Homeಮುಖಪುಟದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ...

ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಗಳು ನೀಡುವ ಶೌರ್ಯ ಪದಕಕ್ಕಾಗಿ ಅರ್ಜಿ ಹಾಕಿರುವ ದೆಹಲಿಯ ಹಲವು ಪೊಲೀಸ್‍ ಅಧಿಕಾರಿಗಳು, ದೆಹಲಿ ಗಲಭೆ ಸಂದರ್ಭಗಳಲ್ಲಿ ತಾವು ಉತ್ತಮ ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ. ಇದರಲ್ಲಿ ಬಿಜೆಪಿ ರಾಜಕಾರಣಿ ಕಪಿಲ್‍ ಮಿಶ್ರಾ ವಿವಾದಾತ್ಮಕ ಭಾಷಣ ಮಾಡುವಾಗ ಪಕ್ಕದಲ್ಲೇ ನಿಂತಿದ್ದ ಈಶಾನ್ಯ ದೆಹಲಿಯ ಮಾಜಿ ಡಿಸಿಪಿ, ವೇದ ಪ್ರಕಾಶ್ ಸೂರ್ಯ ಕೂಡ ಇದ್ದಾರೆ.

ಕಪಿಲ್‍ ಮಿಶ್ರಾ ಪ್ರಚೋದನಾಕಾರಿ ಭಾಷಣ ಮಾಡುವಾಗ ಈಶಾನ್ಯ ದೆಹಲಿಯ ಡಿಸಿಪಿಯಾಗಿದ್ದ ವೇದ ಪ್ರಕಾಶ್‍ ಸೂರ್ಯ ಅವರು ಮಿಶ್ರಾ ಪಕ್ಕದಲ್ಲೇ ಇರುವ ವಿಡಿಯೋ ಮತ್ತು ಫೋಟೊಗಳು ಆಗಲೇ ವೈರಲ್‍ ಆಗಿ ವಿವಾದ ಸೃಷ್ಟಿಯಾಗಿತ್ತು. ಕಪಿಲ್‍ ಮಿಶ್ರಾರ ಆ ಭಾಷಣದ ಮರುದಿನವೇ ಈಶಾನ್ಯ ದೆಹಲಿಯಲ್ಲಿ ಗಲಭೆ ಭುಗಿಲೆದ್ದಿತ್ತು.

ಕಳೆದ ವರ್ಷ ಫೆಬ್ರವರಿ 23 ರಂದು ಸಿಎಎ ಪರ ರ್‍ಯಾಲಿಯಲ್ಲಿ ಈ ಘಟನೆ ಸಂಭವಿಸಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ವಿದ್ಯಾರ್ಥಿ ಹೋರಾಟಗಾರರ ಬಿಡುಗಡೆಗೆ ಕೋರ್ಟ್‌ ಆದೇಶ

ವೇದ ಪ್ರಕಾಶ್‍ ಸೂರ್ಯ, ಗಲಭೆಯಲ್ಲಿ ನೂರಾರು ಜನರ ಪ್ರಾಣ ಮತ್ತು ಆಸ್ತಿಗಳನ್ನು ಉಳಿಸಿದ್ದಾಗಿ ಮತ್ತು ಗಲಭೆಯ ಸಮಯದಲ್ಲಿ “ಅಸಾಧಾರಣ” ಕೆಲಸವನ್ನು ಮಾಡಿದ್ದಾಗಿ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ವೇದಪ್ರಕಾಶ ಸೂರ್ಯ ಅವರ ಜೆಸಿಪಿ  ಆಗಿದ್ದ ಅಲೋಕ್ ಕುಮಾರ್ ಮತ್ತು ಅಧೀನ ಅಧಿಕಾರಿಗಳು ಸೇರಿದಂತೆ ಸುಮಾರು 25 ಪೊಲೀಸ್ ಅಧಿಕಾರಿಗಳು ಪ್ರಶಸ್ತಿಗಾಗಿ ತಮ್ಮ ಅರ್ಜಿಗಳನ್ನು ದೆಹಲಿ ಪೊಲೀಸ್‍ ಪ್ರಧಾನ ಕಚೇರಿಗೆ  ಸಲ್ಲಿಸಿದ್ದಾರೆ. ದೆಹಲಿ ಗಲಭೆಯ ಸಂದರ್ಭದಲ್ಲಿ ತಮ್ಮ ಪಾತ್ರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಜೀವ ಮತ್ತು ಆಸ್ತಿಯನ್ನು ಉಳಿಸುವ” ಅಥವಾ “ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು ಬಂಧಿಸುವಲ್ಲಿ” ಮಾಡಿದ ಕಾರ್ಯಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ನೀಡಲಾಗುತ್ತದೆ.

“ಈ ಪ್ರಸ್ತಾಪವನ್ನು ಜಿಲ್ಲೆಯಿಂದ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ಹಿರಿಯ ಅಧಿಕಾರಿಗಳ ಸಮಿತಿಯ ಮುಂದೆ ಇಡಲಾಗುತ್ತದೆ ಮತ್ತು ಅಂತಿಮವಾಗಿ ದೆಹಲಿ ಪೊಲೀಸ್ ಆಯುಕ್ತರಿಂದ ಅನುಮೋದನೆ ಪಡೆಯಲಾಗುತ್ತದೆ. ಫೈಲ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಧಿಕ್ಕಾರ ಕೂಗುವಂತೆ ಒತ್ತಾಯಿಸಿ ಹಲ್ಲೆ: ಬಂಧಿತ ದೆಹಲಿ ಗಲಭೆಯಲ್ಲೂ ಆರೋಪಿ!

ಕೆಲವು ದಿನಗಳ ಹಿಂದೆ ವೇದಪ್ರಕಾಶ್‍ ಸೂರ್ಯ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಅರ್ಜಿಯನ್ನು ಇತರ 24 ಪೊಲೀಸ್ ಅಧಿಕಾರಿಗಳ ಅರ್ಜಿಗಳ ಜೊತೆಗೆ ಪ್ರಧಾನ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, 23 ಪೊಲೀಸ್ ಸಿಬ್ಬಂದಿ “ಅಸಾಧಾರಣ ಕಾರ್ಯ ಪುರಸ್ಕಾರ” ಪ್ರಶಸ್ತಿಗಾಗಿ ಮತ್ತು 14 ಮಂದಿ ಔಟ್‍-ಆಫ್‍-ಟರ್ನ್‍-ಪ್ರಮೋಷನ್‍ ಆಧಾರದಲ್ಲಿ ಪದಕಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ ಎಂದು ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಮೂರು ನಾಲ್ಕು ದಿನಗಳಲ್ಲಿ ಗಲಭೆಯನ್ನು ನಿಯಂತ್ರಿಸಿದ್ದಾಗಿ ವೇದಪ್ರಕಾಶ್‍ ಸೂರ್ಯ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಹಾಯಕ್ಕಾಗಿ ಫೋನ್ ಕರೆಗಳಿಗೆ ಪ್ರತಿಕ್ರಿಯೆಯನ್ನು ಒಳಗೊಂಡಂತೆ, ನೂರಾರು ಜನರ ಪ್ರಾಣ ಉಳಿಸುವಲ್ಲಿ ಅವರ ‘ಧೈರ್ಯಶಾಲಿ ಪ್ರಯತ್ನಗಳ’ ಕುರಿತು ಮತ್ತು ಕಲ್ಲು ತೂರಾಟಗಳನ್ನು ಲೆಕ್ಕಿಸದೇ ತಾವು ಕರ್ತವ್ಯ ಮಾಡಿದ್ದಾಗಿ ಅರ್ಜಿಯಲ್ಲಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್‍ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಕಪಿಲ್‍ ಮಿಶ್ರಾ ಅವರು ಫೆಬ್ರವರಿ 23, 2020 ರಂದು ಮೌಜ್ಪುರ್ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರ ಸಭೆ ನಡೆಸಿದ ಭಾಷಣದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ದೆಹಲಿ ಈಶಾನ್ಯ ಡಿಸಿಪಿಯಾಗಿದ್ದ  ವೇದಪ್ರಕಾಶ್‍ ಸೂರ್ಯ ಅವರು ಕಪಿಲ್‍ ಮಿಶ್ರಾ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಭಾಷಣದಲ್ಲಿ, ಬಿಜೆಪಿ ನಾಯಕ, “ಡಿಸಿಪಿ ನಮ್ಮ ಪಕ್ಕವೇ ಇದ್ದಾರೆ. ನಿಮ್ಮ ಪರವಾಗಿ, ನಾನು ಅವರಿಗೆ ಹೇಳಲು ಬಯಸುತ್ತೇನೆ ಯುಎಸ್ ಅಧ್ಯಕ್ಷ (ಡೊನಾಲ್ಡ್ ಟ್ರಂಪ್) ಭಾರತದಲ್ಲಿ ಇರುವವರೆಗೂ ನಾವು ಈ ಪ್ರದೇಶವನ್ನು ಶಾಂತಿಯುತವಾಗಿ ನೋಡಿಕೊಳ್ಳುತ್ತೇವೆ. ಅದರ ನಂತರ, ರಸ್ತೆಗಳನ್ನು ಖಾಲಿ ಮಾಡದಿದ್ದರೆ (ಸಿಎಎ ಪ್ರತಿಭಟನಾಕಾರರಿಂದ) ನಾವು ನಿಮ್ಮ (ಪೋಲಿಸ್) ಮಾತುಗಳನ್ನು ಕೇಳುವುದಿಲ್ಲ. ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿ 24 ರಂದು ವೇದಪ್ರಕಾಶ್‍ ಸೂರ್ಯ ಅವರನ್ನು ದೆಹಲಿ ಈಶಾನ್ಯ ಜಿಲ್ಲೆಯಿಂದ ರಾಷ್ಟ್ರಪತಿ ಭವನಕ್ಕೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ  ಪ್ರಶಸ್ತಿ ಅರ್ಜಿ ಕುರಿತು  ದಿ ಇಂಡಿಯನ್ ಎಕ್ಸ್‌ಪ್ರೆಸ್‍ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಕೆಲವೇ ದಿನಗಳ ಹಿಂದೆ ನಿವೃತ್ತರಾದ ಆಗಿನ ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಅವರು ಹಿಂಸಾಚಾರದ ಸಮಯದಲ್ಲಿ ತಮ್ಮ ಕೆಲಸಕ್ಕಾಗಿ ವಿಶೇಷ ಸೆಲ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ಪೊಲೀಸ್ ಸಿಬ್ಬಂದಿಗೆ ಔಟ್‍-ಆಫ್-ಟರ್ನ್‍ ಬಡ್ತಿ ನೀಡಿದ್ದರು. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮಿಯಾ ಸಮನ್ವಯ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗಾರ್ ಮತ್ತು ಪಿಂಜ್ರಾ ಟೋಡ್‌ನ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್‍ ಸೇರಿದಂತೆ 21 ಮಂದಿಯನ್ನು ಬಂಧಿಸಿದ ತನಿಖಾ ತಂಡದ ಈ ನಾಲ್ವರು ಅಧಿಕಾರಿಗಳು ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ದೆಹಲಿ ಗಲಭೆಗೆ ಜೋಡಿಸಿದವರು.

ಇದನ್ನೂ ಓದಿ: ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ದೆಹಲಿ ಗಲಭೆಯ ಸಂದರ್ಭದಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಂದ ಆರೋಪದಲ್ಲಿ ಹಸೀನ್ ಖುರೇಷಿಯನ್ನು ಬಂಧಿಸಲು ಕಾರಣವಾದ ಹೆಡ್ ಕಾನ್ಸ್‍ಟೇಬಲ್‍ ಹಮೇಂದ್ರ ರತಿ ಅವರಿಗೆ ಔಟ್‍-ಆಫ್‍-ಟರ್ನ್‍  ಬಡ್ತಿಯನ್ನು ಕಳೆದ ತಿಂಗಳು ನೀಡಲಾಗಿದೆ’ ಎಂದು ತಿಳಿಸಿದರು.

ಈ ವರ್ಷದ ಫೆಬ್ರವರಿ 19 ರಂದು ನಡೆದ ದೆಹಲಿ ಪೊಲೀಸ್ ಮುಖ್ಯಸ್ಥರ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ, ಶ್ರೀವಾಸ್ತವ ಅವರು ಗಲಭೆ ನಿಯಂತ್ರಣದಲ್ಲಿ ತಮ್ಮ ಪೊಲೀಸ್‍ ಪಡೆಗಳ ಪಾತ್ರವನ್ನು ಶ್ಲಾಘಿಸಿದ್ದರು. “ಒಟ್ಟು 755 ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ ಮತ್ತು ನಮ್ಮ ದೂರನ್ನು ಅಂಗೀಕರಿಸಿಲ್ಲ ಎಂದು ಯಾರೂ ಕುಂದುಕೊರತೆ ಹೇಳಿಲ್ಲ’ ಎಂದಿದ್ದರು.

ವಾರ್ಷಿಕ ಪರಿಶೀಲನೆಯ ಸಮಯದಲ್ಲಿ ಗಲಭೆಯನ್ನು ಉಲ್ಲೇಖಿಸಿ, ಡಿಸಿಪಿ (ವಿಶೇಷ ಕೋಶ) ಪ್ರಮೋದ್ ಕುಶ್ವಾ ಮತ್ತು ಡಿಸಿಪಿ (ಅಪರಾಧ) ಜಾಯ್ ಟಿರ್ಕಿ ಅವರು, ಮೌಜ್‌ಪುರದಲ್ಲಿ ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯನ್ನು ಪ್ರಸ್ತಾಪಿಸಿದ್ದು, ಇದರ ನಂತರ “ಪರಿಸ್ಥಿತಿ ಹದಗೆಟ್ಟಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....