Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿರುವ ಅಪರೂಪದ ಬುದ್ಧನ ಪ್ರತಿಮೆ ನಾಶ; ಭಾರತ ಕಳವಳ

ಪಾಕಿಸ್ತಾನದಲ್ಲಿರುವ ಅಪರೂಪದ ಬುದ್ಧನ ಪ್ರತಿಮೆ ನಾಶ; ಭಾರತ ಕಳವಳ

ಪ್ರತಿಮೆಯು ಸುಮಾರು 1,700 ವರ್ಷಗಳಷ್ಟು ಹಳೆಯದಾಗಿದ್ದು, ಇದು ಗಾಂಧಾರ ನಾಗರಿಕತೆಗೆ ಸೇರಿದೆ ಎಂದು ಊಹಿಸಲಾಗಿದೆ.

- Advertisement -
- Advertisement -

ಕಳೆದ ವಾರ ಪಾಕಿಸ್ತಾನದಲ್ಲಿ ಬುದ್ಧನ ಪ್ರತಿಮೆಯನ್ನು ನಾಶಪಡಿಸಲಾಗಿದೆ ಎಂಬ ವರದಿಗಳ ಬಗ್ಗೆ ಭಾರತ ಗುರುವಾರ ಕಳವಳ ವ್ಯಕ್ತಪಡಿಸಿದೆ. ಅಲ್ಲಿನ ಅಲ್ಪಸಂಖ್ಯಾತ ಗುಂಪುಗಳನ್ನು ಮತ್ತು ಸಾಂಸ್ಕೃತಿಕ ತಾಣಗಳನ್ನು ರಕ್ಷಿಸಲು ಪಾಕಿಸ್ತಾನವನ್ನು ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮರ್ದಾನ್ ಜಿಲ್ಲೆಯಲ್ಲಿ ನಿರ್ಮಾಣ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಂದ ಬುದ್ಧನ ಅಪರೂಪದ ಪ್ರತಿಮೆಯು “ಇಸ್ಲಾಮಿಕ್” ಅಲ್ಲ ಎಂಬ ಕಾರಣಕ್ಕೆ ಹಾನಿಯಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಶನಿವಾರ ವರದಿ ಮಾಡಿದೆ.

ಈ ಪ್ರತಿಮೆಯು ಸುಮಾರು 1,700 ವರ್ಷಗಳಷ್ಟು ಹಳೆಯದಾಗಿದ್ದು, ಇದು ಗಾಂಧಾರ ನಾಗರಿಕತೆಗೆ ಸೇರಿದೆ ಎಂದು ಊಹಿಸಲಾಗಿದೆ.

“ಧಾರ್ಮಿಕ ಮುಖಂಡರೊಬ್ಬರ ಆಜ್ಞೆಯ ಮೇರೆಗೆ ಆ ನಾಲ್ಕು ಪಾಕಿಸ್ತಾನಿ ನಾಗರಿಕರು ಪ್ರತಿಮೆಯನ್ನು ಕೆಡವದಿದ್ದರೆ ಅವರ ನಂಬಿಕೆಯನ್ನು ತ್ಯಜಿಸಿದಂತಾಗುವುದು ಎಂದು ಹೇಳಿದರು. ಆ ಪ್ರತಿಮೆಯನ್ನು ಸುತ್ತಿಗೆಯಿಂದ ಒಡೆದು ಹಾಕಿದರು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನಾವು ನಮ್ಮ ಆತಂಕವನ್ನು ಪಾಕಿಸ್ತಾನಕ್ಕೆ ತಿಳಿಸಿದ್ದೇವೆ. ಅಲ್ಲಿನ ಅಲ್ಪಸಂಖ್ಯಾತ ಸಮುದಾಯದ ಸುರಕ್ಷತೆ ಮತ್ತು ಅವರ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುತ್ತಾರೆ ಎಂಬ ನಮ್ಮ ನಿರೀಕ್ಷೆಯನ್ನು ನಾವು ಅವರಿಗೆ ತಿಳಿಸಿದ್ದೇವೆ.

ಪ್ರತಿಮೆಗೆ ಹಾನಿ ಮಾಡಿದ್ದಕ್ಕಾಗಿ ಪೊಲೀಸರು ಕಳೆದ ವಾರ ನಾಲ್ಕು ಜನರನ್ನು ಬಂಧಿಸಿದ್ದರು. ಧಾರ್ಮಿಕ ಮುಖಂಡನ ಆದೇಶದ ನಂತರ ಅವರು ಪ್ರತಿಮೆಯನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಖೈಬರ್-ಪಖ್ತುನ್ಖ್ವಾ ಪ್ರಾಂತ್ಯದ ಪುರಾತತ್ವ ಮತ್ತು ವಸ್ತು ಸಂಗ್ರಹಾಲಯ ಇಲಾಖೆ ಹಾನಿಗೊಳಗಾದ ಪ್ರತಿಮೆಯ ಭಾಗಗಳನ್ನು, ಅದರ ಐತಿಹಾಸಿಕ ಮೌಲ್ಯವನ್ನು ಅಧ್ಯಯನ ಮಾಡುವ ಸಲುವಾಗಿ ಭಾನುವಾರ ವಶಪಡಿಸಿಕೊಂಡಿದೆ.


ಇದನ್ನೂ ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Cow at the back laughed at the nakedness of the cow in front
    They demolished babri and other masjids and killed thousands of Muslims and.now giving advise to Pakistan
    Dear Indian govt correct yourself before you preach

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...