Homeಕರ್ನಾಟಕ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌....

‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು  ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ

- Advertisement -
- Advertisement -

ವಾರ್ತಾ ಇಲಾಖೆಯ ಅಧಿಕಾರಿಗಳು ರಾಜ್ಯದ ಪ್ರಮುಖ ಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ಜಾಹೀರಾತು ನೀಡದೆ ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ.

ರಮೇಶ್‌ ಬಾಬು ಅವರು ಬರೆದಿರುವ ಪತ್ರದಲ್ಲಿ, “ವಾರ್ತಾ ಇಲಾಖೆಯು ನಿಯಮಾನುಸಾರ 9 ಕನ್ನಡ ದಿನಪತ್ರಿಕೆಗಳನ್ನು ರಾಜ್ಯ ಮಟ್ಟದ ದಿನಪತ್ರಿಕೆಗಳೆಂದು ಅಧಿಕೃತವಾಗಿ ಪಟ್ಟಿ ಮಾಡಿರುತ್ತದೆ. ಈ ಪತ್ರಿಕೆಗಳಿಗೆ ದರಪಟ್ಟಿಗೆ ಅನುಗುಣವಾಗಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತುಗಳನ್ನು ಯಾವುದೇ ರಾಜಕೀಯ ಒತ್ತಡ ಅಥವಾ ಅಪೇಕ್ಷಿತ ಲಾಭ ಇಲ್ಲದೆ ಬಿಡುಗಡೆ ಮಾಡಬೇಕು. ಜಾಹೀರಾತು ಹಂಚಿಕೆಯಲ್ಲಿ ವಾರ್ತಾ ಇಲಾಖೆ ಪಕ್ಷಪಾತ ಎಸಗಿದರೆ, ಸರ್ಕಾರ ಇದನ್ನು ಸರಿಪಡಿಸುವ ಹೊಣೆಗಾರಿಕೆ ಹೊರಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

“ಪಕ್ಷ ರಾಜಕಾರಣಕ್ಕೆ ಅನುಕೂಲ ಆಗುವ ರೀತಿಯಲ್ಲಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತನ್ನು ಹಂಚಿಕೆ ಮಾಡಲು ಸಾಧ್ಯವಿಲ್ಲ. ವಾರ್ತಾ ಇಲಾಖೆಯ ಅಧಿಕಾರಿಗಳು ಪಕ್ಷ ರಾಜಕಾರಣದಿಂದ ಹೊರತಾಗಿ ಸರ್ಕಾರಿ ಕರ್ತವ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಯಾವುದೇ ಸರ್ಕಾರಿ ಅಧಿಕಾರಿ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ರಾಜಕೀಯ ಪ್ರೇರಿತವಾಗಿ ವರ್ತಿಸಿದರೆ, ಅಂತವರ ವಿರುದ್ಧ ನಾಗರೀಕ ಸೇವಾನಿಯಮಗಳ ಅನ್ವಯ ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ನೆನಪಿಸಿದ್ದಾರೆ.

“ಸೋಮವಾರ ರಾಜ್ಯ ಸರ್ಕಾರದ ಪರವಾಗಿ ವಾರ್ತಾ ಇಲಾಖೆಯು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕನ್ನಡ ದಿನಪತ್ರಿಕೆಗಳಿಗೆ ಬಿಡುಗಡೆ ಮಾಡಿರುವ ಜಾಹೀರಾತನ್ನು ಕನ್ನಡದ ಪ್ರಮುಖ ದಿನಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ನೀಡಿಲ್ಲ. ಇದರ ಹಿಂದೆ ವಾರ್ತಾ ಇಲಾಖೆಯ ಅಧಿಕಾರಿಗಳ ದುರುದ್ದೇಶವಿದ್ದು, ಒಂದು ಪತ್ರಿಕೆಯನ್ನು ಜಾಹೀರಾತಿನಿಂದ ಹೊರತುಪಡೆಸುವ ಕ್ರಮ ಕಾನೂನುಬಾಹಿರವಾಗಿದೆ, ಈ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಒಂದು ಪತ್ರಿಕೆಗೆ ಜಾಹೀರಾತು ತಡೆಯುವ ಮೂಲಕ ವಾರ್ತಾ ಇಲಾಖೆಯ ಅಧಿಕಾರಿಗಳು ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ವಾರ್ತಾಭಾರತಿಗೆ ಜಾಹಿರಾತು ನೀಡದೆ ಇರುವುದು ಇದೇ ಮೊದಲಲ್ಲ!

ಕರ್ನಾಟಕದ ವಾರ್ತಾ ಇಲಾಖೆಯ ಪಟ್ಟಿಯ ಪ್ರಕಾರ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ವಿಜಯವಾಣಿ, ವಿಶ್ವವಾಣಿ, ಉದಯವಾಣಿ, ಹೊಸ ದಿಗಂತ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ವಾರ್ತಾಭಾರತಿ ಪತ್ರಿಕೆಗಳು ರಾಜ್ಯ ಮಟ್ಟದ ಪತ್ರಿಕೆಗಳು ಎಂದು ಗುರುತಿಸಲ್ಪಟ್ಟಿವೆ. ಇದರ ಅರ್ಥ ರಾಜ್ಯ ಸರಕಾರ ಬಿಡುಗಡೆ ಮಾಡುವ ಎಲ್ಲ ಪ್ರಮುಖ ಜಾಹೀರಾತುಗಳನ್ನು ಪಡೆಯಲು ಈ ಪತ್ರಿಕೆಗಳು ಅರ್ಹವಾಗಿದೆ. ಆದರೆ ಸೋಮವಾರ (16 ಆಗಸ್ಟ್ 2021)ದಂದು ವಾರ್ತಾ ಇಲಾಖೆಯು ವಾರ್ತಾಭಾರತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

ವಾರ್ತಾ ಇಲಾಖೆಯು ವಾರ್ತಾಭಾರತಿ ಪತ್ರಿಕೆಯೊಂದಿಗೆ ಈ ಹಿಂದೆ ಕೂಡಾ ಇದೇ ರೀತಿಯಲ್ಲಿ ನಡೆದುಕೊಂಡಿತ್ತು. ಜುಲೈ 26 ರಂದು ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ತಿಯಾದಾಗ ರಾಜ್ಯ ಮಟ್ಟದ ಎಲ್ಲಾ ಪತ್ರಿಕೆಗೆ ಜಾಹೀರಾತು ನೀಡಲಾಗಿತ್ತು. ಆದರೆ ವಾರ್ತಾಭಾರತಿ ದಿನಪತ್ರಿಕೆಗೆ ಮಾತ್ರ ಜಾಹೀರಾತು ನೀಡಿರಲಿಲ್ಲ.

ವಾರ್ತಾ ಇಲಾಖೆ ಯಾಕೆ ಹೀಗೆ ನಡೆದುಕೊಳ್ಳುತ್ತಿದೆ?

ಈ ಹಿಂದೆ ಮಂಗಳೂರಿನ ಕಮಿಷನರ್‌ ಆಗಿದ್ದ ಡಾ. ಪಿ.ಎಸ್‌. ಹರ್ಷ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದಾರೆ. ಸಿಎಎ ಹೋರಾಟದ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಅವರ ಕೈವಾಡವಿದೆ ಎಂಬ ಆರೋಪ ಸಾರ್ವಜನಿಕವಾಗಿ ಕೇಳಿ ಬಂದಿತ್ತು. ಇದರ ನಂತರ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು.

ಅವರು ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿದ ನಂತರ ವಾರ್ತಾಭಾರತಿಗೆ ಸರ್ಕಾರಿ ಜಾಹೀರಾತುಗಳು ನೀಡುವುದು ಕಡಿಮೆಗೊಳ್ಳುತ್ತಲೆ ಬಂದಿದೆ ಎನ್ನಲಾಗಿದೆ. ಆದರೆ ಇದೀಗ ವಾರ್ತಾ ಇಲಾಖೆಯು ಶೂನ್ಯ ಜಾಹೀರಾತು ವಾರ್ತಾಭಾರತಿಗೆ ನೀಡಿ ಪತ್ರಿಕಾ ಸ್ವಾತಂತ್ಯ್ರ ಹರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಕರಾವಳಿ ಮೂಲದ ವಾರ್ತಾಭಾರತಿ ಪತ್ರಿಕೆಯು ಮಂಗಳೂರು ಗೋಲಿಬಾರ್‌ ವಿವಾದದ ಬಗ್ಗೆ ದಿಟ್ಟವಾಗಿ ವರದಿ ಮಾಡಿತ್ತು. ಈ ದ್ವೇಷವನ್ನು ಪ್ರಸ್ತುತ ವಾರ್ತಾ ಇಲಾಖೆಯ ಆಯುಕ್ತರಾಗಿರುವ ಹರ್ಷ ಅವರು ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಾರ್ತಾಭಾರತಿಗೆ ಜಾಹೀರಾತು ನೀಡದಂತೆ ಅವರ ಪ್ರಭಾವ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಡಾ.ಪಿಎಸ್‌ ಹರ್ಷ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿತು, ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕು ಪ್ರತಿಕ್ರಿಯೆ ನೀಡಿದ ಕೂಡಲೆ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ. ಮುರಳೀಧರ್ ಅವರಿಗೂ ನಾನುಗೌರಿ.ಕಾಂ ಕರೆ ಮಾಡಿದ್ದು, ಅವರು ಕೂಡಾ ಕರೆಯನ್ನು ಸ್ವೀಕರಿಸಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೆ ಅವರ ಪ್ರತಿಕ್ರಿಯೆಯನ್ನು ಇಲ್ಲಿ ನೀಡಲಾಗುವುದು.

ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...