Homeಕರ್ನಾಟಕ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌....

‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು  ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ

- Advertisement -
- Advertisement -

ವಾರ್ತಾ ಇಲಾಖೆಯ ಅಧಿಕಾರಿಗಳು ರಾಜ್ಯದ ಪ್ರಮುಖ ಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ಜಾಹೀರಾತು ನೀಡದೆ ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ.

ರಮೇಶ್‌ ಬಾಬು ಅವರು ಬರೆದಿರುವ ಪತ್ರದಲ್ಲಿ, “ವಾರ್ತಾ ಇಲಾಖೆಯು ನಿಯಮಾನುಸಾರ 9 ಕನ್ನಡ ದಿನಪತ್ರಿಕೆಗಳನ್ನು ರಾಜ್ಯ ಮಟ್ಟದ ದಿನಪತ್ರಿಕೆಗಳೆಂದು ಅಧಿಕೃತವಾಗಿ ಪಟ್ಟಿ ಮಾಡಿರುತ್ತದೆ. ಈ ಪತ್ರಿಕೆಗಳಿಗೆ ದರಪಟ್ಟಿಗೆ ಅನುಗುಣವಾಗಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತುಗಳನ್ನು ಯಾವುದೇ ರಾಜಕೀಯ ಒತ್ತಡ ಅಥವಾ ಅಪೇಕ್ಷಿತ ಲಾಭ ಇಲ್ಲದೆ ಬಿಡುಗಡೆ ಮಾಡಬೇಕು. ಜಾಹೀರಾತು ಹಂಚಿಕೆಯಲ್ಲಿ ವಾರ್ತಾ ಇಲಾಖೆ ಪಕ್ಷಪಾತ ಎಸಗಿದರೆ, ಸರ್ಕಾರ ಇದನ್ನು ಸರಿಪಡಿಸುವ ಹೊಣೆಗಾರಿಕೆ ಹೊರಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

“ಪಕ್ಷ ರಾಜಕಾರಣಕ್ಕೆ ಅನುಕೂಲ ಆಗುವ ರೀತಿಯಲ್ಲಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತನ್ನು ಹಂಚಿಕೆ ಮಾಡಲು ಸಾಧ್ಯವಿಲ್ಲ. ವಾರ್ತಾ ಇಲಾಖೆಯ ಅಧಿಕಾರಿಗಳು ಪಕ್ಷ ರಾಜಕಾರಣದಿಂದ ಹೊರತಾಗಿ ಸರ್ಕಾರಿ ಕರ್ತವ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಯಾವುದೇ ಸರ್ಕಾರಿ ಅಧಿಕಾರಿ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ರಾಜಕೀಯ ಪ್ರೇರಿತವಾಗಿ ವರ್ತಿಸಿದರೆ, ಅಂತವರ ವಿರುದ್ಧ ನಾಗರೀಕ ಸೇವಾನಿಯಮಗಳ ಅನ್ವಯ ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ನೆನಪಿಸಿದ್ದಾರೆ.

“ಸೋಮವಾರ ರಾಜ್ಯ ಸರ್ಕಾರದ ಪರವಾಗಿ ವಾರ್ತಾ ಇಲಾಖೆಯು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕನ್ನಡ ದಿನಪತ್ರಿಕೆಗಳಿಗೆ ಬಿಡುಗಡೆ ಮಾಡಿರುವ ಜಾಹೀರಾತನ್ನು ಕನ್ನಡದ ಪ್ರಮುಖ ದಿನಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ನೀಡಿಲ್ಲ. ಇದರ ಹಿಂದೆ ವಾರ್ತಾ ಇಲಾಖೆಯ ಅಧಿಕಾರಿಗಳ ದುರುದ್ದೇಶವಿದ್ದು, ಒಂದು ಪತ್ರಿಕೆಯನ್ನು ಜಾಹೀರಾತಿನಿಂದ ಹೊರತುಪಡೆಸುವ ಕ್ರಮ ಕಾನೂನುಬಾಹಿರವಾಗಿದೆ, ಈ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಒಂದು ಪತ್ರಿಕೆಗೆ ಜಾಹೀರಾತು ತಡೆಯುವ ಮೂಲಕ ವಾರ್ತಾ ಇಲಾಖೆಯ ಅಧಿಕಾರಿಗಳು ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ವಾರ್ತಾಭಾರತಿಗೆ ಜಾಹಿರಾತು ನೀಡದೆ ಇರುವುದು ಇದೇ ಮೊದಲಲ್ಲ!

ಕರ್ನಾಟಕದ ವಾರ್ತಾ ಇಲಾಖೆಯ ಪಟ್ಟಿಯ ಪ್ರಕಾರ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ವಿಜಯವಾಣಿ, ವಿಶ್ವವಾಣಿ, ಉದಯವಾಣಿ, ಹೊಸ ದಿಗಂತ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ವಾರ್ತಾಭಾರತಿ ಪತ್ರಿಕೆಗಳು ರಾಜ್ಯ ಮಟ್ಟದ ಪತ್ರಿಕೆಗಳು ಎಂದು ಗುರುತಿಸಲ್ಪಟ್ಟಿವೆ. ಇದರ ಅರ್ಥ ರಾಜ್ಯ ಸರಕಾರ ಬಿಡುಗಡೆ ಮಾಡುವ ಎಲ್ಲ ಪ್ರಮುಖ ಜಾಹೀರಾತುಗಳನ್ನು ಪಡೆಯಲು ಈ ಪತ್ರಿಕೆಗಳು ಅರ್ಹವಾಗಿದೆ. ಆದರೆ ಸೋಮವಾರ (16 ಆಗಸ್ಟ್ 2021)ದಂದು ವಾರ್ತಾ ಇಲಾಖೆಯು ವಾರ್ತಾಭಾರತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

ವಾರ್ತಾ ಇಲಾಖೆಯು ವಾರ್ತಾಭಾರತಿ ಪತ್ರಿಕೆಯೊಂದಿಗೆ ಈ ಹಿಂದೆ ಕೂಡಾ ಇದೇ ರೀತಿಯಲ್ಲಿ ನಡೆದುಕೊಂಡಿತ್ತು. ಜುಲೈ 26 ರಂದು ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ತಿಯಾದಾಗ ರಾಜ್ಯ ಮಟ್ಟದ ಎಲ್ಲಾ ಪತ್ರಿಕೆಗೆ ಜಾಹೀರಾತು ನೀಡಲಾಗಿತ್ತು. ಆದರೆ ವಾರ್ತಾಭಾರತಿ ದಿನಪತ್ರಿಕೆಗೆ ಮಾತ್ರ ಜಾಹೀರಾತು ನೀಡಿರಲಿಲ್ಲ.

ವಾರ್ತಾ ಇಲಾಖೆ ಯಾಕೆ ಹೀಗೆ ನಡೆದುಕೊಳ್ಳುತ್ತಿದೆ?

ಈ ಹಿಂದೆ ಮಂಗಳೂರಿನ ಕಮಿಷನರ್‌ ಆಗಿದ್ದ ಡಾ. ಪಿ.ಎಸ್‌. ಹರ್ಷ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದಾರೆ. ಸಿಎಎ ಹೋರಾಟದ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಅವರ ಕೈವಾಡವಿದೆ ಎಂಬ ಆರೋಪ ಸಾರ್ವಜನಿಕವಾಗಿ ಕೇಳಿ ಬಂದಿತ್ತು. ಇದರ ನಂತರ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು.

ಅವರು ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿದ ನಂತರ ವಾರ್ತಾಭಾರತಿಗೆ ಸರ್ಕಾರಿ ಜಾಹೀರಾತುಗಳು ನೀಡುವುದು ಕಡಿಮೆಗೊಳ್ಳುತ್ತಲೆ ಬಂದಿದೆ ಎನ್ನಲಾಗಿದೆ. ಆದರೆ ಇದೀಗ ವಾರ್ತಾ ಇಲಾಖೆಯು ಶೂನ್ಯ ಜಾಹೀರಾತು ವಾರ್ತಾಭಾರತಿಗೆ ನೀಡಿ ಪತ್ರಿಕಾ ಸ್ವಾತಂತ್ಯ್ರ ಹರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಕರಾವಳಿ ಮೂಲದ ವಾರ್ತಾಭಾರತಿ ಪತ್ರಿಕೆಯು ಮಂಗಳೂರು ಗೋಲಿಬಾರ್‌ ವಿವಾದದ ಬಗ್ಗೆ ದಿಟ್ಟವಾಗಿ ವರದಿ ಮಾಡಿತ್ತು. ಈ ದ್ವೇಷವನ್ನು ಪ್ರಸ್ತುತ ವಾರ್ತಾ ಇಲಾಖೆಯ ಆಯುಕ್ತರಾಗಿರುವ ಹರ್ಷ ಅವರು ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಾರ್ತಾಭಾರತಿಗೆ ಜಾಹೀರಾತು ನೀಡದಂತೆ ಅವರ ಪ್ರಭಾವ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಡಾ.ಪಿಎಸ್‌ ಹರ್ಷ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿತು, ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕು ಪ್ರತಿಕ್ರಿಯೆ ನೀಡಿದ ಕೂಡಲೆ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ. ಮುರಳೀಧರ್ ಅವರಿಗೂ ನಾನುಗೌರಿ.ಕಾಂ ಕರೆ ಮಾಡಿದ್ದು, ಅವರು ಕೂಡಾ ಕರೆಯನ್ನು ಸ್ವೀಕರಿಸಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೆ ಅವರ ಪ್ರತಿಕ್ರಿಯೆಯನ್ನು ಇಲ್ಲಿ ನೀಡಲಾಗುವುದು.

ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...