Homeಮುಖಪುಟಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಡಿಎಂಕೆ ನಾಯಕ ಎ. ರಾಜಾಗೆ ಮುಂದಿನ 48 ಗಂಟೆಗಳ ಕಾಲ ಯಾವ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶಿಸಿದೆ.

ಎ.ರಾಜಾ, ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಉದಯಾನಿಧಿ ಸ್ಟಾಲಿನ್ ಪರ ಪ್ರಚಾರ ಮಾಡುವ ವೇಳೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಜನನ ಅಕ್ರಮವಾದದ್ದು ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದು ತಮಿಳುನಾಡು ರಾಜಕೀಯದಲ್ಲಿ ವಿವಾದ ಉಂಟುಮಾಡಿತ್ತು.

ಈ ಕುರಿತು ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆಯ ‘ಸ್ಟಾರ್ ಪ್ರಚಾರಕ’ರಾಗಿರುವ ಎ. ರಾಜಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರನ್ನೂ ನೀಡಲಾಗಿತ್ತು. ಈ ಸಂಬಂಧ ಇಂದು (ಏಪ್ರಿಲ್ 1) ಈ ವಿಚಾರಣೆ ನಡೆಸಿದ್ದು, “ಎ. ರಾಜಾ ಅವಹೇಳನಕಾರಿ ಹೇಳಿಕೆ ನೀಡಿರುವುದು ಸಾಬೀತಾಗಿದೆ. ಹೀಗಾಗಿ ಅವರು ಮುಂದಿನ 48 ಗಂಟೆಗಳ ಕಾಲ ಯಾವ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವಂತಿಲ್ಲ” ಎಂದು ಆದೇಶಿಸಿದೆ.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಡಿಎಂಕೆ ಮುಖಂಡ ಎ ರಾಜಾ ಅವರಿಗೆ ಚುನಾವಣಾ ಆಯೋಗ ನೋಟಿಸ್

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ ಡಿಎಂಕೆ ಮುಖಂಡ ಎ.ರಾಜಾ, ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಉದಯಾನಿಧಿ ಸ್ಟಾಲಿನ್ ಪರ ಪ್ರಚಾರ ಮಾಡುವ ವೇಳೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು AIADMK ಮತ್ತು ಬಿಜೆಪಿ ಪ್ರತಿಭಟನೆ ನಡೆಸಿದ್ದರು. ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸದಂತೆ ತಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ್ದ ಚುನಾವಣಾ ಆಯೋಗ ಕಳೆದ ಬುಧವಾರವೇ ನೊಟೀಸ್​ ಜಾರಿ ಮಾಡಿತ್ತು.

ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ, “ಪಳನಿಸ್ವಾಮಿ ಸಿಎಂ ಆಗುವ ಮುಂಚೆ ಯಾರಿಗೂ ಗೊತ್ತಿರಲಿಲ್ಲ. ಅವರು ಪಕ್ಷ ಬೆಳೆಸದೆ ಅಧಿಕಾರಕ್ಕೆ ಬಂದಿದ್ದಾರೆ. ಹಾಗಾಗಿ ಅವರ ಜನನ ಅಕ್ರಮ ಮತ್ತು ಅಕಾಲಿಕ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೂ ಮೊದಲು ಮುಖ್ಯಮಂತ್ರಿಯನ್ನು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ಚಪ್ಪಲಿಗಿಂತ ಒಂದು ರೂಪಾಯಿ ಕಡಿಮೆ ಎಂದು ಕರೆದಿದ್ದರು.

ಹಾಗಾಗಿ ಡಿಎಂಕೆ ನಾಯಕ ಎ.ರಾಜಾ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 294 ಬಿ (ಸಾರ್ವಜನಿಕ ಸ್ಥಳದಲ್ಲಿ ಕೆಟ್ಟ ಭಾಷೆ) ಮತ್ತು ಜನರ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 127 (ಚುನಾವಣಾ ಸಭೆಗಳಲ್ಲಿ ಅಡಚಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದರೆ ಘಟನೆ ಕುರಿತು ಕ್ಷಮೆಯಾಚಿಸರುವ ಎ ರಾಜಾ, “ನಾನು ನನ್ನ ಹೇಳಿಕೆಯನ್ನು ಪುನರುಚ್ಚರಿಸುತ್ತೇನೆ. ನನ್ನ ಭಾಷಣವು ಇಬ್ಬರು ನಾಯಕರ ವಿರುದ್ಧದ ವೈಯಕ್ತಿಕ ಟೀಕೆ ಅಲ್ಲ. ನನ್ನ ಭಾಷಣವು ಸಾರ್ವಜನಿಕ ಜೀವನದಲ್ಲಿರುವ ಇಬ್ಬರು ವ್ಯಕ್ತಿಗಳ ಹೋಲಿಕೆಯಾಗಿದೆ” ಎಂದಿದ್ದರು.

“ನನ್ನ ಮಾತುಗಳಿಂದ ಮುಖ್ಯಮಂತ್ರಿಗಳಿಗೆ ನೋವುಂಟಾಗಿದೆ ಎಂದು ಮಾಧ್ಯಮಗಳಲ್ಲಿ ಓದಿ ನನಗೆ ನೋವಾಗಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಆದರೂ ನಾನು ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇದಲ್ಲದೆ, ರಾಜಕೀಯ ಕಾರಣಗಳನ್ನು ಬಿಟ್ಟು, ಇದರಿಂದ ಅವರಿಗೆ ನೋವುಂಟಾಗಿದ್ದರೆ, ಮನಃಪೂರ್ವಕವಾಗಿ ಕ್ಷಮೆಯಾಚಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಎ.ರಾಜಾ ಹೇಳಿದ್ದರು. ಆದರೆ, ಇದೀಗ ಅವರನ್ನು ಮುಂದಿನ 48 ಗಂಟೆಗಳ ಕಾಲ ಚುನಾವಣಾ ಪ್ರಚಾರದಿಂದಲೇ ನಿಷೇಧಿಸಲಾಗಿರುವುದು ಡಿಎಂಕೆ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿ ಪರಿಣಮಿಸಲಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...