Homeಕರ್ನಾಟಕ‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌....

‘ವಾರ್ತಾಭಾರತಿ’ ಪತ್ರಿಕೆಗೆ ಜಾಹೀರಾತು ನೀಡದ ವಾರ್ತಾ ಇಲಾಖೆ- ಮಂಗಳೂರಿನ ಮಾಜಿ ಪೊಲೀಸ್ ಕಮೀಷನರ್‌ ಡಾ. ಪಿ.ಎಸ್‌. ಹರ್ಷ ಕೈವಾಡ?

ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು  ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ

- Advertisement -
- Advertisement -

ವಾರ್ತಾ ಇಲಾಖೆಯ ಅಧಿಕಾರಿಗಳು ರಾಜ್ಯದ ಪ್ರಮುಖ ಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ಜಾಹೀರಾತು ನೀಡದೆ ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಮವಾರ ಪತ್ರ ಬರೆದಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಲು ಮತ್ತು ಮಾಧ್ಯಮ ವಿರೋಧಿ ನೀತಿಯನ್ನು ತಡೆಯಲು ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದಾರೆ.

ರಮೇಶ್‌ ಬಾಬು ಅವರು ಬರೆದಿರುವ ಪತ್ರದಲ್ಲಿ, “ವಾರ್ತಾ ಇಲಾಖೆಯು ನಿಯಮಾನುಸಾರ 9 ಕನ್ನಡ ದಿನಪತ್ರಿಕೆಗಳನ್ನು ರಾಜ್ಯ ಮಟ್ಟದ ದಿನಪತ್ರಿಕೆಗಳೆಂದು ಅಧಿಕೃತವಾಗಿ ಪಟ್ಟಿ ಮಾಡಿರುತ್ತದೆ. ಈ ಪತ್ರಿಕೆಗಳಿಗೆ ದರಪಟ್ಟಿಗೆ ಅನುಗುಣವಾಗಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತುಗಳನ್ನು ಯಾವುದೇ ರಾಜಕೀಯ ಒತ್ತಡ ಅಥವಾ ಅಪೇಕ್ಷಿತ ಲಾಭ ಇಲ್ಲದೆ ಬಿಡುಗಡೆ ಮಾಡಬೇಕು. ಜಾಹೀರಾತು ಹಂಚಿಕೆಯಲ್ಲಿ ವಾರ್ತಾ ಇಲಾಖೆ ಪಕ್ಷಪಾತ ಎಸಗಿದರೆ, ಸರ್ಕಾರ ಇದನ್ನು ಸರಿಪಡಿಸುವ ಹೊಣೆಗಾರಿಕೆ ಹೊರಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

“ಪಕ್ಷ ರಾಜಕಾರಣಕ್ಕೆ ಅನುಕೂಲ ಆಗುವ ರೀತಿಯಲ್ಲಿ ವಾರ್ತಾ ಇಲಾಖೆಯು ಸರ್ಕಾರದ ಜಾಹೀರಾತನ್ನು ಹಂಚಿಕೆ ಮಾಡಲು ಸಾಧ್ಯವಿಲ್ಲ. ವಾರ್ತಾ ಇಲಾಖೆಯ ಅಧಿಕಾರಿಗಳು ಪಕ್ಷ ರಾಜಕಾರಣದಿಂದ ಹೊರತಾಗಿ ಸರ್ಕಾರಿ ಕರ್ತವ್ಯವನ್ನು ನಿರ್ವಹಣೆ ಮಾಡಬೇಕಾಗುತ್ತದೆ. ಯಾವುದೇ ಸರ್ಕಾರಿ ಅಧಿಕಾರಿ ತನ್ನ ಕರ್ತವ್ಯ ನಿರ್ವಹಣೆಯಲ್ಲಿ ರಾಜಕೀಯ ಪ್ರೇರಿತವಾಗಿ ವರ್ತಿಸಿದರೆ, ಅಂತವರ ವಿರುದ್ಧ ನಾಗರೀಕ ಸೇವಾನಿಯಮಗಳ ಅನ್ವಯ ಸರ್ಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ನೆನಪಿಸಿದ್ದಾರೆ.

“ಸೋಮವಾರ ರಾಜ್ಯ ಸರ್ಕಾರದ ಪರವಾಗಿ ವಾರ್ತಾ ಇಲಾಖೆಯು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಕನ್ನಡ ದಿನಪತ್ರಿಕೆಗಳಿಗೆ ಬಿಡುಗಡೆ ಮಾಡಿರುವ ಜಾಹೀರಾತನ್ನು ಕನ್ನಡದ ಪ್ರಮುಖ ದಿನಪತ್ರಿಕೆಯಾದ ವಾರ್ತಾಭಾರತಿ ಪತ್ರಿಕೆಗೆ ನೀಡಿಲ್ಲ. ಇದರ ಹಿಂದೆ ವಾರ್ತಾ ಇಲಾಖೆಯ ಅಧಿಕಾರಿಗಳ ದುರುದ್ದೇಶವಿದ್ದು, ಒಂದು ಪತ್ರಿಕೆಯನ್ನು ಜಾಹೀರಾತಿನಿಂದ ಹೊರತುಪಡೆಸುವ ಕ್ರಮ ಕಾನೂನುಬಾಹಿರವಾಗಿದೆ, ಈ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ. ಒಂದು ಪತ್ರಿಕೆಗೆ ಜಾಹೀರಾತು ತಡೆಯುವ ಮೂಲಕ ವಾರ್ತಾ ಇಲಾಖೆಯ ಅಧಿಕಾರಿಗಳು ಜನತಂತ್ರವನ್ನು ಹತ್ತಿಕ್ಕುವ ಮತ್ತು ಮಾಧ್ಯಮದ ಧ್ವನಿಯನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ.

ವಾರ್ತಾಭಾರತಿಗೆ ಜಾಹಿರಾತು ನೀಡದೆ ಇರುವುದು ಇದೇ ಮೊದಲಲ್ಲ!

ಕರ್ನಾಟಕದ ವಾರ್ತಾ ಇಲಾಖೆಯ ಪಟ್ಟಿಯ ಪ್ರಕಾರ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ವಿಜಯವಾಣಿ, ವಿಶ್ವವಾಣಿ, ಉದಯವಾಣಿ, ಹೊಸ ದಿಗಂತ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ವಾರ್ತಾಭಾರತಿ ಪತ್ರಿಕೆಗಳು ರಾಜ್ಯ ಮಟ್ಟದ ಪತ್ರಿಕೆಗಳು ಎಂದು ಗುರುತಿಸಲ್ಪಟ್ಟಿವೆ. ಇದರ ಅರ್ಥ ರಾಜ್ಯ ಸರಕಾರ ಬಿಡುಗಡೆ ಮಾಡುವ ಎಲ್ಲ ಪ್ರಮುಖ ಜಾಹೀರಾತುಗಳನ್ನು ಪಡೆಯಲು ಈ ಪತ್ರಿಕೆಗಳು ಅರ್ಹವಾಗಿದೆ. ಆದರೆ ಸೋಮವಾರ (16 ಆಗಸ್ಟ್ 2021)ದಂದು ವಾರ್ತಾ ಇಲಾಖೆಯು ವಾರ್ತಾಭಾರತಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಪತ್ರಿಕೆಗಳಿಗೆ ಜಾಹೀರಾತು ನೀಡಿದೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು ಶಿಕ್ಷೆ ಖಾಯಂ

ವಾರ್ತಾ ಇಲಾಖೆಯು ವಾರ್ತಾಭಾರತಿ ಪತ್ರಿಕೆಯೊಂದಿಗೆ ಈ ಹಿಂದೆ ಕೂಡಾ ಇದೇ ರೀತಿಯಲ್ಲಿ ನಡೆದುಕೊಂಡಿತ್ತು. ಜುಲೈ 26 ರಂದು ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರ್ತಿಯಾದಾಗ ರಾಜ್ಯ ಮಟ್ಟದ ಎಲ್ಲಾ ಪತ್ರಿಕೆಗೆ ಜಾಹೀರಾತು ನೀಡಲಾಗಿತ್ತು. ಆದರೆ ವಾರ್ತಾಭಾರತಿ ದಿನಪತ್ರಿಕೆಗೆ ಮಾತ್ರ ಜಾಹೀರಾತು ನೀಡಿರಲಿಲ್ಲ.

ವಾರ್ತಾ ಇಲಾಖೆ ಯಾಕೆ ಹೀಗೆ ನಡೆದುಕೊಳ್ಳುತ್ತಿದೆ?

ಈ ಹಿಂದೆ ಮಂಗಳೂರಿನ ಕಮಿಷನರ್‌ ಆಗಿದ್ದ ಡಾ. ಪಿ.ಎಸ್‌. ಹರ್ಷ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದಾರೆ. ಸಿಎಎ ಹೋರಾಟದ ಸಮಯದಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ ಪ್ರಕರಣದಲ್ಲಿ ಅವರ ಕೈವಾಡವಿದೆ ಎಂಬ ಆರೋಪ ಸಾರ್ವಜನಿಕವಾಗಿ ಕೇಳಿ ಬಂದಿತ್ತು. ಇದರ ನಂತರ ಅವರು ವಾರ್ತಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದರು.

ಅವರು ಇಲಾಖೆಯ ಆಯುಕ್ತರಾಗಿ ಅಧಿಕಾರ ವಹಿಸಿದ ನಂತರ ವಾರ್ತಾಭಾರತಿಗೆ ಸರ್ಕಾರಿ ಜಾಹೀರಾತುಗಳು ನೀಡುವುದು ಕಡಿಮೆಗೊಳ್ಳುತ್ತಲೆ ಬಂದಿದೆ ಎನ್ನಲಾಗಿದೆ. ಆದರೆ ಇದೀಗ ವಾರ್ತಾ ಇಲಾಖೆಯು ಶೂನ್ಯ ಜಾಹೀರಾತು ವಾರ್ತಾಭಾರತಿಗೆ ನೀಡಿ ಪತ್ರಿಕಾ ಸ್ವಾತಂತ್ಯ್ರ ಹರಣ ಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಕರಾವಳಿ ಮೂಲದ ವಾರ್ತಾಭಾರತಿ ಪತ್ರಿಕೆಯು ಮಂಗಳೂರು ಗೋಲಿಬಾರ್‌ ವಿವಾದದ ಬಗ್ಗೆ ದಿಟ್ಟವಾಗಿ ವರದಿ ಮಾಡಿತ್ತು. ಈ ದ್ವೇಷವನ್ನು ಪ್ರಸ್ತುತ ವಾರ್ತಾ ಇಲಾಖೆಯ ಆಯುಕ್ತರಾಗಿರುವ ಹರ್ಷ ಅವರು ತೀರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ವಾರ್ತಾಭಾರತಿಗೆ ಜಾಹೀರಾತು ನೀಡದಂತೆ ಅವರ ಪ್ರಭಾವ ಕೆಲಸ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ಡಾ.ಪಿಎಸ್‌ ಹರ್ಷ ಅವರನ್ನು ಸಂಪರ್ಕಿಸಲು ನಾನುಗೌರಿ.ಕಾಂ ಪ್ರಯತ್ನಿಸಿತು, ಆದರೆ ಅವರು ಸಂಪರ್ಕಕ್ಕೆ ಲಭ್ಯವಾಗಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕು ಪ್ರತಿಕ್ರಿಯೆ ನೀಡಿದ ಕೂಡಲೆ ಅವರ ಹೇಳಿಕೆಯನ್ನು ಇಲ್ಲಿ ಅಪ್‌ಡೇಟ್‌ ಮಾಡಲಾಗುವುದು.

ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ. ಮುರಳೀಧರ್ ಅವರಿಗೂ ನಾನುಗೌರಿ.ಕಾಂ ಕರೆ ಮಾಡಿದ್ದು, ಅವರು ಕೂಡಾ ಕರೆಯನ್ನು ಸ್ವೀಕರಿಸಿಲ್ಲ. ಅವರು ಸಂಪರ್ಕಕ್ಕೆ ಸಿಕ್ಕ ಕೂಡಲೆ ಅವರ ಪ್ರತಿಕ್ರಿಯೆಯನ್ನು ಇಲ್ಲಿ ನೀಡಲಾಗುವುದು.

ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...