Homeಕರ್ನಾಟಕ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌....

‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು  ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ

- Advertisement -
- Advertisement -

ವಾರ್ತಾ ಇಲಾಖೆಯ ಅಧಿಕಾರಿಗಳು ರಾಜ್ಯದ ಪ್ರಮುಖ ಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ಜಾಹೀರಾತು ನೀಡದೆ ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ.

ರಮೇಶ್‌ ಬಾಬು ಅವರು ಬರೆದಿರುವ ಪತ್ರದಲ್ಲಿ, “ವಾರ್ತಾ ಇಲಾಖೆಯು ನಿಯಮಾನುಸಾರ 9 ಕನ್ನಡ ದಿನಪತ್ರಿಕೆಗಳನ್ನು ರಾಜ್ಯ ಮಟ್ಟದ ದಿನಪತ್ರಿಕೆಗಳೆಂದು ಅಧಿಕೃತವಾಗಿ ಪಟ್ಟಿ ಮಾಡಿರುತ್ತದೆ. ಈ ಪತ್ರಿಕೆಗಳಿಗೆ ದರಪಟ್ಟಿಗೆ ಅನುಗುಣವಾಗಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತುಗಳನ್ನು ಯಾವುದೇ ರಾಜಕೀಯ ಒತ್ತಡ ಅಥವಾ ಅಪೇಕ್ಷಿತ ಲಾಭ ಇಲ್ಲದೆ ಬಿಡುಗಡೆ ಮಾಡಬೇಕು. ಜಾಹೀರಾತು ಹಂಚಿಕೆಯಲ್ಲಿ ವಾರ್ತಾ ಇಲಾಖೆ ಪಕ್ಷಪಾತ ಎಸಗಿದರೆ, ಸರ್ಕಾರ ಇದನ್ನು ಸರಿಪಡಿಸುವ ಹೊಣೆಗಾರಿಕೆ ಹೊರಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

“ಪಕ್ಷ ರಾಜಕಾರಣಕ್ಕೆ ಅನುಕೂಲ ಆಗುವ ರೀತಿಯಲ್ಲಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತನ್ನು ಹಂಚಿಕೆ ಮಾಡಲು ಸಾಧ್ಯವಿಲ್ಲ. ವಾರ್ತಾ ಇಲಾಖೆಯ ಅಧಿಕಾರಿಗಳು ಪಕ್ಷ ರಾಜಕಾರಣದಿಂದ ಹೊರತಾಗಿ ಸರ್ಕಾರಿ ಕರ್ತವ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಯಾವುದೇ ಸರ್ಕಾರಿ ಅಧಿಕಾರಿ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ರಾಜಕೀಯ ಪ್ರೇರಿತವಾಗಿ ವರ್ತಿಸಿದರೆ, ಅಂತವರ ವಿರುದ್ಧ ನಾಗರೀಕ ಸೇವಾನಿಯಮಗಳ ಅನ್ವಯ ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ನೆನಪಿಸಿದ್ದಾರೆ.

“ಸೋಮವಾರ ರಾಜ್ಯ ಸರ್ಕಾರದ ಪರವಾಗಿ ವಾರ್ತಾ ಇಲಾಖೆಯು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕನ್ನಡ ದಿನಪತ್ರಿಕೆಗಳಿಗೆ ಬಿಡುಗಡೆ ಮಾಡಿರುವ ಜಾಹೀರಾತನ್ನು ಕನ್ನಡದ ಪ್ರಮುಖ ದಿನಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ನೀಡಿಲ್ಲ. ಇದರ ಹಿಂದೆ ವಾರ್ತಾ ಇಲಾಖೆಯ ಅಧಿಕಾರಿಗಳ ದುರುದ್ದೇಶವಿದ್ದು, ಒಂದು ಪತ್ರಿಕೆಯನ್ನು ಜಾಹೀರಾತಿನಿಂದ ಹೊರತುಪಡೆಸುವ ಕ್ರಮ ಕಾನೂನುಬಾಹಿರವಾಗಿದೆ, ಈ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಒಂದು ಪತ್ರಿಕೆಗೆ ಜಾಹೀರಾತು ತಡೆಯುವ ಮೂಲಕ ವಾರ್ತಾ ಇಲಾಖೆಯ ಅಧಿಕಾರಿಗಳು ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ವಾರ್ತಾಭಾರತಿಗೆ ಜಾಹಿರಾತು ನೀಡದೆ ಇರುವುದು ಇದೇ ಮೊದಲಲ್ಲ!

ಕರ್ನಾಟಕದ ವಾರ್ತಾ ಇಲಾಖೆಯ ಪಟ್ಟಿಯ ಪ್ರಕಾರ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ವಿಜಯವಾಣಿ, ವಿಶ್ವವಾಣಿ, ಉದಯವಾಣಿ, ಹೊಸ ದಿಗಂತ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ವಾರ್ತಾಭಾರತಿ ಪತ್ರಿಕೆಗಳು ರಾಜ್ಯ ಮಟ್ಟದ ಪತ್ರಿಕೆಗಳು ಎಂದು ಗುರುತಿಸಲ್ಪಟ್ಟಿವೆ. ಇದರ ಅರ್ಥ ರಾಜ್ಯ ಸರಕಾರ ಬಿಡುಗಡೆ ಮಾಡುವ ಎಲ್ಲ ಪ್ರಮುಖ ಜಾಹೀರಾತುಗಳನ್ನು ಪಡೆಯಲು ಈ ಪತ್ರಿಕೆಗಳು ಅರ್ಹವಾಗಿದೆ. ಆದರೆ ಸೋಮವಾರ (16 ಆಗಸ್ಟ್ 2021)ದಂದು ವಾರ್ತಾ ಇಲಾಖೆಯು ವಾರ್ತಾಭಾರತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

ವಾರ್ತಾ ಇಲಾಖೆಯು ವಾರ್ತಾಭಾರತಿ ಪತ್ರಿಕೆಯೊಂದಿಗೆ ಈ ಹಿಂದೆ ಕೂಡಾ ಇದೇ ರೀತಿಯಲ್ಲಿ ನಡೆದುಕೊಂಡಿತ್ತು. ಜುಲೈ 26 ರಂದು ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ತಿಯಾದಾಗ ರಾಜ್ಯ ಮಟ್ಟದ ಎಲ್ಲಾ ಪತ್ರಿಕೆಗೆ ಜಾಹೀರಾತು ನೀಡಲಾಗಿತ್ತು. ಆದರೆ ವಾರ್ತಾಭಾರತಿ ದಿನಪತ್ರಿಕೆಗೆ ಮಾತ್ರ ಜಾಹೀರಾತು ನೀಡಿರಲಿಲ್ಲ.

ವಾರ್ತಾ ಇಲಾಖೆ ಯಾಕೆ ಹೀಗೆ ನಡೆದುಕೊಳ್ಳುತ್ತಿದೆ?

ಈ ಹಿಂದೆ ಮಂಗಳೂರಿನ ಕಮಿಷನರ್‌ ಆಗಿದ್ದ ಡಾ. ಪಿ.ಎಸ್‌. ಹರ್ಷ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದಾರೆ. ಸಿಎಎ ಹೋರಾಟದ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಅವರ ಕೈವಾಡವಿದೆ ಎಂಬ ಆರೋಪ ಸಾರ್ವಜನಿಕವಾಗಿ ಕೇಳಿ ಬಂದಿತ್ತು. ಇದರ ನಂತರ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು.

ಅವರು ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿದ ನಂತರ ವಾರ್ತಾಭಾರತಿಗೆ ಸರ್ಕಾರಿ ಜಾಹೀರಾತುಗಳು ನೀಡುವುದು ಕಡಿಮೆಗೊಳ್ಳುತ್ತಲೆ ಬಂದಿದೆ ಎನ್ನಲಾಗಿದೆ. ಆದರೆ ಇದೀಗ ವಾರ್ತಾ ಇಲಾಖೆಯು ಶೂನ್ಯ ಜಾಹೀರಾತು ವಾರ್ತಾಭಾರತಿಗೆ ನೀಡಿ ಪತ್ರಿಕಾ ಸ್ವಾತಂತ್ಯ್ರ ಹರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಕರಾವಳಿ ಮೂಲದ ವಾರ್ತಾಭಾರತಿ ಪತ್ರಿಕೆಯು ಮಂಗಳೂರು ಗೋಲಿಬಾರ್‌ ವಿವಾದದ ಬಗ್ಗೆ ದಿಟ್ಟವಾಗಿ ವರದಿ ಮಾಡಿತ್ತು. ಈ ದ್ವೇಷವನ್ನು ಪ್ರಸ್ತುತ ವಾರ್ತಾ ಇಲಾಖೆಯ ಆಯುಕ್ತರಾಗಿರುವ ಹರ್ಷ ಅವರು ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಾರ್ತಾಭಾರತಿಗೆ ಜಾಹೀರಾತು ನೀಡದಂತೆ ಅವರ ಪ್ರಭಾವ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಡಾ.ಪಿಎಸ್‌ ಹರ್ಷ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿತು, ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕು ಪ್ರತಿಕ್ರಿಯೆ ನೀಡಿದ ಕೂಡಲೆ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ. ಮುರಳೀಧರ್ ಅವರಿಗೂ ನಾನುಗೌರಿ.ಕಾಂ ಕರೆ ಮಾಡಿದ್ದು, ಅವರು ಕೂಡಾ ಕರೆಯನ್ನು ಸ್ವೀಕರಿಸಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೆ ಅವರ ಪ್ರತಿಕ್ರಿಯೆಯನ್ನು ಇಲ್ಲಿ ನೀಡಲಾಗುವುದು.

ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...