Homeಮುಖಪುಟಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಚಪ್ಪಾಳೆಯ ಶಕ್ತಿಯಿಂದ ಕೊರೊನಾ ನಾಶ ಟ್ವೀಟ್‌ : ಕಿಚ್ಚ ಸುದೀಪ್‌ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..

ಸುದೀಪ್‌ ಸರ್‌ ನಾನು ನಿಮ್ಮ ಅಭಿಮಾನಿ. ಆದರೆ ನೀವು ಮಾಡಿದ ಈ ಕೆಲಸ ಮಾತ್ರ ಜನರನ್ನು ತಪ್ಪು ದಾರಿಗೆ ಎಳೆಯುವಂತದ್ದು...

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾರ್ಚ್‌ 22ರಂದು ದೇಶದಾದ್ಯಂತ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಸಾಧಕರಿಗೆ ಚಪ್ಪಾಳೆ ಹೊಡೆಯಲು ಕರೆ ನೀಡಿದ್ದರು. ಈ ಕರ್ಫೂವನ್ನು ಯಶಸ್ವಿ ಮಾಡುವ ಉದ್ದೇಶದಿಂದ ಮೋದಿ ಭಕ್ತರು ಹಲವಾರು ಭಕ್ತರು ಸುಳ್ಳು-ಪೊಳ್ಳು ಮಾಹಿತಿಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದರು.

ಅದರಲ್ಲಿ ಒಂದು ಹುಡುಗಿ ನೀವು ದೇವಸ್ಥಾನದಲ್ಲಿ ಗಂಟೆ ಬಾರಿಸುವುದು ಏಕೆಂದು ತಿಳಿದಿದ್ದೀರಿ? ಇದರಿಂದ ಬಿಡುಗಡೆಯಾಗುವ ಶಕ್ತಿಯು ಸುತ್ತಲಿನ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ಕೊಲ್ಲುತ್ತದೆ. ಅದೇ ರೀತಿ 132ಕೋಟಿ ಜನರು ಏಕಕಾಲಕ್ಕೆ ಚಪ್ಪಾಳೆ ತಟ್ಟುವುದುರಿಂದ ದೊಡ್ಡ ಮಟ್ಟದ ಎನರ್ಜಿ ಸೃಷ್ಟಿಯಾಗಿ ಕೊರೊನಾ ಮಾತ್ರವಲ್ಲ ಸುತ್ತಲಿನ ಎಲ್ಲಾ ಬ್ಯಾಕ್ಟೀರೀಯಾಗಳು ಸಾಯುತ್ತವೆ. ಮೋದಿಯ ವೈಜ್ಞಾನಿಕತೆಗೆ ಸೆಲ್ಯೂಟ್‌ ಎಂದು ವಿಡಿಯೋ ಮಾಡಿ ಹರಿಬಿಟ್ಟಿದ್ದಳು.

ಅದನ್ನು ನೋಡಿದ್ದೆ ತಡ ಕನ್ನಡದ ಖ್ಯಾತ ನಟ ಸುದೀಪ್‌ ಹಿಂದು ಮುಂದು ನೋಡದೇ ತನ್ನ ಟ್ವಿಟ್ಟರ್‌ನಲ್ಲಿ ಷೇರ್‌ ಮಾಡಿಬಿಟ್ಟರು. ನಾವೂ ಮನೆಯಲ್ಲಿಯೇ ಇದ್ದು, ಕೊರೊನಾ ನಾಶಮಾಡೋಣ ಎಂದು ತಲೆಬರಹ ಕೊಟ್ಟಿದ್ದರು. ಇದು ಮೇಲ್ನೋಟಕ್ಕೆ ಸುಳ್ಳು ಸುದ್ದಿ ಎಂದು ಹಲವಾರು ಅಭಿಮಾನಿಗಳಿಗೆ ತಿಳಿದಿದ್ದರಿಂದ ಸರ್‌ ದಯವಿಟ್ಟು ಡಿಲೀಟ್‌ ಮಾಡಿ ಎಂದು ಕಮೆಂಟ್‌ ಹಾಕಿದರು.

 

ಅಲ್ಲ ಸುದೀಪ್‌ ಸರ್‌ “ವೈಜ್ಞಾನಿಕ ತಳಹದಿಯೇ ಇಲ್ಲದೇ ಬೇಕಾದಂತೆ ಹೇಳಿಕೆ ಕೊಟ್ಟಿರೋ ಈ ವ್ಯಕ್ತಿಯ ವಿಡಿಯೋವನ್ನು ಪ್ರಚಾರ ಮಾಡುತ್ತಿರಲ್ಲ ನಿಮಗೇನಾಗಿದೆ ಹೇಳಿ.. ನಮಗೆ ಬೇಕಿರೋದು True Science.. Psuedo Science ಅಲ್ಲ.. ಇಂತಹ ಬೂಟಾಟಿಕೆಯನ್ನು ಮೌಡ್ಯವನ್ನು ದೂರ ತಳ್ಳಿ.. ಅರಿಮೆಯ ಕಡೆ ಸಾಗಿ.. ಎಂದು ಮಲ್ಲಿಕಾರ್ಜುನ್‌ ಬಿ ಕಮೆಂಟ್‌ ಮಾಡಿದ್ದರು.

ಹೆಚ್ಚು ಹಿಂಬಾಲಕರಿರುವ ವ್ಯಕ್ತಿಗಳು ಹೆಚ್ಚು ಜವಾಬ್ದಾರಿಯುತವಾಗಿರಬೇಕು! ನೋಡಿ, ಮೋದಿಯವರು ಹೇಳಿದಂತೆ ಆರೋಗ್ಯ ಕಾರ್ಯಕರ್ತರಿಗೋಸ್ಕರ 5 ದಲ್ಲ 10 ನಿಮಿಷ ಚಪ್ಪಾಳೆ ತಟ್ಟುವ ಬೇಕಾದರೆ! ಆದರೆ ಅದರಿಂದ ವೈರಾಣು ಸಾಯುತ್ತದೆ ಎಂಬುದು ಬುರಡೆ. ದೇವಾಲಯದಲ್ಲಿ ಘಂಟೆ ಬಾರಿಸುವುದು, ಸೇರಿರುವ ಜನರ ಗಮನವನ್ನು ಮಂಗಳಾರತಿಯತ್ತ ಸೆಳೆಯಲು! ಎಂದು ಪ್ರಹ್ಲಾದ ಕೆ ಹನುಮಂತಯ್ಯ ಎಂಬುವವರು ಕಿಡಿಕಾರಿದ್ದಾರೆ.

ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎನ್ನುವ ಗಾದೆ ನೆನಪಿಗೆ ಬರುತ್ತಿದೆ ಈ ನಿಮ್ಮ ಮಾತು ಕೇಳಿ… ಹಾಗಾದರೆ ಆಸ್ಪತ್ರೆಯಲ್ಲಿ ಡಾಕ್ಟರ್ ಗಳ ಕೈಯಲ್ಲಿ ಗಂಟೆ ಕೊಟ್ಟುಬಿಡೋಣ, ನರ್ಸ್ ಗಳ ಕೈಯಲ್ಲಿ ಶಂಖಗಳನ್ನು ಕೊಟ್ಟು ಬರೋಣ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ.

ಮಾನ್ಯ ಸುದೀಪ ಅವರೇ, ನೀವು ನಿಮ್ಮದೇ ಒಂದು ವಿಡಿಯೋ ತುಣುಕು ಮಾಡಿ ಪ್ರಧಾನಿಗಳ ಬೆಂಬಲಕ್ಕೆ ನಿಲ್ಲಬಹುದಿತ್ತು. ಬದಲಿಗೆ ಅವೈಜ್ಞಾನಿಕವಾಗಿ ಎಲ್ಲರ ದಾರಿ ತಪ್ಪಿಸುತ್ತಿರುವ ಇಂತಹವರ ತುಣುಕು ಹಾಕಿ ಅವರನ್ನು ಮುಖ್ಯವಾಹಿನಿಗೆ ತರುವುದಲ್ಲದೇ, ಗಂಟೆಗಳು ಕಳೆದರೂ ಇದನ್ನು ತೆಗೆಯದಿರುವುದು ವಿಪರ್ಯಾಸ. ದಯವಿಟ್ಟು ಇನ್ನೊಮ್ಮೆ ಯೋಚಿಸಿ ವೈಶಾಖ್‌ ಭಾಗೀ ಹೇಳಿದ್ದಾರೆ.

ಇನ್ನು ಮತ್ತೊರ್ವ ಸಾಮಾಜಿಕ ಕಾಳಜಿಯ ನಟ ಚೇತನ್‌, “ಸುದೀಪ್ ಸರ್, ಚಿತ್ರರಂಗದಲ್ಲಿ ನೀವು ಮಾಡಿರುವ ಕೆಲಸಗಳನ್ನು ಮತ್ತು ಸಾಧನೆಗಳನ್ನು ನಾನು ಗೌರವಿಸುತ್ತೇನೆ.. ಅಪ್ಪ, ಅಮ್ಮ ಇಬ್ಬರು ವೈದ್ಯರ ಮಗನಾಗಿ, ವೈದ್ಯರಿಗೆ ಪ್ರತಿಯೊಬ್ಬರು ಗೌರವವನ್ನು ನೀಡಬೇಕಾಗುತ್ತದೆ ಅದನ್ನ ನಾನು ಒಪ್ಪುತ್ತೇನೆ. ಆದರೆ ಈ ರೀತಿಯ ಅವೈಜ್ಞಾನಿಕವಾದಂತಹ ವಿಚಾರಗಳು (‘energy medicine’) ನಮ್ಮನ್ನು ತಪ್ಪುದಾರಿಗೆ ಕರೆದೊಯ್ಯುವುದಲ್ಲದೆ, ಮೌಢ್ಯವನ್ನು ಬಿತ್ತುತ್ತವೆ.. ಕೊರೋನ ವೈರಸ್ ನ ವಿರುದ್ಧ ಹೋರಾಡೋಣ, ವೈಜ್ಞಾನಿಕವಾಗಿ”.. ಎಂದು ಪ್ರತಿಕ್ರಿಯೆ ನೀಡಿದ್ದರು.

ನಂತರ ಚೇತನ್‌ ಮೇಲೂ ಕೆಲವು ಸುದೀಪ್‌ ಅಭಿಮಾನಿಗಳು ಹರಿಹಾಯ್ದು ನಿಂದಿಸಿದ್ದರು. ಇಷ್ಟೆಲ್ಲಾ ಬೆಳವಣಿಗಳನ್ನು ಕಂಡ ಮತ್ತು ವೈಜ್ಞಾನಿಕ ಅರಿವಿರುವ ಸುದೀಪ್‌ ಅಭಿಮಾನಿಗಳು ತಮ್ಮ ಸ್ಟಾರ್‌ ನಟ ಅಂತಹ ವಿಡಿಯೋಗಳನ್ನು ಹಂಚಿಕೊಂಡಿರುವುದು ತಪ್ಪು, ಇದು ನಿಜಕ್ಕೂ ಜನರನ್ನು ಮಿಸ್‌ ಗೈಡ್‌ ಮಾಡುತ್ತದೆ. ಹಲವಾರು ಜನರು ಸಿನಿಮಾ ಸ್ಟಾರ್‌ಗಳ ಮೇಲೆ ಅಭಿಮಾನ ಇಟ್ಟಿರುತ್ತಾರೆ. ಫಾಲೋ ಮಾಡುತ್ತಿರುತ್ತಾರೆ. ಅಂತಹ ಜನರನ್ನು ದಾರಿ ತಪ್ಪಿಸುವಂತಹ ಪೋಸ್ಟ್‌ಗಳನ್ನು ಸ್ಟಾರ್‌ಗಳು ಹಾಕುವುದು ತಪ್ಪು ಎಂದು ಸುದೀಪ್‌ರನ್ನು ತರಾಟೆಗೆ ತೆಗೆದುಕೊಂಡು, ಸುದೀಪ್‌ ಖಾತೆಯಲ್ಲೇ ರಿಪ್ಲೇ ಟ್ವೀಟ್‌ ಮಾಡಿದ್ದಾರೆ. ಸಧ್ಯಕ್ಕೆ ಸುದೀಪ್‌ ಅಭಿಮಾನಿಗಳಲ್ಲೇ ಪರ-ವಿರೋಧ ಹಗ್ಗಜಗ್ಗಾಟ ಶುರುವಾಗಿದೆ.

ಇನ್ನು ಸುದೀಪ್‌ ತಮ್ಮ ಟ್ವೀಟ್‌ ಅನ್ನು ಅಳಿಸಿಲ್ಲ. ಆದರೆ ಆ ಟ್ವೀಟ್‌ನಲ್ಲಿ ಆ ಹುಡುಗಿ ಮಾತನಾಡಿರುವ ಕೊನೆಯ 44 ಸೆಕೆಂಡ್‌ ವಿಡಿಯೋ ಮಾತ್ರ ಕಾಣುತ್ತಿದೆ. ಆ ಹುಡುಗಿ ಮಾತನಾಡಿರುವುದು 2.12 ನಿಮಿಷವಾಗಿದೆ. ಒಟ್ಟಿನಲ್ಲಿ ಈ ಫೇಕ್‌ ಸುದ್ದಿಗಳ ಮಾಯಾಜಾಲಕ್ಕೆ ಸ್ಟಾರ್‌ ನಟರು ಬಲಿಯಾಗುವುದು ದುರಂತವಾಗಿದೆ.

ಆಕೆಯ ಪೂರ್ತಿ ಸುಳ್ಳು ಭಾಷಣ ಇಲ್ಲಿದೆ ನೋಡಿ.

ಇದನ್ನು ಕೇಳಿದ ತಕ್ಷಣವೇ ಕೊರೊನಾ‌ ಓಡಿ ಹೋಗಿದೆ. ಅಜ್ಞಾನವೇ ಆಳುತ್ತಿರುವಾಗ ವಿಜ್ಞಾನದ ಚರ್ಚೆ‌ ಅಪರಾಧ..

Posted by Vasu Hv on Friday, March 20, 2020

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...