Homeಮುಖಪುಟದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ...

ದೆಹಲಿ ಗಲಭೆಯ ವಿವಾದಾತ್ಮಕ ವಿಡಿಯೋದಲ್ಲಿ ಕಪಿಲ್‍ ಮಿಶ್ರಾ ಜೊತೆ ಕಾಣಿಸಿಕೊಂಡಿದ್ದ ಪೊಲೀಸ್‍ ಅಧಿಕಾರಿಯಿಂದ ರಾಷ್ಟ್ರಪತಿ ಮೆಡಲ್‍ಗೆ ಅರ್ಜಿ!

- Advertisement -
- Advertisement -

ರಾಷ್ಟ್ರಪತಿಗಳು ನೀಡುವ ಶೌರ್ಯ ಪದಕಕ್ಕಾಗಿ ಅರ್ಜಿ ಹಾಕಿರುವ ದೆಹಲಿಯ ಹಲವು ಪೊಲೀಸ್‍ ಅಧಿಕಾರಿಗಳು, ದೆಹಲಿ ಗಲಭೆ ಸಂದರ್ಭಗಳಲ್ಲಿ ತಾವು ಉತ್ತಮ ಕೆಲಸ ಮಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ. ಇದರಲ್ಲಿ ಬಿಜೆಪಿ ರಾಜಕಾರಣಿ ಕಪಿಲ್‍ ಮಿಶ್ರಾ ವಿವಾದಾತ್ಮಕ ಭಾಷಣ ಮಾಡುವಾಗ ಪಕ್ಕದಲ್ಲೇ ನಿಂತಿದ್ದ ಈಶಾನ್ಯ ದೆಹಲಿಯ ಮಾಜಿ ಡಿಸಿಪಿ, ವೇದ ಪ್ರಕಾಶ್ ಸೂರ್ಯ ಕೂಡ ಇದ್ದಾರೆ.

ಕಪಿಲ್‍ ಮಿಶ್ರಾ ಪ್ರಚೋದನಾಕಾರಿ ಭಾಷಣ ಮಾಡುವಾಗ ಈಶಾನ್ಯ ದೆಹಲಿಯ ಡಿಸಿಪಿಯಾಗಿದ್ದ ವೇದ ಪ್ರಕಾಶ್‍ ಸೂರ್ಯ ಅವರು ಮಿಶ್ರಾ ಪಕ್ಕದಲ್ಲೇ ಇರುವ ವಿಡಿಯೋ ಮತ್ತು ಫೋಟೊಗಳು ಆಗಲೇ ವೈರಲ್‍ ಆಗಿ ವಿವಾದ ಸೃಷ್ಟಿಯಾಗಿತ್ತು. ಕಪಿಲ್‍ ಮಿಶ್ರಾರ ಆ ಭಾಷಣದ ಮರುದಿನವೇ ಈಶಾನ್ಯ ದೆಹಲಿಯಲ್ಲಿ ಗಲಭೆ ಭುಗಿಲೆದ್ದಿತ್ತು.

ಕಳೆದ ವರ್ಷ ಫೆಬ್ರವರಿ 23 ರಂದು ಸಿಎಎ ಪರ ರ್‍ಯಾಲಿಯಲ್ಲಿ ಈ ಘಟನೆ ಸಂಭವಿಸಿತ್ತು.

ಇದನ್ನೂ ಓದಿ: ದೆಹಲಿ ಗಲಭೆ: ವಿದ್ಯಾರ್ಥಿ ಹೋರಾಟಗಾರರ ಬಿಡುಗಡೆಗೆ ಕೋರ್ಟ್‌ ಆದೇಶ

ವೇದ ಪ್ರಕಾಶ್‍ ಸೂರ್ಯ, ಗಲಭೆಯಲ್ಲಿ ನೂರಾರು ಜನರ ಪ್ರಾಣ ಮತ್ತು ಆಸ್ತಿಗಳನ್ನು ಉಳಿಸಿದ್ದಾಗಿ ಮತ್ತು ಗಲಭೆಯ ಸಮಯದಲ್ಲಿ “ಅಸಾಧಾರಣ” ಕೆಲಸವನ್ನು ಮಾಡಿದ್ದಾಗಿ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ವೇದಪ್ರಕಾಶ ಸೂರ್ಯ ಅವರ ಜೆಸಿಪಿ  ಆಗಿದ್ದ ಅಲೋಕ್ ಕುಮಾರ್ ಮತ್ತು ಅಧೀನ ಅಧಿಕಾರಿಗಳು ಸೇರಿದಂತೆ ಸುಮಾರು 25 ಪೊಲೀಸ್ ಅಧಿಕಾರಿಗಳು ಪ್ರಶಸ್ತಿಗಾಗಿ ತಮ್ಮ ಅರ್ಜಿಗಳನ್ನು ದೆಹಲಿ ಪೊಲೀಸ್‍ ಪ್ರಧಾನ ಕಚೇರಿಗೆ  ಸಲ್ಲಿಸಿದ್ದಾರೆ. ದೆಹಲಿ ಗಲಭೆಯ ಸಂದರ್ಭದಲ್ಲಿ ತಮ್ಮ ಪಾತ್ರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಜೀವ ಮತ್ತು ಆಸ್ತಿಯನ್ನು ಉಳಿಸುವ” ಅಥವಾ “ಅಪರಾಧವನ್ನು ತಡೆಗಟ್ಟುವಲ್ಲಿ ಅಥವಾ ಅಪರಾಧಿಗಳನ್ನು ಬಂಧಿಸುವಲ್ಲಿ” ಮಾಡಿದ ಕಾರ್ಯಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ನೀಡಲಾಗುತ್ತದೆ.

“ಈ ಪ್ರಸ್ತಾಪವನ್ನು ಜಿಲ್ಲೆಯಿಂದ ಪೊಲೀಸ್ ಪ್ರಧಾನ ಕಚೇರಿಗೆ ಕಳುಹಿಸಲಾಗುತ್ತದೆ. ಅಲ್ಲಿ ಅದನ್ನು ಹಿರಿಯ ಅಧಿಕಾರಿಗಳ ಸಮಿತಿಯ ಮುಂದೆ ಇಡಲಾಗುತ್ತದೆ ಮತ್ತು ಅಂತಿಮವಾಗಿ ದೆಹಲಿ ಪೊಲೀಸ್ ಆಯುಕ್ತರಿಂದ ಅನುಮೋದನೆ ಪಡೆಯಲಾಗುತ್ತದೆ. ಫೈಲ್ ಅನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಧಿಕ್ಕಾರ ಕೂಗುವಂತೆ ಒತ್ತಾಯಿಸಿ ಹಲ್ಲೆ: ಬಂಧಿತ ದೆಹಲಿ ಗಲಭೆಯಲ್ಲೂ ಆರೋಪಿ!

ಕೆಲವು ದಿನಗಳ ಹಿಂದೆ ವೇದಪ್ರಕಾಶ್‍ ಸೂರ್ಯ ಅರ್ಜಿ ಸಲ್ಲಿಸಿದ್ದರು ಮತ್ತು ಅವರ ಅರ್ಜಿಯನ್ನು ಇತರ 24 ಪೊಲೀಸ್ ಅಧಿಕಾರಿಗಳ ಅರ್ಜಿಗಳ ಜೊತೆಗೆ ಪ್ರಧಾನ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಲ್ಲದೆ, 23 ಪೊಲೀಸ್ ಸಿಬ್ಬಂದಿ “ಅಸಾಧಾರಣ ಕಾರ್ಯ ಪುರಸ್ಕಾರ” ಪ್ರಶಸ್ತಿಗಾಗಿ ಮತ್ತು 14 ಮಂದಿ ಔಟ್‍-ಆಫ್‍-ಟರ್ನ್‍-ಪ್ರಮೋಷನ್‍ ಆಧಾರದಲ್ಲಿ ಪದಕಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ ಎಂದು ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಮೂರು ನಾಲ್ಕು ದಿನಗಳಲ್ಲಿ ಗಲಭೆಯನ್ನು ನಿಯಂತ್ರಿಸಿದ್ದಾಗಿ ವೇದಪ್ರಕಾಶ್‍ ಸೂರ್ಯ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಹಾಯಕ್ಕಾಗಿ ಫೋನ್ ಕರೆಗಳಿಗೆ ಪ್ರತಿಕ್ರಿಯೆಯನ್ನು ಒಳಗೊಂಡಂತೆ, ನೂರಾರು ಜನರ ಪ್ರಾಣ ಉಳಿಸುವಲ್ಲಿ ಅವರ ‘ಧೈರ್ಯಶಾಲಿ ಪ್ರಯತ್ನಗಳ’ ಕುರಿತು ಮತ್ತು ಕಲ್ಲು ತೂರಾಟಗಳನ್ನು ಲೆಕ್ಕಿಸದೇ ತಾವು ಕರ್ತವ್ಯ ಮಾಡಿದ್ದಾಗಿ ಅರ್ಜಿಯಲ್ಲಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್‍ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಗಲಭೆಯ ಅಸಲಿ ಪಿತೂರಿ ಭಾಗ-2: ‘ಅಂತಿಮ ಯುದ್ಧಕ್ಕೆ ಕರೆ ನೀಡಿದ್ದ ಮುಸ್ಲಿಂ-ವಿರೋಧಿ ‘ದೇವಮಾನವ’!

ಕಪಿಲ್‍ ಮಿಶ್ರಾ ಅವರು ಫೆಬ್ರವರಿ 23, 2020 ರಂದು ಮೌಜ್ಪುರ್ ಟ್ರಾಫಿಕ್ ಸಿಗ್ನಲ್ ಬಳಿ ಸಿಎಎ ಪರ ಸಭೆ ನಡೆಸಿದ ಭಾಷಣದ ವೀಡಿಯೊವನ್ನು ಟ್ವೀಟ್ ಮಾಡಿದ್ದರು. ಅದರಲ್ಲಿ ದೆಹಲಿ ಈಶಾನ್ಯ ಡಿಸಿಪಿಯಾಗಿದ್ದ  ವೇದಪ್ರಕಾಶ್‍ ಸೂರ್ಯ ಅವರು ಕಪಿಲ್‍ ಮಿಶ್ರಾ ಪಕ್ಕದಲ್ಲಿ ನಿಂತಿರುವುದನ್ನು ಕಾಣಬಹುದು. ಭಾಷಣದಲ್ಲಿ, ಬಿಜೆಪಿ ನಾಯಕ, “ಡಿಸಿಪಿ ನಮ್ಮ ಪಕ್ಕವೇ ಇದ್ದಾರೆ. ನಿಮ್ಮ ಪರವಾಗಿ, ನಾನು ಅವರಿಗೆ ಹೇಳಲು ಬಯಸುತ್ತೇನೆ ಯುಎಸ್ ಅಧ್ಯಕ್ಷ (ಡೊನಾಲ್ಡ್ ಟ್ರಂಪ್) ಭಾರತದಲ್ಲಿ ಇರುವವರೆಗೂ ನಾವು ಈ ಪ್ರದೇಶವನ್ನು ಶಾಂತಿಯುತವಾಗಿ ನೋಡಿಕೊಳ್ಳುತ್ತೇವೆ. ಅದರ ನಂತರ, ರಸ್ತೆಗಳನ್ನು ಖಾಲಿ ಮಾಡದಿದ್ದರೆ (ಸಿಎಎ ಪ್ರತಿಭಟನಾಕಾರರಿಂದ) ನಾವು ನಿಮ್ಮ (ಪೋಲಿಸ್) ಮಾತುಗಳನ್ನು ಕೇಳುವುದಿಲ್ಲ. ನಾವು ಬೀದಿಗಿಳಿಯಬೇಕಾಗುತ್ತದೆ” ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿ 24 ರಂದು ವೇದಪ್ರಕಾಶ್‍ ಸೂರ್ಯ ಅವರನ್ನು ದೆಹಲಿ ಈಶಾನ್ಯ ಜಿಲ್ಲೆಯಿಂದ ರಾಷ್ಟ್ರಪತಿ ಭವನಕ್ಕೆ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ  ಪ್ರಶಸ್ತಿ ಅರ್ಜಿ ಕುರಿತು  ದಿ ಇಂಡಿಯನ್ ಎಕ್ಸ್‌ಪ್ರೆಸ್‍ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು.

ಕೆಲವೇ ದಿನಗಳ ಹಿಂದೆ ನಿವೃತ್ತರಾದ ಆಗಿನ ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಅವರು ಹಿಂಸಾಚಾರದ ಸಮಯದಲ್ಲಿ ತಮ್ಮ ಕೆಲಸಕ್ಕಾಗಿ ವಿಶೇಷ ಸೆಲ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ಪೊಲೀಸ್ ಸಿಬ್ಬಂದಿಗೆ ಔಟ್‍-ಆಫ್-ಟರ್ನ್‍ ಬಡ್ತಿ ನೀಡಿದ್ದರು. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮಿಯಾ ಸಮನ್ವಯ ಸಮಿತಿಯ ಮಾಧ್ಯಮ ಸಂಯೋಜಕರಾದ ಸಫೂರಾ ಝರ್ಗಾರ್ ಮತ್ತು ಪಿಂಜ್ರಾ ಟೋಡ್‌ನ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್‍ ಸೇರಿದಂತೆ 21 ಮಂದಿಯನ್ನು ಬಂಧಿಸಿದ ತನಿಖಾ ತಂಡದ ಈ ನಾಲ್ವರು ಅಧಿಕಾರಿಗಳು ಸಿಎಎ ವಿರುದ್ಧದ ಪ್ರತಿಭಟನೆಗಳನ್ನು ದೆಹಲಿ ಗಲಭೆಗೆ ಜೋಡಿಸಿದವರು.

ಇದನ್ನೂ ಓದಿ: ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ‘ದೆಹಲಿ ಗಲಭೆಯ ಸಂದರ್ಭದಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಕೊಂದ ಆರೋಪದಲ್ಲಿ ಹಸೀನ್ ಖುರೇಷಿಯನ್ನು ಬಂಧಿಸಲು ಕಾರಣವಾದ ಹೆಡ್ ಕಾನ್ಸ್‍ಟೇಬಲ್‍ ಹಮೇಂದ್ರ ರತಿ ಅವರಿಗೆ ಔಟ್‍-ಆಫ್‍-ಟರ್ನ್‍  ಬಡ್ತಿಯನ್ನು ಕಳೆದ ತಿಂಗಳು ನೀಡಲಾಗಿದೆ’ ಎಂದು ತಿಳಿಸಿದರು.

ಈ ವರ್ಷದ ಫೆಬ್ರವರಿ 19 ರಂದು ನಡೆದ ದೆಹಲಿ ಪೊಲೀಸ್ ಮುಖ್ಯಸ್ಥರ ವಾರ್ಷಿಕ ಪತ್ರಿಕಾಗೋಷ್ಠಿಯಲ್ಲಿ, ಶ್ರೀವಾಸ್ತವ ಅವರು ಗಲಭೆ ನಿಯಂತ್ರಣದಲ್ಲಿ ತಮ್ಮ ಪೊಲೀಸ್‍ ಪಡೆಗಳ ಪಾತ್ರವನ್ನು ಶ್ಲಾಘಿಸಿದ್ದರು. “ಒಟ್ಟು 755 ಎಫ್‌ಐಆರ್‌ಗಳನ್ನು ನೋಂದಾಯಿಸಲಾಗಿದೆ ಮತ್ತು ನಮ್ಮ ದೂರನ್ನು ಅಂಗೀಕರಿಸಿಲ್ಲ ಎಂದು ಯಾರೂ ಕುಂದುಕೊರತೆ ಹೇಳಿಲ್ಲ’ ಎಂದಿದ್ದರು.

ವಾರ್ಷಿಕ ಪರಿಶೀಲನೆಯ ಸಮಯದಲ್ಲಿ ಗಲಭೆಯನ್ನು ಉಲ್ಲೇಖಿಸಿ, ಡಿಸಿಪಿ (ವಿಶೇಷ ಕೋಶ) ಪ್ರಮೋದ್ ಕುಶ್ವಾ ಮತ್ತು ಡಿಸಿಪಿ (ಅಪರಾಧ) ಜಾಯ್ ಟಿರ್ಕಿ ಅವರು, ಮೌಜ್‌ಪುರದಲ್ಲಿ ಸಿಎಎ ಪರ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ನಡುವಿನ ಘರ್ಷಣೆಯನ್ನು ಪ್ರಸ್ತಾಪಿಸಿದ್ದು, ಇದರ ನಂತರ “ಪರಿಸ್ಥಿತಿ ಹದಗೆಟ್ಟಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆಗೆ ಅಮಿತ್ ಶಾ ಅವರೇ ನೇರ ಹೊಣೆ: ಸತ್ಯಶೋಧನಾ ಸಮಿತಿಯ ವರದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...