸ್‍ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಕೆಲವೇ ದಿನಗಳ ಹಿಂದೆ ನಿವೃತ್ತರಾದ ಆಗಿನ ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಅವರು ಹಿಂಸಾಚಾರದ ಸಮಯದಲ್ಲಿ ತಮ್ಮ ಕೆಲಸಕ್ಕಾಗಿ ವಿಶೇಷ ಸೆಲ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ಪೊಲೀಸ್ ಸಿಬ್ಬಂದಿಗೆ ಔಟ್‍-ಆಫ್-ಟರ್ನ್‍ ಬಡ್ತಿ ನೀಡಿದ್ದರು. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮಿಯಾ ಸಮನ್ವಯ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗಾರ್ ಮತ್ತು ಪಿಂಜ್ರಾ ಟೋಡ್‌ನ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್‍ ಸೇರಿದಂತೆ 21 ಮಂದಿಯನ್ನು ಬಂಧಿಸಿದ ತನಿಖಾ ತಂಡದ ಈ ನಾಲ್ವರು ಅಧಿಕಾರಿಗಳು ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ದೆಹಲಿ ಗಲಭೆಗೆ ಜೋಡಿಸಿದವರು.

ಇದನ್ನೂ ಓದಿ: ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ದೆಹಲಿ ಗಲಭೆಯ ಸಂದರ್ಭದಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಂದ ಆರೋಪದಲ್ಲಿ ಹಸೀನ್ ಖುರೇಷಿಯನ್ನು ಬಂಧಿಸಲು ಕಾರಣವಾದ ಹೆಡ್ ಕಾನ್ಸ್‍ಟೇಬಲ್‍ ಹಮೇಂದ್ರ ರತಿ ಅವರಿಗೆ ಔಟ್‍-ಆಫ್‍-ಟರ್ನ್‍  ಬಡ್ತಿಯನ್ನು ಕಳೆದ ತಿಂಗಳು ನೀಡಲಾಗಿದೆ’ ಎಂದು ತಿಳಿಸಿದರು.

ಈ ವರ್ಷದ ಫೆಬ್ರವರಿ 19 ರಂದು ನಡೆದ ದೆಹಲಿ ಪೊಲೀಸ್ ಮುಖ್ಯಸ್ಥರ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ, ಶ್ರೀವಾಸ್ತವ ಅವರು ಗಲಭೆ ನಿಯಂತ್ರಣದಲ್ಲಿ ತಮ್ಮ ಪೊಲೀಸ್‍ ಪಡೆಗಳ ಪಾತ್ರವನ್ನು ಶ್ಲಾಘಿಸಿದ್ದರು. “ಒಟ್ಟು 755 ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ ಮತ್ತು ನಮ್ಮ ದೂರನ್ನು ಅಂಗೀಕರಿಸಿಲ್ಲ ಎಂದು ಯಾರೂ ಕುಂದುಕೊರತೆ ಹೇಳಿಲ್ಲ’ ಎಂದಿದ್ದರು.

ವಾರ್ಷಿಕ ಪರಿಶೀಲನೆಯ ಸಮಯದಲ್ಲಿ ಗಲಭೆಯನ್ನು ಉಲ್ಲೇಖಿಸಿ, ಡಿಸಿಪಿ (ವಿಶೇಷ ಕೋಶ) ಪ್ರಮೋದ್ ಕುಶ್ವಾ ಮತ್ತು ಡಿಸಿಪಿ (ಅಪರಾಧ) ಜಾಯ್ ಟಿರ್ಕಿ ಅವರು, ಮೌಜ್‌ಪುರದಲ್ಲಿ ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯನ್ನು ಪ್ರಸ್ತಾಪಿಸಿದ್ದು, ಇದರ ನಂತರ “ಪರಿಸ್ಥಿತಿ ಹದಗೆಟ್ಟಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...