Homeಮುಖಪುಟಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಡಿಎಂಕೆ ನಾಯಕ ಎ. ರಾಜಾಗೆ ಮುಂದಿನ 48 ಗಂಟೆಗಳ ಕಾಲ ಯಾವ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶಿಸಿದೆ.

ಎ.ರಾಜಾ, ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಉದಯಾನಿಧಿ ಸ್ಟಾಲಿನ್ ಪರ ಪ್ರಚಾರ ಮಾಡುವ ವೇಳೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಜನನ ಅಕ್ರಮವಾದದ್ದು ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದು ತಮಿಳುನಾಡು ರಾಜಕೀಯದಲ್ಲಿ ವಿವಾದ ಉಂಟುಮಾಡಿತ್ತು.

ಈ ಕುರಿತು ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆಯ ‘ಸ್ಟಾರ್ ಪ್ರಚಾರಕ’ರಾಗಿರುವ ಎ. ರಾಜಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರನ್ನೂ ನೀಡಲಾಗಿತ್ತು. ಈ ಸಂಬಂಧ ಇಂದು (ಏಪ್ರಿಲ್ 1) ಈ ವಿಚಾರಣೆ ನಡೆಸಿದ್ದು, “ಎ. ರಾಜಾ ಅವಹೇಳನಕಾರಿ ಹೇಳಿಕೆ ನೀಡಿರುವುದು ಸಾಬೀತಾಗಿದೆ. ಹೀಗಾಗಿ ಅವರು ಮುಂದಿನ 48 ಗಂಟೆಗಳ ಕಾಲ ಯಾವ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವಂತಿಲ್ಲ” ಎಂದು ಆದೇಶಿಸಿದೆ.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಡಿಎಂಕೆ ಮುಖಂಡ ಎ ರಾಜಾ ಅವರಿಗೆ ಚುನಾವಣಾ ಆಯೋಗ ನೋಟಿಸ್

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ ಡಿಎಂಕೆ ಮುಖಂಡ ಎ.ರಾಜಾ, ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಉದಯಾನಿಧಿ ಸ್ಟಾಲಿನ್ ಪರ ಪ್ರಚಾರ ಮಾಡುವ ವೇಳೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು AIADMK ಮತ್ತು ಬಿಜೆಪಿ ಪ್ರತಿಭಟನೆ ನಡೆಸಿದ್ದರು. ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸದಂತೆ ತಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ್ದ ಚುನಾವಣಾ ಆಯೋಗ ಕಳೆದ ಬುಧವಾರವೇ ನೊಟೀಸ್​ ಜಾರಿ ಮಾಡಿತ್ತು.

ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ, “ಪಳನಿಸ್ವಾಮಿ ಸಿಎಂ ಆಗುವ ಮುಂಚೆ ಯಾರಿಗೂ ಗೊತ್ತಿರಲಿಲ್ಲ. ಅವರು ಪಕ್ಷ ಬೆಳೆಸದೆ ಅಧಿಕಾರಕ್ಕೆ ಬಂದಿದ್ದಾರೆ. ಹಾಗಾಗಿ ಅವರ ಜನನ ಅಕ್ರಮ ಮತ್ತು ಅಕಾಲಿಕ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೂ ಮೊದಲು ಮುಖ್ಯಮಂತ್ರಿಯನ್ನು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ಚಪ್ಪಲಿಗಿಂತ ಒಂದು ರೂಪಾಯಿ ಕಡಿಮೆ ಎಂದು ಕರೆದಿದ್ದರು.

ಹಾಗಾಗಿ ಡಿಎಂಕೆ ನಾಯಕ ಎ.ರಾಜಾ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 294 ಬಿ (ಸಾರ್ವಜನಿಕ ಸ್ಥಳದಲ್ಲಿ ಕೆಟ್ಟ ಭಾಷೆ) ಮತ್ತು ಜನರ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 127 (ಚುನಾವಣಾ ಸಭೆಗಳಲ್ಲಿ ಅಡಚಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದರೆ ಘಟನೆ ಕುರಿತು ಕ್ಷಮೆಯಾಚಿಸರುವ ಎ ರಾಜಾ, “ನಾನು ನನ್ನ ಹೇಳಿಕೆಯನ್ನು ಪುನರುಚ್ಚರಿಸುತ್ತೇನೆ. ನನ್ನ ಭಾಷಣವು ಇಬ್ಬರು ನಾಯಕರ ವಿರುದ್ಧದ ವೈಯಕ್ತಿಕ ಟೀಕೆ ಅಲ್ಲ. ನನ್ನ ಭಾಷಣವು ಸಾರ್ವಜನಿಕ ಜೀವನದಲ್ಲಿರುವ ಇಬ್ಬರು ವ್ಯಕ್ತಿಗಳ ಹೋಲಿಕೆಯಾಗಿದೆ” ಎಂದಿದ್ದರು.

“ನನ್ನ ಮಾತುಗಳಿಂದ ಮುಖ್ಯಮಂತ್ರಿಗಳಿಗೆ ನೋವುಂಟಾಗಿದೆ ಎಂದು ಮಾಧ್ಯಮಗಳಲ್ಲಿ ಓದಿ ನನಗೆ ನೋವಾಗಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಆದರೂ ನಾನು ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇದಲ್ಲದೆ, ರಾಜಕೀಯ ಕಾರಣಗಳನ್ನು ಬಿಟ್ಟು, ಇದರಿಂದ ಅವರಿಗೆ ನೋವುಂಟಾಗಿದ್ದರೆ, ಮನಃಪೂರ್ವಕವಾಗಿ ಕ್ಷಮೆಯಾಚಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಎ.ರಾಜಾ ಹೇಳಿದ್ದರು. ಆದರೆ, ಇದೀಗ ಅವರನ್ನು ಮುಂದಿನ 48 ಗಂಟೆಗಳ ಕಾಲ ಚುನಾವಣಾ ಪ್ರಚಾರದಿಂದಲೇ ನಿಷೇಧಿಸಲಾಗಿರುವುದು ಡಿಎಂಕೆ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿ ಪರಿಣಮಿಸಲಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...