Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿರುವ ಅಪರೂಪದ ಬುದ್ಧನ ಪ್ರತಿಮೆ ನಾಶ; ಭಾರತ ಕಳವಳ

ಪಾಕಿಸ್ತಾನದಲ್ಲಿರುವ ಅಪರೂಪದ ಬುದ್ಧನ ಪ್ರತಿಮೆ ನಾಶ; ಭಾರತ ಕಳವಳ

ಪ್ರತಿಮೆಯು ಸುಮಾರು 1,700 ವರ್ಷಗಳಷ್ಟು ಹಳೆಯದಾಗಿದ್ದು, ಇದು ಗಾಂಧಾರ ನಾಗರಿಕತೆಗೆ ಸೇರಿದೆ ಎಂದು ಊಹಿಸಲಾಗಿದೆ.

- Advertisement -
- Advertisement -

ಕಳೆದ ವಾರ ಪಾಕಿಸ್ತಾನದಲ್ಲಿ ಬುದ್ಧನ ಪ್ರತಿಮೆಯನ್ನು ನಾಶಪಡಿಸಲಾಗಿದೆ ಎಂಬ ವರದಿಗಳ ಬಗ್ಗೆ ಭಾರತ ಗುರುವಾರ ಕಳವಳ ವ್ಯಕ್ತಪಡಿಸಿದೆ. ಅಲ್ಲಿನ ಅಲ್ಪಸಂಖ್ಯಾತ ಗುಂಪುಗಳನ್ನು ಮತ್ತು ಸಾಂಸ್ಕೃತಿಕ ತಾಣಗಳನ್ನು ರಕ್ಷಿಸಲು ಪಾಕಿಸ್ತಾನವನ್ನು ಕೇಳಿದೆ ಎಂದು ಪಿಟಿಐ ವರದಿ ಮಾಡಿದೆ.

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮರ್ದಾನ್ ಜಿಲ್ಲೆಯಲ್ಲಿ ನಿರ್ಮಾಣ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಂದ ಬುದ್ಧನ ಅಪರೂಪದ ಪ್ರತಿಮೆಯು “ಇಸ್ಲಾಮಿಕ್” ಅಲ್ಲ ಎಂಬ ಕಾರಣಕ್ಕೆ ಹಾನಿಯಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಶನಿವಾರ ವರದಿ ಮಾಡಿದೆ.

ಈ ಪ್ರತಿಮೆಯು ಸುಮಾರು 1,700 ವರ್ಷಗಳಷ್ಟು ಹಳೆಯದಾಗಿದ್ದು, ಇದು ಗಾಂಧಾರ ನಾಗರಿಕತೆಗೆ ಸೇರಿದೆ ಎಂದು ಊಹಿಸಲಾಗಿದೆ.

“ಧಾರ್ಮಿಕ ಮುಖಂಡರೊಬ್ಬರ ಆಜ್ಞೆಯ ಮೇರೆಗೆ ಆ ನಾಲ್ಕು ಪಾಕಿಸ್ತಾನಿ ನಾಗರಿಕರು ಪ್ರತಿಮೆಯನ್ನು ಕೆಡವದಿದ್ದರೆ ಅವರ ನಂಬಿಕೆಯನ್ನು ತ್ಯಜಿಸಿದಂತಾಗುವುದು ಎಂದು ಹೇಳಿದರು. ಆ ಪ್ರತಿಮೆಯನ್ನು ಸುತ್ತಿಗೆಯಿಂದ ಒಡೆದು ಹಾಕಿದರು” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ನಾವು ನಮ್ಮ ಆತಂಕವನ್ನು ಪಾಕಿಸ್ತಾನಕ್ಕೆ ತಿಳಿಸಿದ್ದೇವೆ. ಅಲ್ಲಿನ ಅಲ್ಪಸಂಖ್ಯಾತ ಸಮುದಾಯದ ಸುರಕ್ಷತೆ ಮತ್ತು ಅವರ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುತ್ತಾರೆ ಎಂಬ ನಮ್ಮ ನಿರೀಕ್ಷೆಯನ್ನು ನಾವು ಅವರಿಗೆ ತಿಳಿಸಿದ್ದೇವೆ.

ಪ್ರತಿಮೆಗೆ ಹಾನಿ ಮಾಡಿದ್ದಕ್ಕಾಗಿ ಪೊಲೀಸರು ಕಳೆದ ವಾರ ನಾಲ್ಕು ಜನರನ್ನು ಬಂಧಿಸಿದ್ದರು. ಧಾರ್ಮಿಕ ಮುಖಂಡನ ಆದೇಶದ ನಂತರ ಅವರು ಪ್ರತಿಮೆಯನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಖೈಬರ್-ಪಖ್ತುನ್ಖ್ವಾ ಪ್ರಾಂತ್ಯದ ಪುರಾತತ್ವ ಮತ್ತು ವಸ್ತು ಸಂಗ್ರಹಾಲಯ ಇಲಾಖೆ ಹಾನಿಗೊಳಗಾದ ಪ್ರತಿಮೆಯ ಭಾಗಗಳನ್ನು, ಅದರ ಐತಿಹಾಸಿಕ ಮೌಲ್ಯವನ್ನು ಅಧ್ಯಯನ ಮಾಡುವ ಸಲುವಾಗಿ ಭಾನುವಾರ ವಶಪಡಿಸಿಕೊಂಡಿದೆ.


ಇದನ್ನೂ ಓದಿ: ಸರ್ಕಾರ ಕೊರೊನಾ ಸೊಂಕಿತರ ಹೆಣದ ಮೇಲೆ ಹಣ ಮಾಡುತ್ತಿದೆ: ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Cow at the back laughed at the nakedness of the cow in front
    They demolished babri and other masjids and killed thousands of Muslims and.now giving advise to Pakistan
    Dear Indian govt correct yourself before you preach

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...